Homeಮುಖಪುಟಛತ್ತೀಸ್‌ಗಡ: ಚರ್ಚ್‌ ಮೇಲೆ ದಾಳಿ; ಬಿಜೆಪಿ ಮುಖಂಡ ಸೇರಿ ಐವರ ಬಂಧನ

ಛತ್ತೀಸ್‌ಗಡ: ಚರ್ಚ್‌ ಮೇಲೆ ದಾಳಿ; ಬಿಜೆಪಿ ಮುಖಂಡ ಸೇರಿ ಐವರ ಬಂಧನ

- Advertisement -
- Advertisement -

ಛತ್ತೀಸ್‌ಗಡ ನಾರಾಯಣಪುರ ಜಿಲ್ಲೆಯ ಚರ್ಚ್‌ನ ಮೇಲೆ ನಡೆದ ಗುಂಪು ದಾಳಿಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ ಮುಖಂಡ ಸೇರಿದಂತೆ ಐವರನ್ನು ಛತ್ತೀಸ್‌ಗಢ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಬಿಜೆಪಿ ಮುಖಂಡ ರೂಪಸಾಯಿ ಸಲಾಂ, ಪವನ್‌ಕುಮಾರ್ ನಾಗ್, ಅತುಲ್ ನೇತಮ್, ಅಂಕಿತ್ ನಂದಿ ಮತ್ತು ದೊಮೇಂದ್ರ ಯಾದವ್ ಬಂಧಿತರು ಎಂದು ಗುರುತಿಸಲಾಗಿದೆ.

ಅಕ್ರಮವಾಗಿ ಧಾರ್ಮಿಕ ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿ ಆದಿವಾಸಿಗಳ ಗುಂಪು ನಾರಾಯಣಪುರದ ಎಡ್ಕಾ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದ ನಂತರ ಚರ್ಚ್ ಅನ್ನು ಧ್ವಂಸಗೊಳಿಸಲಾಗಿತ್ತು. ಆದಿವಾಸಿಗಳ ಎರಡು ಗುಂಪುಗಳ ನಡುವಿನ ಘರ್ಷಣೆಯಲ್ಲಿ ಎಂಟು ಜನರು ಗಾಯಗೊಂಡ ಒಂದು ದಿನದ ನಂತರ ಬಂಧನ ನಡೆದಿದೆ.

ಸೋಮವಾರ ನಡೆದ ದಾಳಿಯಲ್ಲಿ ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿವೆ. ದಾಳಿಗೊಳಗಾದ ಪೊಲೀಸ್ ಅಧಿಕಾರಿಗಳ ಪೈಕಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸದಾನಂದ್ ಕುಮಾರ್ ಕೂಡ ಸೇರಿದ್ದಾರೆ.

ಗಲಭೆ, ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ಮತ್ತು ಚರ್ಚ್ ಅನ್ನು ಧ್ವಂಸಗೊಳಿಸಿದ್ದಕ್ಕಾಗಿ ಮೂರು ಎಫ್‌ಐಆರ್‌ಗಳನ್ನು ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ದಾಖಲಿಸಿದ್ದಾರೆ.

ಜನವರಿ 1 ರಂದು ಎಡ್ಕಾ ಪೊಲೀಸ್ ಠಾಣೆ ವ್ಯಾಪ್ತಿಯ ಗೊರ್ರಾ ಗ್ರಾಮದಲ್ಲಿ ಎರಡು ಆದಿವಾಸಿ ಗುಂಪುಗಳ ನಡುವಿನ ಘರ್ಷಣೆಯ ಬಗ್ಗೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಇನ್‌ಸ್ಪೆಕ್ಟರ್ ಜನರಲ್ ಸುಂದರರಾಜ್ ಪಿ ಅವರು ಪಿಟಿಐಗೆ ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆ ಸೆಕ್ಷನ್ 148 (ಗಲಭೆ, ಮಾರಣಾಂತಿಕ ಆಯುಧಗಳಿಂದ ಶಸ್ತ್ರಸಜ್ಜಿತ), 153 (ಎ) (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 120 ಬಿ (ಅಪರಾಧದ ಪಿತೂರಿ), 295 (ಆರಾಧನಾ ಸ್ಥಳವನ್ನು ಅಪವಿತ್ರಗೊಳಿಸುವುದು) ಮತ್ತು 295 ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಕೃತ್ಯಗಳು) ಅಡಿಯಲ್ಲಿ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಬಿಜೆಪಿ ಸಂಸದರಾದ ಸಂತೋಷ್ ಪಾಂಡೆ, ಮೋಹನ್ ಮಾಂಡವಿ ಮತ್ತು ಶಾಸಕ ಶಿವರತನ್ ಶರ್ಮಾ ಅವರು  ನಾರಾಯಣಪುರಕ್ಕೆ ಪ್ರವೇಶಿಸದಂತೆ ಪೊಲೀಸರು ತಡೆದಿದ್ದಾರೆ. ಭದ್ರತಾ ಕಾರಣಗಳನ್ನು ಪೊಲೀಸರು ಉಲ್ಲೇಖಿಸಿದ್ದಾರೆ.

“ಕಾಂಗ್ರೆಸ್ ಸರ್ಕಾರ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ, ಪ್ರಜಾಪ್ರಭುತ್ವವನ್ನು ಕೊಲೆ ಮಾಡುತ್ತಿದೆ” ಎಂದು ಬಿಜೆಪಿಯ ಛತ್ತೀಸ್‌ಗಢ ಘಟಕದ ಮುಖ್ಯ ವಕ್ತಾರ ಅಜಯ್ ಚಂದ್ರಕರ್ ಆರೋಪಿಸಿದ್ದಾರೆ.

“ನಮ್ಮ ನಾಯಕರನ್ನು ನಾರಾಯಣಪುರಕ್ಕೆ ಹೋಗದಂತೆ ತಡೆಯಲಾಗಿದೆ. ಮತಾಂತರದಲ್ಲಿ ತೊಡಗಿರುವವರಿಗೆ ಕಾಂಗ್ರೆಸ್‌ನ ರಕ್ಷಣೆ ಇದೆ ಎಂಬುದನ್ನು ಇದು ಸೂಚಿಸುತ್ತಿದೆ” ಎಂದು ದೂರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...