Homeಕರ್ನಾಟಕಒಪಿಎಸ್ ಜಾರಿಗೆ ಛತ್ತೀಸ್‌ಗಡ ಕಾಂಗ್ರೆಸ್‌ ಗೌರ್ಮೆಂಟ್ ನಿರ್ಧಾರ; ರಾಜ್ಯದಲ್ಲಿ ಎಚ್ಚೆತ್ತುಕೊಳ್ಳುವುದೇ ಬಿಜೆಪಿ ಸರ್ಕಾರ?

ಒಪಿಎಸ್ ಜಾರಿಗೆ ಛತ್ತೀಸ್‌ಗಡ ಕಾಂಗ್ರೆಸ್‌ ಗೌರ್ಮೆಂಟ್ ನಿರ್ಧಾರ; ರಾಜ್ಯದಲ್ಲಿ ಎಚ್ಚೆತ್ತುಕೊಳ್ಳುವುದೇ ಬಿಜೆಪಿ ಸರ್ಕಾರ?

- Advertisement -
- Advertisement -

ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ಅಥವಾ ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್‌) ಯಾವುದನ್ನಾದರೂ ಆಯ್ಕೆ ಮಾಡಿಕೊಳ್ಳುವ ಅವಕಾಶ ಛತ್ತೀಸ್‌ಗಡ ಸರ್ಕಾರಿ ನೌಕರರಿಗೆ ದೊರೆತಿದೆ.

ಏಪ್ರಿಲ್ 1, 2022ರ ನಂತರ ಸರ್ಕಾರಿ ಸೇವೆಗೆ ಸೇರಿದವರು ಹಳೆಯ ಪಿಂಚಣಿ ಯೋಜನೆಯ ಭಾಗವಾಗಿರುವುದು ಕಡ್ಡಾಯವಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

“ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ನವೆಂಬರ್ 1, 2004ರ ನಂತರ ಮತ್ತು ಏಪ್ರಿಲ್ 2022ರ ಮೊದಲು ನೇಮಕಗೊಂಡ ನೌಕರರಿಗೆ ಆಯ್ಕೆಯನ್ನು ನೀಡುವ ಮೂಲಕ ಒಪಿಎಸ್ ಅನ್ನು ಪರಿಚಯಿಸಲು ಕ್ಯಾಬಿನೇಟ್ ಸಭೆಯಲ್ಲಿ ನಿರ್ಧರಿಸಲಾಗಿದೆ” ಎಂದು ಸರ್ಕಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಸರ್ಕಾರಿ ನೌಕರರನ್ನು ಏಪ್ರಿಲ್ 1, 2022ರಿಂದ ಛತ್ತೀಸ್‌ಗಢದ ಸಾಮಾನ್ಯ ಭವಿಷ್ಯ ನಿಧಿಯ ಸದಸ್ಯರನ್ನಾಗಿ ಪರಿಗಣಿಸಲಾಗುತ್ತದೆ. ನವೆಂಬರ್ 1, 2004ರಿಂದ ಅಥವಾ ಅದರ ನಂತರ ಮಾರ್ಚ್ 31, 2022ರವರೆಗೆ ಎನ್‌ಪಿಎಸ್ ಖಾತೆಯಲ್ಲಿ ಠೇವಣಿ ಮಾಡಿದ ಉದ್ಯೋಗಿಯ ಕೊಡುಗೆಯನ್ನು ಹಾಗೂ ಅದರಿಂದ ಗಳಿಸಿದ ಲಾಭಾಂಶವನ್ನು ಪರಿಗಣಿಸಲಾಗುತ್ತದೆ. ಎನ್‌ಪಿಎಸ್‌ ನಿಯಮಗಳ ಅಡಿಯಲ್ಲಿ ಸರ್ಕಾರಿ ಉದ್ಯೋಗಿಗೆ ಪಾವತಿಸಲಾಗುವುದು.

ರಾಜ್ಯ ಸರ್ಕಾರದ ಕೊಡುಗೆ ಮತ್ತು ಅದರಿಂದ ಗಳಿಸಿದ ಲಾಭಾಂಶವನ್ನು ಠೇವಣಿ ಮಾಡಿದ ನಂತರವೇ ನೌಕರರು ಹಳೆಯ ಪಿಂಚಣಿ ಯೋಜನೆಗೆ ಅರ್ಹರಾಗುತ್ತಾರೆ.

ಸರ್ಕಾರಿ ನೌಕರರು ಎನ್‌ಪಿಎಸ್ ಅಡಿಯಲ್ಲಿ ಮುಂದುವರಿಯುವ ಅಥವಾ ಹಳೆಯ ಪಿಂಚಣಿ ಯೋಜನೆಯ ಪ್ರಯೋಜನವನ್ನು ನೋಟರೈಸ್ ಮಾಡಿದ ಅಫಿಡವಿಟ್‌ನಲ್ಲಿ ಪಡೆಯುವ ಆಯ್ಕೆಯನ್ನು ಆರಿಸಬೇಕಾಗುತ್ತದೆ. ಈ ಆಯ್ಕೆಯು ಅಂತಿಮವಾಗಿದ್ದು ಬದಲಾಯಿಸಲು ಸಾಧ್ಯವಿಲ್ಲ.

ಈ ವರ್ಷದ ಆರಂಭದಲ್ಲಿ ನಡೆದ ಅಸೆಂಬ್ಲಿಯ ಬಜೆಟ್ ಅಧಿವೇಶನದಲ್ಲಿ ಬಘೆಲ್ ಅವರು, “ತಮ್ಮ ಸರ್ಕಾರವು ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಲಿದೆ” ಎಂದು ಘೋಷಿಸಿದ್ದರು.

ರಾಜ್ಯದಲ್ಲಿ ಹೋರಾಟಕ್ಕೆ ಗೆಲುವು ದೊರಕುವುದೇ?

ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಒಪಿಎಸ್ ಜಾರಿಗೆ ಕ್ರಮ ಜರುಗಿಸಲಾಗುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಚುನಾವಣೆಗೂ ಮುನ್ನ ‘ವೋಟ್ ಫಾರ್‌ ಒಪಿಎಸ್’ ಅಭಿಯಾನವನ್ನು ಸರ್ಕಾರಿ ನೌಕರರು ನಡೆಸಿದ್ದರು. ಅಲ್ಲಿ ಕಾಂಗ್ರೆಸ್ ಗೆದ್ದಿದೆ. ಮುಂದಿನ ದಿನಗಳಲ್ಲಿ ಛತ್ತೀಸ್‌ಗಡದಂತೆಯೇ ಹಿಮಾಚಲ ಪ್ರದೇಶದಲ್ಲೂ ಒಪಿಎಸ್ ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ಸರ್ಕಾರಿ ನೌಕರರು ಭಾವಿಸಿದ್ದಾರೆ.

“ವೋಟ್ ಫಾರ್‌ ಒಪಿಎಸ್ ಮೂಲಕ ಜಾಗೃತಿ ಮೂಡಿಸುತ್ತಿದ್ದೇವೆ. ಒಪಿಎಸ್ ಜಾರಿಗೊಳಿಸಿದವರಿಗೆ ನೌಕರರು ಮತ ನೀಡಲಿದ್ದಾರೆ. ಹೀಗಾಗಿ ಕರ್ನಾಟಕದಲ್ಲೂ ಒಪಿಎಸ್ ಜಾರಿಗೆ ತರಲು ಸರ್ಕಾರ ಮುಂದಾಗಬೇಕು” ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ ಒತ್ತಾಯಿಸುತ್ತಿದೆ.

ಎನ್‌ಪಿಎಸ್ ಆತಂಕಕಾರಿ ಏಕೆ?

’ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ’ದ ವತಿಯಿಂದ 2016ರಲ್ಲಿ ಬಿಡುಗಡೆ ಮಾಡಲಾಗಿರುವ ’ನಿಶ್ಚಿತ ಪಿಂಚಣಿ ನಮ್ಮ ಹಕ್ಕು’ ಕೈಪಿಡಿಯಲ್ಲಿ ದಿವಂಗತ ಎಸ್.ಪ್ರಸನ್ನಕುಮಾರ್ ಅವರು ಎನ್‌ಪಿಎಸ್‌ನ ಅವಾಂತರಗಳ ಕುರಿತು ವಿವರಿಸಿದ್ದಾರೆ. ಎನ್‌ಪಿಎಸ್ ತಳಹದಿಯಾಗಿರುವ ಮೂರು ಅಂಶಗಳ ಕುರಿತು ಬೆಳಕು ಚೆಲ್ಲಿ ಸರ್ಕಾರಿ ನೌಕರರಲ್ಲಿ ಜಾಗೃತಿ ಮೂಡಿಸಿದ್ದಾರೆ.

ಒಂದನೇ ಅಂಶ- ಪಿಂಚಣಿ ವಿಚಾರದಲ್ಲಿ ನಿಗದಿತ ಫಲ ಅಥವಾ ಲಾಭದ ಬದಲು ’ನಿಗದಿತ ಕೊಡುಗೆ’ ವ್ಯವಸ್ಥೆ: ನಿಗದಿತ ಫಲವೆಂದರೆ ಈಗಾಗಲೇ ಇರುವ ಪಿಂಚಣಿ ವ್ಯವಸ್ಥೆಯಾಗಿದೆ. ಒಂದು ನಿರ್ದಿಷ್ಟ ಕಾಲದವರೆಗೆ ಸೇವೆ ಸಲ್ಲಿಸಿ ನಿವೃತ್ತಿಯಾದಾಗ, ಸಲ್ಲಿಸಿದ ಸೇವೆಯ ವರ್ಷಗಳ ಆಧಾರದಲ್ಲಿ ಪಿಂಚಣಿ ನಿಗದಿಪಡಿಸಲಾಗುತ್ತಿತ್ತು. ಯಾವುದೇ ನೌಕರರಿಗೆ ನಿವೃತ್ತಿ ವೇತನ ಎಷ್ಟು ಸಿಗಬೇಕೆಂಬುದು ಸೇವೆಗೆ ಸೇರಿದ್ದಾಗಲೇ ಸೇವಾ ನಿಯಮಗಳ ಪ್ರಕಾರ ನಿಗದಿಯಾಗುತ್ತದೆ. ಆದರೆ ಎನ್‌ಪಿಎಸ್ ಮೂಲಕ ಅದನ್ನೀಗ ’ನಿಗದಿತ ಕೊಡುಗೆ’ ಪಿಂಚಣಿ ವಿಧಾನವನ್ನಾಗಿ ಬದಲಿಸಲಾಗಿದೆ. ಪ್ರತಿ ನೌಕರನ ಸಂಬಳದ ನಿಗದಿತ ಮೊತ್ತದಲ್ಲಿ ಪ್ರತಿ ತಿಂಗಳು ಶೇ. 10ರಷ್ಟು ಕಡಿತ ಮಾಡಿ ’ಪಿಂಚಣಿ ನಿಧಿ’ಗೆ ಜಮಾ ಮಾಡಲಾಗುತ್ತದೆ. ಪಿಂಚಣಿ ನಿಧಿಗೆ ನೌಕರನು ನಿರ್ದಿಷ್ಟ ಕೊಡುಗೆ ನೀಡಬೇಕಾಗುತ್ತದೆ. ಆದರೆ ಪಿಂಚಣಿ ಎಷ್ಟು ದೊರೆಯುತ್ತದೆ, ಎಷ್ಟು ವರ್ಷದ ಸೇವೆಗೆ ಎಷ್ಟು ನೀಡಲಾಗುತ್ತದೆ? ಎಂಬಿತ್ಯಾದಿ ಪ್ರಶ್ನೆಗಳಿಗೆ ನಿಖರ ಉತ್ತರವಿಲ್ಲ. ಅಂದರೆ ನೌಕರರ ಪಿಂಚಣಿ ಕಡಿತ ಮಾಡುವ ಜವಾಬ್ದಾರಿ ಹೊತ್ತ ಸಂಸ್ಥೆಗಳು ತಮ್ಮ ಲಾಭ ನಷ್ಟಕ್ಕೆ ಅನುಗುಣವಾಗಿ ಪಿಂಚಣಿ ಮೊತ್ತವನ್ನು ನಿಗದಿಪಡಿಸುತ್ತವೆ.

ಎರಡನೇ ಅಂಶ- ಸಾಮಾಜಿಕ ಸಹಾಯದ ಬದಲಾಗಿ ವಿಮಾ ಪದ್ಧತಿ: ಸಾಮಾಜಿಕ ಸಹಾಯವೆಂಬುದು ಸರ್ಕಾರ ಜವಾಬ್ದಾರಿಯಾಗಿತ್ತು. ಆದರೆ ಈಗ ನೌಕರರೇ ತಮ್ಮ ಉಳಿತಾಯದ ಮೂಲಕ ಭವಿಷ್ಯವನ್ನು ಭದ್ರತೆ ಮಾಡಿಕೊಳ್ಳಬೇಕು ಎಂಬುದನ್ನು ’ವಿಮೆ’ಯ ಪ್ರಸ್ತಾಪ ಹೇಳುತ್ತದೆ. ಸಮಾಜದ ಎಲ್ಲ ಜನರ ಕೊಡುಗೆಯಿಂದಿರುವ ಸರ್ಕಾರದ ಖಜಾನೆಯಿಂದ ಶ್ರೀಮಂತ ಬಂಡವಾಳಗಾರರಿಗೆ ರಿಯಾಯಿತಿಗಳನ್ನು ನೀಡಲು ಖರ್ಚು ಮಾಡಬಹುದೇ ಹೊರತು ಜನಸಾಮಾನ್ಯರಿಗೆ, ನೌಕರರಿಗೆ ಸರ್ಕಾರದ ಖಜಾನೆಯಿಂದ ಏನು ಸಹಾಯ ಮಾಡಬಾರದು ಎಂಬುದು ಈ ಅಂಶದ ತಿರುಳಾಗಿದೆ.

ಮೂರನೇ ಅಂಶ- ’ಹೂಡಿಕೆ’ಗಳನ್ನು ಸಂಸ್ಥೆಗಳಿಗೆ ’ಸಾಲ’ದ ಸ್ವರೂಪದ ಬದಲಾಗಿ ಷೇರು ಬಂಡವಾಳ ಪದ್ಧತಿಯಲ್ಲಿ ನೀಡುವುದು: ಇಲ್ಲಿ ನೌಕರರ ಉಳಿತಾಯದ ಹಣವನ್ನೇ ಪೂರ್ಣ ವಂಚಿಸುವ ಹುನ್ನಾರವಿದೆ. ನೌಕರರ ಉಳಿತಾಯವನ್ನು ಸಾಲದ ರೂಪದಲ್ಲಿ ಹೂಡಿಕೆ ಮಾಡುವುದಕ್ಕೂ ಷೇರುಗಳಾಗಿ ಬಳಸುವುದಕ್ಕೂ ವ್ಯತ್ಯಾಸವಿದೆ. ಸಾಲವೆಂದು ಪರಿಗಣಿಸಿದಾಗ ಬಡ್ಡಿಯನ್ನು ನೀಡಲಾಗುತ್ತದೆ. ಅದಕ್ಕೆ ಬದಲಾಗಿ ಕಂಪನಿಯ ಷೇರು ಬಂಡವಾಳವಾಗಿ ಪರಿಗಣಿಸಿದರೆ ಕಂಪನಿಗೆ ಲಾಭ ಬಂದರೆ ಡಿವಿಡೆಂಡ್ ನೀಡಲಾಗುತ್ತದೆ. ನಷ್ಟವಾದರೆ ಇಡೀ ಉಳಿತಾಯವೇ ಇಲ್ಲವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...