Homeಕರ್ನಾಟಕಒಪಿಎಸ್ ಜಾರಿಗೆ ಛತ್ತೀಸ್‌ಗಡ ಕಾಂಗ್ರೆಸ್‌ ಗೌರ್ಮೆಂಟ್ ನಿರ್ಧಾರ; ರಾಜ್ಯದಲ್ಲಿ ಎಚ್ಚೆತ್ತುಕೊಳ್ಳುವುದೇ ಬಿಜೆಪಿ ಸರ್ಕಾರ?

ಒಪಿಎಸ್ ಜಾರಿಗೆ ಛತ್ತೀಸ್‌ಗಡ ಕಾಂಗ್ರೆಸ್‌ ಗೌರ್ಮೆಂಟ್ ನಿರ್ಧಾರ; ರಾಜ್ಯದಲ್ಲಿ ಎಚ್ಚೆತ್ತುಕೊಳ್ಳುವುದೇ ಬಿಜೆಪಿ ಸರ್ಕಾರ?

- Advertisement -
- Advertisement -

ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ಅಥವಾ ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್‌) ಯಾವುದನ್ನಾದರೂ ಆಯ್ಕೆ ಮಾಡಿಕೊಳ್ಳುವ ಅವಕಾಶ ಛತ್ತೀಸ್‌ಗಡ ಸರ್ಕಾರಿ ನೌಕರರಿಗೆ ದೊರೆತಿದೆ.

ಏಪ್ರಿಲ್ 1, 2022ರ ನಂತರ ಸರ್ಕಾರಿ ಸೇವೆಗೆ ಸೇರಿದವರು ಹಳೆಯ ಪಿಂಚಣಿ ಯೋಜನೆಯ ಭಾಗವಾಗಿರುವುದು ಕಡ್ಡಾಯವಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

“ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ನವೆಂಬರ್ 1, 2004ರ ನಂತರ ಮತ್ತು ಏಪ್ರಿಲ್ 2022ರ ಮೊದಲು ನೇಮಕಗೊಂಡ ನೌಕರರಿಗೆ ಆಯ್ಕೆಯನ್ನು ನೀಡುವ ಮೂಲಕ ಒಪಿಎಸ್ ಅನ್ನು ಪರಿಚಯಿಸಲು ಕ್ಯಾಬಿನೇಟ್ ಸಭೆಯಲ್ಲಿ ನಿರ್ಧರಿಸಲಾಗಿದೆ” ಎಂದು ಸರ್ಕಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಸರ್ಕಾರಿ ನೌಕರರನ್ನು ಏಪ್ರಿಲ್ 1, 2022ರಿಂದ ಛತ್ತೀಸ್‌ಗಢದ ಸಾಮಾನ್ಯ ಭವಿಷ್ಯ ನಿಧಿಯ ಸದಸ್ಯರನ್ನಾಗಿ ಪರಿಗಣಿಸಲಾಗುತ್ತದೆ. ನವೆಂಬರ್ 1, 2004ರಿಂದ ಅಥವಾ ಅದರ ನಂತರ ಮಾರ್ಚ್ 31, 2022ರವರೆಗೆ ಎನ್‌ಪಿಎಸ್ ಖಾತೆಯಲ್ಲಿ ಠೇವಣಿ ಮಾಡಿದ ಉದ್ಯೋಗಿಯ ಕೊಡುಗೆಯನ್ನು ಹಾಗೂ ಅದರಿಂದ ಗಳಿಸಿದ ಲಾಭಾಂಶವನ್ನು ಪರಿಗಣಿಸಲಾಗುತ್ತದೆ. ಎನ್‌ಪಿಎಸ್‌ ನಿಯಮಗಳ ಅಡಿಯಲ್ಲಿ ಸರ್ಕಾರಿ ಉದ್ಯೋಗಿಗೆ ಪಾವತಿಸಲಾಗುವುದು.

ರಾಜ್ಯ ಸರ್ಕಾರದ ಕೊಡುಗೆ ಮತ್ತು ಅದರಿಂದ ಗಳಿಸಿದ ಲಾಭಾಂಶವನ್ನು ಠೇವಣಿ ಮಾಡಿದ ನಂತರವೇ ನೌಕರರು ಹಳೆಯ ಪಿಂಚಣಿ ಯೋಜನೆಗೆ ಅರ್ಹರಾಗುತ್ತಾರೆ.

ಸರ್ಕಾರಿ ನೌಕರರು ಎನ್‌ಪಿಎಸ್ ಅಡಿಯಲ್ಲಿ ಮುಂದುವರಿಯುವ ಅಥವಾ ಹಳೆಯ ಪಿಂಚಣಿ ಯೋಜನೆಯ ಪ್ರಯೋಜನವನ್ನು ನೋಟರೈಸ್ ಮಾಡಿದ ಅಫಿಡವಿಟ್‌ನಲ್ಲಿ ಪಡೆಯುವ ಆಯ್ಕೆಯನ್ನು ಆರಿಸಬೇಕಾಗುತ್ತದೆ. ಈ ಆಯ್ಕೆಯು ಅಂತಿಮವಾಗಿದ್ದು ಬದಲಾಯಿಸಲು ಸಾಧ್ಯವಿಲ್ಲ.

ಈ ವರ್ಷದ ಆರಂಭದಲ್ಲಿ ನಡೆದ ಅಸೆಂಬ್ಲಿಯ ಬಜೆಟ್ ಅಧಿವೇಶನದಲ್ಲಿ ಬಘೆಲ್ ಅವರು, “ತಮ್ಮ ಸರ್ಕಾರವು ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಲಿದೆ” ಎಂದು ಘೋಷಿಸಿದ್ದರು.

ರಾಜ್ಯದಲ್ಲಿ ಹೋರಾಟಕ್ಕೆ ಗೆಲುವು ದೊರಕುವುದೇ?

ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಒಪಿಎಸ್ ಜಾರಿಗೆ ಕ್ರಮ ಜರುಗಿಸಲಾಗುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಚುನಾವಣೆಗೂ ಮುನ್ನ ‘ವೋಟ್ ಫಾರ್‌ ಒಪಿಎಸ್’ ಅಭಿಯಾನವನ್ನು ಸರ್ಕಾರಿ ನೌಕರರು ನಡೆಸಿದ್ದರು. ಅಲ್ಲಿ ಕಾಂಗ್ರೆಸ್ ಗೆದ್ದಿದೆ. ಮುಂದಿನ ದಿನಗಳಲ್ಲಿ ಛತ್ತೀಸ್‌ಗಡದಂತೆಯೇ ಹಿಮಾಚಲ ಪ್ರದೇಶದಲ್ಲೂ ಒಪಿಎಸ್ ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ಸರ್ಕಾರಿ ನೌಕರರು ಭಾವಿಸಿದ್ದಾರೆ.

“ವೋಟ್ ಫಾರ್‌ ಒಪಿಎಸ್ ಮೂಲಕ ಜಾಗೃತಿ ಮೂಡಿಸುತ್ತಿದ್ದೇವೆ. ಒಪಿಎಸ್ ಜಾರಿಗೊಳಿಸಿದವರಿಗೆ ನೌಕರರು ಮತ ನೀಡಲಿದ್ದಾರೆ. ಹೀಗಾಗಿ ಕರ್ನಾಟಕದಲ್ಲೂ ಒಪಿಎಸ್ ಜಾರಿಗೆ ತರಲು ಸರ್ಕಾರ ಮುಂದಾಗಬೇಕು” ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ ಒತ್ತಾಯಿಸುತ್ತಿದೆ.

ಎನ್‌ಪಿಎಸ್ ಆತಂಕಕಾರಿ ಏಕೆ?

’ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ’ದ ವತಿಯಿಂದ 2016ರಲ್ಲಿ ಬಿಡುಗಡೆ ಮಾಡಲಾಗಿರುವ ’ನಿಶ್ಚಿತ ಪಿಂಚಣಿ ನಮ್ಮ ಹಕ್ಕು’ ಕೈಪಿಡಿಯಲ್ಲಿ ದಿವಂಗತ ಎಸ್.ಪ್ರಸನ್ನಕುಮಾರ್ ಅವರು ಎನ್‌ಪಿಎಸ್‌ನ ಅವಾಂತರಗಳ ಕುರಿತು ವಿವರಿಸಿದ್ದಾರೆ. ಎನ್‌ಪಿಎಸ್ ತಳಹದಿಯಾಗಿರುವ ಮೂರು ಅಂಶಗಳ ಕುರಿತು ಬೆಳಕು ಚೆಲ್ಲಿ ಸರ್ಕಾರಿ ನೌಕರರಲ್ಲಿ ಜಾಗೃತಿ ಮೂಡಿಸಿದ್ದಾರೆ.

ಒಂದನೇ ಅಂಶ- ಪಿಂಚಣಿ ವಿಚಾರದಲ್ಲಿ ನಿಗದಿತ ಫಲ ಅಥವಾ ಲಾಭದ ಬದಲು ’ನಿಗದಿತ ಕೊಡುಗೆ’ ವ್ಯವಸ್ಥೆ: ನಿಗದಿತ ಫಲವೆಂದರೆ ಈಗಾಗಲೇ ಇರುವ ಪಿಂಚಣಿ ವ್ಯವಸ್ಥೆಯಾಗಿದೆ. ಒಂದು ನಿರ್ದಿಷ್ಟ ಕಾಲದವರೆಗೆ ಸೇವೆ ಸಲ್ಲಿಸಿ ನಿವೃತ್ತಿಯಾದಾಗ, ಸಲ್ಲಿಸಿದ ಸೇವೆಯ ವರ್ಷಗಳ ಆಧಾರದಲ್ಲಿ ಪಿಂಚಣಿ ನಿಗದಿಪಡಿಸಲಾಗುತ್ತಿತ್ತು. ಯಾವುದೇ ನೌಕರರಿಗೆ ನಿವೃತ್ತಿ ವೇತನ ಎಷ್ಟು ಸಿಗಬೇಕೆಂಬುದು ಸೇವೆಗೆ ಸೇರಿದ್ದಾಗಲೇ ಸೇವಾ ನಿಯಮಗಳ ಪ್ರಕಾರ ನಿಗದಿಯಾಗುತ್ತದೆ. ಆದರೆ ಎನ್‌ಪಿಎಸ್ ಮೂಲಕ ಅದನ್ನೀಗ ’ನಿಗದಿತ ಕೊಡುಗೆ’ ಪಿಂಚಣಿ ವಿಧಾನವನ್ನಾಗಿ ಬದಲಿಸಲಾಗಿದೆ. ಪ್ರತಿ ನೌಕರನ ಸಂಬಳದ ನಿಗದಿತ ಮೊತ್ತದಲ್ಲಿ ಪ್ರತಿ ತಿಂಗಳು ಶೇ. 10ರಷ್ಟು ಕಡಿತ ಮಾಡಿ ’ಪಿಂಚಣಿ ನಿಧಿ’ಗೆ ಜಮಾ ಮಾಡಲಾಗುತ್ತದೆ. ಪಿಂಚಣಿ ನಿಧಿಗೆ ನೌಕರನು ನಿರ್ದಿಷ್ಟ ಕೊಡುಗೆ ನೀಡಬೇಕಾಗುತ್ತದೆ. ಆದರೆ ಪಿಂಚಣಿ ಎಷ್ಟು ದೊರೆಯುತ್ತದೆ, ಎಷ್ಟು ವರ್ಷದ ಸೇವೆಗೆ ಎಷ್ಟು ನೀಡಲಾಗುತ್ತದೆ? ಎಂಬಿತ್ಯಾದಿ ಪ್ರಶ್ನೆಗಳಿಗೆ ನಿಖರ ಉತ್ತರವಿಲ್ಲ. ಅಂದರೆ ನೌಕರರ ಪಿಂಚಣಿ ಕಡಿತ ಮಾಡುವ ಜವಾಬ್ದಾರಿ ಹೊತ್ತ ಸಂಸ್ಥೆಗಳು ತಮ್ಮ ಲಾಭ ನಷ್ಟಕ್ಕೆ ಅನುಗುಣವಾಗಿ ಪಿಂಚಣಿ ಮೊತ್ತವನ್ನು ನಿಗದಿಪಡಿಸುತ್ತವೆ.

ಎರಡನೇ ಅಂಶ- ಸಾಮಾಜಿಕ ಸಹಾಯದ ಬದಲಾಗಿ ವಿಮಾ ಪದ್ಧತಿ: ಸಾಮಾಜಿಕ ಸಹಾಯವೆಂಬುದು ಸರ್ಕಾರ ಜವಾಬ್ದಾರಿಯಾಗಿತ್ತು. ಆದರೆ ಈಗ ನೌಕರರೇ ತಮ್ಮ ಉಳಿತಾಯದ ಮೂಲಕ ಭವಿಷ್ಯವನ್ನು ಭದ್ರತೆ ಮಾಡಿಕೊಳ್ಳಬೇಕು ಎಂಬುದನ್ನು ’ವಿಮೆ’ಯ ಪ್ರಸ್ತಾಪ ಹೇಳುತ್ತದೆ. ಸಮಾಜದ ಎಲ್ಲ ಜನರ ಕೊಡುಗೆಯಿಂದಿರುವ ಸರ್ಕಾರದ ಖಜಾನೆಯಿಂದ ಶ್ರೀಮಂತ ಬಂಡವಾಳಗಾರರಿಗೆ ರಿಯಾಯಿತಿಗಳನ್ನು ನೀಡಲು ಖರ್ಚು ಮಾಡಬಹುದೇ ಹೊರತು ಜನಸಾಮಾನ್ಯರಿಗೆ, ನೌಕರರಿಗೆ ಸರ್ಕಾರದ ಖಜಾನೆಯಿಂದ ಏನು ಸಹಾಯ ಮಾಡಬಾರದು ಎಂಬುದು ಈ ಅಂಶದ ತಿರುಳಾಗಿದೆ.

ಮೂರನೇ ಅಂಶ- ’ಹೂಡಿಕೆ’ಗಳನ್ನು ಸಂಸ್ಥೆಗಳಿಗೆ ’ಸಾಲ’ದ ಸ್ವರೂಪದ ಬದಲಾಗಿ ಷೇರು ಬಂಡವಾಳ ಪದ್ಧತಿಯಲ್ಲಿ ನೀಡುವುದು: ಇಲ್ಲಿ ನೌಕರರ ಉಳಿತಾಯದ ಹಣವನ್ನೇ ಪೂರ್ಣ ವಂಚಿಸುವ ಹುನ್ನಾರವಿದೆ. ನೌಕರರ ಉಳಿತಾಯವನ್ನು ಸಾಲದ ರೂಪದಲ್ಲಿ ಹೂಡಿಕೆ ಮಾಡುವುದಕ್ಕೂ ಷೇರುಗಳಾಗಿ ಬಳಸುವುದಕ್ಕೂ ವ್ಯತ್ಯಾಸವಿದೆ. ಸಾಲವೆಂದು ಪರಿಗಣಿಸಿದಾಗ ಬಡ್ಡಿಯನ್ನು ನೀಡಲಾಗುತ್ತದೆ. ಅದಕ್ಕೆ ಬದಲಾಗಿ ಕಂಪನಿಯ ಷೇರು ಬಂಡವಾಳವಾಗಿ ಪರಿಗಣಿಸಿದರೆ ಕಂಪನಿಗೆ ಲಾಭ ಬಂದರೆ ಡಿವಿಡೆಂಡ್ ನೀಡಲಾಗುತ್ತದೆ. ನಷ್ಟವಾದರೆ ಇಡೀ ಉಳಿತಾಯವೇ ಇಲ್ಲವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...