Homeಚಳವಳಿಛತ್ತೀಸ್‌ಗಢ | ಅದಾನಿ ಗಣಿಗಾಗಿ ಬಿಜೆಪಿ ಸರ್ಕಾರದಿಂದ 5,000 ಮರಗಳ ಮಾರಣಹೋಮ

ಛತ್ತೀಸ್‌ಗಢ | ಅದಾನಿ ಗಣಿಗಾಗಿ ಬಿಜೆಪಿ ಸರ್ಕಾರದಿಂದ 5,000 ಮರಗಳ ಮಾರಣಹೋಮ

- Advertisement -
- Advertisement -

ಕಲ್ಲಿದ್ದಲು ಗಣಿಗಾರಿಕೆ ನಡೆಸಲು ಅದಾನಿ ಕಂಪನಿಯ ಎಂಡಿಒಗೆ ನೆರವಾಗಲು ಛತ್ತೀಸ್‌ಗಢದ ಬಿಜೆಪಿ ಸರ್ಕಾರ 5,000 ಮರಗಳ ಮಾರಣಹೋಮ ನಡೆಸಿದೆ ಎಂದು ವರದಿಯಾಗಿದೆ. ಮರಗಳ ಮಾರಣಹೋಮ ವಿರೋಧಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಶಾಸಕಿ ಮತ್ತು ಗ್ರಾಮಸ್ಥರನ್ನು ಬಂಧಿಸಿದೆ ಪೊಲೀಸರು ಬಂಧಿಸಿದ್ದಾರೆ. ಛತ್ತೀಸ್‌ಗಢದ ರಾಯಗಢ ಜಿಲ್ಲೆಯ ಲೈಲುಂಗಾ ಮತ್ತು ತಮ್ನಾರ್ ಪ್ರದೇಶದ ಗರೆ ಪಾಲ್ಮಾ II ಕಲ್ಲಿದ್ದಲು ಗಣಿಯಲ್ಲಿ ಗಣಿಗಾರಿಕೆಗಾಗಿ ಸಾವಿರಾರು ಬೃಹತ್ ಮರಗಳನ್ನು ಕಡಿಯಲಾಗುತ್ತಿದೆ ಎಂದು ವರದಿ ಹೇಳಿದೆ. ಛತ್ತೀಸ್‌ಗಢ | ಅದಾನಿ

ಪ್ರಸ್ತುತ ರಾಜ್ಯದ ಲೈಲುಂಗಾ ಪ್ರದೇಶದಲ್ಲಿ ಭಾರೀ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದ್ದು, ಗ್ರಾಮಸ್ಥರನ್ನು ಸ್ಥಳದಿಂದ ಬಲವಂತವಾಗಿ ಓಡಿಸಲಾಗಿದೆ. ಆದರೆ, ತೀವ್ರವಾಗಿ ಪ್ರತಿಭಟಿಸಿದವರನ್ನು ವಶಕ್ಕೆ ಪಡೆದು ಸ್ಥಳೀಯ ಪೊಲೀಸ್ ಠಾಣೆ ಮತ್ತು ಸರ್ಕ್ಯೂಟ್ ಹೌಸ್‌ಗೆ ಕರೆದೊಯ್ಯಲಾಗಿದೆ ಎಂದು ವರದಿ ಹೇಳಿದೆ.

ಗುರುವಾರ, ಈ ಪ್ರದೇಶದಲ್ಲಿ ಮರ ಕಡಿಯಲು ಎಂಡಿಒ ಕಂಪನಿಯ ಕಾರ್ಮಿಕರು ಹಾಗೂ ಜೆಸಿಬಿಗಳು ಗ್ರಾಮಗಳಿಗೆ ನುಗ್ಗಿವೆ. ಮರ ಕಡಿಯುವಿಕೆಯನ್ನು ಆರಂಭಿಸುತ್ತಿದ್ದಂತೆಯೇ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಶಾಸಕಿ ವಿದ್ಯಾವತಿ ಸಿದರ್ ಕೂಡ ಸ್ಥಳಕ್ಕೆ ಧಾವಿಸಿ, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಅವರೆಲ್ಲರನ್ನೂ ಪೊಲೀಸರು ಬಂಧಿಸಿದ್ದಾರೆ.

ಮಾಹಿತಿಯ ಪ್ರಕಾರ, ಉದ್ದೇಶಿತ ಗಣಿಗಾರಿಕೆ ಪ್ರದೇಶದಲ್ಲಿ 9 ಗ್ರಾಮ ಪಂಚಾಯತಿಗಳು, 14 ಹಳ್ಳಿಗಳು ಹಾಗೂ ಒಟ್ಟು 9,500 ಜನರು ವಾಸಿಸುತ್ತಿದ್ದಾರೆ. ಗೇರ್ ಪಾಲ್ಮಾ ಸೆಕ್ಟರ್ II ಕಲ್ಲಿದ್ದಲು ಗಣಿಯಲ್ಲಿ ಗಣಿಗಾರಿಕೆ ನಡೆಸಲು 2019ರಲ್ಲಿ ಗ್ರಾಮ ಸಭೆಗಳನ್ನು ನಡೆಸಲಾಗಿತ್ತು. ಆಗಲೂ ಗಣಿಗಾರಿಕೆಗೆ ವಿರೋಧ ವ್ಯಕ್ತವಾಗಿದ್ದವು.


ಆದಾಗ್ಯೂ, 2022ರಲ್ಲಿ ಗಣಿಗಾರಿಕೆಗೆ ಅರಣ್ಯ ಇಲಾಖೆಯೂ ಅನುಮತಿ ಮಂಜೂರು ಮಾಡಿತು. ಬಳಿಕ, ಗ್ರಾಮದ ಪ್ರತಿನಿಧಿಗಳು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ (NGT) ದೂರು ದಾಖಲಿಸಿದ್ದರು. ಅರಣ್ಯ ಇಲಾಖೆ ನೀಡಿದ್ದ ಅಮತಿಯನ್ನು ಎನ್‌ಜಿಟಿ ರದ್ದುಗೊಳಿಸಿತ್ತು. ಆದರೆ, 2024ರಲ್ಲಿ ಪರಿಸರ ಸಚಿವಾಲಯ ಮತ್ತೊಮ್ಮೆ ಗಣಿಗಾರಿಕೆಗೆ ಅನುಮತಿ ನೀಡಿತು.

“ಛತ್ತೀಸ್‌ಗಢದ ಹಣಕಾಸು ಮತ್ತು ಪರಿಸರ ಸಚಿವ, ರಾಯ್‌ಗಢ ಶಾಸಕ ಒ.ಪಿ ಚೌಧರಿ ಅವರು ತಮ್ನಾರ್ ಪ್ರದೇಶಕ್ಕೆ ಭೇಟಿ ನೀಡಿದ್ದರು. ಅವರ ಭೇಟಿಯ ಸಂದರ್ಭದಲ್ಲೇ ಮುದಗಾಂವ್‌ನಲ್ಲಿ ದೊಡ್ಡ ಪ್ರಮಾಣದ ಅರಣ್ಯನಾಶ ಪ್ರಾರಂಭವಾಯಿತು ಎಂದು ರಾಯ್‌ಗಢದ ಪರಿಸರವಾದಿ ರಾಜೇಶ್ ತ್ರಿಪಾಠಿ ಹೇಳಿದ್ದಾರೆ.


ಜೂನ್ 25 ರಂದು, ಸಚಿವ ಚೌಧರಿ ಅವರು ‘ತಾಯಿಯ ಹೆಸರಿನಲ್ಲಿ ಒಂದು ಮರ ನೆಡಿ’ ಅಭಿಯಾನವನ್ನು ಪ್ರಾರಂಭಿಸಿದರು. “ನಾಗರಿಕರು ತಮ್ಮ ತಾಯಂದಿರಿಗೆ ಗೌರವವಾಗಿ ಮತ್ತು ಪರಿಸರವನ್ನು ರಕ್ಷಿಸುವ ಹೆಜ್ಜೆಯಾಗಿ ಮರಗಳನ್ನು ನೆಡಬೇಕು” ಎಂದು ಚೌಧರಿ ಒತ್ತಾಯಿಸಿದ್ದರು.

ಆದರೆ, “ಚೌಧರಿ ತಮ್ನಾರ್‌ಗೆ ಭೇಟಿ ನೀಡಿ ಹೋದ 24 ಗಂಟೆಗಳ ಒಳಗೆಯೇ ಮರಗಳನ್ನು ಉರುಳಿಸುವ ಭಾರೀ ಯಂತ್ರೋಪಕರಣಗಳು ಮುದಗಾಂವ್‌ಗೆ ನುಗ್ಗಿದವು. ದೊಡ್ಡ ಅರಣ್ಯ ಪ್ರದೇಶಗಳನ್ನು ನಾಶಗೊಳಿಸಲು ಆರಂಭಿಸಿದವು” ಎಂದು ತ್ರಿಪಾಠಿ ಆರೋಪಿಸಿದ್ದಾರೆ. ಛತ್ತೀಸ್‌ಗಢ | ಅದಾನಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ‘NRC’ಗಿಂತ ಅಪಾಯಕಾರಿ: ಮಮತಾ ಬ್ಯಾನರ್ಜಿ

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ‘NRC’ಗಿಂತ ಅಪಾಯಕಾರಿ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...