Homeಮುಖಪುಟಛತ್ತೀಸ್‌ಗಢ | ಪೊಲೀಸ್ ದಾಖಲೆಗಳಲ್ಲಿ ಬಳಸುವ ಉರ್ದು, ಪರ್ಷಿಯನ್ ಪದಗಳನ್ನು ತೆಗೆದುಹಾಕಿದ ಬಿಜೆಪಿ ಸರ್ಕಾರ

ಛತ್ತೀಸ್‌ಗಢ | ಪೊಲೀಸ್ ದಾಖಲೆಗಳಲ್ಲಿ ಬಳಸುವ ಉರ್ದು, ಪರ್ಷಿಯನ್ ಪದಗಳನ್ನು ತೆಗೆದುಹಾಕಿದ ಬಿಜೆಪಿ ಸರ್ಕಾರ

- Advertisement -
- Advertisement -

ಛತ್ತೀಸ್‌ಗಢದ ಬಿಜೆಪಿ ಸರ್ಕಾರವು ಪೊಲೀಸ್ ದಾಖಲೆಗಳಲ್ಲಿ ಬಳಸಲಾಗುವ ಉರ್ದು ಮತ್ತು ಪರ್ಷಿಯನ್ ಪದಗಳನ್ನು ಕಿತ್ತು ಹಾಕಿ ಹಿಂದಿ ಪದಗನ್ನು ಪರಿಚಯಿಸಿದೆ ಎಂದು ಶನಿವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಾಮಾನ್ಯ ವ್ಯಕ್ತಿಗೆ ಸುಲಭವಾಗಿ ಅರ್ಥವಾಗುವ ಹಿಂದಿ ಪದಗಳೊಂದಿಗೆ ಇದನ್ನು ಬದಲಾಯಿಸಲಾಗಿದ್ದು, ಇದು ಪೊಲೀಸ್ ಸೇವೆಯನ್ನು ಹೆಚ್ಚು ಸುಲಭವಾಗಿ, ಪಾರದರ್ಶಕ ಮತ್ತು ಸಂವಹನಶೀಲವಾಗಿಸುತ್ತದೆ ಎಂದು ಅಧಿಕಾರಿ ಹೇಳಿದ್ದಾರೆ. ಛತ್ತೀಸ್‌ಗಢ | ಪೊಲೀಸ್ ದಾಖಲೆಗಳಲ್ಲಿ

‘ಹಲಾಫ್‌ನಾಮಾ’ ಬದಲಿಗೆ ‘ಶಪತ್ ಪತ್ರ’ (ಅಫಿಡವಿಟ್), ‘ದಫಾ’ ಬದಲಿಗೆ ‘ಧಾರಾ’ (ವಿಭಾಗ), ‘ಫರಿಯಾದಿ’ ಬದಲಿಗೆ ‘ಶಿಕಾಯತ್ಕರ್ತಾ’ (ದೂರುದಾರ) ಮತ್ತು ‘ಚಸ್ಮ್‌ದಿದ್’ ಬದಲಿಗೆ ‘ಪ್ರತ್ಯಕ್ಷದರ್ಶಿ’ ಪದಗಳನ್ನು ಬಳಸಲಾಗಿದೆ.

ಗೃಹ ಖಾತೆಯನ್ನೂ ಹೊಂದಿರುವ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಅವರ ಸೂಚನೆಯ ಮೇರೆಗೆ, ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ (ಎಸ್‌ಪಿ) ಪತ್ರ ಬರೆದಿದ್ದು, ಪೊಲೀಸ್ ಕಾರ್ಯದಲ್ಲಿ ಬಳಸುವ ಕಠಿಣ ಮತ್ತು ಸಾಂಪ್ರದಾಯಿಕ ಪದಗಳನ್ನು ಸರಳ ಮತ್ತು ಸ್ಪಷ್ಟ ಹಿಂದಿ ಪದಗಳೊಂದಿಗೆ ಬದಲಾಯಿಸಬೇಕು ಎಂದು ಹೇಳಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಹಳೆಯ ಕಠಿಣ ಪದಗಳ ಬದಲಿಗೆ ಹಿಂದಿ ಪರ್ಯಾಯಗಳನ್ನು ಹೊಂದಿರುವ 109 ಪದಗಳ ಪಟ್ಟಿಯನ್ನು ಪತ್ರದೊಂದಿಗೆ ನೀಡಲಾಗಿದೆ ಎಂದು ಅದು ತಿಳಿಸಿದೆ. “ಪೊಲೀಸರ ಉದ್ದೇಶ ನಾಗರಿಕರಿಗೆ ಸಹಾಯ ಮಾಡುವುದು ಮತ್ತು ರಕ್ಷಿಸುವುದಾಗಿದ್ದರೆ, ಅದರ ಭಾಷೆ ನಾಗರಿಕರಿಗೆ ಅರ್ಥವಾಗುವ ಮತ್ತು ಅವರ ಆತ್ಮವಿಶ್ವಾಸವನ್ನು ಹೆಚ್ಚಿಸುವಂತಿರಬೇಕು” ಉಪ ಮುಖ್ಯಮಂತ್ರಿ ಶರ್ಮಾ ಶುಕ್ರವಾರ ಹೇಳಿದ್ದಾರೆ.

“ಸಾಮಾನ್ಯ ನಾಗರಿಕರು ಯಾವುದೇ ದೂರು, ಅಪರಾಧ ಮಾಹಿತಿ ಅಥವಾ ಇತರ ಕೆಲಸಕ್ಕಾಗಿ ಪೊಲೀಸ್ ಠಾಣೆಗೆ ಭೇಟಿ ನೀಡಿದಾಗ, ಅವರು / ಅವಳು ಆಗಾಗ್ಗೆ ಎಫ್‌ಐಆರ್ ಅಥವಾ ಪೊಲೀಸರ ಇತರ ದಾಖಲೆಗಳಲ್ಲಿ ಬಳಸಲಾದ ಭಾಷೆಯ ಬಗ್ಗೆ ಗೊಂದಲಕ್ಕೊಳಗಾಗುತ್ತಾರೆ. ಇತರ ಭಾಷೆಗಳ ಪದಗಳು ಸಾಮಾನ್ಯ ಜನರಿಗೆ ತಿಳಿದಿಲ್ಲ, ಇದರಿಂದಾಗಿ ಅವರು ತಮ್ಮ ವಿಚಾರವನ್ನು ಸರಿಯಾಗಿ ವಿವರಿಸಲು ಅಥವಾ ಸಂಪೂರ್ಣ ಪ್ರಕ್ರಿಯೆಯನ್ನು ಸರಿಯಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಎಲ್ಲಾ ಅಧೀನ ಅಧಿಕಾರಿಗಳಿಗೆ ಬದಲಾವಣೆಯ ಬಗ್ಗೆ ಅರಿವು ಮೂಡಿಸಬೇಕು ಮತ್ತು ಆದೇಶವು ಕೇವಲ ಔಪಚಾರಿಕವಾಗಿ ಉಳಿಯಬಾರದು, ಬದಲಾಗಿ ಅದರ ನಿಜವಾದ ಅನುಷ್ಠಾನವನ್ನು ರಾಜ್ಯದ ಪ್ರತಿಯೊಂದು ಪೊಲೀಸ್ ಠಾಣೆ ಮತ್ತು ಕಚೇರಿಗಳಲ್ಲಿ ಮಾಡಬೇಕೆಂದು ಪತ್ರದಲ್ಲಿ ನಿರ್ದೇಶಿಸಲಾಗಿದೆ ಎಂದು ಹೇಳಿಕೆಯು ತಿಳಿಸಿದೆ.

ಛತ್ತೀಸ್‌ಗಢ ಪೊಲೀಸರು ಈಗ ಕಾನೂನನ್ನು ಜಾರಿಗೊಳಿಸುವ ಸಂಸ್ಥೆಯಾಗುವುದಲ್ಲದೆ ಸಾರ್ವಜನಿಕ ಸಂವಹನ ಮಾಧ್ಯಮವೂ ಆಗಲಿದ್ದಾರೆ. ಭಾಷೆಯ ಈ ಸರಳೀಕರಣವು ದೂರುದಾರರು ತಮ್ಮ ಪ್ರಕರಣವನ್ನು ಸ್ಪಷ್ಟವಾಗಿ ಹೇಳಲು, ಕೇಳಲು ಮತ್ತು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಇದುವರೆಗೆ ವಕೀಲರು ಅಥವಾ ಪೊಲೀಸ್ ಸಿಬ್ಬಂದಿ ಮಾತ್ರ ಅರ್ಥಮಾಡಿಕೊಳ್ಳುತ್ತಿದ್ದ ಎಫ್‌ಐಆರ್‌ನಂತಹ ಕಾರ್ಯವಿಧಾನಗಳು ಈಗ ಸಾಮಾನ್ಯ ನಾಗರಿಕರಿಗೂ ಅರ್ಥವಾಗಲಿವೆ ಎಂದು ಅದು ಹೇಳಿದೆ. ಛತ್ತೀಸ್‌ಗಢ | ಪೊಲೀಸ್ ದಾಖಲೆಗಳಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಇರಾನ್‌ನ ದಾಳಿಗೂ ಮೊದಲು ದೇಶ ತೊರೆದ ಇಸ್ರೇಲ್ ಪ್ರಧಾನಿಯ ಅಧಿಕೃತ ವಿಮಾನ!

ಇರಾನ್‌ನ ದಾಳಿಗೂ ಮೊದಲು ದೇಶ ತೊರೆದ ಇಸ್ರೇಲ್ ಪ್ರಧಾನಿಯ ಅಧಿಕೃತ ವಿಮಾನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...