Homeಮುಖಪುಟಛತ್ತೀಸ್‌ಗಢ: ಶಂಕಿತ ಮಾವೋವಾದಿಗಳಿಂದ ಬಿಜೆಪಿ ಮುಖಂಡನ ಹತ್ಯೆ

ಛತ್ತೀಸ್‌ಗಢ: ಶಂಕಿತ ಮಾವೋವಾದಿಗಳಿಂದ ಬಿಜೆಪಿ ಮುಖಂಡನ ಹತ್ಯೆ

- Advertisement -
- Advertisement -

ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಸ್ಥಳೀಯ ಬಿಜೆಪಿ ಮುಖಂಡನನ್ನು ಶಂಕಿತ ಮಾವೋವಾದಿಗಳು ಶುಕ್ರವಾರ ಗುಂಡಿಕ್ಕಿ ಕೊಂದಿದ್ದಾರೆ ಎಂದು ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.

ನಾರಾಯಣಪುರ ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಸಾಗರ್ ಸಾಹು ಅವರ ಮೇಲೆ ರಾತ್ರಿ 9 ಗಂಟೆ ಸುಮಾರಿಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ಛೋಟೆಡೊಂಗರ್ ಗ್ರಾಮದ ಸಾಹು ಅವರ ಮನೆಯಲ್ಲಿ ಗುಂಡು ಹಾರಿಸಿದ್ದಾರೆ.

ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ನಂತರ ನಾರಾಯಣಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾಹು ಮೃತಪಟ್ಟಿದ್ದಾರೆ.

ಒಂದು ವಾರದ ಅಂತರದಲ್ಲಿ ರಾಜ್ಯದಲ್ಲಿ ಬಿಜೆಪಿ ಮುಖಂಡರ ಮೇಲೆ ನಡೆದ ಎರಡನೇ ದಾಳಿ ಇದಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಅವಪಲ್ಲಿ ಪ್ರದೇಶದ ಬಿಜೆಪಿ ವಿಭಾಗೀಯ ಮುಖ್ಯಸ್ಥ ನೀಲಕಂಠ ಕಾಕೆಮ್ ಅವರನ್ನು ಮೂವರು ಮಾವೋವಾದಿಗಳು ಫೆಬ್ರವರಿ 5ರಂದು ಕೊಂದಿದ್ದರು.

ಸಾಹು ಹತ್ಯೆಯ ಹಿಂದೆ ಮಾವೋವಾದಿಗಳ ಸಣ್ಣ ಗುಂಪೊಂದು ಇರುವ ಶಂಕೆ ಇದೆ ಎಂದು ಛತ್ತೀಸ್‌ಗಢ ಪೊಲೀಸರು ತಿಳಿಸಿದ್ದಾರೆ.

“ನಾವು ಎಲ್ಲಾ ದೃಷ್ಟಿಕೋನಗಳಿಂದ ಹತ್ಯೆಯನ್ನು ತನಿಖೆ ಮಾಡುತ್ತಿದ್ದೇವೆ. ಸಮೀಪದ ಕಾಡಿನಲ್ಲಿ ಕೂಂಬಿಂಗ್ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ” ಎಂದು ಇನ್ಸ್‌ಪೆಕ್ಟರ್ ಜನರಲ್ (ಬಸ್ತರ್ ರೇಂಜ್) ಸುಂದರರಾಜ್ ಪಿ ಮಾಹಿತಿ ನೀಡಿದ್ದಾರೆ.

ಈ ಪ್ರದೇಶದಲ್ಲಿ ಭಯವನ್ನು ಸೃಷ್ಟಿಸಲು ಮಾವೋವಾದಿಗಳು ಈ ರೀತಿ ಪ್ರಯತ್ನಿಸುತ್ತಿದ್ದಾರೆ ಎಂದು ಸುಂದರರಾಜ್ ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಸಂವಿಧಾನ ಶಿಲ್ಪಿಗೆ ಅವಹೇಳನ; ಸಮಾಜ ಕಲ್ಯಾಣ ಇಲಾಖೆ ದೂರಿನನ್ವಯ ಜೈನ್ ಕಾಲೇಜಿನ ವಿರುದ್ಧ ಎಫ್‌ಐಆರ್‌

“ಈ ಘಟನೆಯು ದುರದೃಷ್ಟಕರವಾಗಿದೆ, ಆದರೆ ನಾವು ಮೊಯಿಸ್ಟ್‌ಗಳ ಕಾರ್ಯವೈಖರಿಯನ್ನು ಅರ್ಥಮಾಡಿಕೊಳ್ಳಬೇಕು. ಮಾವೋವಾದಿಗಳ ಹಿನ್ನೆಲೆಯನ್ನು ನೋಡಿದರೆ ಅವರು ಭಯದ ಮನೋವಿಕಾರವನ್ನು ಸೃಷ್ಟಿಸಲು ಇಂತಹ ಘಟನೆಗಳಲ್ಲಿ ಪಾಲ್ಗೊಳ್ಳಲು ಪ್ರಯತ್ನಿಸುತ್ತಾರೆ. ಇದು ಶಕ್ತಿ ಪ್ರದರ್ಶನದ ಕೆಲಸವಲ್ಲ. ಆದರೆ ತಮ್ಮ ಸೋಲನ್ನು ಮುಚ್ಚಿಕೊಳ್ಳುವ ಕ್ರಿಯೆ ಇದಾಗಿದೆ” ಎಂದು ಹೇಳಿದ್ದಾರೆ.

ಇದರ ನಡುವೆ ಬಸ್ತಾರ್‌ಗೆ ಒಂದು ದಿನದ ಪ್ರವಾಸ ಬಂದಿದ್ದ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಶನಿವಾರ ಸಾಹು ಅವರ ಮನೆಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬವನ್ನು ಸಂತೈಸಿದರು.

“ಕಾಂಗ್ರೆಸ್ ಸರ್ಕಾರದ ಅಡಿಯಲ್ಲಿ ನಕ್ಸಲ್ ದಾಳಿಗಳು ನಿರಂತರವಾಗಿ ಹೆಚ್ಚುತ್ತಿವೆ. ಬಿಜೆಪಿ ಮುಖಂಡರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಮಾವೋವಾದಿಗಳೊಂದಿಗೆ ಪ್ರಜಾಸತ್ತಾತ್ಮಕವಾಗಿ ಸೈದ್ಧಾಂತಿಕ ಯುದ್ಧವನ್ನು ಬಿಜೆಪಿ ನಡೆಸುತ್ತಿದೆ. ಅದರಲ್ಲಿ ಬಿಜೆಪಿ ಗೆಲ್ಲಲಿದೆ” ಎಂದಿದ್ದಾರೆ.

ಈ ವರ್ಷದ ಕೊನೆಯಲ್ಲಿ ಛತ್ತೀಸ್‌ಗಢದಲ್ಲಿ ಚುನಾವಣೆ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...