Homeಕರೋನಾ ತಲ್ಲಣಛತ್ತೀಸ್‌ಗಢ: ಸರ್ಕಾರಿ ಆಸ್ಪತ್ರೆ ಹೊರಗಡೆ ಕೊರೊನಾ ಸೋಂಕಿತರ ಮೃತದೇಹಗಳ ರಾಶಿ

ಛತ್ತೀಸ್‌ಗಢ: ಸರ್ಕಾರಿ ಆಸ್ಪತ್ರೆ ಹೊರಗಡೆ ಕೊರೊನಾ ಸೋಂಕಿತರ ಮೃತದೇಹಗಳ ರಾಶಿ

- Advertisement -
- Advertisement -

ರಾಯ್‌ಪುರದ ಅತಿದೊಡ್ಡ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಶವಗಳನ್ನು ಶವಾಗಾರದಲ್ಲಿ ಇಡಲು ಸಾಧ್ಯವಾಗದೆ, ಆಸ್ಪತ್ರೆಯ ಹೊರಗಡೆ ಬಿಸಿಲಿನಲ್ಲಿ ಸ್ಟ್ರೆಚರ್ ಮೇಲೆ ಮಲಗಿಸಿರುವ ಚಿತ್ರಗಳನ್ನು ಎನ್‌ಡಿಟಿವಿ ವರದಿ ಮಾಡಿದೆ.

ಛತ್ತೀಸ್‌ಗಢ ಕೊರೊನಾ ಎರಡನೇ ಅಲೆಗೆ ತತ್ತರಿಸಿದೆ. ಕೊರೊನಾ ವೈರಸ್‌ನಿಂದ ಹೆಚ್ಚು ಹಾನಿಗೊಳಗಾದ ದೇಶದ 10 ರಾಜ್ಯಗಳಲ್ಲಿ ಛತ್ತೀಸ್‌ಗಢ ಕೂಡ ಒಂದು. ಹೆಚ್ಚು ಪ್ರಕರಣಗಳನ್ನು ದಾಖಲಿಸಿರುವ ರಾಯ್‌ಪುರ ಮತ್ತು ದುರ್ಗ್ ಜಿಲ್ಲೆಗಳು ಸಂಪೂರ್ಣ ಲಾಕ್‌ಡೌನ್ ಹಂತದಲ್ಲಿವೆ.

ಕೊರೊನಾ ಉಲ್ಬಣದಿಂದ ಮರಣ ಪ್ರಮಾಣ ಹೆಚ್ಚಾಗಿದ್ದು, ರಾಯ್‌ಪುರದ ಡಾ.ಭೀಮ್‌ರಾವ್ ಅಂಬೇಡ್ಕರ್ ಸ್ಮಾರಕ ಆಸ್ಪತ್ರೆಯಲ್ಲಿ ಮೃತದೇಹಗಳನ್ನು ಇರಿಸಲು ಸ್ಥಳಾವಕಾಶವಿಲ್ಲ. ಈಗ ಲಭ್ಯವಿರುವ ಸ್ಥಳಗಳಲ್ಲಿ ಎಲ್ಲಿಯಾದರೂ ಶವಗಳನ್ನು ಇರಿಸಲಾಗುತ್ತಿದೆ ಎಂದು ಎನ್‌ಡಿಟಿವಿ ತಿಳಿಸಿದೆ. ವಿಡಿಯೊ ವೈರಲ್ ಆಗಿವೆ.

ಇದನ್ನೂ ಓದಿ: ಮುಂಬೈ: ಕೊರೊನಾ ರೋಗಿಗಳಿಗೆ ಹಾಸಿಗೆ ಸೌಲಭ್ಯ ಒದಗಿಸಲಿದೆ ನೋಡಲ್ ಅಧಿಕಾರಿಗಳ ತಂಡ

ಇದರ ಕುರಿತು ಆಸ್ಪತ್ರೆಯ ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಕೊರೊನಾದಿಂದ ಸಾವನ್ನಪ್ಪುತ್ತಿರುವ ರೋಗಿಗಳ ಶವಗಳನ್ನು ಶವಸಂಸ್ಕಾರ ಮಾಡುವುದಕ್ಕಿಂತ ವೇಗವಾಗಿ ಶವಾಗಾರದಲ್ಲಿ ರಾಶಿ ರಾಶಿ ಶವಗಳು ಬರುತ್ತಿವೆ ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ.

ರಾಯ್‌ಪುರ ಆಸ್ಪತ್ರೆಯ ತೀವ್ರ ನಿಗಾ ಘಟಕಗಳು ಮತ್ತು ಆಮ್ಲಜನಕ-ಸುಸಜ್ಜಿತ ಹಾಸಿಗೆಗಳು ಕಳೆದ ಒಂದು ವಾರದಿಂದ ಸುಮಾರು ನೂರರಷ್ಟು ಭರ್ತಿಯಾಗುತ್ತಿವೆ. ಅಧಿಕೃತ ಮೂಲಗಳ ಪ್ರಕಾರ, ರಾಯ್‌ಪುರ ನಗರದಲ್ಲಿ ಪ್ರತಿದಿನ ಸರಾಸರಿ 55 ಶವಗಳನ್ನು ಅಂತ್ಯಸಂಸ್ಕಾರ ಮಾಡಲಾಗುತ್ತಿದೆ. ಅವುಗಳಲ್ಲಿ ಹೆಚ್ಚಿನವು ಕೊರೊನಾ ಸೋಂಕಿತರ ಶವಗಳಾಗಿವೆ.

“ಒಂದೇ ಬಾರಿಗೆ ಇಷ್ಟೊಂದು ಸಾವುಗಳು ಸಂಭವಿಸುತ್ತವೆ ಎಂದು ಯಾರೂ ಊಹಿಸಿರಲಿಲ್ಲ. ಸಾಮಾನ್ಯ ಸಂಖ್ಯೆಯ ಸಾವುಗಳಿಗೆ ನಾವು ಸಾಕಷ್ಟು ಫ್ರೀಜರ್‌ಗಳನ್ನು ಹೊಂದಿದ್ದೇವೆ. ಆದರೆ ಒಂದರಿಂದ ಎರಡು ಸಾವುಗಳು ಸಂಭವಿಸುವ ಸ್ಥಳದಲ್ಲಿ 10-20 ವರದಿಯಾಗುತ್ತಿವೆ. 10-20, 50-60 ಜನರು ಮೃತಪಡುತ್ತಿದ್ದಾರೆ. ಒಂದೇ ಬಾರಿಗೆ ಎಷ್ಟು ಜನರಿಗೆ ಫ್ರೀಜರ್‌ಗಳನ್ನು ವ್ಯವಸ್ಥೆಗೊಳಿಸಬಹುದು?”ಎಂದು ರಾಯ್‌ಪುರದ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಮೀರಾ ಪ್ರಶ್ನಿಸಿದ್ದಾರೆ.

“ಕೊರೊನಾ ವಿರುದ್ಧ ಗೆಲ್ಲುತ್ತಿದ್ದೇವೆ ಎಂದು ಹೋಂ ಐಸೋಲೇಷನ್‌ಗೆ ಪ್ರಾಮುಖ್ಯತೆ ನೀಡುತ್ತಿದ್ದೇವು. ಅಷ್ಟರಲ್ಲಿ ಈ ಹೊಸ ಎರಡನೇ ಅಲೆ ನಮ್ಮನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಲಕ್ಷಣರಹಿತ ರೋಗಿಗಳು ಸಹ ಬೇಗನೇ ಅಸ್ವಸ್ಥರಾಗುತ್ತಿದ್ದಾರೆ. ಜೊತೆಗೆ ಹೃದಯಾಘಾತದಿಂದ ಮೃತಪಡುತ್ತಿರುವ ಪ್ರಕರಣಗಳು ಹೆಚ್ಚಾಗಿವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕುರ್‌‌ಆನ್‌‌‌‌ ಶ್ಲೋಕಗಳನ್ನು ತೆಗೆದುಹಾಕುವಂತೆ ಸಲ್ಲಿಸಿದ್ದ ಅರ್ಜಿಯನ್ನು ‘ಕ್ಷುಲ್ಲಕ’ ಎಂದ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...