Homeಮುಖಪುಟಛತ್ತೀಸ್‌ಗಢ: ಶಂಕಿತ ಮಾವೋವಾದಿಗಳಿಂದ ಬಿಜೆಪಿ ಮುಖಂಡನ ಹತ್ಯೆ

ಛತ್ತೀಸ್‌ಗಢ: ಶಂಕಿತ ಮಾವೋವಾದಿಗಳಿಂದ ಬಿಜೆಪಿ ಮುಖಂಡನ ಹತ್ಯೆ

- Advertisement -
- Advertisement -

ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಸ್ಥಳೀಯ ಬಿಜೆಪಿ ಮುಖಂಡನನ್ನು ಶಂಕಿತ ಮಾವೋವಾದಿಗಳು ಶುಕ್ರವಾರ ಗುಂಡಿಕ್ಕಿ ಕೊಂದಿದ್ದಾರೆ ಎಂದು ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.

ನಾರಾಯಣಪುರ ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಸಾಗರ್ ಸಾಹು ಅವರ ಮೇಲೆ ರಾತ್ರಿ 9 ಗಂಟೆ ಸುಮಾರಿಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ಛೋಟೆಡೊಂಗರ್ ಗ್ರಾಮದ ಸಾಹು ಅವರ ಮನೆಯಲ್ಲಿ ಗುಂಡು ಹಾರಿಸಿದ್ದಾರೆ.

ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ನಂತರ ನಾರಾಯಣಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾಹು ಮೃತಪಟ್ಟಿದ್ದಾರೆ.

ಒಂದು ವಾರದ ಅಂತರದಲ್ಲಿ ರಾಜ್ಯದಲ್ಲಿ ಬಿಜೆಪಿ ಮುಖಂಡರ ಮೇಲೆ ನಡೆದ ಎರಡನೇ ದಾಳಿ ಇದಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಅವಪಲ್ಲಿ ಪ್ರದೇಶದ ಬಿಜೆಪಿ ವಿಭಾಗೀಯ ಮುಖ್ಯಸ್ಥ ನೀಲಕಂಠ ಕಾಕೆಮ್ ಅವರನ್ನು ಮೂವರು ಮಾವೋವಾದಿಗಳು ಫೆಬ್ರವರಿ 5ರಂದು ಕೊಂದಿದ್ದರು.

ಸಾಹು ಹತ್ಯೆಯ ಹಿಂದೆ ಮಾವೋವಾದಿಗಳ ಸಣ್ಣ ಗುಂಪೊಂದು ಇರುವ ಶಂಕೆ ಇದೆ ಎಂದು ಛತ್ತೀಸ್‌ಗಢ ಪೊಲೀಸರು ತಿಳಿಸಿದ್ದಾರೆ.

“ನಾವು ಎಲ್ಲಾ ದೃಷ್ಟಿಕೋನಗಳಿಂದ ಹತ್ಯೆಯನ್ನು ತನಿಖೆ ಮಾಡುತ್ತಿದ್ದೇವೆ. ಸಮೀಪದ ಕಾಡಿನಲ್ಲಿ ಕೂಂಬಿಂಗ್ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ” ಎಂದು ಇನ್ಸ್‌ಪೆಕ್ಟರ್ ಜನರಲ್ (ಬಸ್ತರ್ ರೇಂಜ್) ಸುಂದರರಾಜ್ ಪಿ ಮಾಹಿತಿ ನೀಡಿದ್ದಾರೆ.

ಈ ಪ್ರದೇಶದಲ್ಲಿ ಭಯವನ್ನು ಸೃಷ್ಟಿಸಲು ಮಾವೋವಾದಿಗಳು ಈ ರೀತಿ ಪ್ರಯತ್ನಿಸುತ್ತಿದ್ದಾರೆ ಎಂದು ಸುಂದರರಾಜ್ ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಸಂವಿಧಾನ ಶಿಲ್ಪಿಗೆ ಅವಹೇಳನ; ಸಮಾಜ ಕಲ್ಯಾಣ ಇಲಾಖೆ ದೂರಿನನ್ವಯ ಜೈನ್ ಕಾಲೇಜಿನ ವಿರುದ್ಧ ಎಫ್‌ಐಆರ್‌

“ಈ ಘಟನೆಯು ದುರದೃಷ್ಟಕರವಾಗಿದೆ, ಆದರೆ ನಾವು ಮೊಯಿಸ್ಟ್‌ಗಳ ಕಾರ್ಯವೈಖರಿಯನ್ನು ಅರ್ಥಮಾಡಿಕೊಳ್ಳಬೇಕು. ಮಾವೋವಾದಿಗಳ ಹಿನ್ನೆಲೆಯನ್ನು ನೋಡಿದರೆ ಅವರು ಭಯದ ಮನೋವಿಕಾರವನ್ನು ಸೃಷ್ಟಿಸಲು ಇಂತಹ ಘಟನೆಗಳಲ್ಲಿ ಪಾಲ್ಗೊಳ್ಳಲು ಪ್ರಯತ್ನಿಸುತ್ತಾರೆ. ಇದು ಶಕ್ತಿ ಪ್ರದರ್ಶನದ ಕೆಲಸವಲ್ಲ. ಆದರೆ ತಮ್ಮ ಸೋಲನ್ನು ಮುಚ್ಚಿಕೊಳ್ಳುವ ಕ್ರಿಯೆ ಇದಾಗಿದೆ” ಎಂದು ಹೇಳಿದ್ದಾರೆ.

ಇದರ ನಡುವೆ ಬಸ್ತಾರ್‌ಗೆ ಒಂದು ದಿನದ ಪ್ರವಾಸ ಬಂದಿದ್ದ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಶನಿವಾರ ಸಾಹು ಅವರ ಮನೆಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬವನ್ನು ಸಂತೈಸಿದರು.

“ಕಾಂಗ್ರೆಸ್ ಸರ್ಕಾರದ ಅಡಿಯಲ್ಲಿ ನಕ್ಸಲ್ ದಾಳಿಗಳು ನಿರಂತರವಾಗಿ ಹೆಚ್ಚುತ್ತಿವೆ. ಬಿಜೆಪಿ ಮುಖಂಡರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಮಾವೋವಾದಿಗಳೊಂದಿಗೆ ಪ್ರಜಾಸತ್ತಾತ್ಮಕವಾಗಿ ಸೈದ್ಧಾಂತಿಕ ಯುದ್ಧವನ್ನು ಬಿಜೆಪಿ ನಡೆಸುತ್ತಿದೆ. ಅದರಲ್ಲಿ ಬಿಜೆಪಿ ಗೆಲ್ಲಲಿದೆ” ಎಂದಿದ್ದಾರೆ.

ಈ ವರ್ಷದ ಕೊನೆಯಲ್ಲಿ ಛತ್ತೀಸ್‌ಗಢದಲ್ಲಿ ಚುನಾವಣೆ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ: ಬುರ್ಖಾ ಧರಿಸಿ ಧುರಂಧರ್ ಹಾಡಿಗೆ ನೃತ್ಯ; ಹುಡುಗರ ಪುಂಡಾಟಕ್ಕೆ ಆಕ್ರೋಶ

ಧುರಂಧರ್ ಚಿತ್ರದ ಹಾಡಿಗೆ ಬುರ್ಖಾ ಧರಿಸಿ ನೃತ್ಯ ಮಾಡಿದ ಯುವಕರು ಇಸ್ಲಾಮಿಕ್ ಉಡುಗೆಯನ್ನು ಬಹಿರಂಗವಾಗಿ ಅಪಹಾಸ್ಯ ಮಾಡಿದ್ದಾರೆ ಎಂಬ ಕಾರಣಕ್ಕೆ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಶಾಲಾ ಕಾರ್ಯಕ್ರಮವೊಂದರಲ್ಲಿ ಈ...

ಬಾಂಗ್ಲಾ ಮಾಜಿ ಪ್ರಧಾನಿ ಖಾಲಿದಾ ಝಿಯಾ ಅಂತ್ಯಕ್ರಿಯೆ : ಭಾರತದಿಂದ ಸಚಿವ ಜೈಶಂಕರ್ ಭಾಗಿ

ಮಂಗಳವಾರ (ಡಿ.30) ನಿಧನರಾದ ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಝಿಯಾ ಅವರ ಅಂತ್ಯಕ್ರಿಯೆ ಬುಧವಾರ (ಡಿ.31) ಢಾಕಾದಲ್ಲಿ ನಡೆಯಿತು. ಭಾರತದಿಂದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈಶಂಕರ್ ಪಾಲ್ಗೊಂಡು ಪ್ರಧಾನಿ ಮೋದಿ...

ಇಂದೋರ್| ಕಲುಷಿತ ನೀರು ಸೇವಿಸಿ ಏಳು ಜನರು ಸಾವು; ದೃಢಪಡಿಸಿದ ಮೇಯರ್

ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಕಲುಷಿತ ನೀರು ಸೇವಿಸಿದ ಪರಿಣಾಮ ಅತಿಸಾರ ಮತ್ತು ವಾಂತಿಯಿಂದ ಇದುವರೆಗೆ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಮೇಯರ್ ಪುಷ್ಯಮಿತ್ರ ಭಾರ್ಗವ ಬುಧವಾರ ದೃಢಪಡಿಸಿದರು. "ಭಾಗೀರಥಪುರ ಪ್ರದೇಶದಲ್ಲಿ ಅತಿಸಾರದಿಂದ ಮೂರು ಸಾವುಗಳು...

ಉತ್ತರ ಪ್ರದೇಶ| ಅಮೇಥಿಯಲ್ಲಿ 15 ವರ್ಷದ ದಲಿತ ಬಾಲಕಿ ಮೇಲೆ ಅತ್ಯಾಚಾರ ಆರೋಪ; ಆರೋಪಿ ಬಂಧನ

ಅಮೇಥಿಯಲ್ಲಿ 15 ವರ್ಷದ ದಲಿತ ಬಾಲಕಿಯ ಮೇಲೆ ನಡೆದ ಅತ್ಯಾಚಾರಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಸಂತ್ರಸ್ತೆಯ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ವಶಕ್ಕೆ ಪಡೆದು...

ಚಲಿಸುತ್ತಿದ್ದ ವ್ಯಾನ್‌ನಲ್ಲಿ ಮಹಿಳೆ ಮೇಲೆ ಅತ್ಯಾಚಾರವೆಸಗಿ ರಸ್ತೆಗೆ ಎಸೆದ ಪ್ರಕರಣ : ಇಬ್ಬರ ಬಂಧನ

ಚಲಿಸುತ್ತಿದ್ದ ವ್ಯಾನ್‌ನಲ್ಲಿ 25 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ನಂತರ ಆಕೆಯನ್ನು ರಸ್ತೆಗೆ ಎಸೆದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಫರೀದಾಬಾದ್‌ನಲ್ಲಿ ನಡೆದಿದ್ದು, ಮಹಿಳೆಯ ತಲೆಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು...

ವಶಪಡಿಸಿಕೊಂಡ 200 ಕೆ.ಜಿ ಗಾಂಜಾ ಇಲಿಗಳು ತಿಂದಿವೆ ಎಂದ ಪೊಲೀಸರು : ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

ಮೂರು ವರ್ಷಗಳ ಹಿಂದೆ ಜಾರ್ಖಂಡ್ ಪೊಲೀಸರು ವಾಹನವೊಂದನ್ನು ತಡೆದು, ಅದರಿಂದ ಭಾರೀ ಪ್ರಮಾಣದ ಮಾದಕ ವಸ್ತು ಗಾಂಜಾ ವಶಪಡಿಸಿಕೊಂಡಿದ್ದರು. 2024ರಲ್ಲಿ ಈ ಪ್ರಕರಣದ ವಿಚಾರಣೆ ನಡೆಯುವಾಗ, ವಶಪಡಿಸಿಕೊಂಡ ಗಾಂಜಾವನ್ನು ಹಾಜರುಪಡಿಸುವಂತೆ ನ್ಯಾಯಾಲಯ ಸೂಚಿಸಿತ್ತು....

ಗಿಗ್ ಕಾರ್ಮಿಕರಿಂದ ಮತ್ತೆ ಮುಷ್ಕರ : ಹೊಸ ವರ್ಷದ ಸಂಜೆ ಆಹಾರ, ದಿನಸಿ ವಿತರಣೆಯಲ್ಲಿ ವ್ಯತ್ಯಯ ಸಾಧ್ಯತೆ

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಡಿಸೆಂಬರ್ 25ರ ಕ್ರಿಸ್‌ಮಸ್ ದಿನದಂದು ದೇಶದ ವಿವಿಧ ನಗರಗಳಲ್ಲಿ ಮುಷ್ಕರ ನಡೆಸಿರುವ ಗಿಗ್‌ ಕಾರ್ಮಿಕರು, ಹೊಸ ವರ್ಷದ ಸಂಜೆಯಾದ ಇಂದು (ಡಿ.31) ಮತ್ತೊಮ್ಮೆ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ನ್ಯಾಯಯುತ ಮತ್ತು...

ಉತ್ತರಾಖಂಡ: ಜಲವಿದ್ಯುತ್ ಯೋಜನೆಯ ಸುರಂಗದೊಳಗೆ ಎರಡು ಲೋಕೋ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ

ಗೋಪೇಶ್ವರ: ಉತ್ತರಾಖಂಡದ ಚಮೋಲಿ ಜಿಲ್ಲೆಯ ವಿಷ್ಣುಗಢ-ಪಿಪಲ್ಕೋಟಿ ಜಲ ವಿದ್ಯುತ್ ಯೋಜನೆಯ ಸುರಂಗದ ಪಿಪಲ್ಕೋಟಿ ಸುರಂಗದೊಳಗೆ ಮಂಗಳವಾರ ಸಂಜೆ ಕಾರ್ಮಿಕರು ಮತ್ತು ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಲೋಕೋ ರೈಲು, ಸರಕು ರೈಲಿಗೆ ಡಿಕ್ಕಿ ಹೊಡೆದು ಸುಮಾರು...

ವಿಬಿ-ಜಿ ರಾಮ್‌ ಜಿ ಕಾಯ್ದೆ ವಿರುದ್ಧ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ : ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸಲು ಆಗ್ರಹ

ನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್‌ ಜಿ ಕಾಯ್ದೆಯ ಕುರಿತು ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅದರ ಅನುಷ್ಠಾನ ತಡೆ ಹಿಡಿಯುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಂಗಳವಾರ (ಡಿ.30)...

ಚಕ್ರವರ್ತಿ ಸೂಲಿಬೆಲೆಗೆ ಆಹ್ವಾನ ವಿರೋಧಿಸಿ ಪ್ರತಿಭಟನೆ; ಧಾರವಾಡ ಕೃಷಿ ವಿವಿ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ರದ್ದು

ಧಾರವಾಡದ ಕೃಷಿ ವಿಶ್ವ ವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮಕ್ಕೆ ಹಿಂದುತ್ವ ಭಾಷಣಕಾರ ಚಕ್ರವರ್ತಿ ಸೂಲಿಬೆಲೆಗೆ ಆಹ್ವಾನ ನೀಡಿರುವುದನ್ನು ವಿರೋಧಿಸಿ ದಲಿತ ಸಂಘಟನೆ ಹಾಗೂ ಕೃಷಿ ವಿವಿ ಬೋರ್ಡ್ ಸದಸ್ಯರು ವಿವಿ...