Homeಚಳವಳಿಛತ್ತೀಸ್‌ಗಢ | ಅದಾನಿ ಗಣಿಗಾಗಿ ಬಿಜೆಪಿ ಸರ್ಕಾರದಿಂದ 5,000 ಮರಗಳ ಮಾರಣಹೋಮ

ಛತ್ತೀಸ್‌ಗಢ | ಅದಾನಿ ಗಣಿಗಾಗಿ ಬಿಜೆಪಿ ಸರ್ಕಾರದಿಂದ 5,000 ಮರಗಳ ಮಾರಣಹೋಮ

- Advertisement -
- Advertisement -

ಕಲ್ಲಿದ್ದಲು ಗಣಿಗಾರಿಕೆ ನಡೆಸಲು ಅದಾನಿ ಕಂಪನಿಯ ಎಂಡಿಒಗೆ ನೆರವಾಗಲು ಛತ್ತೀಸ್‌ಗಢದ ಬಿಜೆಪಿ ಸರ್ಕಾರ 5,000 ಮರಗಳ ಮಾರಣಹೋಮ ನಡೆಸಿದೆ ಎಂದು ವರದಿಯಾಗಿದೆ. ಮರಗಳ ಮಾರಣಹೋಮ ವಿರೋಧಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಶಾಸಕಿ ಮತ್ತು ಗ್ರಾಮಸ್ಥರನ್ನು ಬಂಧಿಸಿದೆ ಪೊಲೀಸರು ಬಂಧಿಸಿದ್ದಾರೆ. ಛತ್ತೀಸ್‌ಗಢದ ರಾಯಗಢ ಜಿಲ್ಲೆಯ ಲೈಲುಂಗಾ ಮತ್ತು ತಮ್ನಾರ್ ಪ್ರದೇಶದ ಗರೆ ಪಾಲ್ಮಾ II ಕಲ್ಲಿದ್ದಲು ಗಣಿಯಲ್ಲಿ ಗಣಿಗಾರಿಕೆಗಾಗಿ ಸಾವಿರಾರು ಬೃಹತ್ ಮರಗಳನ್ನು ಕಡಿಯಲಾಗುತ್ತಿದೆ ಎಂದು ವರದಿ ಹೇಳಿದೆ. ಛತ್ತೀಸ್‌ಗಢ | ಅದಾನಿ

ಪ್ರಸ್ತುತ ರಾಜ್ಯದ ಲೈಲುಂಗಾ ಪ್ರದೇಶದಲ್ಲಿ ಭಾರೀ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದ್ದು, ಗ್ರಾಮಸ್ಥರನ್ನು ಸ್ಥಳದಿಂದ ಬಲವಂತವಾಗಿ ಓಡಿಸಲಾಗಿದೆ. ಆದರೆ, ತೀವ್ರವಾಗಿ ಪ್ರತಿಭಟಿಸಿದವರನ್ನು ವಶಕ್ಕೆ ಪಡೆದು ಸ್ಥಳೀಯ ಪೊಲೀಸ್ ಠಾಣೆ ಮತ್ತು ಸರ್ಕ್ಯೂಟ್ ಹೌಸ್‌ಗೆ ಕರೆದೊಯ್ಯಲಾಗಿದೆ ಎಂದು ವರದಿ ಹೇಳಿದೆ.

ಗುರುವಾರ, ಈ ಪ್ರದೇಶದಲ್ಲಿ ಮರ ಕಡಿಯಲು ಎಂಡಿಒ ಕಂಪನಿಯ ಕಾರ್ಮಿಕರು ಹಾಗೂ ಜೆಸಿಬಿಗಳು ಗ್ರಾಮಗಳಿಗೆ ನುಗ್ಗಿವೆ. ಮರ ಕಡಿಯುವಿಕೆಯನ್ನು ಆರಂಭಿಸುತ್ತಿದ್ದಂತೆಯೇ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಶಾಸಕಿ ವಿದ್ಯಾವತಿ ಸಿದರ್ ಕೂಡ ಸ್ಥಳಕ್ಕೆ ಧಾವಿಸಿ, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಅವರೆಲ್ಲರನ್ನೂ ಪೊಲೀಸರು ಬಂಧಿಸಿದ್ದಾರೆ.

ಮಾಹಿತಿಯ ಪ್ರಕಾರ, ಉದ್ದೇಶಿತ ಗಣಿಗಾರಿಕೆ ಪ್ರದೇಶದಲ್ಲಿ 9 ಗ್ರಾಮ ಪಂಚಾಯತಿಗಳು, 14 ಹಳ್ಳಿಗಳು ಹಾಗೂ ಒಟ್ಟು 9,500 ಜನರು ವಾಸಿಸುತ್ತಿದ್ದಾರೆ. ಗೇರ್ ಪಾಲ್ಮಾ ಸೆಕ್ಟರ್ II ಕಲ್ಲಿದ್ದಲು ಗಣಿಯಲ್ಲಿ ಗಣಿಗಾರಿಕೆ ನಡೆಸಲು 2019ರಲ್ಲಿ ಗ್ರಾಮ ಸಭೆಗಳನ್ನು ನಡೆಸಲಾಗಿತ್ತು. ಆಗಲೂ ಗಣಿಗಾರಿಕೆಗೆ ವಿರೋಧ ವ್ಯಕ್ತವಾಗಿದ್ದವು.


ಆದಾಗ್ಯೂ, 2022ರಲ್ಲಿ ಗಣಿಗಾರಿಕೆಗೆ ಅರಣ್ಯ ಇಲಾಖೆಯೂ ಅನುಮತಿ ಮಂಜೂರು ಮಾಡಿತು. ಬಳಿಕ, ಗ್ರಾಮದ ಪ್ರತಿನಿಧಿಗಳು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ (NGT) ದೂರು ದಾಖಲಿಸಿದ್ದರು. ಅರಣ್ಯ ಇಲಾಖೆ ನೀಡಿದ್ದ ಅಮತಿಯನ್ನು ಎನ್‌ಜಿಟಿ ರದ್ದುಗೊಳಿಸಿತ್ತು. ಆದರೆ, 2024ರಲ್ಲಿ ಪರಿಸರ ಸಚಿವಾಲಯ ಮತ್ತೊಮ್ಮೆ ಗಣಿಗಾರಿಕೆಗೆ ಅನುಮತಿ ನೀಡಿತು.

“ಛತ್ತೀಸ್‌ಗಢದ ಹಣಕಾಸು ಮತ್ತು ಪರಿಸರ ಸಚಿವ, ರಾಯ್‌ಗಢ ಶಾಸಕ ಒ.ಪಿ ಚೌಧರಿ ಅವರು ತಮ್ನಾರ್ ಪ್ರದೇಶಕ್ಕೆ ಭೇಟಿ ನೀಡಿದ್ದರು. ಅವರ ಭೇಟಿಯ ಸಂದರ್ಭದಲ್ಲೇ ಮುದಗಾಂವ್‌ನಲ್ಲಿ ದೊಡ್ಡ ಪ್ರಮಾಣದ ಅರಣ್ಯನಾಶ ಪ್ರಾರಂಭವಾಯಿತು ಎಂದು ರಾಯ್‌ಗಢದ ಪರಿಸರವಾದಿ ರಾಜೇಶ್ ತ್ರಿಪಾಠಿ ಹೇಳಿದ್ದಾರೆ.


ಜೂನ್ 25 ರಂದು, ಸಚಿವ ಚೌಧರಿ ಅವರು ‘ತಾಯಿಯ ಹೆಸರಿನಲ್ಲಿ ಒಂದು ಮರ ನೆಡಿ’ ಅಭಿಯಾನವನ್ನು ಪ್ರಾರಂಭಿಸಿದರು. “ನಾಗರಿಕರು ತಮ್ಮ ತಾಯಂದಿರಿಗೆ ಗೌರವವಾಗಿ ಮತ್ತು ಪರಿಸರವನ್ನು ರಕ್ಷಿಸುವ ಹೆಜ್ಜೆಯಾಗಿ ಮರಗಳನ್ನು ನೆಡಬೇಕು” ಎಂದು ಚೌಧರಿ ಒತ್ತಾಯಿಸಿದ್ದರು.

ಆದರೆ, “ಚೌಧರಿ ತಮ್ನಾರ್‌ಗೆ ಭೇಟಿ ನೀಡಿ ಹೋದ 24 ಗಂಟೆಗಳ ಒಳಗೆಯೇ ಮರಗಳನ್ನು ಉರುಳಿಸುವ ಭಾರೀ ಯಂತ್ರೋಪಕರಣಗಳು ಮುದಗಾಂವ್‌ಗೆ ನುಗ್ಗಿದವು. ದೊಡ್ಡ ಅರಣ್ಯ ಪ್ರದೇಶಗಳನ್ನು ನಾಶಗೊಳಿಸಲು ಆರಂಭಿಸಿದವು” ಎಂದು ತ್ರಿಪಾಠಿ ಆರೋಪಿಸಿದ್ದಾರೆ. ಛತ್ತೀಸ್‌ಗಢ | ಅದಾನಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ‘NRC’ಗಿಂತ ಅಪಾಯಕಾರಿ: ಮಮತಾ ಬ್ಯಾನರ್ಜಿ

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ‘NRC’ಗಿಂತ ಅಪಾಯಕಾರಿ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...