Homeಚಳವಳಿಛತ್ತೀಸ್‌ಗಢ | ಅದಾನಿ ಗಣಿಗಾಗಿ ಬಿಜೆಪಿ ಸರ್ಕಾರದಿಂದ 5,000 ಮರಗಳ ಮಾರಣಹೋಮ

ಛತ್ತೀಸ್‌ಗಢ | ಅದಾನಿ ಗಣಿಗಾಗಿ ಬಿಜೆಪಿ ಸರ್ಕಾರದಿಂದ 5,000 ಮರಗಳ ಮಾರಣಹೋಮ

- Advertisement -
- Advertisement -

ಕಲ್ಲಿದ್ದಲು ಗಣಿಗಾರಿಕೆ ನಡೆಸಲು ಅದಾನಿ ಕಂಪನಿಯ ಎಂಡಿಒಗೆ ನೆರವಾಗಲು ಛತ್ತೀಸ್‌ಗಢದ ಬಿಜೆಪಿ ಸರ್ಕಾರ 5,000 ಮರಗಳ ಮಾರಣಹೋಮ ನಡೆಸಿದೆ ಎಂದು ವರದಿಯಾಗಿದೆ. ಮರಗಳ ಮಾರಣಹೋಮ ವಿರೋಧಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಶಾಸಕಿ ಮತ್ತು ಗ್ರಾಮಸ್ಥರನ್ನು ಬಂಧಿಸಿದೆ ಪೊಲೀಸರು ಬಂಧಿಸಿದ್ದಾರೆ. ಛತ್ತೀಸ್‌ಗಢದ ರಾಯಗಢ ಜಿಲ್ಲೆಯ ಲೈಲುಂಗಾ ಮತ್ತು ತಮ್ನಾರ್ ಪ್ರದೇಶದ ಗರೆ ಪಾಲ್ಮಾ II ಕಲ್ಲಿದ್ದಲು ಗಣಿಯಲ್ಲಿ ಗಣಿಗಾರಿಕೆಗಾಗಿ ಸಾವಿರಾರು ಬೃಹತ್ ಮರಗಳನ್ನು ಕಡಿಯಲಾಗುತ್ತಿದೆ ಎಂದು ವರದಿ ಹೇಳಿದೆ. ಛತ್ತೀಸ್‌ಗಢ | ಅದಾನಿ

ಪ್ರಸ್ತುತ ರಾಜ್ಯದ ಲೈಲುಂಗಾ ಪ್ರದೇಶದಲ್ಲಿ ಭಾರೀ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದ್ದು, ಗ್ರಾಮಸ್ಥರನ್ನು ಸ್ಥಳದಿಂದ ಬಲವಂತವಾಗಿ ಓಡಿಸಲಾಗಿದೆ. ಆದರೆ, ತೀವ್ರವಾಗಿ ಪ್ರತಿಭಟಿಸಿದವರನ್ನು ವಶಕ್ಕೆ ಪಡೆದು ಸ್ಥಳೀಯ ಪೊಲೀಸ್ ಠಾಣೆ ಮತ್ತು ಸರ್ಕ್ಯೂಟ್ ಹೌಸ್‌ಗೆ ಕರೆದೊಯ್ಯಲಾಗಿದೆ ಎಂದು ವರದಿ ಹೇಳಿದೆ.

ಗುರುವಾರ, ಈ ಪ್ರದೇಶದಲ್ಲಿ ಮರ ಕಡಿಯಲು ಎಂಡಿಒ ಕಂಪನಿಯ ಕಾರ್ಮಿಕರು ಹಾಗೂ ಜೆಸಿಬಿಗಳು ಗ್ರಾಮಗಳಿಗೆ ನುಗ್ಗಿವೆ. ಮರ ಕಡಿಯುವಿಕೆಯನ್ನು ಆರಂಭಿಸುತ್ತಿದ್ದಂತೆಯೇ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಶಾಸಕಿ ವಿದ್ಯಾವತಿ ಸಿದರ್ ಕೂಡ ಸ್ಥಳಕ್ಕೆ ಧಾವಿಸಿ, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಅವರೆಲ್ಲರನ್ನೂ ಪೊಲೀಸರು ಬಂಧಿಸಿದ್ದಾರೆ.

ಮಾಹಿತಿಯ ಪ್ರಕಾರ, ಉದ್ದೇಶಿತ ಗಣಿಗಾರಿಕೆ ಪ್ರದೇಶದಲ್ಲಿ 9 ಗ್ರಾಮ ಪಂಚಾಯತಿಗಳು, 14 ಹಳ್ಳಿಗಳು ಹಾಗೂ ಒಟ್ಟು 9,500 ಜನರು ವಾಸಿಸುತ್ತಿದ್ದಾರೆ. ಗೇರ್ ಪಾಲ್ಮಾ ಸೆಕ್ಟರ್ II ಕಲ್ಲಿದ್ದಲು ಗಣಿಯಲ್ಲಿ ಗಣಿಗಾರಿಕೆ ನಡೆಸಲು 2019ರಲ್ಲಿ ಗ್ರಾಮ ಸಭೆಗಳನ್ನು ನಡೆಸಲಾಗಿತ್ತು. ಆಗಲೂ ಗಣಿಗಾರಿಕೆಗೆ ವಿರೋಧ ವ್ಯಕ್ತವಾಗಿದ್ದವು.


ಆದಾಗ್ಯೂ, 2022ರಲ್ಲಿ ಗಣಿಗಾರಿಕೆಗೆ ಅರಣ್ಯ ಇಲಾಖೆಯೂ ಅನುಮತಿ ಮಂಜೂರು ಮಾಡಿತು. ಬಳಿಕ, ಗ್ರಾಮದ ಪ್ರತಿನಿಧಿಗಳು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ (NGT) ದೂರು ದಾಖಲಿಸಿದ್ದರು. ಅರಣ್ಯ ಇಲಾಖೆ ನೀಡಿದ್ದ ಅಮತಿಯನ್ನು ಎನ್‌ಜಿಟಿ ರದ್ದುಗೊಳಿಸಿತ್ತು. ಆದರೆ, 2024ರಲ್ಲಿ ಪರಿಸರ ಸಚಿವಾಲಯ ಮತ್ತೊಮ್ಮೆ ಗಣಿಗಾರಿಕೆಗೆ ಅನುಮತಿ ನೀಡಿತು.

“ಛತ್ತೀಸ್‌ಗಢದ ಹಣಕಾಸು ಮತ್ತು ಪರಿಸರ ಸಚಿವ, ರಾಯ್‌ಗಢ ಶಾಸಕ ಒ.ಪಿ ಚೌಧರಿ ಅವರು ತಮ್ನಾರ್ ಪ್ರದೇಶಕ್ಕೆ ಭೇಟಿ ನೀಡಿದ್ದರು. ಅವರ ಭೇಟಿಯ ಸಂದರ್ಭದಲ್ಲೇ ಮುದಗಾಂವ್‌ನಲ್ಲಿ ದೊಡ್ಡ ಪ್ರಮಾಣದ ಅರಣ್ಯನಾಶ ಪ್ರಾರಂಭವಾಯಿತು ಎಂದು ರಾಯ್‌ಗಢದ ಪರಿಸರವಾದಿ ರಾಜೇಶ್ ತ್ರಿಪಾಠಿ ಹೇಳಿದ್ದಾರೆ.


ಜೂನ್ 25 ರಂದು, ಸಚಿವ ಚೌಧರಿ ಅವರು ‘ತಾಯಿಯ ಹೆಸರಿನಲ್ಲಿ ಒಂದು ಮರ ನೆಡಿ’ ಅಭಿಯಾನವನ್ನು ಪ್ರಾರಂಭಿಸಿದರು. “ನಾಗರಿಕರು ತಮ್ಮ ತಾಯಂದಿರಿಗೆ ಗೌರವವಾಗಿ ಮತ್ತು ಪರಿಸರವನ್ನು ರಕ್ಷಿಸುವ ಹೆಜ್ಜೆಯಾಗಿ ಮರಗಳನ್ನು ನೆಡಬೇಕು” ಎಂದು ಚೌಧರಿ ಒತ್ತಾಯಿಸಿದ್ದರು.

ಆದರೆ, “ಚೌಧರಿ ತಮ್ನಾರ್‌ಗೆ ಭೇಟಿ ನೀಡಿ ಹೋದ 24 ಗಂಟೆಗಳ ಒಳಗೆಯೇ ಮರಗಳನ್ನು ಉರುಳಿಸುವ ಭಾರೀ ಯಂತ್ರೋಪಕರಣಗಳು ಮುದಗಾಂವ್‌ಗೆ ನುಗ್ಗಿದವು. ದೊಡ್ಡ ಅರಣ್ಯ ಪ್ರದೇಶಗಳನ್ನು ನಾಶಗೊಳಿಸಲು ಆರಂಭಿಸಿದವು” ಎಂದು ತ್ರಿಪಾಠಿ ಆರೋಪಿಸಿದ್ದಾರೆ. ಛತ್ತೀಸ್‌ಗಢ | ಅದಾನಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ‘NRC’ಗಿಂತ ಅಪಾಯಕಾರಿ: ಮಮತಾ ಬ್ಯಾನರ್ಜಿ

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ‘NRC’ಗಿಂತ ಅಪಾಯಕಾರಿ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...