Homeಮುಖಪುಟಬಜೆಟ್ ಮಂಡಿಸಲು ಹಸುವಿನ ಸಗಣಿಯಿಂದ ತಯಾರಿಸಿದ ಬ್ರೀಫ್‌ಕೇಸ್‌ ತಂದ ಛತ್ತೀಸ್‌ಗಢ ಸಿಎಂ!

ಬಜೆಟ್ ಮಂಡಿಸಲು ಹಸುವಿನ ಸಗಣಿಯಿಂದ ತಯಾರಿಸಿದ ಬ್ರೀಫ್‌ಕೇಸ್‌ ತಂದ ಛತ್ತೀಸ್‌ಗಢ ಸಿಎಂ!

- Advertisement -
- Advertisement -

ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ರಾಜ್ಯ ಬಜೆಟ್ ಮಂಡಿಸಲು ಹಸುವಿನ ಸಗಣಿಯಿಂದ ತಯಾರಿಸಿದ ಬ್ರೀಫ್‌ಕೇಸ್‌ನೊಂದಿಗೆ ರಾಜ್ಯದ ವಿಧಾನಸಭೆಗೆ ತೆರಳಿದ ಆಶ್ಚರ್ಯಕರ ಘಟನೆ ಬುಧವಾರ ನಡೆದಿದೆ.

2022-23ರ ಆರ್ಥಿಕ ವರ್ಷಕ್ಕೆ ರಾಜ್ಯ ಬಜೆಟ್ ಮಂಡಿಸಲು ಮುಖ್ಯಮಂತ್ರಿ ಬಘೇಲ್‌ ಅವರು ವಿಧಾನಸಭೆಗೆ ಹಸುವಿನ ಸಗಣಿಯಿಂದ ಮಾಡಿದ ಚೌಕಾಕಾರದ ಬ್ರೀಫ್‌ಕೇಸ್‌ ಅನ್ನು ಹಿಡಿದುಕೊಂಡು ಪ್ರವೇಶಿಸಿದ್ದಾರೆ.

ಛತ್ತೀಸ್‌ಗಢ ವಿಧಾನಸಭೆಯ ಬಜೆಟ್ ಅಧಿವೇಶನ ಸೋಮವಾರ ಆರಂಭಗೊಂಡಿದ್ದು, 2022-23ನೇ ಸಾಲಿನ ರಾಜ್ಯದ ಬಜೆಟ್ ಅನ್ನು ಬುಧವಾರ ಸದನದಲ್ಲಿ ಮಂಡಿಸಲಾಯಿತು.

ಇದಕ್ಕೂ ಮುನ್ನ ಭೂಪೇಶ್ ಬಘೇಲ್ ಅವರು ಕೃಷಿಯನ್ನು ಹೆಚ್ಚು ಲಾಭದಾಯಕವಾಗಿಸಲು ಕ್ರಮಗಳನ್ನು ಕೈಗೊಂಡರು. ಜೊತೆಗೆ ಬಿಡಾಡಿ ದನಗಳ ಸಮಸ್ಯೆಯನ್ನು ಪರಿಹರಿಸಲು, ಸಾವಯವ ಕೃಷಿಯನ್ನು ಉತ್ತೇಜಿಸಲು ಮತ್ತು ಗ್ರಾಮೀಣ ಆರ್ಥಿಕತೆಗೆ ನೆರವು ಘೋಷಿಸಿದ್ದಾರೆ.

2020 ರಲ್ಲಿ, ಕಾಂಗ್ರೆಸ್ ಆಡಳಿತದ ಛತ್ತೀಸ್‌ಗಢ ಸರ್ಕಾರವು ಹಸು ಸಾಕಣೆದಾರರು ಮತ್ತು ರೈತರಿಂದ ಹಸುವಿನ ಸಗಣಿ ಸಂಗ್ರಹಿಸುವುದಾಗಿ ಘೋಷಿಸಿತ್ತು. ಈ ಘೋಷಣೆಯನ್ನು ಮಾಡಿದ ದೇಶದ ಮೊದಲ ರಾಜ್ಯ  ಛತ್ತೀಸ್‌ಗಢವಾಗಿದೆ.

ರಾಜ್ಯದ ‘ಗೋಧನ್ ನ್ಯಾಯ್’ ಎಂಬ ಯೋಜನೆಯು ಜಾನುವಾರು ಮಾಲೀಕರಿಗೆ ಸಗಣಿ ಸಂಗ್ರಹಣೆಯ ಮೂಲಕ ಆದಾಯದ ಬೆಂಬಲವನ್ನು ಒದಗಿಸುವ ಉದ್ದೇಶವನ್ನು ಹೊಂದಿದ್ದು, ರಾಜ್ಯದಲ್ಲಿನ ರಾಸಾಯನಿಕ ಗೊಬ್ಬರಗಳ ಕೊರತೆಯನ್ನು ಪರಿಹರಿಸಲು ಭೂಪೇಶ್ ಬಘೇಲ್ ಸರ್ಕಾರವು ವರ್ಮಿಕಾಂಪೋಸ್ಟ್‌‌ಗಾಗಿ ಇದನ್ನು ಬಳಸಿಕೊಳ್ಳುತ್ತಿದೆ.

ಭೂಪೇಶ್ ಬಘೇಲ್ ಮಾತ್ರವಲ್ಲ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಉನ್ನತ ನಾಯಕರು ಗ್ರಾಮೀಣ ಆರ್ಥಿಕತೆಯನ್ನು ಹೆಚ್ಚಿಸಲು ಗೋವಿನ ಸಗಣಿ ಬಳಕೆಯನ್ನು ಪ್ರಸ್ತಾಪಿಸಿದ್ದಾರೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ರಾಸಾಯನಿಕ ಗೊಬ್ಬರಗಳನ್ನು ತ್ಯಜಿಸುವಂತೆ ರೈತರನ್ನು ಒತ್ತಾಯಿಸಿದ್ದ ಪ್ರಧಾನಿ ಮೋದಿ, “ನಾವು ಸಾವಯವ ಕೃಷಿ ವಿಧಾನಗಳಿಗೆ ಬದಲಾಗಬೇಕಾಗಿದೆ… ದೇಸಿ ಹಸುವಿನ ಸಗಣಿ ಮತ್ತು ಮೂತ್ರವು ನಿಮ್ಮ ಕೃಷಿ ಉತ್ಪನ್ನಗಳನ್ನು ರಕ್ಷಿಸಲು ಮತ್ತು ಉತ್ಪಾದಕತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದನ್ನು ಸ್ವಾಭಾವಿಕವಾಗಿ ಮಾಡಬಹುದು” ಎಂದು ಹೇಳಿದ್ದರು.

ಇದನ್ನೂ ಓದಿ: ಸಿಬಿಐಗಿದ್ದ ಸಮ್ಮತಿಯನ್ನು ಹಿಂಪಡೆದ ಮೇಘಾಲಯ: ಒಂಬತ್ತು ರಾಜ್ಯಗಳಲ್ಲಿ ಸಿಬಿಐಗೆ ಎಂಟ್ರಿ ಇಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಷ್ಟೊಂದು‌ ಮೂಢನಂಬಿಕೆ ಇನ್ನೂ ನಮ್ಮ‌ ಜನಗಳಲ್ಲಿ ಇದೆಯಲ್ಲಾ……

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....