Homeಮುಖಪುಟಛತ್ತೀಸ್‌ಗಡದಲ್ಲಿ ಕಾಂಗ್ರೆಸ್‌ನಿಂದ ಗೋರಾಜಕೀಯ; ಬಿಜೆಪಿಯಿಂದ ತೀವ್ರ ವಿರೋಧ!

ಛತ್ತೀಸ್‌ಗಡದಲ್ಲಿ ಕಾಂಗ್ರೆಸ್‌ನಿಂದ ಗೋರಾಜಕೀಯ; ಬಿಜೆಪಿಯಿಂದ ತೀವ್ರ ವಿರೋಧ!

ರಾಜ್ಯ ಸರ್ಕಾರವು ಗೋವಿನ ಸಗಣಿಯನ್ನು ರಾಜ್ಯದ ಲಾಂಛನವನ್ನಾಗಿ ಮಾಡಲಿ ಎಂದು ಬಿಜೆಪಿಯ ಹಿರಿಯ ನಾಯಕ ವ್ಯಂಗ್ಯವಾಡಿದ್ದಾರೆ.

- Advertisement -
- Advertisement -

ಛತ್ತೀಸ್‌ಗಡದ ಕಾಂಗ್ರೆಸ್ ಸರ್ಕಾರವು ‘ಗೋಧನ್ ನ್ಯಾಯ’ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೊಜನೆಯ ಅಡಿಯಲ್ಲಿ ಸಾವಯವ ಗೊಬ್ಬರ ತಯಾರಿಸಲು ರಾಜ್ಯವು ಜಾನುವಾರು ಮಾಲೀಕರಿಂದ ಗೋವಿನ ತ್ಯಾಜ್ಯವನ್ನು ಖರೀದಿಸುತ್ತಿದೆ.

ಪಕ್ಷದ ಸೈದ್ಧಾಂತಿಕ ಮಾತೃಸಂಘಟನೆ ಆರ್‌ಎಸ್‌ಎಸ್ ಈ ಯೋಜನೆಯನ್ನು ಸ್ವಾಗತಿಸಿದೆ. ಆದರೆ ಕೆಲವು ಬಿಜೆಪಿ ನಾಯಕರು ಅಪಹಾಸ್ಯ ಮಾಡಿದ್ದಾರೆ.

ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ತಮ್ಮ ಅಧಿಕೃತ ನಿವಾಸದಲ್ಲಿ ಜಾನುವಾರು ಮಾಲೀಕರಿಂದ ಗೋವಿನ ಸಗಣಿಯನ್ನು ಸಾಂಕೇತಿಕವಾಗಿ ಸಂಗ್ರಹಿಸುವ ಮೂಲಕ ಯೋಜನೆಯನ್ನು ಉದ್ಘಾಟಿಸಿದ್ದಾರೆ.

ವರ್ಮಿಕಾಂಪೋಸ್ಟ್ ಉತ್ಪಾದಿಸಲು ಡೈರಿ ರೈತರಿಂದ ದನಗಳ ತ್ಯಾಜ್ಯವನ್ನು ಪ್ರತಿ ಕೆ.ಜಿ.ಗೆ ₹ 2 ರಂತೆ ಸಂಗ್ರಹಿಸುವ ಯೋಜನೆ ಇದಾಗಿದೆ. ನಂತರ ಸರ್ಕಾರ ತಯಾರು ಮಾಡುವ ಸಾವಯವ ಗೊಬ್ಬರವನ್ನು ರೈತರಿಗೆ ಕೆಜಿಗೆ ₹ 8 ರಂತೆ ಮಾರಾಟ ಮಾಡಲಾಗುತ್ತದೆ. ರೈತರು ಮತ್ತು ಜಾನುವಾರು ಮಾಲೀಕರ ಮನೆ ಬಾಗಿಲಿಗೆ ಹೋಗಿ ಸೆಗಣಿ ಸಂಗ್ರಹ ಮಾಡಲಾಗುವುದು ಮತ್ತು ಯೋಜನೆಯ ವಿವರಗಳ ಪ್ರಕಾರ ಖರೀದಿಯ 15 ದಿನಗಳಲ್ಲಿ ಪಾವತಿಗಳನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

2018ರಲ್ಲಿ ಅಧಿಕಾರ ವಹಿಸಿಕೊಂಡ ಬಾಗೆಲ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೇಸರಿ ಪಕ್ಷವನ್ನು ಎದುರಿಸಲು ಗೋವನ್ನು ತನ್ನ ರಾಜಕೀಯ ಲಾಭಕ್ಕೆ ಬಳಸಿ ಅದರ ರಕ್ಷಣೆ ಮತ್ತು ಪ್ರಚಾರಕ್ಕಾಗಿ ಯೋಜನೆಗಳನ್ನು ಪ್ರಾರಂಭಿಸಿದೆ. ಇದು ಎಷ್ಟರಮಟ್ಟಿಗೆಂದರೆ ಬಿಜೆಪಿ ಈಗ ರಾಜ್ಯ ಸರ್ಕಾರದ ಹಸು-ಸಗಣಿ ಯೋಜನೆಯನ್ನು ಅಪಹಾಸ್ಯ ಮಾಡಿ ಟೀಕಿಸುತ್ತಿದೆ.

ಮಾಜಿ ಸಚಿವ ಮತ್ತು ಬಿಜೆಪಿಯ ಹಿರಿಯ ಮುಖಂಡ ಅಜಯ್ ಚಂದ್ರಕರ್ ಅವರು ರಾಜ್ಯ ಸರ್ಕಾರವು ಗೋವಿನ ಸಗಣಿಯನ್ನು ರಾಜ್ಯದ ಲಾಂಛನವನ್ನಾಗಿ ಮಾಡಬೇಕು ಎಂದು ವ್ಯಂಗ್ಯವಾಡುವ ಮೂಲಕ ಟೀಕಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ರಾಮನ್ ಸಿಂಗ್ ಈ ಯೋಜನೆಯನ್ನು “ಕಲಗಚ್ಚು” ಎಂದು ಕರೆದಿದ್ದಾರೆ. ರೈತರಿಂದ ಭತ್ತವನ್ನು ಖರೀದಿಸಲು ಸಾಧ್ಯವಾಗದ ಸರ್ಕಾರ ಈಗ ಅವರಿಂದ ಹಸುವಿನ ಸಗಣಿ ಖರೀದಿಸುತ್ತಿದೆ ಎಂದು ಆರೋಪಿಸಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘವು ಈ ಕ್ರಮವನ್ನು ಶ್ಲಾಘಿಸಿದೆ. ದರವನ್ನು ಪ್ರತಿ ಕೆಜಿಗೆ ₹ 1.5 ರಿಂದ ₹ 2 ಕ್ಕೆ ಹೆಚ್ಚಿಸಲು ಸರ್ಕಾರಕ್ಕೆ ಮನವಿ ಮಾಡಿತ್ತು. ಆರ್‌ಎಸ್‌ಎಸ್ ನಿಯೋಗವೊಂದು ಇತ್ತೀಚೆಗೆ ಮುಖ್ಯಮಂತ್ರಿಗೆ ಮೆಚ್ಚುಗೆಯ ಪತ್ರವನ್ನು ಹಸ್ತಾಂತರಿಸಿದ್ದು, ಅದಕ್ಕೆ ಸಂಘಟನೆಯ ಪ್ರಾದೇಶಿಕ ಸಂಚಾಲಕರಾದ ಬಿಸ್ರಾರಾಮ್ ಯಾದವ್ ಅವರು ಸಹಿ ಮಾಡಿದ್ದಾರೆ.

ಸರ್ಕಾರವು ಈ ಹಿಂದೆ ಸೆಗಣಿಗೆ ಕನಿಷ್ಠ ಬೆಂಬಲ ದರವನ್ನು ಪ್ರತಿ ಕೆಜಿಗೆ ₹ 1.5 ಎಂದು ನಿಗದಿಪಡಿಸಲು ನಿರ್ಧರಿಸಿತ್ತು, ಆದರೆ ಆರ್‌ಎಸ್‌ಎಸ್ ಸದಸ್ಯರ ಕೋರಿಕೆಯ ಮೇರೆಗೆ ಬೆಲೆಯನ್ನು 50 ಪೈಸೆ ಹೆಚ್ಚಿಸಲಾಗಿದೆ ಎಂದು ಸರ್ಕಾರದ ಮೂಲವೊಂದು ತಿಳಿಸಿದೆ.

ಒಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರದ ಈ ಯೋಜನೆ ಗೋರಾಜಕೀಯ ಮಾಡುತ್ತಿದ್ದ ಬಿಜೆಪಿ ದೊಡ್ಡ ತಲೆನೋವಾಗಿದೆ. ಅದನ್ನು ಬೆಂಬಲಿಸಲು ಆಗದೇ, ವಿರೋಧಿಸಲು ಆಗದೇ ಒದ್ದಾಡುತ್ತಿದೆ.


ಓದಿ: ಛತ್ತೀಸ್‌ಗಡ ಸಿಎಂ ಬಾಗೆಲ್ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಉಮರ್ ಅಬ್ದುಲ್ಲಾ ಬೆದರಿಕೆ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...