Homeಕರೋನಾ ತಲ್ಲಣಛತ್ತೀಸ್‌ಗಢ: ಸರ್ಕಾರಿ ಆಸ್ಪತ್ರೆ ಹೊರಗಡೆ ಕೊರೊನಾ ಸೋಂಕಿತರ ಮೃತದೇಹಗಳ ರಾಶಿ

ಛತ್ತೀಸ್‌ಗಢ: ಸರ್ಕಾರಿ ಆಸ್ಪತ್ರೆ ಹೊರಗಡೆ ಕೊರೊನಾ ಸೋಂಕಿತರ ಮೃತದೇಹಗಳ ರಾಶಿ

- Advertisement -
- Advertisement -

ರಾಯ್‌ಪುರದ ಅತಿದೊಡ್ಡ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಶವಗಳನ್ನು ಶವಾಗಾರದಲ್ಲಿ ಇಡಲು ಸಾಧ್ಯವಾಗದೆ, ಆಸ್ಪತ್ರೆಯ ಹೊರಗಡೆ ಬಿಸಿಲಿನಲ್ಲಿ ಸ್ಟ್ರೆಚರ್ ಮೇಲೆ ಮಲಗಿಸಿರುವ ಚಿತ್ರಗಳನ್ನು ಎನ್‌ಡಿಟಿವಿ ವರದಿ ಮಾಡಿದೆ.

ಛತ್ತೀಸ್‌ಗಢ ಕೊರೊನಾ ಎರಡನೇ ಅಲೆಗೆ ತತ್ತರಿಸಿದೆ. ಕೊರೊನಾ ವೈರಸ್‌ನಿಂದ ಹೆಚ್ಚು ಹಾನಿಗೊಳಗಾದ ದೇಶದ 10 ರಾಜ್ಯಗಳಲ್ಲಿ ಛತ್ತೀಸ್‌ಗಢ ಕೂಡ ಒಂದು. ಹೆಚ್ಚು ಪ್ರಕರಣಗಳನ್ನು ದಾಖಲಿಸಿರುವ ರಾಯ್‌ಪುರ ಮತ್ತು ದುರ್ಗ್ ಜಿಲ್ಲೆಗಳು ಸಂಪೂರ್ಣ ಲಾಕ್‌ಡೌನ್ ಹಂತದಲ್ಲಿವೆ.

ಕೊರೊನಾ ಉಲ್ಬಣದಿಂದ ಮರಣ ಪ್ರಮಾಣ ಹೆಚ್ಚಾಗಿದ್ದು, ರಾಯ್‌ಪುರದ ಡಾ.ಭೀಮ್‌ರಾವ್ ಅಂಬೇಡ್ಕರ್ ಸ್ಮಾರಕ ಆಸ್ಪತ್ರೆಯಲ್ಲಿ ಮೃತದೇಹಗಳನ್ನು ಇರಿಸಲು ಸ್ಥಳಾವಕಾಶವಿಲ್ಲ. ಈಗ ಲಭ್ಯವಿರುವ ಸ್ಥಳಗಳಲ್ಲಿ ಎಲ್ಲಿಯಾದರೂ ಶವಗಳನ್ನು ಇರಿಸಲಾಗುತ್ತಿದೆ ಎಂದು ಎನ್‌ಡಿಟಿವಿ ತಿಳಿಸಿದೆ. ವಿಡಿಯೊ ವೈರಲ್ ಆಗಿವೆ.

ಇದನ್ನೂ ಓದಿ: ಮುಂಬೈ: ಕೊರೊನಾ ರೋಗಿಗಳಿಗೆ ಹಾಸಿಗೆ ಸೌಲಭ್ಯ ಒದಗಿಸಲಿದೆ ನೋಡಲ್ ಅಧಿಕಾರಿಗಳ ತಂಡ

ಇದರ ಕುರಿತು ಆಸ್ಪತ್ರೆಯ ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಕೊರೊನಾದಿಂದ ಸಾವನ್ನಪ್ಪುತ್ತಿರುವ ರೋಗಿಗಳ ಶವಗಳನ್ನು ಶವಸಂಸ್ಕಾರ ಮಾಡುವುದಕ್ಕಿಂತ ವೇಗವಾಗಿ ಶವಾಗಾರದಲ್ಲಿ ರಾಶಿ ರಾಶಿ ಶವಗಳು ಬರುತ್ತಿವೆ ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ.

ರಾಯ್‌ಪುರ ಆಸ್ಪತ್ರೆಯ ತೀವ್ರ ನಿಗಾ ಘಟಕಗಳು ಮತ್ತು ಆಮ್ಲಜನಕ-ಸುಸಜ್ಜಿತ ಹಾಸಿಗೆಗಳು ಕಳೆದ ಒಂದು ವಾರದಿಂದ ಸುಮಾರು ನೂರರಷ್ಟು ಭರ್ತಿಯಾಗುತ್ತಿವೆ. ಅಧಿಕೃತ ಮೂಲಗಳ ಪ್ರಕಾರ, ರಾಯ್‌ಪುರ ನಗರದಲ್ಲಿ ಪ್ರತಿದಿನ ಸರಾಸರಿ 55 ಶವಗಳನ್ನು ಅಂತ್ಯಸಂಸ್ಕಾರ ಮಾಡಲಾಗುತ್ತಿದೆ. ಅವುಗಳಲ್ಲಿ ಹೆಚ್ಚಿನವು ಕೊರೊನಾ ಸೋಂಕಿತರ ಶವಗಳಾಗಿವೆ.

“ಒಂದೇ ಬಾರಿಗೆ ಇಷ್ಟೊಂದು ಸಾವುಗಳು ಸಂಭವಿಸುತ್ತವೆ ಎಂದು ಯಾರೂ ಊಹಿಸಿರಲಿಲ್ಲ. ಸಾಮಾನ್ಯ ಸಂಖ್ಯೆಯ ಸಾವುಗಳಿಗೆ ನಾವು ಸಾಕಷ್ಟು ಫ್ರೀಜರ್‌ಗಳನ್ನು ಹೊಂದಿದ್ದೇವೆ. ಆದರೆ ಒಂದರಿಂದ ಎರಡು ಸಾವುಗಳು ಸಂಭವಿಸುವ ಸ್ಥಳದಲ್ಲಿ 10-20 ವರದಿಯಾಗುತ್ತಿವೆ. 10-20, 50-60 ಜನರು ಮೃತಪಡುತ್ತಿದ್ದಾರೆ. ಒಂದೇ ಬಾರಿಗೆ ಎಷ್ಟು ಜನರಿಗೆ ಫ್ರೀಜರ್‌ಗಳನ್ನು ವ್ಯವಸ್ಥೆಗೊಳಿಸಬಹುದು?”ಎಂದು ರಾಯ್‌ಪುರದ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಮೀರಾ ಪ್ರಶ್ನಿಸಿದ್ದಾರೆ.

“ಕೊರೊನಾ ವಿರುದ್ಧ ಗೆಲ್ಲುತ್ತಿದ್ದೇವೆ ಎಂದು ಹೋಂ ಐಸೋಲೇಷನ್‌ಗೆ ಪ್ರಾಮುಖ್ಯತೆ ನೀಡುತ್ತಿದ್ದೇವು. ಅಷ್ಟರಲ್ಲಿ ಈ ಹೊಸ ಎರಡನೇ ಅಲೆ ನಮ್ಮನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಲಕ್ಷಣರಹಿತ ರೋಗಿಗಳು ಸಹ ಬೇಗನೇ ಅಸ್ವಸ್ಥರಾಗುತ್ತಿದ್ದಾರೆ. ಜೊತೆಗೆ ಹೃದಯಾಘಾತದಿಂದ ಮೃತಪಡುತ್ತಿರುವ ಪ್ರಕರಣಗಳು ಹೆಚ್ಚಾಗಿವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕುರ್‌‌ಆನ್‌‌‌‌ ಶ್ಲೋಕಗಳನ್ನು ತೆಗೆದುಹಾಕುವಂತೆ ಸಲ್ಲಿಸಿದ್ದ ಅರ್ಜಿಯನ್ನು ‘ಕ್ಷುಲ್ಲಕ’ ಎಂದ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...