Homeಮುಖಪುಟಛತ್ತೀಸ್‌ಗಡದಲ್ಲಿ ಕಾಂಗ್ರೆಸ್‌ನಿಂದ ಗೋರಾಜಕೀಯ; ಬಿಜೆಪಿಯಿಂದ ತೀವ್ರ ವಿರೋಧ!

ಛತ್ತೀಸ್‌ಗಡದಲ್ಲಿ ಕಾಂಗ್ರೆಸ್‌ನಿಂದ ಗೋರಾಜಕೀಯ; ಬಿಜೆಪಿಯಿಂದ ತೀವ್ರ ವಿರೋಧ!

ರಾಜ್ಯ ಸರ್ಕಾರವು ಗೋವಿನ ಸಗಣಿಯನ್ನು ರಾಜ್ಯದ ಲಾಂಛನವನ್ನಾಗಿ ಮಾಡಲಿ ಎಂದು ಬಿಜೆಪಿಯ ಹಿರಿಯ ನಾಯಕ ವ್ಯಂಗ್ಯವಾಡಿದ್ದಾರೆ.

- Advertisement -
- Advertisement -

ಛತ್ತೀಸ್‌ಗಡದ ಕಾಂಗ್ರೆಸ್ ಸರ್ಕಾರವು ‘ಗೋಧನ್ ನ್ಯಾಯ’ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೊಜನೆಯ ಅಡಿಯಲ್ಲಿ ಸಾವಯವ ಗೊಬ್ಬರ ತಯಾರಿಸಲು ರಾಜ್ಯವು ಜಾನುವಾರು ಮಾಲೀಕರಿಂದ ಗೋವಿನ ತ್ಯಾಜ್ಯವನ್ನು ಖರೀದಿಸುತ್ತಿದೆ.

ಪಕ್ಷದ ಸೈದ್ಧಾಂತಿಕ ಮಾತೃಸಂಘಟನೆ ಆರ್‌ಎಸ್‌ಎಸ್ ಈ ಯೋಜನೆಯನ್ನು ಸ್ವಾಗತಿಸಿದೆ. ಆದರೆ ಕೆಲವು ಬಿಜೆಪಿ ನಾಯಕರು ಅಪಹಾಸ್ಯ ಮಾಡಿದ್ದಾರೆ.

ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ತಮ್ಮ ಅಧಿಕೃತ ನಿವಾಸದಲ್ಲಿ ಜಾನುವಾರು ಮಾಲೀಕರಿಂದ ಗೋವಿನ ಸಗಣಿಯನ್ನು ಸಾಂಕೇತಿಕವಾಗಿ ಸಂಗ್ರಹಿಸುವ ಮೂಲಕ ಯೋಜನೆಯನ್ನು ಉದ್ಘಾಟಿಸಿದ್ದಾರೆ.

ವರ್ಮಿಕಾಂಪೋಸ್ಟ್ ಉತ್ಪಾದಿಸಲು ಡೈರಿ ರೈತರಿಂದ ದನಗಳ ತ್ಯಾಜ್ಯವನ್ನು ಪ್ರತಿ ಕೆ.ಜಿ.ಗೆ ₹ 2 ರಂತೆ ಸಂಗ್ರಹಿಸುವ ಯೋಜನೆ ಇದಾಗಿದೆ. ನಂತರ ಸರ್ಕಾರ ತಯಾರು ಮಾಡುವ ಸಾವಯವ ಗೊಬ್ಬರವನ್ನು ರೈತರಿಗೆ ಕೆಜಿಗೆ ₹ 8 ರಂತೆ ಮಾರಾಟ ಮಾಡಲಾಗುತ್ತದೆ. ರೈತರು ಮತ್ತು ಜಾನುವಾರು ಮಾಲೀಕರ ಮನೆ ಬಾಗಿಲಿಗೆ ಹೋಗಿ ಸೆಗಣಿ ಸಂಗ್ರಹ ಮಾಡಲಾಗುವುದು ಮತ್ತು ಯೋಜನೆಯ ವಿವರಗಳ ಪ್ರಕಾರ ಖರೀದಿಯ 15 ದಿನಗಳಲ್ಲಿ ಪಾವತಿಗಳನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

2018ರಲ್ಲಿ ಅಧಿಕಾರ ವಹಿಸಿಕೊಂಡ ಬಾಗೆಲ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೇಸರಿ ಪಕ್ಷವನ್ನು ಎದುರಿಸಲು ಗೋವನ್ನು ತನ್ನ ರಾಜಕೀಯ ಲಾಭಕ್ಕೆ ಬಳಸಿ ಅದರ ರಕ್ಷಣೆ ಮತ್ತು ಪ್ರಚಾರಕ್ಕಾಗಿ ಯೋಜನೆಗಳನ್ನು ಪ್ರಾರಂಭಿಸಿದೆ. ಇದು ಎಷ್ಟರಮಟ್ಟಿಗೆಂದರೆ ಬಿಜೆಪಿ ಈಗ ರಾಜ್ಯ ಸರ್ಕಾರದ ಹಸು-ಸಗಣಿ ಯೋಜನೆಯನ್ನು ಅಪಹಾಸ್ಯ ಮಾಡಿ ಟೀಕಿಸುತ್ತಿದೆ.

ಮಾಜಿ ಸಚಿವ ಮತ್ತು ಬಿಜೆಪಿಯ ಹಿರಿಯ ಮುಖಂಡ ಅಜಯ್ ಚಂದ್ರಕರ್ ಅವರು ರಾಜ್ಯ ಸರ್ಕಾರವು ಗೋವಿನ ಸಗಣಿಯನ್ನು ರಾಜ್ಯದ ಲಾಂಛನವನ್ನಾಗಿ ಮಾಡಬೇಕು ಎಂದು ವ್ಯಂಗ್ಯವಾಡುವ ಮೂಲಕ ಟೀಕಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ರಾಮನ್ ಸಿಂಗ್ ಈ ಯೋಜನೆಯನ್ನು “ಕಲಗಚ್ಚು” ಎಂದು ಕರೆದಿದ್ದಾರೆ. ರೈತರಿಂದ ಭತ್ತವನ್ನು ಖರೀದಿಸಲು ಸಾಧ್ಯವಾಗದ ಸರ್ಕಾರ ಈಗ ಅವರಿಂದ ಹಸುವಿನ ಸಗಣಿ ಖರೀದಿಸುತ್ತಿದೆ ಎಂದು ಆರೋಪಿಸಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘವು ಈ ಕ್ರಮವನ್ನು ಶ್ಲಾಘಿಸಿದೆ. ದರವನ್ನು ಪ್ರತಿ ಕೆಜಿಗೆ ₹ 1.5 ರಿಂದ ₹ 2 ಕ್ಕೆ ಹೆಚ್ಚಿಸಲು ಸರ್ಕಾರಕ್ಕೆ ಮನವಿ ಮಾಡಿತ್ತು. ಆರ್‌ಎಸ್‌ಎಸ್ ನಿಯೋಗವೊಂದು ಇತ್ತೀಚೆಗೆ ಮುಖ್ಯಮಂತ್ರಿಗೆ ಮೆಚ್ಚುಗೆಯ ಪತ್ರವನ್ನು ಹಸ್ತಾಂತರಿಸಿದ್ದು, ಅದಕ್ಕೆ ಸಂಘಟನೆಯ ಪ್ರಾದೇಶಿಕ ಸಂಚಾಲಕರಾದ ಬಿಸ್ರಾರಾಮ್ ಯಾದವ್ ಅವರು ಸಹಿ ಮಾಡಿದ್ದಾರೆ.

ಸರ್ಕಾರವು ಈ ಹಿಂದೆ ಸೆಗಣಿಗೆ ಕನಿಷ್ಠ ಬೆಂಬಲ ದರವನ್ನು ಪ್ರತಿ ಕೆಜಿಗೆ ₹ 1.5 ಎಂದು ನಿಗದಿಪಡಿಸಲು ನಿರ್ಧರಿಸಿತ್ತು, ಆದರೆ ಆರ್‌ಎಸ್‌ಎಸ್ ಸದಸ್ಯರ ಕೋರಿಕೆಯ ಮೇರೆಗೆ ಬೆಲೆಯನ್ನು 50 ಪೈಸೆ ಹೆಚ್ಚಿಸಲಾಗಿದೆ ಎಂದು ಸರ್ಕಾರದ ಮೂಲವೊಂದು ತಿಳಿಸಿದೆ.

ಒಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರದ ಈ ಯೋಜನೆ ಗೋರಾಜಕೀಯ ಮಾಡುತ್ತಿದ್ದ ಬಿಜೆಪಿ ದೊಡ್ಡ ತಲೆನೋವಾಗಿದೆ. ಅದನ್ನು ಬೆಂಬಲಿಸಲು ಆಗದೇ, ವಿರೋಧಿಸಲು ಆಗದೇ ಒದ್ದಾಡುತ್ತಿದೆ.


ಓದಿ: ಛತ್ತೀಸ್‌ಗಡ ಸಿಎಂ ಬಾಗೆಲ್ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಉಮರ್ ಅಬ್ದುಲ್ಲಾ ಬೆದರಿಕೆ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...