Homeಕರ್ನಾಟಕಒಪಿಎಸ್ ಜಾರಿಗೆ ಛತ್ತೀಸ್‌ಗಡ ಕಾಂಗ್ರೆಸ್‌ ಗೌರ್ಮೆಂಟ್ ನಿರ್ಧಾರ; ರಾಜ್ಯದಲ್ಲಿ ಎಚ್ಚೆತ್ತುಕೊಳ್ಳುವುದೇ ಬಿಜೆಪಿ ಸರ್ಕಾರ?

ಒಪಿಎಸ್ ಜಾರಿಗೆ ಛತ್ತೀಸ್‌ಗಡ ಕಾಂಗ್ರೆಸ್‌ ಗೌರ್ಮೆಂಟ್ ನಿರ್ಧಾರ; ರಾಜ್ಯದಲ್ಲಿ ಎಚ್ಚೆತ್ತುಕೊಳ್ಳುವುದೇ ಬಿಜೆಪಿ ಸರ್ಕಾರ?

- Advertisement -
- Advertisement -

ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ಅಥವಾ ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್‌) ಯಾವುದನ್ನಾದರೂ ಆಯ್ಕೆ ಮಾಡಿಕೊಳ್ಳುವ ಅವಕಾಶ ಛತ್ತೀಸ್‌ಗಡ ಸರ್ಕಾರಿ ನೌಕರರಿಗೆ ದೊರೆತಿದೆ.

ಏಪ್ರಿಲ್ 1, 2022ರ ನಂತರ ಸರ್ಕಾರಿ ಸೇವೆಗೆ ಸೇರಿದವರು ಹಳೆಯ ಪಿಂಚಣಿ ಯೋಜನೆಯ ಭಾಗವಾಗಿರುವುದು ಕಡ್ಡಾಯವಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

“ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ನವೆಂಬರ್ 1, 2004ರ ನಂತರ ಮತ್ತು ಏಪ್ರಿಲ್ 2022ರ ಮೊದಲು ನೇಮಕಗೊಂಡ ನೌಕರರಿಗೆ ಆಯ್ಕೆಯನ್ನು ನೀಡುವ ಮೂಲಕ ಒಪಿಎಸ್ ಅನ್ನು ಪರಿಚಯಿಸಲು ಕ್ಯಾಬಿನೇಟ್ ಸಭೆಯಲ್ಲಿ ನಿರ್ಧರಿಸಲಾಗಿದೆ” ಎಂದು ಸರ್ಕಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಸರ್ಕಾರಿ ನೌಕರರನ್ನು ಏಪ್ರಿಲ್ 1, 2022ರಿಂದ ಛತ್ತೀಸ್‌ಗಢದ ಸಾಮಾನ್ಯ ಭವಿಷ್ಯ ನಿಧಿಯ ಸದಸ್ಯರನ್ನಾಗಿ ಪರಿಗಣಿಸಲಾಗುತ್ತದೆ. ನವೆಂಬರ್ 1, 2004ರಿಂದ ಅಥವಾ ಅದರ ನಂತರ ಮಾರ್ಚ್ 31, 2022ರವರೆಗೆ ಎನ್‌ಪಿಎಸ್ ಖಾತೆಯಲ್ಲಿ ಠೇವಣಿ ಮಾಡಿದ ಉದ್ಯೋಗಿಯ ಕೊಡುಗೆಯನ್ನು ಹಾಗೂ ಅದರಿಂದ ಗಳಿಸಿದ ಲಾಭಾಂಶವನ್ನು ಪರಿಗಣಿಸಲಾಗುತ್ತದೆ. ಎನ್‌ಪಿಎಸ್‌ ನಿಯಮಗಳ ಅಡಿಯಲ್ಲಿ ಸರ್ಕಾರಿ ಉದ್ಯೋಗಿಗೆ ಪಾವತಿಸಲಾಗುವುದು.

ರಾಜ್ಯ ಸರ್ಕಾರದ ಕೊಡುಗೆ ಮತ್ತು ಅದರಿಂದ ಗಳಿಸಿದ ಲಾಭಾಂಶವನ್ನು ಠೇವಣಿ ಮಾಡಿದ ನಂತರವೇ ನೌಕರರು ಹಳೆಯ ಪಿಂಚಣಿ ಯೋಜನೆಗೆ ಅರ್ಹರಾಗುತ್ತಾರೆ.

ಸರ್ಕಾರಿ ನೌಕರರು ಎನ್‌ಪಿಎಸ್ ಅಡಿಯಲ್ಲಿ ಮುಂದುವರಿಯುವ ಅಥವಾ ಹಳೆಯ ಪಿಂಚಣಿ ಯೋಜನೆಯ ಪ್ರಯೋಜನವನ್ನು ನೋಟರೈಸ್ ಮಾಡಿದ ಅಫಿಡವಿಟ್‌ನಲ್ಲಿ ಪಡೆಯುವ ಆಯ್ಕೆಯನ್ನು ಆರಿಸಬೇಕಾಗುತ್ತದೆ. ಈ ಆಯ್ಕೆಯು ಅಂತಿಮವಾಗಿದ್ದು ಬದಲಾಯಿಸಲು ಸಾಧ್ಯವಿಲ್ಲ.

ಈ ವರ್ಷದ ಆರಂಭದಲ್ಲಿ ನಡೆದ ಅಸೆಂಬ್ಲಿಯ ಬಜೆಟ್ ಅಧಿವೇಶನದಲ್ಲಿ ಬಘೆಲ್ ಅವರು, “ತಮ್ಮ ಸರ್ಕಾರವು ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಲಿದೆ” ಎಂದು ಘೋಷಿಸಿದ್ದರು.

ರಾಜ್ಯದಲ್ಲಿ ಹೋರಾಟಕ್ಕೆ ಗೆಲುವು ದೊರಕುವುದೇ?

ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಒಪಿಎಸ್ ಜಾರಿಗೆ ಕ್ರಮ ಜರುಗಿಸಲಾಗುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಚುನಾವಣೆಗೂ ಮುನ್ನ ‘ವೋಟ್ ಫಾರ್‌ ಒಪಿಎಸ್’ ಅಭಿಯಾನವನ್ನು ಸರ್ಕಾರಿ ನೌಕರರು ನಡೆಸಿದ್ದರು. ಅಲ್ಲಿ ಕಾಂಗ್ರೆಸ್ ಗೆದ್ದಿದೆ. ಮುಂದಿನ ದಿನಗಳಲ್ಲಿ ಛತ್ತೀಸ್‌ಗಡದಂತೆಯೇ ಹಿಮಾಚಲ ಪ್ರದೇಶದಲ್ಲೂ ಒಪಿಎಸ್ ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ಸರ್ಕಾರಿ ನೌಕರರು ಭಾವಿಸಿದ್ದಾರೆ.

“ವೋಟ್ ಫಾರ್‌ ಒಪಿಎಸ್ ಮೂಲಕ ಜಾಗೃತಿ ಮೂಡಿಸುತ್ತಿದ್ದೇವೆ. ಒಪಿಎಸ್ ಜಾರಿಗೊಳಿಸಿದವರಿಗೆ ನೌಕರರು ಮತ ನೀಡಲಿದ್ದಾರೆ. ಹೀಗಾಗಿ ಕರ್ನಾಟಕದಲ್ಲೂ ಒಪಿಎಸ್ ಜಾರಿಗೆ ತರಲು ಸರ್ಕಾರ ಮುಂದಾಗಬೇಕು” ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ ಒತ್ತಾಯಿಸುತ್ತಿದೆ.

ಎನ್‌ಪಿಎಸ್ ಆತಂಕಕಾರಿ ಏಕೆ?

’ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ’ದ ವತಿಯಿಂದ 2016ರಲ್ಲಿ ಬಿಡುಗಡೆ ಮಾಡಲಾಗಿರುವ ’ನಿಶ್ಚಿತ ಪಿಂಚಣಿ ನಮ್ಮ ಹಕ್ಕು’ ಕೈಪಿಡಿಯಲ್ಲಿ ದಿವಂಗತ ಎಸ್.ಪ್ರಸನ್ನಕುಮಾರ್ ಅವರು ಎನ್‌ಪಿಎಸ್‌ನ ಅವಾಂತರಗಳ ಕುರಿತು ವಿವರಿಸಿದ್ದಾರೆ. ಎನ್‌ಪಿಎಸ್ ತಳಹದಿಯಾಗಿರುವ ಮೂರು ಅಂಶಗಳ ಕುರಿತು ಬೆಳಕು ಚೆಲ್ಲಿ ಸರ್ಕಾರಿ ನೌಕರರಲ್ಲಿ ಜಾಗೃತಿ ಮೂಡಿಸಿದ್ದಾರೆ.

ಒಂದನೇ ಅಂಶ- ಪಿಂಚಣಿ ವಿಚಾರದಲ್ಲಿ ನಿಗದಿತ ಫಲ ಅಥವಾ ಲಾಭದ ಬದಲು ’ನಿಗದಿತ ಕೊಡುಗೆ’ ವ್ಯವಸ್ಥೆ: ನಿಗದಿತ ಫಲವೆಂದರೆ ಈಗಾಗಲೇ ಇರುವ ಪಿಂಚಣಿ ವ್ಯವಸ್ಥೆಯಾಗಿದೆ. ಒಂದು ನಿರ್ದಿಷ್ಟ ಕಾಲದವರೆಗೆ ಸೇವೆ ಸಲ್ಲಿಸಿ ನಿವೃತ್ತಿಯಾದಾಗ, ಸಲ್ಲಿಸಿದ ಸೇವೆಯ ವರ್ಷಗಳ ಆಧಾರದಲ್ಲಿ ಪಿಂಚಣಿ ನಿಗದಿಪಡಿಸಲಾಗುತ್ತಿತ್ತು. ಯಾವುದೇ ನೌಕರರಿಗೆ ನಿವೃತ್ತಿ ವೇತನ ಎಷ್ಟು ಸಿಗಬೇಕೆಂಬುದು ಸೇವೆಗೆ ಸೇರಿದ್ದಾಗಲೇ ಸೇವಾ ನಿಯಮಗಳ ಪ್ರಕಾರ ನಿಗದಿಯಾಗುತ್ತದೆ. ಆದರೆ ಎನ್‌ಪಿಎಸ್ ಮೂಲಕ ಅದನ್ನೀಗ ’ನಿಗದಿತ ಕೊಡುಗೆ’ ಪಿಂಚಣಿ ವಿಧಾನವನ್ನಾಗಿ ಬದಲಿಸಲಾಗಿದೆ. ಪ್ರತಿ ನೌಕರನ ಸಂಬಳದ ನಿಗದಿತ ಮೊತ್ತದಲ್ಲಿ ಪ್ರತಿ ತಿಂಗಳು ಶೇ. 10ರಷ್ಟು ಕಡಿತ ಮಾಡಿ ’ಪಿಂಚಣಿ ನಿಧಿ’ಗೆ ಜಮಾ ಮಾಡಲಾಗುತ್ತದೆ. ಪಿಂಚಣಿ ನಿಧಿಗೆ ನೌಕರನು ನಿರ್ದಿಷ್ಟ ಕೊಡುಗೆ ನೀಡಬೇಕಾಗುತ್ತದೆ. ಆದರೆ ಪಿಂಚಣಿ ಎಷ್ಟು ದೊರೆಯುತ್ತದೆ, ಎಷ್ಟು ವರ್ಷದ ಸೇವೆಗೆ ಎಷ್ಟು ನೀಡಲಾಗುತ್ತದೆ? ಎಂಬಿತ್ಯಾದಿ ಪ್ರಶ್ನೆಗಳಿಗೆ ನಿಖರ ಉತ್ತರವಿಲ್ಲ. ಅಂದರೆ ನೌಕರರ ಪಿಂಚಣಿ ಕಡಿತ ಮಾಡುವ ಜವಾಬ್ದಾರಿ ಹೊತ್ತ ಸಂಸ್ಥೆಗಳು ತಮ್ಮ ಲಾಭ ನಷ್ಟಕ್ಕೆ ಅನುಗುಣವಾಗಿ ಪಿಂಚಣಿ ಮೊತ್ತವನ್ನು ನಿಗದಿಪಡಿಸುತ್ತವೆ.

ಎರಡನೇ ಅಂಶ- ಸಾಮಾಜಿಕ ಸಹಾಯದ ಬದಲಾಗಿ ವಿಮಾ ಪದ್ಧತಿ: ಸಾಮಾಜಿಕ ಸಹಾಯವೆಂಬುದು ಸರ್ಕಾರ ಜವಾಬ್ದಾರಿಯಾಗಿತ್ತು. ಆದರೆ ಈಗ ನೌಕರರೇ ತಮ್ಮ ಉಳಿತಾಯದ ಮೂಲಕ ಭವಿಷ್ಯವನ್ನು ಭದ್ರತೆ ಮಾಡಿಕೊಳ್ಳಬೇಕು ಎಂಬುದನ್ನು ’ವಿಮೆ’ಯ ಪ್ರಸ್ತಾಪ ಹೇಳುತ್ತದೆ. ಸಮಾಜದ ಎಲ್ಲ ಜನರ ಕೊಡುಗೆಯಿಂದಿರುವ ಸರ್ಕಾರದ ಖಜಾನೆಯಿಂದ ಶ್ರೀಮಂತ ಬಂಡವಾಳಗಾರರಿಗೆ ರಿಯಾಯಿತಿಗಳನ್ನು ನೀಡಲು ಖರ್ಚು ಮಾಡಬಹುದೇ ಹೊರತು ಜನಸಾಮಾನ್ಯರಿಗೆ, ನೌಕರರಿಗೆ ಸರ್ಕಾರದ ಖಜಾನೆಯಿಂದ ಏನು ಸಹಾಯ ಮಾಡಬಾರದು ಎಂಬುದು ಈ ಅಂಶದ ತಿರುಳಾಗಿದೆ.

ಮೂರನೇ ಅಂಶ- ’ಹೂಡಿಕೆ’ಗಳನ್ನು ಸಂಸ್ಥೆಗಳಿಗೆ ’ಸಾಲ’ದ ಸ್ವರೂಪದ ಬದಲಾಗಿ ಷೇರು ಬಂಡವಾಳ ಪದ್ಧತಿಯಲ್ಲಿ ನೀಡುವುದು: ಇಲ್ಲಿ ನೌಕರರ ಉಳಿತಾಯದ ಹಣವನ್ನೇ ಪೂರ್ಣ ವಂಚಿಸುವ ಹುನ್ನಾರವಿದೆ. ನೌಕರರ ಉಳಿತಾಯವನ್ನು ಸಾಲದ ರೂಪದಲ್ಲಿ ಹೂಡಿಕೆ ಮಾಡುವುದಕ್ಕೂ ಷೇರುಗಳಾಗಿ ಬಳಸುವುದಕ್ಕೂ ವ್ಯತ್ಯಾಸವಿದೆ. ಸಾಲವೆಂದು ಪರಿಗಣಿಸಿದಾಗ ಬಡ್ಡಿಯನ್ನು ನೀಡಲಾಗುತ್ತದೆ. ಅದಕ್ಕೆ ಬದಲಾಗಿ ಕಂಪನಿಯ ಷೇರು ಬಂಡವಾಳವಾಗಿ ಪರಿಗಣಿಸಿದರೆ ಕಂಪನಿಗೆ ಲಾಭ ಬಂದರೆ ಡಿವಿಡೆಂಡ್ ನೀಡಲಾಗುತ್ತದೆ. ನಷ್ಟವಾದರೆ ಇಡೀ ಉಳಿತಾಯವೇ ಇಲ್ಲವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...