Homeಮುಖಪುಟಛತ್ತೀಸ್‌ಗಡದಲ್ಲಿ ಕಾಂಗ್ರೆಸ್‌ನಿಂದ ಗೋರಾಜಕೀಯ; ಬಿಜೆಪಿಯಿಂದ ತೀವ್ರ ವಿರೋಧ!

ಛತ್ತೀಸ್‌ಗಡದಲ್ಲಿ ಕಾಂಗ್ರೆಸ್‌ನಿಂದ ಗೋರಾಜಕೀಯ; ಬಿಜೆಪಿಯಿಂದ ತೀವ್ರ ವಿರೋಧ!

ರಾಜ್ಯ ಸರ್ಕಾರವು ಗೋವಿನ ಸಗಣಿಯನ್ನು ರಾಜ್ಯದ ಲಾಂಛನವನ್ನಾಗಿ ಮಾಡಲಿ ಎಂದು ಬಿಜೆಪಿಯ ಹಿರಿಯ ನಾಯಕ ವ್ಯಂಗ್ಯವಾಡಿದ್ದಾರೆ.

- Advertisement -
- Advertisement -

ಛತ್ತೀಸ್‌ಗಡದ ಕಾಂಗ್ರೆಸ್ ಸರ್ಕಾರವು ‘ಗೋಧನ್ ನ್ಯಾಯ’ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೊಜನೆಯ ಅಡಿಯಲ್ಲಿ ಸಾವಯವ ಗೊಬ್ಬರ ತಯಾರಿಸಲು ರಾಜ್ಯವು ಜಾನುವಾರು ಮಾಲೀಕರಿಂದ ಗೋವಿನ ತ್ಯಾಜ್ಯವನ್ನು ಖರೀದಿಸುತ್ತಿದೆ.

ಪಕ್ಷದ ಸೈದ್ಧಾಂತಿಕ ಮಾತೃಸಂಘಟನೆ ಆರ್‌ಎಸ್‌ಎಸ್ ಈ ಯೋಜನೆಯನ್ನು ಸ್ವಾಗತಿಸಿದೆ. ಆದರೆ ಕೆಲವು ಬಿಜೆಪಿ ನಾಯಕರು ಅಪಹಾಸ್ಯ ಮಾಡಿದ್ದಾರೆ.

ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ತಮ್ಮ ಅಧಿಕೃತ ನಿವಾಸದಲ್ಲಿ ಜಾನುವಾರು ಮಾಲೀಕರಿಂದ ಗೋವಿನ ಸಗಣಿಯನ್ನು ಸಾಂಕೇತಿಕವಾಗಿ ಸಂಗ್ರಹಿಸುವ ಮೂಲಕ ಯೋಜನೆಯನ್ನು ಉದ್ಘಾಟಿಸಿದ್ದಾರೆ.

ವರ್ಮಿಕಾಂಪೋಸ್ಟ್ ಉತ್ಪಾದಿಸಲು ಡೈರಿ ರೈತರಿಂದ ದನಗಳ ತ್ಯಾಜ್ಯವನ್ನು ಪ್ರತಿ ಕೆ.ಜಿ.ಗೆ ₹ 2 ರಂತೆ ಸಂಗ್ರಹಿಸುವ ಯೋಜನೆ ಇದಾಗಿದೆ. ನಂತರ ಸರ್ಕಾರ ತಯಾರು ಮಾಡುವ ಸಾವಯವ ಗೊಬ್ಬರವನ್ನು ರೈತರಿಗೆ ಕೆಜಿಗೆ ₹ 8 ರಂತೆ ಮಾರಾಟ ಮಾಡಲಾಗುತ್ತದೆ. ರೈತರು ಮತ್ತು ಜಾನುವಾರು ಮಾಲೀಕರ ಮನೆ ಬಾಗಿಲಿಗೆ ಹೋಗಿ ಸೆಗಣಿ ಸಂಗ್ರಹ ಮಾಡಲಾಗುವುದು ಮತ್ತು ಯೋಜನೆಯ ವಿವರಗಳ ಪ್ರಕಾರ ಖರೀದಿಯ 15 ದಿನಗಳಲ್ಲಿ ಪಾವತಿಗಳನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

2018ರಲ್ಲಿ ಅಧಿಕಾರ ವಹಿಸಿಕೊಂಡ ಬಾಗೆಲ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೇಸರಿ ಪಕ್ಷವನ್ನು ಎದುರಿಸಲು ಗೋವನ್ನು ತನ್ನ ರಾಜಕೀಯ ಲಾಭಕ್ಕೆ ಬಳಸಿ ಅದರ ರಕ್ಷಣೆ ಮತ್ತು ಪ್ರಚಾರಕ್ಕಾಗಿ ಯೋಜನೆಗಳನ್ನು ಪ್ರಾರಂಭಿಸಿದೆ. ಇದು ಎಷ್ಟರಮಟ್ಟಿಗೆಂದರೆ ಬಿಜೆಪಿ ಈಗ ರಾಜ್ಯ ಸರ್ಕಾರದ ಹಸು-ಸಗಣಿ ಯೋಜನೆಯನ್ನು ಅಪಹಾಸ್ಯ ಮಾಡಿ ಟೀಕಿಸುತ್ತಿದೆ.

ಮಾಜಿ ಸಚಿವ ಮತ್ತು ಬಿಜೆಪಿಯ ಹಿರಿಯ ಮುಖಂಡ ಅಜಯ್ ಚಂದ್ರಕರ್ ಅವರು ರಾಜ್ಯ ಸರ್ಕಾರವು ಗೋವಿನ ಸಗಣಿಯನ್ನು ರಾಜ್ಯದ ಲಾಂಛನವನ್ನಾಗಿ ಮಾಡಬೇಕು ಎಂದು ವ್ಯಂಗ್ಯವಾಡುವ ಮೂಲಕ ಟೀಕಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ರಾಮನ್ ಸಿಂಗ್ ಈ ಯೋಜನೆಯನ್ನು “ಕಲಗಚ್ಚು” ಎಂದು ಕರೆದಿದ್ದಾರೆ. ರೈತರಿಂದ ಭತ್ತವನ್ನು ಖರೀದಿಸಲು ಸಾಧ್ಯವಾಗದ ಸರ್ಕಾರ ಈಗ ಅವರಿಂದ ಹಸುವಿನ ಸಗಣಿ ಖರೀದಿಸುತ್ತಿದೆ ಎಂದು ಆರೋಪಿಸಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘವು ಈ ಕ್ರಮವನ್ನು ಶ್ಲಾಘಿಸಿದೆ. ದರವನ್ನು ಪ್ರತಿ ಕೆಜಿಗೆ ₹ 1.5 ರಿಂದ ₹ 2 ಕ್ಕೆ ಹೆಚ್ಚಿಸಲು ಸರ್ಕಾರಕ್ಕೆ ಮನವಿ ಮಾಡಿತ್ತು. ಆರ್‌ಎಸ್‌ಎಸ್ ನಿಯೋಗವೊಂದು ಇತ್ತೀಚೆಗೆ ಮುಖ್ಯಮಂತ್ರಿಗೆ ಮೆಚ್ಚುಗೆಯ ಪತ್ರವನ್ನು ಹಸ್ತಾಂತರಿಸಿದ್ದು, ಅದಕ್ಕೆ ಸಂಘಟನೆಯ ಪ್ರಾದೇಶಿಕ ಸಂಚಾಲಕರಾದ ಬಿಸ್ರಾರಾಮ್ ಯಾದವ್ ಅವರು ಸಹಿ ಮಾಡಿದ್ದಾರೆ.

ಸರ್ಕಾರವು ಈ ಹಿಂದೆ ಸೆಗಣಿಗೆ ಕನಿಷ್ಠ ಬೆಂಬಲ ದರವನ್ನು ಪ್ರತಿ ಕೆಜಿಗೆ ₹ 1.5 ಎಂದು ನಿಗದಿಪಡಿಸಲು ನಿರ್ಧರಿಸಿತ್ತು, ಆದರೆ ಆರ್‌ಎಸ್‌ಎಸ್ ಸದಸ್ಯರ ಕೋರಿಕೆಯ ಮೇರೆಗೆ ಬೆಲೆಯನ್ನು 50 ಪೈಸೆ ಹೆಚ್ಚಿಸಲಾಗಿದೆ ಎಂದು ಸರ್ಕಾರದ ಮೂಲವೊಂದು ತಿಳಿಸಿದೆ.

ಒಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರದ ಈ ಯೋಜನೆ ಗೋರಾಜಕೀಯ ಮಾಡುತ್ತಿದ್ದ ಬಿಜೆಪಿ ದೊಡ್ಡ ತಲೆನೋವಾಗಿದೆ. ಅದನ್ನು ಬೆಂಬಲಿಸಲು ಆಗದೇ, ವಿರೋಧಿಸಲು ಆಗದೇ ಒದ್ದಾಡುತ್ತಿದೆ.


ಓದಿ: ಛತ್ತೀಸ್‌ಗಡ ಸಿಎಂ ಬಾಗೆಲ್ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಉಮರ್ ಅಬ್ದುಲ್ಲಾ ಬೆದರಿಕೆ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...