Homeಮುಖಪುಟಛತ್ತೀಸ್‌ಗಢ | ಪೊಲೀಸ್ ದಾಖಲೆಗಳಲ್ಲಿ ಬಳಸುವ ಉರ್ದು, ಪರ್ಷಿಯನ್ ಪದಗಳನ್ನು ತೆಗೆದುಹಾಕಿದ ಬಿಜೆಪಿ ಸರ್ಕಾರ

ಛತ್ತೀಸ್‌ಗಢ | ಪೊಲೀಸ್ ದಾಖಲೆಗಳಲ್ಲಿ ಬಳಸುವ ಉರ್ದು, ಪರ್ಷಿಯನ್ ಪದಗಳನ್ನು ತೆಗೆದುಹಾಕಿದ ಬಿಜೆಪಿ ಸರ್ಕಾರ

- Advertisement -
- Advertisement -

ಛತ್ತೀಸ್‌ಗಢದ ಬಿಜೆಪಿ ಸರ್ಕಾರವು ಪೊಲೀಸ್ ದಾಖಲೆಗಳಲ್ಲಿ ಬಳಸಲಾಗುವ ಉರ್ದು ಮತ್ತು ಪರ್ಷಿಯನ್ ಪದಗಳನ್ನು ಕಿತ್ತು ಹಾಕಿ ಹಿಂದಿ ಪದಗನ್ನು ಪರಿಚಯಿಸಿದೆ ಎಂದು ಶನಿವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಾಮಾನ್ಯ ವ್ಯಕ್ತಿಗೆ ಸುಲಭವಾಗಿ ಅರ್ಥವಾಗುವ ಹಿಂದಿ ಪದಗಳೊಂದಿಗೆ ಇದನ್ನು ಬದಲಾಯಿಸಲಾಗಿದ್ದು, ಇದು ಪೊಲೀಸ್ ಸೇವೆಯನ್ನು ಹೆಚ್ಚು ಸುಲಭವಾಗಿ, ಪಾರದರ್ಶಕ ಮತ್ತು ಸಂವಹನಶೀಲವಾಗಿಸುತ್ತದೆ ಎಂದು ಅಧಿಕಾರಿ ಹೇಳಿದ್ದಾರೆ. ಛತ್ತೀಸ್‌ಗಢ | ಪೊಲೀಸ್ ದಾಖಲೆಗಳಲ್ಲಿ

‘ಹಲಾಫ್‌ನಾಮಾ’ ಬದಲಿಗೆ ‘ಶಪತ್ ಪತ್ರ’ (ಅಫಿಡವಿಟ್), ‘ದಫಾ’ ಬದಲಿಗೆ ‘ಧಾರಾ’ (ವಿಭಾಗ), ‘ಫರಿಯಾದಿ’ ಬದಲಿಗೆ ‘ಶಿಕಾಯತ್ಕರ್ತಾ’ (ದೂರುದಾರ) ಮತ್ತು ‘ಚಸ್ಮ್‌ದಿದ್’ ಬದಲಿಗೆ ‘ಪ್ರತ್ಯಕ್ಷದರ್ಶಿ’ ಪದಗಳನ್ನು ಬಳಸಲಾಗಿದೆ.

ಗೃಹ ಖಾತೆಯನ್ನೂ ಹೊಂದಿರುವ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಅವರ ಸೂಚನೆಯ ಮೇರೆಗೆ, ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ (ಎಸ್‌ಪಿ) ಪತ್ರ ಬರೆದಿದ್ದು, ಪೊಲೀಸ್ ಕಾರ್ಯದಲ್ಲಿ ಬಳಸುವ ಕಠಿಣ ಮತ್ತು ಸಾಂಪ್ರದಾಯಿಕ ಪದಗಳನ್ನು ಸರಳ ಮತ್ತು ಸ್ಪಷ್ಟ ಹಿಂದಿ ಪದಗಳೊಂದಿಗೆ ಬದಲಾಯಿಸಬೇಕು ಎಂದು ಹೇಳಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಹಳೆಯ ಕಠಿಣ ಪದಗಳ ಬದಲಿಗೆ ಹಿಂದಿ ಪರ್ಯಾಯಗಳನ್ನು ಹೊಂದಿರುವ 109 ಪದಗಳ ಪಟ್ಟಿಯನ್ನು ಪತ್ರದೊಂದಿಗೆ ನೀಡಲಾಗಿದೆ ಎಂದು ಅದು ತಿಳಿಸಿದೆ. “ಪೊಲೀಸರ ಉದ್ದೇಶ ನಾಗರಿಕರಿಗೆ ಸಹಾಯ ಮಾಡುವುದು ಮತ್ತು ರಕ್ಷಿಸುವುದಾಗಿದ್ದರೆ, ಅದರ ಭಾಷೆ ನಾಗರಿಕರಿಗೆ ಅರ್ಥವಾಗುವ ಮತ್ತು ಅವರ ಆತ್ಮವಿಶ್ವಾಸವನ್ನು ಹೆಚ್ಚಿಸುವಂತಿರಬೇಕು” ಉಪ ಮುಖ್ಯಮಂತ್ರಿ ಶರ್ಮಾ ಶುಕ್ರವಾರ ಹೇಳಿದ್ದಾರೆ.

“ಸಾಮಾನ್ಯ ನಾಗರಿಕರು ಯಾವುದೇ ದೂರು, ಅಪರಾಧ ಮಾಹಿತಿ ಅಥವಾ ಇತರ ಕೆಲಸಕ್ಕಾಗಿ ಪೊಲೀಸ್ ಠಾಣೆಗೆ ಭೇಟಿ ನೀಡಿದಾಗ, ಅವರು / ಅವಳು ಆಗಾಗ್ಗೆ ಎಫ್‌ಐಆರ್ ಅಥವಾ ಪೊಲೀಸರ ಇತರ ದಾಖಲೆಗಳಲ್ಲಿ ಬಳಸಲಾದ ಭಾಷೆಯ ಬಗ್ಗೆ ಗೊಂದಲಕ್ಕೊಳಗಾಗುತ್ತಾರೆ. ಇತರ ಭಾಷೆಗಳ ಪದಗಳು ಸಾಮಾನ್ಯ ಜನರಿಗೆ ತಿಳಿದಿಲ್ಲ, ಇದರಿಂದಾಗಿ ಅವರು ತಮ್ಮ ವಿಚಾರವನ್ನು ಸರಿಯಾಗಿ ವಿವರಿಸಲು ಅಥವಾ ಸಂಪೂರ್ಣ ಪ್ರಕ್ರಿಯೆಯನ್ನು ಸರಿಯಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಎಲ್ಲಾ ಅಧೀನ ಅಧಿಕಾರಿಗಳಿಗೆ ಬದಲಾವಣೆಯ ಬಗ್ಗೆ ಅರಿವು ಮೂಡಿಸಬೇಕು ಮತ್ತು ಆದೇಶವು ಕೇವಲ ಔಪಚಾರಿಕವಾಗಿ ಉಳಿಯಬಾರದು, ಬದಲಾಗಿ ಅದರ ನಿಜವಾದ ಅನುಷ್ಠಾನವನ್ನು ರಾಜ್ಯದ ಪ್ರತಿಯೊಂದು ಪೊಲೀಸ್ ಠಾಣೆ ಮತ್ತು ಕಚೇರಿಗಳಲ್ಲಿ ಮಾಡಬೇಕೆಂದು ಪತ್ರದಲ್ಲಿ ನಿರ್ದೇಶಿಸಲಾಗಿದೆ ಎಂದು ಹೇಳಿಕೆಯು ತಿಳಿಸಿದೆ.

ಛತ್ತೀಸ್‌ಗಢ ಪೊಲೀಸರು ಈಗ ಕಾನೂನನ್ನು ಜಾರಿಗೊಳಿಸುವ ಸಂಸ್ಥೆಯಾಗುವುದಲ್ಲದೆ ಸಾರ್ವಜನಿಕ ಸಂವಹನ ಮಾಧ್ಯಮವೂ ಆಗಲಿದ್ದಾರೆ. ಭಾಷೆಯ ಈ ಸರಳೀಕರಣವು ದೂರುದಾರರು ತಮ್ಮ ಪ್ರಕರಣವನ್ನು ಸ್ಪಷ್ಟವಾಗಿ ಹೇಳಲು, ಕೇಳಲು ಮತ್ತು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಇದುವರೆಗೆ ವಕೀಲರು ಅಥವಾ ಪೊಲೀಸ್ ಸಿಬ್ಬಂದಿ ಮಾತ್ರ ಅರ್ಥಮಾಡಿಕೊಳ್ಳುತ್ತಿದ್ದ ಎಫ್‌ಐಆರ್‌ನಂತಹ ಕಾರ್ಯವಿಧಾನಗಳು ಈಗ ಸಾಮಾನ್ಯ ನಾಗರಿಕರಿಗೂ ಅರ್ಥವಾಗಲಿವೆ ಎಂದು ಅದು ಹೇಳಿದೆ. ಛತ್ತೀಸ್‌ಗಢ | ಪೊಲೀಸ್ ದಾಖಲೆಗಳಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಇರಾನ್‌ನ ದಾಳಿಗೂ ಮೊದಲು ದೇಶ ತೊರೆದ ಇಸ್ರೇಲ್ ಪ್ರಧಾನಿಯ ಅಧಿಕೃತ ವಿಮಾನ!

ಇರಾನ್‌ನ ದಾಳಿಗೂ ಮೊದಲು ದೇಶ ತೊರೆದ ಇಸ್ರೇಲ್ ಪ್ರಧಾನಿಯ ಅಧಿಕೃತ ವಿಮಾನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...