Homeಮುಖಪುಟಛತ್ತೀಸ್‌ಗಡದಲ್ಲಿ ಕಾಂಗ್ರೆಸ್‌ನಿಂದ ಗೋರಾಜಕೀಯ; ಬಿಜೆಪಿಯಿಂದ ತೀವ್ರ ವಿರೋಧ!

ಛತ್ತೀಸ್‌ಗಡದಲ್ಲಿ ಕಾಂಗ್ರೆಸ್‌ನಿಂದ ಗೋರಾಜಕೀಯ; ಬಿಜೆಪಿಯಿಂದ ತೀವ್ರ ವಿರೋಧ!

ರಾಜ್ಯ ಸರ್ಕಾರವು ಗೋವಿನ ಸಗಣಿಯನ್ನು ರಾಜ್ಯದ ಲಾಂಛನವನ್ನಾಗಿ ಮಾಡಲಿ ಎಂದು ಬಿಜೆಪಿಯ ಹಿರಿಯ ನಾಯಕ ವ್ಯಂಗ್ಯವಾಡಿದ್ದಾರೆ.

- Advertisement -
- Advertisement -

ಛತ್ತೀಸ್‌ಗಡದ ಕಾಂಗ್ರೆಸ್ ಸರ್ಕಾರವು ‘ಗೋಧನ್ ನ್ಯಾಯ’ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೊಜನೆಯ ಅಡಿಯಲ್ಲಿ ಸಾವಯವ ಗೊಬ್ಬರ ತಯಾರಿಸಲು ರಾಜ್ಯವು ಜಾನುವಾರು ಮಾಲೀಕರಿಂದ ಗೋವಿನ ತ್ಯಾಜ್ಯವನ್ನು ಖರೀದಿಸುತ್ತಿದೆ.

ಪಕ್ಷದ ಸೈದ್ಧಾಂತಿಕ ಮಾತೃಸಂಘಟನೆ ಆರ್‌ಎಸ್‌ಎಸ್ ಈ ಯೋಜನೆಯನ್ನು ಸ್ವಾಗತಿಸಿದೆ. ಆದರೆ ಕೆಲವು ಬಿಜೆಪಿ ನಾಯಕರು ಅಪಹಾಸ್ಯ ಮಾಡಿದ್ದಾರೆ.

ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ತಮ್ಮ ಅಧಿಕೃತ ನಿವಾಸದಲ್ಲಿ ಜಾನುವಾರು ಮಾಲೀಕರಿಂದ ಗೋವಿನ ಸಗಣಿಯನ್ನು ಸಾಂಕೇತಿಕವಾಗಿ ಸಂಗ್ರಹಿಸುವ ಮೂಲಕ ಯೋಜನೆಯನ್ನು ಉದ್ಘಾಟಿಸಿದ್ದಾರೆ.

ವರ್ಮಿಕಾಂಪೋಸ್ಟ್ ಉತ್ಪಾದಿಸಲು ಡೈರಿ ರೈತರಿಂದ ದನಗಳ ತ್ಯಾಜ್ಯವನ್ನು ಪ್ರತಿ ಕೆ.ಜಿ.ಗೆ ₹ 2 ರಂತೆ ಸಂಗ್ರಹಿಸುವ ಯೋಜನೆ ಇದಾಗಿದೆ. ನಂತರ ಸರ್ಕಾರ ತಯಾರು ಮಾಡುವ ಸಾವಯವ ಗೊಬ್ಬರವನ್ನು ರೈತರಿಗೆ ಕೆಜಿಗೆ ₹ 8 ರಂತೆ ಮಾರಾಟ ಮಾಡಲಾಗುತ್ತದೆ. ರೈತರು ಮತ್ತು ಜಾನುವಾರು ಮಾಲೀಕರ ಮನೆ ಬಾಗಿಲಿಗೆ ಹೋಗಿ ಸೆಗಣಿ ಸಂಗ್ರಹ ಮಾಡಲಾಗುವುದು ಮತ್ತು ಯೋಜನೆಯ ವಿವರಗಳ ಪ್ರಕಾರ ಖರೀದಿಯ 15 ದಿನಗಳಲ್ಲಿ ಪಾವತಿಗಳನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

2018ರಲ್ಲಿ ಅಧಿಕಾರ ವಹಿಸಿಕೊಂಡ ಬಾಗೆಲ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೇಸರಿ ಪಕ್ಷವನ್ನು ಎದುರಿಸಲು ಗೋವನ್ನು ತನ್ನ ರಾಜಕೀಯ ಲಾಭಕ್ಕೆ ಬಳಸಿ ಅದರ ರಕ್ಷಣೆ ಮತ್ತು ಪ್ರಚಾರಕ್ಕಾಗಿ ಯೋಜನೆಗಳನ್ನು ಪ್ರಾರಂಭಿಸಿದೆ. ಇದು ಎಷ್ಟರಮಟ್ಟಿಗೆಂದರೆ ಬಿಜೆಪಿ ಈಗ ರಾಜ್ಯ ಸರ್ಕಾರದ ಹಸು-ಸಗಣಿ ಯೋಜನೆಯನ್ನು ಅಪಹಾಸ್ಯ ಮಾಡಿ ಟೀಕಿಸುತ್ತಿದೆ.

ಮಾಜಿ ಸಚಿವ ಮತ್ತು ಬಿಜೆಪಿಯ ಹಿರಿಯ ಮುಖಂಡ ಅಜಯ್ ಚಂದ್ರಕರ್ ಅವರು ರಾಜ್ಯ ಸರ್ಕಾರವು ಗೋವಿನ ಸಗಣಿಯನ್ನು ರಾಜ್ಯದ ಲಾಂಛನವನ್ನಾಗಿ ಮಾಡಬೇಕು ಎಂದು ವ್ಯಂಗ್ಯವಾಡುವ ಮೂಲಕ ಟೀಕಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ರಾಮನ್ ಸಿಂಗ್ ಈ ಯೋಜನೆಯನ್ನು “ಕಲಗಚ್ಚು” ಎಂದು ಕರೆದಿದ್ದಾರೆ. ರೈತರಿಂದ ಭತ್ತವನ್ನು ಖರೀದಿಸಲು ಸಾಧ್ಯವಾಗದ ಸರ್ಕಾರ ಈಗ ಅವರಿಂದ ಹಸುವಿನ ಸಗಣಿ ಖರೀದಿಸುತ್ತಿದೆ ಎಂದು ಆರೋಪಿಸಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘವು ಈ ಕ್ರಮವನ್ನು ಶ್ಲಾಘಿಸಿದೆ. ದರವನ್ನು ಪ್ರತಿ ಕೆಜಿಗೆ ₹ 1.5 ರಿಂದ ₹ 2 ಕ್ಕೆ ಹೆಚ್ಚಿಸಲು ಸರ್ಕಾರಕ್ಕೆ ಮನವಿ ಮಾಡಿತ್ತು. ಆರ್‌ಎಸ್‌ಎಸ್ ನಿಯೋಗವೊಂದು ಇತ್ತೀಚೆಗೆ ಮುಖ್ಯಮಂತ್ರಿಗೆ ಮೆಚ್ಚುಗೆಯ ಪತ್ರವನ್ನು ಹಸ್ತಾಂತರಿಸಿದ್ದು, ಅದಕ್ಕೆ ಸಂಘಟನೆಯ ಪ್ರಾದೇಶಿಕ ಸಂಚಾಲಕರಾದ ಬಿಸ್ರಾರಾಮ್ ಯಾದವ್ ಅವರು ಸಹಿ ಮಾಡಿದ್ದಾರೆ.

ಸರ್ಕಾರವು ಈ ಹಿಂದೆ ಸೆಗಣಿಗೆ ಕನಿಷ್ಠ ಬೆಂಬಲ ದರವನ್ನು ಪ್ರತಿ ಕೆಜಿಗೆ ₹ 1.5 ಎಂದು ನಿಗದಿಪಡಿಸಲು ನಿರ್ಧರಿಸಿತ್ತು, ಆದರೆ ಆರ್‌ಎಸ್‌ಎಸ್ ಸದಸ್ಯರ ಕೋರಿಕೆಯ ಮೇರೆಗೆ ಬೆಲೆಯನ್ನು 50 ಪೈಸೆ ಹೆಚ್ಚಿಸಲಾಗಿದೆ ಎಂದು ಸರ್ಕಾರದ ಮೂಲವೊಂದು ತಿಳಿಸಿದೆ.

ಒಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರದ ಈ ಯೋಜನೆ ಗೋರಾಜಕೀಯ ಮಾಡುತ್ತಿದ್ದ ಬಿಜೆಪಿ ದೊಡ್ಡ ತಲೆನೋವಾಗಿದೆ. ಅದನ್ನು ಬೆಂಬಲಿಸಲು ಆಗದೇ, ವಿರೋಧಿಸಲು ಆಗದೇ ಒದ್ದಾಡುತ್ತಿದೆ.


ಓದಿ: ಛತ್ತೀಸ್‌ಗಡ ಸಿಎಂ ಬಾಗೆಲ್ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಉಮರ್ ಅಬ್ದುಲ್ಲಾ ಬೆದರಿಕೆ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...