Homeಮುಖಪುಟಛತ್ತೀಸ್‌ಗಡ: ಅಧಿಕಾರ ಹಸ್ತಾಂತರಕ್ಕೆ ನಿರ್ದೇಶಿಸಿದ ಕಾಂಗ್ರೆಸ್; ಕೊನೆಯ ಪ್ರಯತ್ನದತ್ತ ಭೂಪೇಶ್‌!

ಛತ್ತೀಸ್‌ಗಡ: ಅಧಿಕಾರ ಹಸ್ತಾಂತರಕ್ಕೆ ನಿರ್ದೇಶಿಸಿದ ಕಾಂಗ್ರೆಸ್; ಕೊನೆಯ ಪ್ರಯತ್ನದತ್ತ ಭೂಪೇಶ್‌!

- Advertisement -
- Advertisement -

ಛತ್ತೀಸ್‌ಗಡದ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಆಂತರಿಕ ಬಿಕ್ಕಟ್ಟು ಹೊಸ ತಿರುವು ಪಡೆದುಕೊಂಡಿದೆ. ಈ ಹಿಂದೆ ಒಪ್ಪಿದಂತೆ ಅಧಿಕಾರದ ಹಸ್ತಾಂತರವನ್ನು ಸರಾಗವಾಗಿ ಮಾಡುವಂತೆ ಮುಖ್ಯಮಂತ್ರಿ ಭೂಪೇಶ್‌ ಬಘೇಲ್ ಅವರಲ್ಲಿ ಪಕ್ಷದ ಕೇಂದ್ರ ನಾಯಕತ್ವವೂ ಹೇಳಿಕೊಂಡಿದೆ ಎಂದು TNIE ವರದಿ ಮಾಡಿದೆ. ಎರಡು ವರ್ಷಗಳ ಹಿಂದೆ ಮಾತುಕತೆಯಾಗಿರುವಂತೆ ತಮ್ಮ ಸಂಪುಟದ ಸಹೋದ್ಯೋಗಿ ಟಿಎಸ್‌ ಸಿಂಗ್ ದಿಯೋಗೆ ಅಧಿಕಾರ ವರ್ಗಾಯಿಸುವಂತೆ ಕಾಂಗ್ರೆಸ್ ಕೇಂದ್ರ ನಾಯಕತ್ವವು ಮುಖ್ಯಮಂತ್ರಿಗೆ ನಿರ್ದೇಶನ ನೀಡಿದೆ.

ಅದಾಗಿಯು, ಭೂಪೇಶ್‌ ಅವರ ಬೆಂಬಲಿಗ ಶಾಸಕರು ಇದನ್ನು ಇನ್ನೂ ಒಪ್ಪಿಕೊಂಡಿಲ್ಲ ಎನ್ನಲಾಗಿದೆ. ಈಗಾಗಲೆ ಒಂದೆರೆಡು ಮಂತ್ರಿಗಳು, ಹಿರಿಯ ಶಾಸಕರು ಸೇರಿದಂತೆ ಹಲವರು ಗುರುವಾರ ರಾತ್ರಿ ದೆಹಲಿಗೆ ಹಾರಿದ್ದು, ಪಕ್ಷದ ಹೈಕಮಾಂಡ್‌‌ ಮುಂದೆ ಭೂಪೇಶ್‌ ಅವರ ಪರವಾಗಿ ನಿಲ್ಲಲಿದೆ.

ಇದನ್ನೂ ಓದಿ: ಛತ್ತೀಸ್‌ಗಡ ಸರ್ಕಾರದಲ್ಲಿ ಬಂಡಾಯ: ಕಾಂಗ್ರೆಸ್‌ಗೆ ಹೊಸ ತಲೆ ನೋವು!

ಈ ವಾರದ ಆರಂಭದಲ್ಲಿ ಭೂಪೇಶ್‌ ಮತ್ತು ದಿಯೋ ಅವರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿಯಾಗಿದ್ದರು. ಆದರೆ ಶುಕ್ರವಾರ(ಇಂದು) ಕೂಡಾ ಭೂಪೇಶ್‌ ಅವರು ರಾಹುಲ್ ಗಾಂಧಿಯನ್ನು ಭೇಟಿಯಾಗಲಿದ್ದಾರೆ ಎಂದು ವರದಿಯಾಗಿದೆ.

“ಸಭೆಯಲ್ಲಿ, 2018 ರ ವಿಧಾನಸಭಾ ಚುನಾವಣೆಯ ನಂತರ ಅವರೆ ಒಪ್ಪಿಕೊಂಡ ಅಧಿಕಾರ ಹಸ್ತಾಂತರದ ಸೂತ್ರವನ್ನು ಅನುಸರಿಸಲು ಭೂಪೇಶ್‌ ಅವರಿಗೆ ತಿಳಿಸಲಾಯಿತು. ಪಕ್ಷವು ಇದನ್ನು ಒಮ್ಮತದ ಮೂಲಕ ಮಾಡಲು ಬಯಸಿದೆ. ಆದರೆ ಈಗ ಅವರು ತಮ್ಮ ಪರವಾಗಿರುವ ಶಾಸಕರ ಮೂಲಕ ಅಧಿಕಾರದಲ್ಲಿ ಉಳಿಯಲು ಒತ್ತಡ ಹೇರುತ್ತಿದ್ದಾರೆ” ಎಂದು ಮೂಲಗಳನ್ನು ಉಲ್ಲೇಖಿಸಿ TNIE ವರದಿ ಮಾಡಿದೆ.

ಇದನ್ನೂ ಓದಿ: ಬಾಬಾ ರಾಮ್‌ದೇವ್ ವಿರುದ್ಧ ಎಫ್‌ಐಆರ್ ದಾಖಲಿಸಿದ ಛತ್ತೀಸ್‌ಗಢ ಪೊಲೀಸರು

ಈ ಮಧ್ಯೆ ಇಬ್ಬರೂ ನಾಯಕರು ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುವುದಾಗಿ ಹೇಳಿಕೊಂಡಿದ್ದಾರೆ.

ಆದರೆ, “ಸರ್ಕಾರ ರಚೆನೆಯಾಗುವ ವೇಳೆಗೆ ಎರಡುವರೆ ವರ್ಷಗಳ ನಂತರ ಅಧಿಕಾರವನ್ನು ಹಸ್ತಾಂತರ ಮಾಡುವ ಬಗ್ಗೆ ಒಪ್ಪಂದವಾಗಿತ್ತು. ಮುಖ್ಯಮಂತ್ರಿ ಭೂಪೇಶ್‌‌‌ ಅವರೇ ಅದಕ್ಕೆ ಒಪ್ಪಿಕೊಂಡಿದ್ದರು” ಎಂದು ಈ ಹಿಂದೆ ಟಿಎಸ್‌ ಸಿಂಗ್ ದಿಯೊ ಪ್ರತಿಪಾದಿಸುತ್ತಿದ್ದರು. ಅಷ್ಟೆ ಅಲ್ಲದೆ ಆಪ್ತರು ಕೂಡಾ ಅವರಿಗೆ ಅಧಿಕಾರ ಸಿಗದೆ ಇದ್ದರೆ ಸರ್ಕಾರದಿಂದ ಮಾತ್ರವಲ್ಲ, ಪಕ್ಷದಿಂದಲೆ ಹೊರಹೋಗಲಿದ್ದಾರೆ ಎಂದು ಎಚ್ಚರಿಕೆಯನ್ನೂ ನೀಡಿದ್ದರು ಎಂದು ಎನ್‌ಡಿಟಿವಿ ವರದಿ ಮಾಡಿತ್ತು.

2018 ರಲ್ಲಿ ಛತ್ತೀಸ್‌ಗಡ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದ ನಂತರ, ಮುಖ್ಯಮಂತ್ರಿ ರೇಸ್‌ನಲ್ಲಿ ಟಿಎಸ್‌‌ ಸಿಂಗ್ ದಿಯೋ ದೇವ ಮತ್ತು ತಾಮ್ರಧ್ವಾಜ್ ಸಾಹು ಮತ್ತು ಭೂಪೇಶ್‌ ಬಘೇಲ್‌ ಇದ್ದರು. ಅಂತಿಮವಾಗಿ ಭೂಪೇಶ್ ಮುಖ್ಯಮಂತ್ರಿಯಾಗಿ, ಉಳಿದ ಇಬ್ಬರಿಗೆ ಮಂತ್ರಿ ಸ್ಥಾನಗಳನ್ನು ನೀಡಲಾಗಿತ್ತು.

ಇದನ್ನೂ ಓದಿ: ಯುವಕನ ಮೇಲೆ ಹಲ್ಲೆಗೈದು, ಮೊಬೈಲ್ ಹೊಡೆದುಹಾಕಿದ ಜಿಲ್ಲಾಧಿಕಾರಿ: ಕ್ರಮಕ್ಕೆ ಮುಂದಾದ ಛತ್ತೀಸ್‌ ಘಡ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...