Homeಚಳವಳಿಛತ್ತೀಸ್‌ಗಢ ಬಿಜೆಪಿ ಸರ್ಕಾರದಿಂದ 3 ಸಾವಿರ ಶಿಕ್ಷಕರ ವಜಾ

ಛತ್ತೀಸ್‌ಗಢ ಬಿಜೆಪಿ ಸರ್ಕಾರದಿಂದ 3 ಸಾವಿರ ಶಿಕ್ಷಕರ ವಜಾ

ರಸ್ತೆಯಲ್ಲೆ ಸಾಷ್ಟಾಂಗ ನಮಸ್ಕಾರ ಮಾಡಿ ಪ್ರತಿಭಟಿಸುತ್ತಿರುವ ಶಿಕ್ಷಕಿಯರು

- Advertisement -
- Advertisement -

ಛತ್ತೀಸ್‌ಗಢದಲ್ಲಿ ಶಿಕ್ಷಕರ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದು, ವಯನಾಡ್‌ನ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ತಮ್ಮ ಎಕ್ಸ್ ಖಾತೆಯಲ್ಲಿ ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತಮ್ಮನ್ನು ವಜಾಗೊಳಿಸಿರುವುದನ್ನು ವಿರೋಧಿಸಿ ಶಿಕ್ಷಕರು ರಸ್ತೆಯಲ್ಲೆ ಸಾಷ್ಟಾಂಗ ನಮಸ್ಕಾರ ಮಾಡಿ ಪ್ರತಿಭಟಿಸುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ. ಛತ್ತೀಸ್‌ಗಢ ಬಿಜೆಪಿ

ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳು ಮತ್ತು ಇತ್ತೀಚೆಗೆ 3,000 ಶಿಕ್ಷಕರನ್ನು ವಜಾಗೊಳಿಸಿರುವುದನ್ನು ವಿರೋಧಿಸಿ ಈ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ. ವೀಡಿಯೊದಲ್ಲಿ, ಮಹಿಳೆಯರು ಚಳಿಯಲ್ಲಿಯೂ ರಸ್ತೆಯಲ್ಲಿ ಮಲಗಿ ತಮ್ಮ ಉದ್ಯೋಗಗಳನ್ನು ಉಳಿಸುವಂತೆ ಸರ್ಕಾರವನ್ನು ಬೇಡಿಕೊಳ್ಳುವುದನ್ನು ಕಾಣಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಪ್ರಿಯಾಂಕ ಗಾಂಧಿ, ಛತ್ತೀಸ್‌ಗಢದ ಈ ವೀಡಿಯೊ ದೇಶದ ಯುವಜನರ ದುಃಸ್ಥಿತಿಗೆ ಒಂದು ಸಣ್ಣ ಉದಾಹರಣೆಯಾಗಿದೆ. ರಾಜ್ಯದಲ್ಲಿ 33 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, 1 ಲಕ್ಷ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ ಬಿಜೆಪಿ ಸರ್ಕಾರ 3 ಸಾವಿರ ಶಿಕ್ಷಕರನ್ನು ಕೆಲಸದಿಂದ ತೆಗೆದುಹಾಕಿದೆ ಎಂದು ಹೇಳಿದ್ದಾರೆ.

“ಈ ಹುಡುಗಿಯರು ಈ ಕಠಿಣ ಚಳಿಯಲ್ಲಿ ರಸ್ತೆಯಲ್ಲಿ ಮಲಗಿ ಉದ್ಯೋಗಕ್ಕಾಗಿ ಒತ್ತಾಯಿಸಿ ಪ್ರತಿಭಟಿಸುತ್ತಿದ್ದಾರೆ. ಇಂದು, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ, ಛತ್ತೀಸ್‌ಗಢ ಸೇರಿದಂತೆ ಪ್ರತಿಯೊಂದು ರಾಜ್ಯದಿಂದ ಯುವಕರು ಬಿಜೆಪಿಯ ಭ್ರಷ್ಟಾಚಾರ ಮತ್ತು ನಿರುದ್ಯೋಗದ ವಿರುದ್ಧ ಪ್ರತಿಭಟಿಸುತ್ತಿದ್ದಾರೆ. ಬಿಜೆಪಿ ಇಡೀ ದೇಶದ ಯುವಕರ ಭವಿಷ್ಯವನ್ನು ಕತ್ತಲೆಗೆ ತಳ್ಳಿದೆ” ಎಂದು ಪ್ರಿಯಾಂಕ ಹೇಳಿದ್ದಾರೆ. ಛತ್ತೀಸ್‌ಗಢ ಬಿಜೆಪಿ

 

ರಾಜ್ಯ ಸರ್ಕಾರವು ಇತ್ತಿಚೆಗೆ ಬಿ.ಇಡಿ ಪದವಿ ಪಡೆದ ಸುಮಾರು 2900 ಸಹಾಯಕ ಶಿಕ್ಷಕರನ್ನು ಅವರ ಹುದ್ದೆಗಳಿಂದ ವಜಾಗೊಳಿಸಿದೆ. ಇದನ್ನು ವಿರೋಧಿಸಿ ಗುರುವಾರ ರಾಜ್ಯ ಬಿಜೆಪಿ ಕಚೇರಿಯ ಹೊರಗೆ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 30 ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಅದಾಗ್ಯೂ, ಪೊಲೀಸರ ಕ್ರಮದಿಂದ ವಿಚಲಿತರಾಗದ ಶಿಕ್ಷಕರು, ನ್ಯಾಯಕ್ಕಾಗಿ ನಯಾ ರಾಯ್‌ಪುರದ ಟುಟಾದಲ್ಲಿ ತಮ್ಮ ಆಂದೋಲನವನ್ನು ಮುಂದುವರೆಸಿದ್ದಾರೆ.

“ನೀವು ನಮಗೆ ಕೆಲಸ ನೀಡಲು ಸಾಧ್ಯವಾಗದಿದ್ದರೆ, ನಮಗೆ ದಯಾಮರಣ ನೀಡಿ” ಪ್ರತಿಭಟನಾಕಾರರು ಅಂದು ಆಗ್ರಹಿಸಿದ್ದರು. ತಮ್ಮನ್ನು ಅರ್ಹತೆಯ ಮೇಲೆ ಆಯ್ಕೆ ಮಾಡಲಾಗಿದೆ ಮತ್ತು ತಿಂಗಳುಗಳಿಂದ ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದರೂ, ನಂತರ ಹಠಾತ್ತನೆ ವಜಾಗೊಳಿಸಲಾಗಿದೆ ಎಂದು ಅವರು ಹೇಳಿದ್ದ, ತಮ್ಮನ್ನು ಮರುನೇಮಕ ಮಾಡುವಂತೆ ಒತ್ತಾಯಿಸಿದ್ದರು.

ಇದನ್ನೂಓದಿ:  ಡಿಯಾಗೋ ಗಾರ್ಸಿಯಾ ದ್ವೀಪದ ಬಳಿ ಭಾರತೀಯ ಮೀನುಗಾರರನ್ನು ಬಂಧಿಸಿದ ಬ್ರಿಟಿಷ್ ನೌಕಾಪಡೆ

ಡಿಯಾಗೋ ಗಾರ್ಸಿಯಾ ದ್ವೀಪದ ಬಳಿ ಭಾರತೀಯ ಮೀನುಗಾರರನ್ನು ಬಂಧಿಸಿದ ಬ್ರಿಟಿಷ್ ನೌಕಾಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...