Homeಚಳವಳಿಛತ್ತೀಸ್‌ಗಢ ಬಿಜೆಪಿ ಸರ್ಕಾರದಿಂದ 3 ಸಾವಿರ ಶಿಕ್ಷಕರ ವಜಾ

ಛತ್ತೀಸ್‌ಗಢ ಬಿಜೆಪಿ ಸರ್ಕಾರದಿಂದ 3 ಸಾವಿರ ಶಿಕ್ಷಕರ ವಜಾ

ರಸ್ತೆಯಲ್ಲೆ ಸಾಷ್ಟಾಂಗ ನಮಸ್ಕಾರ ಮಾಡಿ ಪ್ರತಿಭಟಿಸುತ್ತಿರುವ ಶಿಕ್ಷಕಿಯರು

- Advertisement -
- Advertisement -

ಛತ್ತೀಸ್‌ಗಢದಲ್ಲಿ ಶಿಕ್ಷಕರ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದು, ವಯನಾಡ್‌ನ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ತಮ್ಮ ಎಕ್ಸ್ ಖಾತೆಯಲ್ಲಿ ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತಮ್ಮನ್ನು ವಜಾಗೊಳಿಸಿರುವುದನ್ನು ವಿರೋಧಿಸಿ ಶಿಕ್ಷಕರು ರಸ್ತೆಯಲ್ಲೆ ಸಾಷ್ಟಾಂಗ ನಮಸ್ಕಾರ ಮಾಡಿ ಪ್ರತಿಭಟಿಸುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ. ಛತ್ತೀಸ್‌ಗಢ ಬಿಜೆಪಿ

ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳು ಮತ್ತು ಇತ್ತೀಚೆಗೆ 3,000 ಶಿಕ್ಷಕರನ್ನು ವಜಾಗೊಳಿಸಿರುವುದನ್ನು ವಿರೋಧಿಸಿ ಈ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ. ವೀಡಿಯೊದಲ್ಲಿ, ಮಹಿಳೆಯರು ಚಳಿಯಲ್ಲಿಯೂ ರಸ್ತೆಯಲ್ಲಿ ಮಲಗಿ ತಮ್ಮ ಉದ್ಯೋಗಗಳನ್ನು ಉಳಿಸುವಂತೆ ಸರ್ಕಾರವನ್ನು ಬೇಡಿಕೊಳ್ಳುವುದನ್ನು ಕಾಣಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಪ್ರಿಯಾಂಕ ಗಾಂಧಿ, ಛತ್ತೀಸ್‌ಗಢದ ಈ ವೀಡಿಯೊ ದೇಶದ ಯುವಜನರ ದುಃಸ್ಥಿತಿಗೆ ಒಂದು ಸಣ್ಣ ಉದಾಹರಣೆಯಾಗಿದೆ. ರಾಜ್ಯದಲ್ಲಿ 33 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, 1 ಲಕ್ಷ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ ಬಿಜೆಪಿ ಸರ್ಕಾರ 3 ಸಾವಿರ ಶಿಕ್ಷಕರನ್ನು ಕೆಲಸದಿಂದ ತೆಗೆದುಹಾಕಿದೆ ಎಂದು ಹೇಳಿದ್ದಾರೆ.

“ಈ ಹುಡುಗಿಯರು ಈ ಕಠಿಣ ಚಳಿಯಲ್ಲಿ ರಸ್ತೆಯಲ್ಲಿ ಮಲಗಿ ಉದ್ಯೋಗಕ್ಕಾಗಿ ಒತ್ತಾಯಿಸಿ ಪ್ರತಿಭಟಿಸುತ್ತಿದ್ದಾರೆ. ಇಂದು, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ, ಛತ್ತೀಸ್‌ಗಢ ಸೇರಿದಂತೆ ಪ್ರತಿಯೊಂದು ರಾಜ್ಯದಿಂದ ಯುವಕರು ಬಿಜೆಪಿಯ ಭ್ರಷ್ಟಾಚಾರ ಮತ್ತು ನಿರುದ್ಯೋಗದ ವಿರುದ್ಧ ಪ್ರತಿಭಟಿಸುತ್ತಿದ್ದಾರೆ. ಬಿಜೆಪಿ ಇಡೀ ದೇಶದ ಯುವಕರ ಭವಿಷ್ಯವನ್ನು ಕತ್ತಲೆಗೆ ತಳ್ಳಿದೆ” ಎಂದು ಪ್ರಿಯಾಂಕ ಹೇಳಿದ್ದಾರೆ. ಛತ್ತೀಸ್‌ಗಢ ಬಿಜೆಪಿ

 

ರಾಜ್ಯ ಸರ್ಕಾರವು ಇತ್ತಿಚೆಗೆ ಬಿ.ಇಡಿ ಪದವಿ ಪಡೆದ ಸುಮಾರು 2900 ಸಹಾಯಕ ಶಿಕ್ಷಕರನ್ನು ಅವರ ಹುದ್ದೆಗಳಿಂದ ವಜಾಗೊಳಿಸಿದೆ. ಇದನ್ನು ವಿರೋಧಿಸಿ ಗುರುವಾರ ರಾಜ್ಯ ಬಿಜೆಪಿ ಕಚೇರಿಯ ಹೊರಗೆ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 30 ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಅದಾಗ್ಯೂ, ಪೊಲೀಸರ ಕ್ರಮದಿಂದ ವಿಚಲಿತರಾಗದ ಶಿಕ್ಷಕರು, ನ್ಯಾಯಕ್ಕಾಗಿ ನಯಾ ರಾಯ್‌ಪುರದ ಟುಟಾದಲ್ಲಿ ತಮ್ಮ ಆಂದೋಲನವನ್ನು ಮುಂದುವರೆಸಿದ್ದಾರೆ.

“ನೀವು ನಮಗೆ ಕೆಲಸ ನೀಡಲು ಸಾಧ್ಯವಾಗದಿದ್ದರೆ, ನಮಗೆ ದಯಾಮರಣ ನೀಡಿ” ಪ್ರತಿಭಟನಾಕಾರರು ಅಂದು ಆಗ್ರಹಿಸಿದ್ದರು. ತಮ್ಮನ್ನು ಅರ್ಹತೆಯ ಮೇಲೆ ಆಯ್ಕೆ ಮಾಡಲಾಗಿದೆ ಮತ್ತು ತಿಂಗಳುಗಳಿಂದ ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದರೂ, ನಂತರ ಹಠಾತ್ತನೆ ವಜಾಗೊಳಿಸಲಾಗಿದೆ ಎಂದು ಅವರು ಹೇಳಿದ್ದ, ತಮ್ಮನ್ನು ಮರುನೇಮಕ ಮಾಡುವಂತೆ ಒತ್ತಾಯಿಸಿದ್ದರು.

ಇದನ್ನೂಓದಿ:  ಡಿಯಾಗೋ ಗಾರ್ಸಿಯಾ ದ್ವೀಪದ ಬಳಿ ಭಾರತೀಯ ಮೀನುಗಾರರನ್ನು ಬಂಧಿಸಿದ ಬ್ರಿಟಿಷ್ ನೌಕಾಪಡೆ

ಡಿಯಾಗೋ ಗಾರ್ಸಿಯಾ ದ್ವೀಪದ ಬಳಿ ಭಾರತೀಯ ಮೀನುಗಾರರನ್ನು ಬಂಧಿಸಿದ ಬ್ರಿಟಿಷ್ ನೌಕಾಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...