Homeಚಳವಳಿಛತ್ತೀಸ್‌ಗಢ ಬಿಜೆಪಿ ಸರ್ಕಾರದಿಂದ 3 ಸಾವಿರ ಶಿಕ್ಷಕರ ವಜಾ

ಛತ್ತೀಸ್‌ಗಢ ಬಿಜೆಪಿ ಸರ್ಕಾರದಿಂದ 3 ಸಾವಿರ ಶಿಕ್ಷಕರ ವಜಾ

ರಸ್ತೆಯಲ್ಲೆ ಸಾಷ್ಟಾಂಗ ನಮಸ್ಕಾರ ಮಾಡಿ ಪ್ರತಿಭಟಿಸುತ್ತಿರುವ ಶಿಕ್ಷಕಿಯರು

- Advertisement -
- Advertisement -

ಛತ್ತೀಸ್‌ಗಢದಲ್ಲಿ ಶಿಕ್ಷಕರ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದು, ವಯನಾಡ್‌ನ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ತಮ್ಮ ಎಕ್ಸ್ ಖಾತೆಯಲ್ಲಿ ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತಮ್ಮನ್ನು ವಜಾಗೊಳಿಸಿರುವುದನ್ನು ವಿರೋಧಿಸಿ ಶಿಕ್ಷಕರು ರಸ್ತೆಯಲ್ಲೆ ಸಾಷ್ಟಾಂಗ ನಮಸ್ಕಾರ ಮಾಡಿ ಪ್ರತಿಭಟಿಸುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ. ಛತ್ತೀಸ್‌ಗಢ ಬಿಜೆಪಿ

ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳು ಮತ್ತು ಇತ್ತೀಚೆಗೆ 3,000 ಶಿಕ್ಷಕರನ್ನು ವಜಾಗೊಳಿಸಿರುವುದನ್ನು ವಿರೋಧಿಸಿ ಈ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ. ವೀಡಿಯೊದಲ್ಲಿ, ಮಹಿಳೆಯರು ಚಳಿಯಲ್ಲಿಯೂ ರಸ್ತೆಯಲ್ಲಿ ಮಲಗಿ ತಮ್ಮ ಉದ್ಯೋಗಗಳನ್ನು ಉಳಿಸುವಂತೆ ಸರ್ಕಾರವನ್ನು ಬೇಡಿಕೊಳ್ಳುವುದನ್ನು ಕಾಣಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಪ್ರಿಯಾಂಕ ಗಾಂಧಿ, ಛತ್ತೀಸ್‌ಗಢದ ಈ ವೀಡಿಯೊ ದೇಶದ ಯುವಜನರ ದುಃಸ್ಥಿತಿಗೆ ಒಂದು ಸಣ್ಣ ಉದಾಹರಣೆಯಾಗಿದೆ. ರಾಜ್ಯದಲ್ಲಿ 33 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, 1 ಲಕ್ಷ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ ಬಿಜೆಪಿ ಸರ್ಕಾರ 3 ಸಾವಿರ ಶಿಕ್ಷಕರನ್ನು ಕೆಲಸದಿಂದ ತೆಗೆದುಹಾಕಿದೆ ಎಂದು ಹೇಳಿದ್ದಾರೆ.

“ಈ ಹುಡುಗಿಯರು ಈ ಕಠಿಣ ಚಳಿಯಲ್ಲಿ ರಸ್ತೆಯಲ್ಲಿ ಮಲಗಿ ಉದ್ಯೋಗಕ್ಕಾಗಿ ಒತ್ತಾಯಿಸಿ ಪ್ರತಿಭಟಿಸುತ್ತಿದ್ದಾರೆ. ಇಂದು, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ, ಛತ್ತೀಸ್‌ಗಢ ಸೇರಿದಂತೆ ಪ್ರತಿಯೊಂದು ರಾಜ್ಯದಿಂದ ಯುವಕರು ಬಿಜೆಪಿಯ ಭ್ರಷ್ಟಾಚಾರ ಮತ್ತು ನಿರುದ್ಯೋಗದ ವಿರುದ್ಧ ಪ್ರತಿಭಟಿಸುತ್ತಿದ್ದಾರೆ. ಬಿಜೆಪಿ ಇಡೀ ದೇಶದ ಯುವಕರ ಭವಿಷ್ಯವನ್ನು ಕತ್ತಲೆಗೆ ತಳ್ಳಿದೆ” ಎಂದು ಪ್ರಿಯಾಂಕ ಹೇಳಿದ್ದಾರೆ. ಛತ್ತೀಸ್‌ಗಢ ಬಿಜೆಪಿ

 

ರಾಜ್ಯ ಸರ್ಕಾರವು ಇತ್ತಿಚೆಗೆ ಬಿ.ಇಡಿ ಪದವಿ ಪಡೆದ ಸುಮಾರು 2900 ಸಹಾಯಕ ಶಿಕ್ಷಕರನ್ನು ಅವರ ಹುದ್ದೆಗಳಿಂದ ವಜಾಗೊಳಿಸಿದೆ. ಇದನ್ನು ವಿರೋಧಿಸಿ ಗುರುವಾರ ರಾಜ್ಯ ಬಿಜೆಪಿ ಕಚೇರಿಯ ಹೊರಗೆ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 30 ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಅದಾಗ್ಯೂ, ಪೊಲೀಸರ ಕ್ರಮದಿಂದ ವಿಚಲಿತರಾಗದ ಶಿಕ್ಷಕರು, ನ್ಯಾಯಕ್ಕಾಗಿ ನಯಾ ರಾಯ್‌ಪುರದ ಟುಟಾದಲ್ಲಿ ತಮ್ಮ ಆಂದೋಲನವನ್ನು ಮುಂದುವರೆಸಿದ್ದಾರೆ.

“ನೀವು ನಮಗೆ ಕೆಲಸ ನೀಡಲು ಸಾಧ್ಯವಾಗದಿದ್ದರೆ, ನಮಗೆ ದಯಾಮರಣ ನೀಡಿ” ಪ್ರತಿಭಟನಾಕಾರರು ಅಂದು ಆಗ್ರಹಿಸಿದ್ದರು. ತಮ್ಮನ್ನು ಅರ್ಹತೆಯ ಮೇಲೆ ಆಯ್ಕೆ ಮಾಡಲಾಗಿದೆ ಮತ್ತು ತಿಂಗಳುಗಳಿಂದ ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದರೂ, ನಂತರ ಹಠಾತ್ತನೆ ವಜಾಗೊಳಿಸಲಾಗಿದೆ ಎಂದು ಅವರು ಹೇಳಿದ್ದ, ತಮ್ಮನ್ನು ಮರುನೇಮಕ ಮಾಡುವಂತೆ ಒತ್ತಾಯಿಸಿದ್ದರು.

ಇದನ್ನೂಓದಿ:  ಡಿಯಾಗೋ ಗಾರ್ಸಿಯಾ ದ್ವೀಪದ ಬಳಿ ಭಾರತೀಯ ಮೀನುಗಾರರನ್ನು ಬಂಧಿಸಿದ ಬ್ರಿಟಿಷ್ ನೌಕಾಪಡೆ

ಡಿಯಾಗೋ ಗಾರ್ಸಿಯಾ ದ್ವೀಪದ ಬಳಿ ಭಾರತೀಯ ಮೀನುಗಾರರನ್ನು ಬಂಧಿಸಿದ ಬ್ರಿಟಿಷ್ ನೌಕಾಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...