Homeಮುಖಪುಟಛತ್ತೀಸ್‌ಗಢ: ನಕ್ಸಲರ ಐಇಡಿ ಸ್ಫೋಟದಲ್ಲಿ ಎಎಸ್‌ಪಿ ಸಾವು, 4 ಜವಾನರಿಗೆ ತೀವ್ರ ಗಾಯ

ಛತ್ತೀಸ್‌ಗಢ: ನಕ್ಸಲರ ಐಇಡಿ ಸ್ಫೋಟದಲ್ಲಿ ಎಎಸ್‌ಪಿ ಸಾವು, 4 ಜವಾನರಿಗೆ ತೀವ್ರ ಗಾಯ

- Advertisement -
- Advertisement -

ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಸೋಮವಾರ ನಕ್ಸಲರು ಇರಿಸಿದ್ದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದು, 4 ಭದ್ರತಾ ಸಿಬ್ಬಂದಿ ತೀವ್ರ ಗಾಯಗೊಂಡಿದ್ದಾರೆ.

2013ರ ಬ್ಯಾಚ್‌ನ ರಾಜ್ಯ ಪೊಲೀಸ್ ಸೇವಾ ಅಧಿಕಾರಿ, ಕೊಂಟಾ ವಿಭಾಗದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಆಕಾಶ್ ರಾವ್ ಗಿರೆಪುಂಜೆ ಅವರು ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ ಎಂದು ಗೃಹ ಖಾತೆಯನ್ನೂ ಹೊಂದಿರುವ ರಾಜ್ಯದ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ತಿಳಿಸಿದ್ದಾರೆ.

ಕೊಂಟಾ-ಎರ್ರಾಬೋರ್ ರಸ್ತೆಯ ಡೋಂಡ್ರಾ ಗ್ರಾಮದ ಬಳಿ ಘಟನೆ ಸಂಭವಿಸಿದಾಗ ಎಎಸ್‌ಪಿ ಮತ್ತು ಇತರ ಸಿಬ್ಬಂದಿ ಕಾಲ್ನಡಿಗೆಯಲ್ಲಿ ಗಸ್ತು ತಿರುಗುತ್ತಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಸುಕ್ಮಾದ ಎಎಸ್ಪಿ ಆಕಾಶ್ ರಾವ್ ಗಿರೆಪುಂಜೆ ಕೊಂಟಾ ಎರ್ರಾಬೋರ್ ರಸ್ತೆಯಲ್ಲಿ ಗಸ್ತು ತಿರುಗುತ್ತಿದ್ದರು.  ಆಗ ಈ ಸ್ಪೋಟ ಸಂಭವಿಸಿದೆ. ಈ ಐಇಡಿ ಸ್ಫೋಟದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಜವಾನರು ಕೂಡ ಗಾಯಗೊಂಡಿದ್ದಾರೆ ಮತ್ತು ಅವರನ್ನು ತಕ್ಷಣ ಚಿಕಿತ್ಸೆಗಾಗಿ ಕೊಂಟಾ ಸಮುದಾಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಎಎಸ್ಪಿ ಆಕಾಶ್ ರಾವ್ ಚಿಕಿತ್ಸೆಯ ಸಮಯದಲ್ಲಿ ನಿಧನರಾದರು. ಇತರ ಗಾಯಾಳುಗಳು  ಅಪಾಯದಿಂದ ಪಾರಾಗಿದ್ದಾರೆ ಎಂದು ಬಸ್ತಾರ್ ಐಜಿ ಸುಂದರರಾಜ್ .ಪಿ ಹೇಳಿದರು.

ಈ ಘಟನೆ ಸೋಮವಾರ ಬೆಳಿಗ್ಗೆ 9ರಿಂದ 10 ಗಂಟೆಯ ನಡುವೆ ನಡೆದಿದೆ ಎಂದು ಅವರು ಹೇಳಿದರು. ನಾಳೆ (ಮಂಗಳವಾರ) ನಕ್ಸಲರು ಕರೆ ನೀಡಿದ್ದ ಬಂದ್ ಹಿನ್ನೆಲೆಯಲ್ಲಿ ಗಸ್ತು ತಿರುಗುವಿಕೆಯನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿ ಹೇಳಿದರು.

ಎಎಸ್ಪಿ ಆಕಾಶ್ ರಾವ್ ಸ್ಫೋಟದಲ್ಲಿ ಹುತಾತ್ಮರಾಗಿದ್ದಾರೆ. ಅವರು ಧೈರ್ಯಶಾಲಿ ಅಧಿಕಾರಿಯಾಗಿದ್ದರು ಮತ್ತು ಶೌರ್ಯ ಪ್ರಶಸ್ತಿ ಪುರಸ್ಕೃತರಾಗಿದ್ದರು ಎಂದು ಉಪ ಮುಖ್ಯಮಂತ್ರಿ ಶರ್ಮಾ ನಾಗ್ಪುರದಲ್ಲಿ ತಿಳಿಸಿದರು.

ನಕ್ಸಲರು ಮತ್ತು ಸರ್ಕಾರದ ನಡುವೆ ಮಾತುಕತೆಗೆ ಪರಿಸ್ಥಿತಿ ಹೇಗೋ ಸೃಷ್ಟಿಯಾದರೆ, ಅದು ಇಂತಹ ಘಟನೆಗಳೊಂದಿಗೆ (ಸ್ಫೋಟವನ್ನು ಉಲ್ಲೇಖಿಸಿ) ಕೊನೆಗೊಳ್ಳುತ್ತದೆ ಎಂದು ಅವರು ಹೇಳಿದರು.

ಒಂದೇ ಒಂದು ಗುಂಡನ್ನು ಹಾರಿಸಲು ಬಯಸುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಆದರೆ ಅವರು (ನಕ್ಸಲರು) ಮುಖ್ಯವಾಹಿನಿಗೆ ಬರಬೇಕು, ಪುನರ್ವಸತಿ ಯೋಜನೆಯ ಪ್ರಯೋಜನಗಳನ್ನು ಪಡೆದುಕೊಳ್ಳಬೇಕು ಮತ್ತು ಸಮಾಜ ಮತ್ತು ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಶರ್ಮಾ ಹೇಳಿದರು.

2025ರಲ್ಲಿ ಛತ್ತೀಸ್‌ಗಢದಲ್ಲಿ ನಡೆದ ಐಇಡಿ ಘಟನೆಗಳ ಪಟ್ಟಿ

• 30 ಮಾರ್ಚ್: ಬಿಜಾಪುರದಲ್ಲಿ ನಕ್ಸಲ್ ಎನ್‌ಕೌಂಟರ್‌ನ ಎರಡನೇ ದಿನದಂದು ಐಇಡಿ ಸ್ಫೋಟದಲ್ಲಿ ಮಹಿಳೆ ಸಾವನ್ನಪ್ಪಿದರು.

• 4 ಏಪ್ರಿಲ್: ನಾರಾಯಣಪುರದಲ್ಲಿ ನಕ್ಸಲರ ಐಇಡಿ ಸ್ಫೋಟಕ್ಕೆ ಒಬ್ಬ ಮೃತಪಟ್ಟು, ಒಬ್ಬ ಗಾಯಗೊಂಡಿದ್ದರು.

• 7 ಏಪ್ರಿಲ್: ಅಬುಜ್ಮದ್ ಕಾಡುಗಳಲ್ಲಿ ಐಇಡಿ ಸ್ಫೋಟದಲ್ಲಿ ಒಬ್ಬ ಗ್ರಾಮಸ್ಥರಿಗೆ ಗಾಯಗೊಂಡಿದ್ದರು.

• 9 ಏಪ್ರಿಲ್: ಬಿಜಾಪುರದಲ್ಲಿ ಐಇಡಿ ಸ್ಫೋಟದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ ಜವಾನನು ಗೊಂಡಿದ್ದರು.

• 10 ಏಪ್ರಿಲ್: ಬಿಜಾಪುರದ ಅರಣ್ಯ ರಸ್ತೆಯಲ್ಲಿ ನಕ್ಸಲರು ಇರಿಸಿದ್ದ ಐಇಡಿಯನ್ನು ಯೋಧರು ನಿಷ್ಕ್ರಿಯಗೊಳಿಸಿದರು.

• 13 ಏಪ್ರಿಲ್: ಬಿಜಾಪುರದ ರಾಣಿಬೋಡ್ಲಿ ಕಟ್ಟೂರ್ ರಸ್ತೆಯಲ್ಲಿ 20 ಕೆಜಿ ಐಇಡಿ ನಿಷ್ಕ್ರಿಯಗೊಳಿಸಲಾಗಿದೆ.

• 14 ಏಪ್ರಿಲ್: ಯೋಧರು ಇರಿಸಿದ್ದ 5 ಐಇಡಿಗಳನ್ನು ನಾಶಪಡಿಸಿದ ನಕ್ಸಲರು.

• ಏಪ್ರಿಲ್ 18: ಬಿಜಾಪುರದ ಕೋಬ್ರಾ ಬೆಟಾಲಿಯನ್‌ನಲ್ಲಿ ಮಾವೋವಾದಿಯೊಬ್ಬನ ಬಂಧನ. ಆತ ಬಿಯರ್ ಬಾಟಲಿಗಳಲ್ಲಿ ತಯಾರಿಸಿದ 8 ಐಇಡಿಗಳ ವಶ.

• ಏಪ್ರಿಲ್ 21: ಬಿಜಾಪುರದಲ್ಲಿ ನಕ್ಸಲರು ಇರಿಸಿದ್ದ ಐಇಡಿ ಸ್ಫೋಟದಲ್ಲಿ ಸಿಎಎಫ್ ಜವಾನ್ ಸಾವು.

• ಏಪ್ರಿಲ್ 26: ಬಿಜಾಪುರದಲ್ಲಿ ಐಇಡಿ ಸ್ಫೋಟದಲ್ಲಿ ಡಿಆರ್‌ಜಿ ಜವಾನನಿಗೆ ಗಾಯ

• ಮೇ 6: ಬಿಜಾಪುರದಲ್ಲಿ ಐಇಡಿ ಸ್ಫೋಟದಲ್ಲಿ ಸಿಆರ್‌ಪಿಎಫ್ ಅಧಿಕಾರಿಗೆ ಗಾಯ.

• ಮೇ 19: ಗೌರ್ಮುಂಡ್ ಗ್ರಾಮದ ಕಾಡುಗಳಲ್ಲಿ ಬಾಂಬ್ ನಿಷ್ಕ್ರಿಯ ದಳ (ಬಿಡಿಎಸ್)ದಿಂದ 5 ಕೆಜಿ ತೂಕದ ಎರಡು ಐಇಡಿಗಳ ನಾಶ.

• ಮೇ 30: ಬಿಜಾಪುರದ ಮದ್ದೀದ್ ರಾಷ್ಟ್ರೀಯ ಉದ್ಯಾನವನದಲ್ಲಿ ಐಇಡಿ ಸ್ಫೋಟದಲ್ಲಿ ಮೂವರು ಗ್ರಾಮಸ್ಥರಿಗೆ ಗಾಯ.

• ಮೇ 31: ಗುರ್ಮಕಾ ಮತ್ತು ಖೋಡ್‌ಪರ್ ಗ್ರಾಮದ ಅರಣ್ಯ ಮಾರ್ಗದಲ್ಲಿ ಭದ್ರತಾ ಪಡೆಗಳಿಂದ 10 ಐಇಡಿಗಳ ನಿಷ್ಕ್ರಿಯ.

ವಲಸಿಗರ ವಿರುದ್ಧ ಶೋಧ ಕಾರ್ಯಾಚರಣೆಗೆ ವಿರೋಧ: ಲಾಸ್‌ ಏಂಜಲೀಸ್‌ನಲ್ಲಿ ತೀವ್ರಗೊಂಡ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...