Homeಮುಖಪುಟಛತ್ತೀಸ್‌ಗಡದಲ್ಲಿ ಕಾಂಗ್ರೆಸ್‌ನಿಂದ ಗೋರಾಜಕೀಯ; ಬಿಜೆಪಿಯಿಂದ ತೀವ್ರ ವಿರೋಧ!

ಛತ್ತೀಸ್‌ಗಡದಲ್ಲಿ ಕಾಂಗ್ರೆಸ್‌ನಿಂದ ಗೋರಾಜಕೀಯ; ಬಿಜೆಪಿಯಿಂದ ತೀವ್ರ ವಿರೋಧ!

ರಾಜ್ಯ ಸರ್ಕಾರವು ಗೋವಿನ ಸಗಣಿಯನ್ನು ರಾಜ್ಯದ ಲಾಂಛನವನ್ನಾಗಿ ಮಾಡಲಿ ಎಂದು ಬಿಜೆಪಿಯ ಹಿರಿಯ ನಾಯಕ ವ್ಯಂಗ್ಯವಾಡಿದ್ದಾರೆ.

- Advertisement -
- Advertisement -

ಛತ್ತೀಸ್‌ಗಡದ ಕಾಂಗ್ರೆಸ್ ಸರ್ಕಾರವು ‘ಗೋಧನ್ ನ್ಯಾಯ’ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೊಜನೆಯ ಅಡಿಯಲ್ಲಿ ಸಾವಯವ ಗೊಬ್ಬರ ತಯಾರಿಸಲು ರಾಜ್ಯವು ಜಾನುವಾರು ಮಾಲೀಕರಿಂದ ಗೋವಿನ ತ್ಯಾಜ್ಯವನ್ನು ಖರೀದಿಸುತ್ತಿದೆ.

ಪಕ್ಷದ ಸೈದ್ಧಾಂತಿಕ ಮಾತೃಸಂಘಟನೆ ಆರ್‌ಎಸ್‌ಎಸ್ ಈ ಯೋಜನೆಯನ್ನು ಸ್ವಾಗತಿಸಿದೆ. ಆದರೆ ಕೆಲವು ಬಿಜೆಪಿ ನಾಯಕರು ಅಪಹಾಸ್ಯ ಮಾಡಿದ್ದಾರೆ.

ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ತಮ್ಮ ಅಧಿಕೃತ ನಿವಾಸದಲ್ಲಿ ಜಾನುವಾರು ಮಾಲೀಕರಿಂದ ಗೋವಿನ ಸಗಣಿಯನ್ನು ಸಾಂಕೇತಿಕವಾಗಿ ಸಂಗ್ರಹಿಸುವ ಮೂಲಕ ಯೋಜನೆಯನ್ನು ಉದ್ಘಾಟಿಸಿದ್ದಾರೆ.

ವರ್ಮಿಕಾಂಪೋಸ್ಟ್ ಉತ್ಪಾದಿಸಲು ಡೈರಿ ರೈತರಿಂದ ದನಗಳ ತ್ಯಾಜ್ಯವನ್ನು ಪ್ರತಿ ಕೆ.ಜಿ.ಗೆ ₹ 2 ರಂತೆ ಸಂಗ್ರಹಿಸುವ ಯೋಜನೆ ಇದಾಗಿದೆ. ನಂತರ ಸರ್ಕಾರ ತಯಾರು ಮಾಡುವ ಸಾವಯವ ಗೊಬ್ಬರವನ್ನು ರೈತರಿಗೆ ಕೆಜಿಗೆ ₹ 8 ರಂತೆ ಮಾರಾಟ ಮಾಡಲಾಗುತ್ತದೆ. ರೈತರು ಮತ್ತು ಜಾನುವಾರು ಮಾಲೀಕರ ಮನೆ ಬಾಗಿಲಿಗೆ ಹೋಗಿ ಸೆಗಣಿ ಸಂಗ್ರಹ ಮಾಡಲಾಗುವುದು ಮತ್ತು ಯೋಜನೆಯ ವಿವರಗಳ ಪ್ರಕಾರ ಖರೀದಿಯ 15 ದಿನಗಳಲ್ಲಿ ಪಾವತಿಗಳನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

2018ರಲ್ಲಿ ಅಧಿಕಾರ ವಹಿಸಿಕೊಂಡ ಬಾಗೆಲ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೇಸರಿ ಪಕ್ಷವನ್ನು ಎದುರಿಸಲು ಗೋವನ್ನು ತನ್ನ ರಾಜಕೀಯ ಲಾಭಕ್ಕೆ ಬಳಸಿ ಅದರ ರಕ್ಷಣೆ ಮತ್ತು ಪ್ರಚಾರಕ್ಕಾಗಿ ಯೋಜನೆಗಳನ್ನು ಪ್ರಾರಂಭಿಸಿದೆ. ಇದು ಎಷ್ಟರಮಟ್ಟಿಗೆಂದರೆ ಬಿಜೆಪಿ ಈಗ ರಾಜ್ಯ ಸರ್ಕಾರದ ಹಸು-ಸಗಣಿ ಯೋಜನೆಯನ್ನು ಅಪಹಾಸ್ಯ ಮಾಡಿ ಟೀಕಿಸುತ್ತಿದೆ.

ಮಾಜಿ ಸಚಿವ ಮತ್ತು ಬಿಜೆಪಿಯ ಹಿರಿಯ ಮುಖಂಡ ಅಜಯ್ ಚಂದ್ರಕರ್ ಅವರು ರಾಜ್ಯ ಸರ್ಕಾರವು ಗೋವಿನ ಸಗಣಿಯನ್ನು ರಾಜ್ಯದ ಲಾಂಛನವನ್ನಾಗಿ ಮಾಡಬೇಕು ಎಂದು ವ್ಯಂಗ್ಯವಾಡುವ ಮೂಲಕ ಟೀಕಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ರಾಮನ್ ಸಿಂಗ್ ಈ ಯೋಜನೆಯನ್ನು “ಕಲಗಚ್ಚು” ಎಂದು ಕರೆದಿದ್ದಾರೆ. ರೈತರಿಂದ ಭತ್ತವನ್ನು ಖರೀದಿಸಲು ಸಾಧ್ಯವಾಗದ ಸರ್ಕಾರ ಈಗ ಅವರಿಂದ ಹಸುವಿನ ಸಗಣಿ ಖರೀದಿಸುತ್ತಿದೆ ಎಂದು ಆರೋಪಿಸಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘವು ಈ ಕ್ರಮವನ್ನು ಶ್ಲಾಘಿಸಿದೆ. ದರವನ್ನು ಪ್ರತಿ ಕೆಜಿಗೆ ₹ 1.5 ರಿಂದ ₹ 2 ಕ್ಕೆ ಹೆಚ್ಚಿಸಲು ಸರ್ಕಾರಕ್ಕೆ ಮನವಿ ಮಾಡಿತ್ತು. ಆರ್‌ಎಸ್‌ಎಸ್ ನಿಯೋಗವೊಂದು ಇತ್ತೀಚೆಗೆ ಮುಖ್ಯಮಂತ್ರಿಗೆ ಮೆಚ್ಚುಗೆಯ ಪತ್ರವನ್ನು ಹಸ್ತಾಂತರಿಸಿದ್ದು, ಅದಕ್ಕೆ ಸಂಘಟನೆಯ ಪ್ರಾದೇಶಿಕ ಸಂಚಾಲಕರಾದ ಬಿಸ್ರಾರಾಮ್ ಯಾದವ್ ಅವರು ಸಹಿ ಮಾಡಿದ್ದಾರೆ.

ಸರ್ಕಾರವು ಈ ಹಿಂದೆ ಸೆಗಣಿಗೆ ಕನಿಷ್ಠ ಬೆಂಬಲ ದರವನ್ನು ಪ್ರತಿ ಕೆಜಿಗೆ ₹ 1.5 ಎಂದು ನಿಗದಿಪಡಿಸಲು ನಿರ್ಧರಿಸಿತ್ತು, ಆದರೆ ಆರ್‌ಎಸ್‌ಎಸ್ ಸದಸ್ಯರ ಕೋರಿಕೆಯ ಮೇರೆಗೆ ಬೆಲೆಯನ್ನು 50 ಪೈಸೆ ಹೆಚ್ಚಿಸಲಾಗಿದೆ ಎಂದು ಸರ್ಕಾರದ ಮೂಲವೊಂದು ತಿಳಿಸಿದೆ.

ಒಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರದ ಈ ಯೋಜನೆ ಗೋರಾಜಕೀಯ ಮಾಡುತ್ತಿದ್ದ ಬಿಜೆಪಿ ದೊಡ್ಡ ತಲೆನೋವಾಗಿದೆ. ಅದನ್ನು ಬೆಂಬಲಿಸಲು ಆಗದೇ, ವಿರೋಧಿಸಲು ಆಗದೇ ಒದ್ದಾಡುತ್ತಿದೆ.


ಓದಿ: ಛತ್ತೀಸ್‌ಗಡ ಸಿಎಂ ಬಾಗೆಲ್ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಉಮರ್ ಅಬ್ದುಲ್ಲಾ ಬೆದರಿಕೆ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...