Homeಮುಖಪುಟಛತ್ತೀಸ್‌ಗಡದಲ್ಲಿ ಕಾಂಗ್ರೆಸ್‌ನಿಂದ ಗೋರಾಜಕೀಯ; ಬಿಜೆಪಿಯಿಂದ ತೀವ್ರ ವಿರೋಧ!

ಛತ್ತೀಸ್‌ಗಡದಲ್ಲಿ ಕಾಂಗ್ರೆಸ್‌ನಿಂದ ಗೋರಾಜಕೀಯ; ಬಿಜೆಪಿಯಿಂದ ತೀವ್ರ ವಿರೋಧ!

ರಾಜ್ಯ ಸರ್ಕಾರವು ಗೋವಿನ ಸಗಣಿಯನ್ನು ರಾಜ್ಯದ ಲಾಂಛನವನ್ನಾಗಿ ಮಾಡಲಿ ಎಂದು ಬಿಜೆಪಿಯ ಹಿರಿಯ ನಾಯಕ ವ್ಯಂಗ್ಯವಾಡಿದ್ದಾರೆ.

- Advertisement -
- Advertisement -

ಛತ್ತೀಸ್‌ಗಡದ ಕಾಂಗ್ರೆಸ್ ಸರ್ಕಾರವು ‘ಗೋಧನ್ ನ್ಯಾಯ’ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೊಜನೆಯ ಅಡಿಯಲ್ಲಿ ಸಾವಯವ ಗೊಬ್ಬರ ತಯಾರಿಸಲು ರಾಜ್ಯವು ಜಾನುವಾರು ಮಾಲೀಕರಿಂದ ಗೋವಿನ ತ್ಯಾಜ್ಯವನ್ನು ಖರೀದಿಸುತ್ತಿದೆ.

ಪಕ್ಷದ ಸೈದ್ಧಾಂತಿಕ ಮಾತೃಸಂಘಟನೆ ಆರ್‌ಎಸ್‌ಎಸ್ ಈ ಯೋಜನೆಯನ್ನು ಸ್ವಾಗತಿಸಿದೆ. ಆದರೆ ಕೆಲವು ಬಿಜೆಪಿ ನಾಯಕರು ಅಪಹಾಸ್ಯ ಮಾಡಿದ್ದಾರೆ.

ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ತಮ್ಮ ಅಧಿಕೃತ ನಿವಾಸದಲ್ಲಿ ಜಾನುವಾರು ಮಾಲೀಕರಿಂದ ಗೋವಿನ ಸಗಣಿಯನ್ನು ಸಾಂಕೇತಿಕವಾಗಿ ಸಂಗ್ರಹಿಸುವ ಮೂಲಕ ಯೋಜನೆಯನ್ನು ಉದ್ಘಾಟಿಸಿದ್ದಾರೆ.

ವರ್ಮಿಕಾಂಪೋಸ್ಟ್ ಉತ್ಪಾದಿಸಲು ಡೈರಿ ರೈತರಿಂದ ದನಗಳ ತ್ಯಾಜ್ಯವನ್ನು ಪ್ರತಿ ಕೆ.ಜಿ.ಗೆ ₹ 2 ರಂತೆ ಸಂಗ್ರಹಿಸುವ ಯೋಜನೆ ಇದಾಗಿದೆ. ನಂತರ ಸರ್ಕಾರ ತಯಾರು ಮಾಡುವ ಸಾವಯವ ಗೊಬ್ಬರವನ್ನು ರೈತರಿಗೆ ಕೆಜಿಗೆ ₹ 8 ರಂತೆ ಮಾರಾಟ ಮಾಡಲಾಗುತ್ತದೆ. ರೈತರು ಮತ್ತು ಜಾನುವಾರು ಮಾಲೀಕರ ಮನೆ ಬಾಗಿಲಿಗೆ ಹೋಗಿ ಸೆಗಣಿ ಸಂಗ್ರಹ ಮಾಡಲಾಗುವುದು ಮತ್ತು ಯೋಜನೆಯ ವಿವರಗಳ ಪ್ರಕಾರ ಖರೀದಿಯ 15 ದಿನಗಳಲ್ಲಿ ಪಾವತಿಗಳನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

2018ರಲ್ಲಿ ಅಧಿಕಾರ ವಹಿಸಿಕೊಂಡ ಬಾಗೆಲ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೇಸರಿ ಪಕ್ಷವನ್ನು ಎದುರಿಸಲು ಗೋವನ್ನು ತನ್ನ ರಾಜಕೀಯ ಲಾಭಕ್ಕೆ ಬಳಸಿ ಅದರ ರಕ್ಷಣೆ ಮತ್ತು ಪ್ರಚಾರಕ್ಕಾಗಿ ಯೋಜನೆಗಳನ್ನು ಪ್ರಾರಂಭಿಸಿದೆ. ಇದು ಎಷ್ಟರಮಟ್ಟಿಗೆಂದರೆ ಬಿಜೆಪಿ ಈಗ ರಾಜ್ಯ ಸರ್ಕಾರದ ಹಸು-ಸಗಣಿ ಯೋಜನೆಯನ್ನು ಅಪಹಾಸ್ಯ ಮಾಡಿ ಟೀಕಿಸುತ್ತಿದೆ.

ಮಾಜಿ ಸಚಿವ ಮತ್ತು ಬಿಜೆಪಿಯ ಹಿರಿಯ ಮುಖಂಡ ಅಜಯ್ ಚಂದ್ರಕರ್ ಅವರು ರಾಜ್ಯ ಸರ್ಕಾರವು ಗೋವಿನ ಸಗಣಿಯನ್ನು ರಾಜ್ಯದ ಲಾಂಛನವನ್ನಾಗಿ ಮಾಡಬೇಕು ಎಂದು ವ್ಯಂಗ್ಯವಾಡುವ ಮೂಲಕ ಟೀಕಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ರಾಮನ್ ಸಿಂಗ್ ಈ ಯೋಜನೆಯನ್ನು “ಕಲಗಚ್ಚು” ಎಂದು ಕರೆದಿದ್ದಾರೆ. ರೈತರಿಂದ ಭತ್ತವನ್ನು ಖರೀದಿಸಲು ಸಾಧ್ಯವಾಗದ ಸರ್ಕಾರ ಈಗ ಅವರಿಂದ ಹಸುವಿನ ಸಗಣಿ ಖರೀದಿಸುತ್ತಿದೆ ಎಂದು ಆರೋಪಿಸಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘವು ಈ ಕ್ರಮವನ್ನು ಶ್ಲಾಘಿಸಿದೆ. ದರವನ್ನು ಪ್ರತಿ ಕೆಜಿಗೆ ₹ 1.5 ರಿಂದ ₹ 2 ಕ್ಕೆ ಹೆಚ್ಚಿಸಲು ಸರ್ಕಾರಕ್ಕೆ ಮನವಿ ಮಾಡಿತ್ತು. ಆರ್‌ಎಸ್‌ಎಸ್ ನಿಯೋಗವೊಂದು ಇತ್ತೀಚೆಗೆ ಮುಖ್ಯಮಂತ್ರಿಗೆ ಮೆಚ್ಚುಗೆಯ ಪತ್ರವನ್ನು ಹಸ್ತಾಂತರಿಸಿದ್ದು, ಅದಕ್ಕೆ ಸಂಘಟನೆಯ ಪ್ರಾದೇಶಿಕ ಸಂಚಾಲಕರಾದ ಬಿಸ್ರಾರಾಮ್ ಯಾದವ್ ಅವರು ಸಹಿ ಮಾಡಿದ್ದಾರೆ.

ಸರ್ಕಾರವು ಈ ಹಿಂದೆ ಸೆಗಣಿಗೆ ಕನಿಷ್ಠ ಬೆಂಬಲ ದರವನ್ನು ಪ್ರತಿ ಕೆಜಿಗೆ ₹ 1.5 ಎಂದು ನಿಗದಿಪಡಿಸಲು ನಿರ್ಧರಿಸಿತ್ತು, ಆದರೆ ಆರ್‌ಎಸ್‌ಎಸ್ ಸದಸ್ಯರ ಕೋರಿಕೆಯ ಮೇರೆಗೆ ಬೆಲೆಯನ್ನು 50 ಪೈಸೆ ಹೆಚ್ಚಿಸಲಾಗಿದೆ ಎಂದು ಸರ್ಕಾರದ ಮೂಲವೊಂದು ತಿಳಿಸಿದೆ.

ಒಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರದ ಈ ಯೋಜನೆ ಗೋರಾಜಕೀಯ ಮಾಡುತ್ತಿದ್ದ ಬಿಜೆಪಿ ದೊಡ್ಡ ತಲೆನೋವಾಗಿದೆ. ಅದನ್ನು ಬೆಂಬಲಿಸಲು ಆಗದೇ, ವಿರೋಧಿಸಲು ಆಗದೇ ಒದ್ದಾಡುತ್ತಿದೆ.


ಓದಿ: ಛತ್ತೀಸ್‌ಗಡ ಸಿಎಂ ಬಾಗೆಲ್ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಉಮರ್ ಅಬ್ದುಲ್ಲಾ ಬೆದರಿಕೆ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...