Homeಮುಖಪುಟಛತ್ತೀಸ್‌ಗಢ: ನಕ್ಸಲರ ಐಇಡಿ ಸ್ಫೋಟದಲ್ಲಿ ಎಎಸ್‌ಪಿ ಸಾವು, 4 ಜವಾನರಿಗೆ ತೀವ್ರ ಗಾಯ

ಛತ್ತೀಸ್‌ಗಢ: ನಕ್ಸಲರ ಐಇಡಿ ಸ್ಫೋಟದಲ್ಲಿ ಎಎಸ್‌ಪಿ ಸಾವು, 4 ಜವಾನರಿಗೆ ತೀವ್ರ ಗಾಯ

- Advertisement -
- Advertisement -

ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಸೋಮವಾರ ನಕ್ಸಲರು ಇರಿಸಿದ್ದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದು, 4 ಭದ್ರತಾ ಸಿಬ್ಬಂದಿ ತೀವ್ರ ಗಾಯಗೊಂಡಿದ್ದಾರೆ.

2013ರ ಬ್ಯಾಚ್‌ನ ರಾಜ್ಯ ಪೊಲೀಸ್ ಸೇವಾ ಅಧಿಕಾರಿ, ಕೊಂಟಾ ವಿಭಾಗದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಆಕಾಶ್ ರಾವ್ ಗಿರೆಪುಂಜೆ ಅವರು ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ ಎಂದು ಗೃಹ ಖಾತೆಯನ್ನೂ ಹೊಂದಿರುವ ರಾಜ್ಯದ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ತಿಳಿಸಿದ್ದಾರೆ.

ಕೊಂಟಾ-ಎರ್ರಾಬೋರ್ ರಸ್ತೆಯ ಡೋಂಡ್ರಾ ಗ್ರಾಮದ ಬಳಿ ಘಟನೆ ಸಂಭವಿಸಿದಾಗ ಎಎಸ್‌ಪಿ ಮತ್ತು ಇತರ ಸಿಬ್ಬಂದಿ ಕಾಲ್ನಡಿಗೆಯಲ್ಲಿ ಗಸ್ತು ತಿರುಗುತ್ತಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಸುಕ್ಮಾದ ಎಎಸ್ಪಿ ಆಕಾಶ್ ರಾವ್ ಗಿರೆಪುಂಜೆ ಕೊಂಟಾ ಎರ್ರಾಬೋರ್ ರಸ್ತೆಯಲ್ಲಿ ಗಸ್ತು ತಿರುಗುತ್ತಿದ್ದರು.  ಆಗ ಈ ಸ್ಪೋಟ ಸಂಭವಿಸಿದೆ. ಈ ಐಇಡಿ ಸ್ಫೋಟದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಜವಾನರು ಕೂಡ ಗಾಯಗೊಂಡಿದ್ದಾರೆ ಮತ್ತು ಅವರನ್ನು ತಕ್ಷಣ ಚಿಕಿತ್ಸೆಗಾಗಿ ಕೊಂಟಾ ಸಮುದಾಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಎಎಸ್ಪಿ ಆಕಾಶ್ ರಾವ್ ಚಿಕಿತ್ಸೆಯ ಸಮಯದಲ್ಲಿ ನಿಧನರಾದರು. ಇತರ ಗಾಯಾಳುಗಳು  ಅಪಾಯದಿಂದ ಪಾರಾಗಿದ್ದಾರೆ ಎಂದು ಬಸ್ತಾರ್ ಐಜಿ ಸುಂದರರಾಜ್ .ಪಿ ಹೇಳಿದರು.

ಈ ಘಟನೆ ಸೋಮವಾರ ಬೆಳಿಗ್ಗೆ 9ರಿಂದ 10 ಗಂಟೆಯ ನಡುವೆ ನಡೆದಿದೆ ಎಂದು ಅವರು ಹೇಳಿದರು. ನಾಳೆ (ಮಂಗಳವಾರ) ನಕ್ಸಲರು ಕರೆ ನೀಡಿದ್ದ ಬಂದ್ ಹಿನ್ನೆಲೆಯಲ್ಲಿ ಗಸ್ತು ತಿರುಗುವಿಕೆಯನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿ ಹೇಳಿದರು.

ಎಎಸ್ಪಿ ಆಕಾಶ್ ರಾವ್ ಸ್ಫೋಟದಲ್ಲಿ ಹುತಾತ್ಮರಾಗಿದ್ದಾರೆ. ಅವರು ಧೈರ್ಯಶಾಲಿ ಅಧಿಕಾರಿಯಾಗಿದ್ದರು ಮತ್ತು ಶೌರ್ಯ ಪ್ರಶಸ್ತಿ ಪುರಸ್ಕೃತರಾಗಿದ್ದರು ಎಂದು ಉಪ ಮುಖ್ಯಮಂತ್ರಿ ಶರ್ಮಾ ನಾಗ್ಪುರದಲ್ಲಿ ತಿಳಿಸಿದರು.

ನಕ್ಸಲರು ಮತ್ತು ಸರ್ಕಾರದ ನಡುವೆ ಮಾತುಕತೆಗೆ ಪರಿಸ್ಥಿತಿ ಹೇಗೋ ಸೃಷ್ಟಿಯಾದರೆ, ಅದು ಇಂತಹ ಘಟನೆಗಳೊಂದಿಗೆ (ಸ್ಫೋಟವನ್ನು ಉಲ್ಲೇಖಿಸಿ) ಕೊನೆಗೊಳ್ಳುತ್ತದೆ ಎಂದು ಅವರು ಹೇಳಿದರು.

ಒಂದೇ ಒಂದು ಗುಂಡನ್ನು ಹಾರಿಸಲು ಬಯಸುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಆದರೆ ಅವರು (ನಕ್ಸಲರು) ಮುಖ್ಯವಾಹಿನಿಗೆ ಬರಬೇಕು, ಪುನರ್ವಸತಿ ಯೋಜನೆಯ ಪ್ರಯೋಜನಗಳನ್ನು ಪಡೆದುಕೊಳ್ಳಬೇಕು ಮತ್ತು ಸಮಾಜ ಮತ್ತು ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಶರ್ಮಾ ಹೇಳಿದರು.

2025ರಲ್ಲಿ ಛತ್ತೀಸ್‌ಗಢದಲ್ಲಿ ನಡೆದ ಐಇಡಿ ಘಟನೆಗಳ ಪಟ್ಟಿ

• 30 ಮಾರ್ಚ್: ಬಿಜಾಪುರದಲ್ಲಿ ನಕ್ಸಲ್ ಎನ್‌ಕೌಂಟರ್‌ನ ಎರಡನೇ ದಿನದಂದು ಐಇಡಿ ಸ್ಫೋಟದಲ್ಲಿ ಮಹಿಳೆ ಸಾವನ್ನಪ್ಪಿದರು.

• 4 ಏಪ್ರಿಲ್: ನಾರಾಯಣಪುರದಲ್ಲಿ ನಕ್ಸಲರ ಐಇಡಿ ಸ್ಫೋಟಕ್ಕೆ ಒಬ್ಬ ಮೃತಪಟ್ಟು, ಒಬ್ಬ ಗಾಯಗೊಂಡಿದ್ದರು.

• 7 ಏಪ್ರಿಲ್: ಅಬುಜ್ಮದ್ ಕಾಡುಗಳಲ್ಲಿ ಐಇಡಿ ಸ್ಫೋಟದಲ್ಲಿ ಒಬ್ಬ ಗ್ರಾಮಸ್ಥರಿಗೆ ಗಾಯಗೊಂಡಿದ್ದರು.

• 9 ಏಪ್ರಿಲ್: ಬಿಜಾಪುರದಲ್ಲಿ ಐಇಡಿ ಸ್ಫೋಟದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ ಜವಾನನು ಗೊಂಡಿದ್ದರು.

• 10 ಏಪ್ರಿಲ್: ಬಿಜಾಪುರದ ಅರಣ್ಯ ರಸ್ತೆಯಲ್ಲಿ ನಕ್ಸಲರು ಇರಿಸಿದ್ದ ಐಇಡಿಯನ್ನು ಯೋಧರು ನಿಷ್ಕ್ರಿಯಗೊಳಿಸಿದರು.

• 13 ಏಪ್ರಿಲ್: ಬಿಜಾಪುರದ ರಾಣಿಬೋಡ್ಲಿ ಕಟ್ಟೂರ್ ರಸ್ತೆಯಲ್ಲಿ 20 ಕೆಜಿ ಐಇಡಿ ನಿಷ್ಕ್ರಿಯಗೊಳಿಸಲಾಗಿದೆ.

• 14 ಏಪ್ರಿಲ್: ಯೋಧರು ಇರಿಸಿದ್ದ 5 ಐಇಡಿಗಳನ್ನು ನಾಶಪಡಿಸಿದ ನಕ್ಸಲರು.

• ಏಪ್ರಿಲ್ 18: ಬಿಜಾಪುರದ ಕೋಬ್ರಾ ಬೆಟಾಲಿಯನ್‌ನಲ್ಲಿ ಮಾವೋವಾದಿಯೊಬ್ಬನ ಬಂಧನ. ಆತ ಬಿಯರ್ ಬಾಟಲಿಗಳಲ್ಲಿ ತಯಾರಿಸಿದ 8 ಐಇಡಿಗಳ ವಶ.

• ಏಪ್ರಿಲ್ 21: ಬಿಜಾಪುರದಲ್ಲಿ ನಕ್ಸಲರು ಇರಿಸಿದ್ದ ಐಇಡಿ ಸ್ಫೋಟದಲ್ಲಿ ಸಿಎಎಫ್ ಜವಾನ್ ಸಾವು.

• ಏಪ್ರಿಲ್ 26: ಬಿಜಾಪುರದಲ್ಲಿ ಐಇಡಿ ಸ್ಫೋಟದಲ್ಲಿ ಡಿಆರ್‌ಜಿ ಜವಾನನಿಗೆ ಗಾಯ

• ಮೇ 6: ಬಿಜಾಪುರದಲ್ಲಿ ಐಇಡಿ ಸ್ಫೋಟದಲ್ಲಿ ಸಿಆರ್‌ಪಿಎಫ್ ಅಧಿಕಾರಿಗೆ ಗಾಯ.

• ಮೇ 19: ಗೌರ್ಮುಂಡ್ ಗ್ರಾಮದ ಕಾಡುಗಳಲ್ಲಿ ಬಾಂಬ್ ನಿಷ್ಕ್ರಿಯ ದಳ (ಬಿಡಿಎಸ್)ದಿಂದ 5 ಕೆಜಿ ತೂಕದ ಎರಡು ಐಇಡಿಗಳ ನಾಶ.

• ಮೇ 30: ಬಿಜಾಪುರದ ಮದ್ದೀದ್ ರಾಷ್ಟ್ರೀಯ ಉದ್ಯಾನವನದಲ್ಲಿ ಐಇಡಿ ಸ್ಫೋಟದಲ್ಲಿ ಮೂವರು ಗ್ರಾಮಸ್ಥರಿಗೆ ಗಾಯ.

• ಮೇ 31: ಗುರ್ಮಕಾ ಮತ್ತು ಖೋಡ್‌ಪರ್ ಗ್ರಾಮದ ಅರಣ್ಯ ಮಾರ್ಗದಲ್ಲಿ ಭದ್ರತಾ ಪಡೆಗಳಿಂದ 10 ಐಇಡಿಗಳ ನಿಷ್ಕ್ರಿಯ.

ವಲಸಿಗರ ವಿರುದ್ಧ ಶೋಧ ಕಾರ್ಯಾಚರಣೆಗೆ ವಿರೋಧ: ಲಾಸ್‌ ಏಂಜಲೀಸ್‌ನಲ್ಲಿ ತೀವ್ರಗೊಂಡ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...