Homeಕರ್ನಾಟಕಒಪಿಎಸ್ ಜಾರಿಗೆ ಛತ್ತೀಸ್‌ಗಡ ಕಾಂಗ್ರೆಸ್‌ ಗೌರ್ಮೆಂಟ್ ನಿರ್ಧಾರ; ರಾಜ್ಯದಲ್ಲಿ ಎಚ್ಚೆತ್ತುಕೊಳ್ಳುವುದೇ ಬಿಜೆಪಿ ಸರ್ಕಾರ?

ಒಪಿಎಸ್ ಜಾರಿಗೆ ಛತ್ತೀಸ್‌ಗಡ ಕಾಂಗ್ರೆಸ್‌ ಗೌರ್ಮೆಂಟ್ ನಿರ್ಧಾರ; ರಾಜ್ಯದಲ್ಲಿ ಎಚ್ಚೆತ್ತುಕೊಳ್ಳುವುದೇ ಬಿಜೆಪಿ ಸರ್ಕಾರ?

- Advertisement -
- Advertisement -

ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ಅಥವಾ ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್‌) ಯಾವುದನ್ನಾದರೂ ಆಯ್ಕೆ ಮಾಡಿಕೊಳ್ಳುವ ಅವಕಾಶ ಛತ್ತೀಸ್‌ಗಡ ಸರ್ಕಾರಿ ನೌಕರರಿಗೆ ದೊರೆತಿದೆ.

ಏಪ್ರಿಲ್ 1, 2022ರ ನಂತರ ಸರ್ಕಾರಿ ಸೇವೆಗೆ ಸೇರಿದವರು ಹಳೆಯ ಪಿಂಚಣಿ ಯೋಜನೆಯ ಭಾಗವಾಗಿರುವುದು ಕಡ್ಡಾಯವಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

“ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ನವೆಂಬರ್ 1, 2004ರ ನಂತರ ಮತ್ತು ಏಪ್ರಿಲ್ 2022ರ ಮೊದಲು ನೇಮಕಗೊಂಡ ನೌಕರರಿಗೆ ಆಯ್ಕೆಯನ್ನು ನೀಡುವ ಮೂಲಕ ಒಪಿಎಸ್ ಅನ್ನು ಪರಿಚಯಿಸಲು ಕ್ಯಾಬಿನೇಟ್ ಸಭೆಯಲ್ಲಿ ನಿರ್ಧರಿಸಲಾಗಿದೆ” ಎಂದು ಸರ್ಕಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಸರ್ಕಾರಿ ನೌಕರರನ್ನು ಏಪ್ರಿಲ್ 1, 2022ರಿಂದ ಛತ್ತೀಸ್‌ಗಢದ ಸಾಮಾನ್ಯ ಭವಿಷ್ಯ ನಿಧಿಯ ಸದಸ್ಯರನ್ನಾಗಿ ಪರಿಗಣಿಸಲಾಗುತ್ತದೆ. ನವೆಂಬರ್ 1, 2004ರಿಂದ ಅಥವಾ ಅದರ ನಂತರ ಮಾರ್ಚ್ 31, 2022ರವರೆಗೆ ಎನ್‌ಪಿಎಸ್ ಖಾತೆಯಲ್ಲಿ ಠೇವಣಿ ಮಾಡಿದ ಉದ್ಯೋಗಿಯ ಕೊಡುಗೆಯನ್ನು ಹಾಗೂ ಅದರಿಂದ ಗಳಿಸಿದ ಲಾಭಾಂಶವನ್ನು ಪರಿಗಣಿಸಲಾಗುತ್ತದೆ. ಎನ್‌ಪಿಎಸ್‌ ನಿಯಮಗಳ ಅಡಿಯಲ್ಲಿ ಸರ್ಕಾರಿ ಉದ್ಯೋಗಿಗೆ ಪಾವತಿಸಲಾಗುವುದು.

ರಾಜ್ಯ ಸರ್ಕಾರದ ಕೊಡುಗೆ ಮತ್ತು ಅದರಿಂದ ಗಳಿಸಿದ ಲಾಭಾಂಶವನ್ನು ಠೇವಣಿ ಮಾಡಿದ ನಂತರವೇ ನೌಕರರು ಹಳೆಯ ಪಿಂಚಣಿ ಯೋಜನೆಗೆ ಅರ್ಹರಾಗುತ್ತಾರೆ.

ಸರ್ಕಾರಿ ನೌಕರರು ಎನ್‌ಪಿಎಸ್ ಅಡಿಯಲ್ಲಿ ಮುಂದುವರಿಯುವ ಅಥವಾ ಹಳೆಯ ಪಿಂಚಣಿ ಯೋಜನೆಯ ಪ್ರಯೋಜನವನ್ನು ನೋಟರೈಸ್ ಮಾಡಿದ ಅಫಿಡವಿಟ್‌ನಲ್ಲಿ ಪಡೆಯುವ ಆಯ್ಕೆಯನ್ನು ಆರಿಸಬೇಕಾಗುತ್ತದೆ. ಈ ಆಯ್ಕೆಯು ಅಂತಿಮವಾಗಿದ್ದು ಬದಲಾಯಿಸಲು ಸಾಧ್ಯವಿಲ್ಲ.

ಈ ವರ್ಷದ ಆರಂಭದಲ್ಲಿ ನಡೆದ ಅಸೆಂಬ್ಲಿಯ ಬಜೆಟ್ ಅಧಿವೇಶನದಲ್ಲಿ ಬಘೆಲ್ ಅವರು, “ತಮ್ಮ ಸರ್ಕಾರವು ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಲಿದೆ” ಎಂದು ಘೋಷಿಸಿದ್ದರು.

ರಾಜ್ಯದಲ್ಲಿ ಹೋರಾಟಕ್ಕೆ ಗೆಲುವು ದೊರಕುವುದೇ?

ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಒಪಿಎಸ್ ಜಾರಿಗೆ ಕ್ರಮ ಜರುಗಿಸಲಾಗುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಚುನಾವಣೆಗೂ ಮುನ್ನ ‘ವೋಟ್ ಫಾರ್‌ ಒಪಿಎಸ್’ ಅಭಿಯಾನವನ್ನು ಸರ್ಕಾರಿ ನೌಕರರು ನಡೆಸಿದ್ದರು. ಅಲ್ಲಿ ಕಾಂಗ್ರೆಸ್ ಗೆದ್ದಿದೆ. ಮುಂದಿನ ದಿನಗಳಲ್ಲಿ ಛತ್ತೀಸ್‌ಗಡದಂತೆಯೇ ಹಿಮಾಚಲ ಪ್ರದೇಶದಲ್ಲೂ ಒಪಿಎಸ್ ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ಸರ್ಕಾರಿ ನೌಕರರು ಭಾವಿಸಿದ್ದಾರೆ.

“ವೋಟ್ ಫಾರ್‌ ಒಪಿಎಸ್ ಮೂಲಕ ಜಾಗೃತಿ ಮೂಡಿಸುತ್ತಿದ್ದೇವೆ. ಒಪಿಎಸ್ ಜಾರಿಗೊಳಿಸಿದವರಿಗೆ ನೌಕರರು ಮತ ನೀಡಲಿದ್ದಾರೆ. ಹೀಗಾಗಿ ಕರ್ನಾಟಕದಲ್ಲೂ ಒಪಿಎಸ್ ಜಾರಿಗೆ ತರಲು ಸರ್ಕಾರ ಮುಂದಾಗಬೇಕು” ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ ಒತ್ತಾಯಿಸುತ್ತಿದೆ.

ಎನ್‌ಪಿಎಸ್ ಆತಂಕಕಾರಿ ಏಕೆ?

’ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ’ದ ವತಿಯಿಂದ 2016ರಲ್ಲಿ ಬಿಡುಗಡೆ ಮಾಡಲಾಗಿರುವ ’ನಿಶ್ಚಿತ ಪಿಂಚಣಿ ನಮ್ಮ ಹಕ್ಕು’ ಕೈಪಿಡಿಯಲ್ಲಿ ದಿವಂಗತ ಎಸ್.ಪ್ರಸನ್ನಕುಮಾರ್ ಅವರು ಎನ್‌ಪಿಎಸ್‌ನ ಅವಾಂತರಗಳ ಕುರಿತು ವಿವರಿಸಿದ್ದಾರೆ. ಎನ್‌ಪಿಎಸ್ ತಳಹದಿಯಾಗಿರುವ ಮೂರು ಅಂಶಗಳ ಕುರಿತು ಬೆಳಕು ಚೆಲ್ಲಿ ಸರ್ಕಾರಿ ನೌಕರರಲ್ಲಿ ಜಾಗೃತಿ ಮೂಡಿಸಿದ್ದಾರೆ.

ಒಂದನೇ ಅಂಶ- ಪಿಂಚಣಿ ವಿಚಾರದಲ್ಲಿ ನಿಗದಿತ ಫಲ ಅಥವಾ ಲಾಭದ ಬದಲು ’ನಿಗದಿತ ಕೊಡುಗೆ’ ವ್ಯವಸ್ಥೆ: ನಿಗದಿತ ಫಲವೆಂದರೆ ಈಗಾಗಲೇ ಇರುವ ಪಿಂಚಣಿ ವ್ಯವಸ್ಥೆಯಾಗಿದೆ. ಒಂದು ನಿರ್ದಿಷ್ಟ ಕಾಲದವರೆಗೆ ಸೇವೆ ಸಲ್ಲಿಸಿ ನಿವೃತ್ತಿಯಾದಾಗ, ಸಲ್ಲಿಸಿದ ಸೇವೆಯ ವರ್ಷಗಳ ಆಧಾರದಲ್ಲಿ ಪಿಂಚಣಿ ನಿಗದಿಪಡಿಸಲಾಗುತ್ತಿತ್ತು. ಯಾವುದೇ ನೌಕರರಿಗೆ ನಿವೃತ್ತಿ ವೇತನ ಎಷ್ಟು ಸಿಗಬೇಕೆಂಬುದು ಸೇವೆಗೆ ಸೇರಿದ್ದಾಗಲೇ ಸೇವಾ ನಿಯಮಗಳ ಪ್ರಕಾರ ನಿಗದಿಯಾಗುತ್ತದೆ. ಆದರೆ ಎನ್‌ಪಿಎಸ್ ಮೂಲಕ ಅದನ್ನೀಗ ’ನಿಗದಿತ ಕೊಡುಗೆ’ ಪಿಂಚಣಿ ವಿಧಾನವನ್ನಾಗಿ ಬದಲಿಸಲಾಗಿದೆ. ಪ್ರತಿ ನೌಕರನ ಸಂಬಳದ ನಿಗದಿತ ಮೊತ್ತದಲ್ಲಿ ಪ್ರತಿ ತಿಂಗಳು ಶೇ. 10ರಷ್ಟು ಕಡಿತ ಮಾಡಿ ’ಪಿಂಚಣಿ ನಿಧಿ’ಗೆ ಜಮಾ ಮಾಡಲಾಗುತ್ತದೆ. ಪಿಂಚಣಿ ನಿಧಿಗೆ ನೌಕರನು ನಿರ್ದಿಷ್ಟ ಕೊಡುಗೆ ನೀಡಬೇಕಾಗುತ್ತದೆ. ಆದರೆ ಪಿಂಚಣಿ ಎಷ್ಟು ದೊರೆಯುತ್ತದೆ, ಎಷ್ಟು ವರ್ಷದ ಸೇವೆಗೆ ಎಷ್ಟು ನೀಡಲಾಗುತ್ತದೆ? ಎಂಬಿತ್ಯಾದಿ ಪ್ರಶ್ನೆಗಳಿಗೆ ನಿಖರ ಉತ್ತರವಿಲ್ಲ. ಅಂದರೆ ನೌಕರರ ಪಿಂಚಣಿ ಕಡಿತ ಮಾಡುವ ಜವಾಬ್ದಾರಿ ಹೊತ್ತ ಸಂಸ್ಥೆಗಳು ತಮ್ಮ ಲಾಭ ನಷ್ಟಕ್ಕೆ ಅನುಗುಣವಾಗಿ ಪಿಂಚಣಿ ಮೊತ್ತವನ್ನು ನಿಗದಿಪಡಿಸುತ್ತವೆ.

ಎರಡನೇ ಅಂಶ- ಸಾಮಾಜಿಕ ಸಹಾಯದ ಬದಲಾಗಿ ವಿಮಾ ಪದ್ಧತಿ: ಸಾಮಾಜಿಕ ಸಹಾಯವೆಂಬುದು ಸರ್ಕಾರ ಜವಾಬ್ದಾರಿಯಾಗಿತ್ತು. ಆದರೆ ಈಗ ನೌಕರರೇ ತಮ್ಮ ಉಳಿತಾಯದ ಮೂಲಕ ಭವಿಷ್ಯವನ್ನು ಭದ್ರತೆ ಮಾಡಿಕೊಳ್ಳಬೇಕು ಎಂಬುದನ್ನು ’ವಿಮೆ’ಯ ಪ್ರಸ್ತಾಪ ಹೇಳುತ್ತದೆ. ಸಮಾಜದ ಎಲ್ಲ ಜನರ ಕೊಡುಗೆಯಿಂದಿರುವ ಸರ್ಕಾರದ ಖಜಾನೆಯಿಂದ ಶ್ರೀಮಂತ ಬಂಡವಾಳಗಾರರಿಗೆ ರಿಯಾಯಿತಿಗಳನ್ನು ನೀಡಲು ಖರ್ಚು ಮಾಡಬಹುದೇ ಹೊರತು ಜನಸಾಮಾನ್ಯರಿಗೆ, ನೌಕರರಿಗೆ ಸರ್ಕಾರದ ಖಜಾನೆಯಿಂದ ಏನು ಸಹಾಯ ಮಾಡಬಾರದು ಎಂಬುದು ಈ ಅಂಶದ ತಿರುಳಾಗಿದೆ.

ಮೂರನೇ ಅಂಶ- ’ಹೂಡಿಕೆ’ಗಳನ್ನು ಸಂಸ್ಥೆಗಳಿಗೆ ’ಸಾಲ’ದ ಸ್ವರೂಪದ ಬದಲಾಗಿ ಷೇರು ಬಂಡವಾಳ ಪದ್ಧತಿಯಲ್ಲಿ ನೀಡುವುದು: ಇಲ್ಲಿ ನೌಕರರ ಉಳಿತಾಯದ ಹಣವನ್ನೇ ಪೂರ್ಣ ವಂಚಿಸುವ ಹುನ್ನಾರವಿದೆ. ನೌಕರರ ಉಳಿತಾಯವನ್ನು ಸಾಲದ ರೂಪದಲ್ಲಿ ಹೂಡಿಕೆ ಮಾಡುವುದಕ್ಕೂ ಷೇರುಗಳಾಗಿ ಬಳಸುವುದಕ್ಕೂ ವ್ಯತ್ಯಾಸವಿದೆ. ಸಾಲವೆಂದು ಪರಿಗಣಿಸಿದಾಗ ಬಡ್ಡಿಯನ್ನು ನೀಡಲಾಗುತ್ತದೆ. ಅದಕ್ಕೆ ಬದಲಾಗಿ ಕಂಪನಿಯ ಷೇರು ಬಂಡವಾಳವಾಗಿ ಪರಿಗಣಿಸಿದರೆ ಕಂಪನಿಗೆ ಲಾಭ ಬಂದರೆ ಡಿವಿಡೆಂಡ್ ನೀಡಲಾಗುತ್ತದೆ. ನಷ್ಟವಾದರೆ ಇಡೀ ಉಳಿತಾಯವೇ ಇಲ್ಲವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...