Homeಮುಖಪುಟಛತ್ತೀಸ್‌ಗಢ | ಪೊಲೀಸ್ ದಾಖಲೆಗಳಲ್ಲಿ ಬಳಸುವ ಉರ್ದು, ಪರ್ಷಿಯನ್ ಪದಗಳನ್ನು ತೆಗೆದುಹಾಕಿದ ಬಿಜೆಪಿ ಸರ್ಕಾರ

ಛತ್ತೀಸ್‌ಗಢ | ಪೊಲೀಸ್ ದಾಖಲೆಗಳಲ್ಲಿ ಬಳಸುವ ಉರ್ದು, ಪರ್ಷಿಯನ್ ಪದಗಳನ್ನು ತೆಗೆದುಹಾಕಿದ ಬಿಜೆಪಿ ಸರ್ಕಾರ

- Advertisement -
- Advertisement -

ಛತ್ತೀಸ್‌ಗಢದ ಬಿಜೆಪಿ ಸರ್ಕಾರವು ಪೊಲೀಸ್ ದಾಖಲೆಗಳಲ್ಲಿ ಬಳಸಲಾಗುವ ಉರ್ದು ಮತ್ತು ಪರ್ಷಿಯನ್ ಪದಗಳನ್ನು ಕಿತ್ತು ಹಾಕಿ ಹಿಂದಿ ಪದಗನ್ನು ಪರಿಚಯಿಸಿದೆ ಎಂದು ಶನಿವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಾಮಾನ್ಯ ವ್ಯಕ್ತಿಗೆ ಸುಲಭವಾಗಿ ಅರ್ಥವಾಗುವ ಹಿಂದಿ ಪದಗಳೊಂದಿಗೆ ಇದನ್ನು ಬದಲಾಯಿಸಲಾಗಿದ್ದು, ಇದು ಪೊಲೀಸ್ ಸೇವೆಯನ್ನು ಹೆಚ್ಚು ಸುಲಭವಾಗಿ, ಪಾರದರ್ಶಕ ಮತ್ತು ಸಂವಹನಶೀಲವಾಗಿಸುತ್ತದೆ ಎಂದು ಅಧಿಕಾರಿ ಹೇಳಿದ್ದಾರೆ. ಛತ್ತೀಸ್‌ಗಢ | ಪೊಲೀಸ್ ದಾಖಲೆಗಳಲ್ಲಿ

‘ಹಲಾಫ್‌ನಾಮಾ’ ಬದಲಿಗೆ ‘ಶಪತ್ ಪತ್ರ’ (ಅಫಿಡವಿಟ್), ‘ದಫಾ’ ಬದಲಿಗೆ ‘ಧಾರಾ’ (ವಿಭಾಗ), ‘ಫರಿಯಾದಿ’ ಬದಲಿಗೆ ‘ಶಿಕಾಯತ್ಕರ್ತಾ’ (ದೂರುದಾರ) ಮತ್ತು ‘ಚಸ್ಮ್‌ದಿದ್’ ಬದಲಿಗೆ ‘ಪ್ರತ್ಯಕ್ಷದರ್ಶಿ’ ಪದಗಳನ್ನು ಬಳಸಲಾಗಿದೆ.

ಗೃಹ ಖಾತೆಯನ್ನೂ ಹೊಂದಿರುವ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಅವರ ಸೂಚನೆಯ ಮೇರೆಗೆ, ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ (ಎಸ್‌ಪಿ) ಪತ್ರ ಬರೆದಿದ್ದು, ಪೊಲೀಸ್ ಕಾರ್ಯದಲ್ಲಿ ಬಳಸುವ ಕಠಿಣ ಮತ್ತು ಸಾಂಪ್ರದಾಯಿಕ ಪದಗಳನ್ನು ಸರಳ ಮತ್ತು ಸ್ಪಷ್ಟ ಹಿಂದಿ ಪದಗಳೊಂದಿಗೆ ಬದಲಾಯಿಸಬೇಕು ಎಂದು ಹೇಳಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಹಳೆಯ ಕಠಿಣ ಪದಗಳ ಬದಲಿಗೆ ಹಿಂದಿ ಪರ್ಯಾಯಗಳನ್ನು ಹೊಂದಿರುವ 109 ಪದಗಳ ಪಟ್ಟಿಯನ್ನು ಪತ್ರದೊಂದಿಗೆ ನೀಡಲಾಗಿದೆ ಎಂದು ಅದು ತಿಳಿಸಿದೆ. “ಪೊಲೀಸರ ಉದ್ದೇಶ ನಾಗರಿಕರಿಗೆ ಸಹಾಯ ಮಾಡುವುದು ಮತ್ತು ರಕ್ಷಿಸುವುದಾಗಿದ್ದರೆ, ಅದರ ಭಾಷೆ ನಾಗರಿಕರಿಗೆ ಅರ್ಥವಾಗುವ ಮತ್ತು ಅವರ ಆತ್ಮವಿಶ್ವಾಸವನ್ನು ಹೆಚ್ಚಿಸುವಂತಿರಬೇಕು” ಉಪ ಮುಖ್ಯಮಂತ್ರಿ ಶರ್ಮಾ ಶುಕ್ರವಾರ ಹೇಳಿದ್ದಾರೆ.

“ಸಾಮಾನ್ಯ ನಾಗರಿಕರು ಯಾವುದೇ ದೂರು, ಅಪರಾಧ ಮಾಹಿತಿ ಅಥವಾ ಇತರ ಕೆಲಸಕ್ಕಾಗಿ ಪೊಲೀಸ್ ಠಾಣೆಗೆ ಭೇಟಿ ನೀಡಿದಾಗ, ಅವರು / ಅವಳು ಆಗಾಗ್ಗೆ ಎಫ್‌ಐಆರ್ ಅಥವಾ ಪೊಲೀಸರ ಇತರ ದಾಖಲೆಗಳಲ್ಲಿ ಬಳಸಲಾದ ಭಾಷೆಯ ಬಗ್ಗೆ ಗೊಂದಲಕ್ಕೊಳಗಾಗುತ್ತಾರೆ. ಇತರ ಭಾಷೆಗಳ ಪದಗಳು ಸಾಮಾನ್ಯ ಜನರಿಗೆ ತಿಳಿದಿಲ್ಲ, ಇದರಿಂದಾಗಿ ಅವರು ತಮ್ಮ ವಿಚಾರವನ್ನು ಸರಿಯಾಗಿ ವಿವರಿಸಲು ಅಥವಾ ಸಂಪೂರ್ಣ ಪ್ರಕ್ರಿಯೆಯನ್ನು ಸರಿಯಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಎಲ್ಲಾ ಅಧೀನ ಅಧಿಕಾರಿಗಳಿಗೆ ಬದಲಾವಣೆಯ ಬಗ್ಗೆ ಅರಿವು ಮೂಡಿಸಬೇಕು ಮತ್ತು ಆದೇಶವು ಕೇವಲ ಔಪಚಾರಿಕವಾಗಿ ಉಳಿಯಬಾರದು, ಬದಲಾಗಿ ಅದರ ನಿಜವಾದ ಅನುಷ್ಠಾನವನ್ನು ರಾಜ್ಯದ ಪ್ರತಿಯೊಂದು ಪೊಲೀಸ್ ಠಾಣೆ ಮತ್ತು ಕಚೇರಿಗಳಲ್ಲಿ ಮಾಡಬೇಕೆಂದು ಪತ್ರದಲ್ಲಿ ನಿರ್ದೇಶಿಸಲಾಗಿದೆ ಎಂದು ಹೇಳಿಕೆಯು ತಿಳಿಸಿದೆ.

ಛತ್ತೀಸ್‌ಗಢ ಪೊಲೀಸರು ಈಗ ಕಾನೂನನ್ನು ಜಾರಿಗೊಳಿಸುವ ಸಂಸ್ಥೆಯಾಗುವುದಲ್ಲದೆ ಸಾರ್ವಜನಿಕ ಸಂವಹನ ಮಾಧ್ಯಮವೂ ಆಗಲಿದ್ದಾರೆ. ಭಾಷೆಯ ಈ ಸರಳೀಕರಣವು ದೂರುದಾರರು ತಮ್ಮ ಪ್ರಕರಣವನ್ನು ಸ್ಪಷ್ಟವಾಗಿ ಹೇಳಲು, ಕೇಳಲು ಮತ್ತು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಇದುವರೆಗೆ ವಕೀಲರು ಅಥವಾ ಪೊಲೀಸ್ ಸಿಬ್ಬಂದಿ ಮಾತ್ರ ಅರ್ಥಮಾಡಿಕೊಳ್ಳುತ್ತಿದ್ದ ಎಫ್‌ಐಆರ್‌ನಂತಹ ಕಾರ್ಯವಿಧಾನಗಳು ಈಗ ಸಾಮಾನ್ಯ ನಾಗರಿಕರಿಗೂ ಅರ್ಥವಾಗಲಿವೆ ಎಂದು ಅದು ಹೇಳಿದೆ. ಛತ್ತೀಸ್‌ಗಢ | ಪೊಲೀಸ್ ದಾಖಲೆಗಳಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಇರಾನ್‌ನ ದಾಳಿಗೂ ಮೊದಲು ದೇಶ ತೊರೆದ ಇಸ್ರೇಲ್ ಪ್ರಧಾನಿಯ ಅಧಿಕೃತ ವಿಮಾನ!

ಇರಾನ್‌ನ ದಾಳಿಗೂ ಮೊದಲು ದೇಶ ತೊರೆದ ಇಸ್ರೇಲ್ ಪ್ರಧಾನಿಯ ಅಧಿಕೃತ ವಿಮಾನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾರ್ವತ್ರಿಕ ಮುಷ್ಕರ | ಕೆಲ ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ; ಬ್ಯಾಂಕಿಂಗ್, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ 'ಕಾರ್ಮಿಕ, ರೈತ ವಿರೋಧಿ ಹಾಗೂ ಕಾರ್ಪೊರೇಟ್ ಪರ ನೀತಿಗಳ' ವಿರುದ್ಧ ಕಾರ್ಮಿಕ ಸಂಘಟನೆಗಳು ಗುರುವಾರ (ಫೆ.12) ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರದಿಂದ ವಿವಿಧ ರಾಜ್ಯಗಳಲ್ಲಿ ಜನ ಜೀವನ...

ಅದಾನಿ ಮಾನನಷ್ಟ ಪ್ರಕರಣದಲ್ಲಿ ಪತ್ರಕರ್ತ ರವಿ ನಾಯರ್‌ಗೆ ಶಿಕ್ಷೆ: ‘ಇದು ಪತ್ರಿಕಾ ಸ್ವಾತಂತ್ರ್ಯಕ್ಕೆ ಹೊಡೆತ’ ಎಂದ ಪತ್ರಕರ್ತರ ಸಂಘಟನೆಗಳು

ಅದಾನಿ ಎಂಟರ್‌ಪ್ರೈಸಸ್ ದಾಖಲಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತನಿಖಾ ಪತ್ರಕರ್ತ ರವಿ ನಾಯರ್ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿರುವುದನ್ನು ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಮತ್ತು ಹಲವಾರು ಪತ್ರಿಕಾ ಸಂಸ್ಥೆಗಳು...

‘ನಾವು ಯಾರನ್ನೂ ನಿಂದಿಸಿಲ್ಲ’: ಚೇಂಬರ್ ‘ದುರ್ವರ್ತನೆ’ ಆರೋಪಕ್ಕೆ ಪ್ರಿಯಾಂಕಾ ಗಾಂಧಿ ಸ್ಪಷ್ಟನೆ 

ನವದೆಹಲಿ: ಸ್ಪೀಕರ್ ಓಂ ಬಿರ್ಲಾ ಅವರ ಕೊಠಡಿಯಲ್ಲಿ ತಮ್ಮ ಪಕ್ಷದ ಸಂಸದರು "ಅನುಚಿತವಾಗಿ ವರ್ತಿಸಿದ್ದಾರೆ" ಎಂದು ಆರೋಪಿಸಿದಾಗ, ಅವರನ್ನು ಬೆಂಬಲಿಸಿದ್ದೇನೆ ಎಂದು ಹೇಳಿದ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಂಸದೀಯ ವ್ಯವಹಾರಗಳ...

‘ಭಾರತಕ್ಕೆ ಮರಳಲು ಇದು ಕೊನೆಯ ಅವಕಾಶ’: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್‌ ಎಚ್ಚರಿಕೆ

ಭಾರತದ ಹೊರಗೆ ಇರುವ ಉದ್ಯಮಿ ವಿಜಯ್ ಮಲ್ಯ ನ್ಯಾಯಾಲಯದ ಪ್ರಕ್ರಿಯೆಗಳಿಂದ ಉದ್ದೇಶಪೂರ್ವಕವಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಗಂಭೀರವಾಗಿ ಪರಿಗಣಿಸಿರುವ ಬಾಂಬೆ ಹೈಕೋರ್ಟ್, ಅವರಿಗೆ ಭಾರತಕ್ಕೆ ಮರಳಲು “ಒಂದು ಕೊನೆಯ ಅವಕಾಶ” ನೀಡಿದೆ. ಒಂದು ವೇಳೆ...

ಕೆಲಸದ ಸ್ಥಳದಲ್ಲಿ ಜಾತಿ ತಾರತಮ್ಯದ ಬಗ್ಗೆ ರಾಜ್ಯಸಭೆಯಲ್ಲಿ ಖರ್ಗೆ ಕಳವಳ; ಒಡಿಶಾ ಅಂಗನವಾಡಿ ಘಟನೆ ಉಲ್ಲೇಖ

ಕೆಲಸದ ಸ್ಥಳಗಳಲ್ಲಿ ಆಗುತ್ತಿರುವ ಜಾತಿ ತಾರತಮ್ಯದ ಕುರಿತು ರಾಜ್ಯಸಭೆಯಲ್ಲಿ ಗುರುವಾರ (ಫೆ.12) ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳವಳ ವ್ಯಕ್ತಪಡಿಸಿದರು. ಒಡಿಶಾದ ಅಂಗನವಾಡಿಯೊಂದರಲ್ಲಿ ದಲಿತ ಮಹಿಳೆ ತಯಾರಿಸಿದ ಆಹಾರವನ್ನು...

ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ...

‘ಆಕೆಯ ಜೀವ ಮುಖ್ಯ’: ಅಮೆರಿಕದ ಪೊಲೀಸ್ ಅಧಿಕಾರಿ ವೇಗದ ಚಾಲನೆಯಿಂದ ಸಾವನ್ನಪ್ಪಿದ ಭಾರತೀಯ ವಿದ್ಯಾರ್ಥಿನಿಯ ಕುಟುಂಬಕ್ಕೆ 260 ಕೋಟಿ ಪರಿಹಾರ

2023 ರಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಚಾಲನೆ ಮಾಡುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರು ಡಿಕ್ಕಿ ಹೊಡೆದ ಕಾರಣ ಸಾವನ್ನಪ್ಪಿದ ಭಾರತದ 23 ವರ್ಷದ ಪದವೀಧರ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಕುಟುಂಬಕ್ಕೆ ಸಿಯಾಟಲ್ ನಗರವು...

ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯಿಂದ ನಿಲುವಳಿ ಸೂಚನೆ ಸಲ್ಲಿಕೆ; ಸಂಸತ್ ಸದಸ್ಯತ್ವ ರದ್ದುಗೊಳಿಸುವಂತೆ ಆಗ್ರಹ

ಲೋಕಸಭೆ ಅಧಿವೇಶನದಲ್ಲಿ ಗುರುವಾರ (ಫೆ.12) ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಿಲುವಳಿ ಸೂಚನೆ ಸಲ್ಲಿಸಿದ್ದು, ಅವರ ಸಂಸತ್ತಿನ ಸದಸ್ಯತ್ವ ರದ್ದುಗೊಳಿಸುವಂತೆ ಕೋರಿದೆ. ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ನಿಶಿಕಾಂತ್...

ಕಾನ್ಪುರ ಲ್ಯಾಂಬೋರ್ಗಿನಿ ಅಪಘಾತ: ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಪುತ್ರ ಶಿವಂ ಮಿಶ್ರಾ ಬಂಧನ

2026 ಫೆಬ್ರವರಿ 8, ಭಾನುವಾರದಂದು ವಿಐಪಿ ರಸ್ತೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದ ಹೈ ಪ್ರೊಫೈಲ್ ಲ್ಯಾಂಬೋರ್ಗಿನಿ ಅಪಘಾತಕ್ಕೆ ಸಂಬಂಧಿಸಿದಂತೆ ಸ್ಥಳೀಯ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ ಅವರನ್ನು...

ಫೆಬ್ರವರಿ 12 ರಂದು ಭಾರತ್ ಬಂದ್| ಹಲವು ರಾಜ್ಯಗಳಲ್ಲಿ ಬಂದ್ ಗೆ ಪೂರ್ಣ ಬೆಂಬಲ: ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ

ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ಫೆಬ್ರವರಿ 12, ಗುರುವಾರ ಸಾರ್ವತ್ರಿಕ ಮುಷ್ಕರಕ್ಕೆ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ಕರೆ ನೀಡಿದೆ. ಕರ್ನಾಟಕದಲ್ಲಿಯೂ ಕಾರ್ಮಿಕ ಸಂಘಟನೆಗಳು ಮುಷ್ಕರವನ್ನು ನಡೆಸುತ್ತಿವೆ. ಕೇಂದ್ರ ಸರ್ಕಾರದ 4...