Homeಮುಖಪುಟಛತ್ತೀಸ್‌ಗಢ ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್‌ ಭರ್ಜರಿ ಗೆಲುವು; BJP ಹೀನಾಯ ಸೋಲು

ಛತ್ತೀಸ್‌ಗಢ ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್‌ ಭರ್ಜರಿ ಗೆಲುವು; BJP ಹೀನಾಯ ಸೋಲು

- Advertisement -
- Advertisement -

ಛತ್ತೀಸ್‌ಗಢದ 15 ನಗರ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಭರ್ಜರಿ ಜಯ ದಾಖಲಿಸಿದೆ. ಇದೀಗ ಮತ ಎಣಿಕೆ ಪೂರ್ಣಗೊಂಡಿದ್ದು, 300 ವಾರ್ಡ್‌ಗಳ ಪೈಕಿ 174ರಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದೆ. ಬಿಜೆಪಿ ಭಾರಿ ಹಿನ್ನಡೆ ಅನುಭವಿಸಿದ್ದು 89 ವಾರ್ಡ್‌ಗಳನ್ನಷ್ಟೇ ಜಯಿಸಿಕೊಂಡಿದೆ.

ಸೋಮವಾರದಂದು 15 ನಗರ ಸಂಸ್ಥೆಗಳಲ್ಲಿ ಮತ್ತು 15 ವಾರ್ಡ್‌ಗಳ ಉಪಚುನಾವಣೆಯ ಮತಗಳ ಎಣಿಕೆಯು ಗುರುವಾರದಂದು 29 ಎಣಿಕೆ ಕೇಂದ್ರಗಳಲ್ಲಿ ಬೆಳಿಗ್ಗೆ 9 ಗಂಟೆಗೆ ಪ್ರಾರಂಭವಾಗಿತ್ತು.

ಇದನ್ನೂ ಓದಿ:ಉತ್ತರ ಪ್ರದೇಶ:ಪ್ರಧಾನಿ ವಿರುದ್ಧ ಪ್ರತಿಭಟನೆಗೆ ಸಜ್ಜಾಗಿದ್ದ 70 ಮಂದಿ ಎಸ್‌ಪಿ ಕಾರ್ಯಕರ್ತರ ಬಂಧನ, ಬಿಡುಗಡೆ

ಫಲಿತಾಂಶ ಘೋಷಿಸಿದ ನಂತರ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ತಮ್ಮ ಸರ್ಕಾರವು ಪ್ರಾರಂಭಿಸಿದ ಕಲ್ಯಾಣ ಯೋಜನೆಗಳ ಯಶಸ್ಸನ್ನು ಈ ಫಲಿತಾಂಶವು ಸೂಚಿಸುತ್ತದೆ ಎಂದು ಹೇಳಿದ್ದಾರೆ.

15 ನಗರ ಸಂಸ್ಥೆಗಳ ಒಟ್ಟು 370 ವಾರ್ಡ್‌ಗಳ ಪೈಕಿ 300 ವಾರ್ಡ್‌ಗಳಿಗೆ ರಾಜ್ಯ ಚುನಾವಣಾ ಆಯೋಗ (ಎಸ್‌ಇಸಿ) ಫಲಿತಾಂಶ ಪ್ರಕಟಿಸಿದ್ದು, ಇದರಲ್ಲಿ 174 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು, 89 ರಲ್ಲಿ ಬಿಜೆಪಿ, 6 ರಲ್ಲಿ ಜನತಾ ಕಾಂಗ್ರೆಸ್ ಛತ್ತೀಸ್‌ಗಢ (ಜೆ) ಮತ್ತು 31 ರಲ್ಲಿ ಪಕ್ಷೇತರರು ಗೆಲುವು ಸಾಧಿಸಿದ್ದಾರೆ.

ದುರ್ಗ್ ಜಿಲ್ಲೆಯ ಪ್ರಮುಖ ಭಿಲಾಯಿ ಮುನ್ಸಿಪಲ್ ಕಾರ್ಪೊರೇಷನ್‌ಗೆ ಒಳಪಡುವ ಉಳಿದ 70 ವಾರ್ಡ್‌ಗಳ ಫಲಿತಾಂಶವನ್ನು ಇನ್ನೂ ಅಧಿಕೃತವಾಗಿ ಘೋಷಿಸಲಾಗಿಲ್ಲ. ಅಲ್ಲಿ ಎಣಿಕೆ ಇನ್ನೂ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ರಾಹುಲ್‌ ಸಾಮರ್ಥ್ಯ ಅಲ್ಲಗಳೆದು ಕಾಂಗ್ರೆಸ್ ವಕ್ತಾರರೊಬ್ಬರು ಮೋದಿಯನ್ನು ಹೊಗಳಿದ್ದಾರೆಯೇ?

ಆದಾಗ್ಯೂ, 70 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಹೆಚ್ಚಿನ ಮುನ್ನಡೆ ಸಾಧಿಸಿದೆ ಎಂದು ಹೇಳಲಾಗುತ್ತಿದೆ. ಈ 70 ವಾರ್ಡ್‌ಗಳಲ್ಲಿ ಕಾಂಗ್ರೆಸ್ 37, ಬಿಜೆಪಿ 24, ಇತರರು 8 ರಲ್ಲಿ ಮತ್ತು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) 1 ರಲ್ಲಿ ಮುನ್ನಡೆ ಸಾಧಿಸಿದೆ.

ಕಾಂಗ್ರೆಸ್ ಶಾಸಕ ದೇವೇಂದ್ರ ಯಾದವ್ ಅವರು ಭಿಲಾಯಿ ಮುನ್ಸಿಪಲ್ ಕಾರ್ಪೊರೇಷನ್‌ನ ಹಾಲಿ ಮೇಯರ್ ಆಗಿದ್ದಾರೆ.

4 ಮುನಿಸಿಪಲ್ ಕಾರ್ಪೊರೇಶನ್‌ಗಳು, 6 ಮುನ್ಸಿಪಲ್ ಕೌನ್ಸಿಲ್‌ಗಳು ಮತ್ತು ಐದು ನಗರ ಪಂಚಾಯತ್‌ಗಳಿಗೆ ಚುನಾವಣೆ ನಡೆದಿತ್ತು.

ರಾಯ್‌ಪುರ ಜಿಲ್ಲೆಯ ಬಿರ್‌ಗಾಂವ್ ಮುನ್ಸಿಪಲ್ ಕಾರ್ಪೊರೇಷನ್‌ನ 40 ವಾರ್ಡ್‌ಗಳ ಪೈಕಿ ಕಾಂಗ್ರೆಸ್ 19 ಮತ್ತು ಬಿಜೆಪಿ 10, ಜೆಸಿಸಿ (ಜೆ) ಮತ್ತು ಸ್ವತಂತ್ರ ಅಭ್ಯರ್ಥಿಗಳು ಕ್ರಮವಾಗಿ 5 ಮತ್ತು 6 ವಾರ್ಡ್‌ಗಳಲ್ಲಿ ವಿಜೇತರಾಗಿದ್ದಾರೆ.

ಇದನ್ನೂ ಓದಿ:ಗೋವಾ: ಕಾಂಗ್ರೆಸ್‌‌‌ನ ಮಾಜಿ ಕಾರ್ಯಾಧ್ಯಕ್ಷ, ಶಾಸಕ ಅಲೆಕ್ಸೊ ಟಿಎಂಸಿಗೆ ಸೇರ್ಪಡೆ

13 ನಗರ ಸಂಸ್ಥೆಗಳ ವ್ಯಾಪ್ತಿಯ 15 ವಾರ್ಡ್‌ಗಳಲ್ಲಿ ನಡೆದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ 11 ಮತ್ತು ಬಿಜೆಪಿ 1 ಸ್ಥಾನ ಗಳಿಸಿದರೆ, ಉಳಿದ 3 ರಲ್ಲಿ ಸ್ವತಂತ್ರ ಅಭ್ಯರ್ಥಿಗಳು ಜಯಗಳಿಸಿದ್ದಾರೆ.

“ಎಲ್ಲಾ ಪುರಸಭೆಯ ಫಲಿತಾಂಶಗಳು ಕಾಂಗ್ರೆಸ್ ಪರವಾಗಿವೆ. ಈ ಫಲಿತಾಂಶವು ರಾಜ್ಯ ಸರ್ಕಾರದ ಜನಕಲ್ಯಾಣ ಯೋಜನೆಗಳ ಯಶಸ್ಸನ್ನು ತೋರಿಸುತ್ತದೆ. ರಾಜ್ಯದಲ್ಲಿ ಮೂರು ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ ಜನರು ನಂಬಿಕೆ ಇರಿಸಿದ್ದಾರೆ ಮತ್ತು ಹೀಗಾಗಿ ಪಕ್ಷದ ಪರವಾಗಿ ತಮ್ಮ ಜನಾದೇಶವನ್ನು ನೀಡಿದ್ದಾರೆ” ಎಂದು ಮುಖ್ಯಮಂತ್ರಿ ಬಘೇಲ್ ಹೇಳಿದ್ದಾರೆ.

ಮತದಾರರಿಗೆ ಕೃತಜ್ಞತೆ ಸಲ್ಲಿಸಿರುವ ಅವರು, ವಿಜೇತರಿಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಯುಪಿ ವಿಧಾನಸಭಾ ಚುನಾವಣೆಗೆ ಬಘೇಲ್ ಅವರನ್ನು ಕಾಂಗ್ರೆಸ್ ಹಿರಿಯ ವೀಕ್ಷಕರನ್ನಾಗಿ ನೇಮಿಸಿದೆ.

ಇದನ್ನೂ ಓದಿ:ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಜನವರಿ 9 ರಿಂದ 10 ದಿನ ಕಾಂಗ್ರೆಸ್‌ನಿಂದ ಪಾದಯಾತ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...