Homeಕರ್ನಾಟಕಒಪಿಎಸ್ ಜಾರಿಗೆ ಛತ್ತೀಸ್‌ಗಡ ಕಾಂಗ್ರೆಸ್‌ ಗೌರ್ಮೆಂಟ್ ನಿರ್ಧಾರ; ರಾಜ್ಯದಲ್ಲಿ ಎಚ್ಚೆತ್ತುಕೊಳ್ಳುವುದೇ ಬಿಜೆಪಿ ಸರ್ಕಾರ?

ಒಪಿಎಸ್ ಜಾರಿಗೆ ಛತ್ತೀಸ್‌ಗಡ ಕಾಂಗ್ರೆಸ್‌ ಗೌರ್ಮೆಂಟ್ ನಿರ್ಧಾರ; ರಾಜ್ಯದಲ್ಲಿ ಎಚ್ಚೆತ್ತುಕೊಳ್ಳುವುದೇ ಬಿಜೆಪಿ ಸರ್ಕಾರ?

- Advertisement -
- Advertisement -

ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ಅಥವಾ ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್‌) ಯಾವುದನ್ನಾದರೂ ಆಯ್ಕೆ ಮಾಡಿಕೊಳ್ಳುವ ಅವಕಾಶ ಛತ್ತೀಸ್‌ಗಡ ಸರ್ಕಾರಿ ನೌಕರರಿಗೆ ದೊರೆತಿದೆ.

ಏಪ್ರಿಲ್ 1, 2022ರ ನಂತರ ಸರ್ಕಾರಿ ಸೇವೆಗೆ ಸೇರಿದವರು ಹಳೆಯ ಪಿಂಚಣಿ ಯೋಜನೆಯ ಭಾಗವಾಗಿರುವುದು ಕಡ್ಡಾಯವಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

“ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ನವೆಂಬರ್ 1, 2004ರ ನಂತರ ಮತ್ತು ಏಪ್ರಿಲ್ 2022ರ ಮೊದಲು ನೇಮಕಗೊಂಡ ನೌಕರರಿಗೆ ಆಯ್ಕೆಯನ್ನು ನೀಡುವ ಮೂಲಕ ಒಪಿಎಸ್ ಅನ್ನು ಪರಿಚಯಿಸಲು ಕ್ಯಾಬಿನೇಟ್ ಸಭೆಯಲ್ಲಿ ನಿರ್ಧರಿಸಲಾಗಿದೆ” ಎಂದು ಸರ್ಕಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಸರ್ಕಾರಿ ನೌಕರರನ್ನು ಏಪ್ರಿಲ್ 1, 2022ರಿಂದ ಛತ್ತೀಸ್‌ಗಢದ ಸಾಮಾನ್ಯ ಭವಿಷ್ಯ ನಿಧಿಯ ಸದಸ್ಯರನ್ನಾಗಿ ಪರಿಗಣಿಸಲಾಗುತ್ತದೆ. ನವೆಂಬರ್ 1, 2004ರಿಂದ ಅಥವಾ ಅದರ ನಂತರ ಮಾರ್ಚ್ 31, 2022ರವರೆಗೆ ಎನ್‌ಪಿಎಸ್ ಖಾತೆಯಲ್ಲಿ ಠೇವಣಿ ಮಾಡಿದ ಉದ್ಯೋಗಿಯ ಕೊಡುಗೆಯನ್ನು ಹಾಗೂ ಅದರಿಂದ ಗಳಿಸಿದ ಲಾಭಾಂಶವನ್ನು ಪರಿಗಣಿಸಲಾಗುತ್ತದೆ. ಎನ್‌ಪಿಎಸ್‌ ನಿಯಮಗಳ ಅಡಿಯಲ್ಲಿ ಸರ್ಕಾರಿ ಉದ್ಯೋಗಿಗೆ ಪಾವತಿಸಲಾಗುವುದು.

ರಾಜ್ಯ ಸರ್ಕಾರದ ಕೊಡುಗೆ ಮತ್ತು ಅದರಿಂದ ಗಳಿಸಿದ ಲಾಭಾಂಶವನ್ನು ಠೇವಣಿ ಮಾಡಿದ ನಂತರವೇ ನೌಕರರು ಹಳೆಯ ಪಿಂಚಣಿ ಯೋಜನೆಗೆ ಅರ್ಹರಾಗುತ್ತಾರೆ.

ಸರ್ಕಾರಿ ನೌಕರರು ಎನ್‌ಪಿಎಸ್ ಅಡಿಯಲ್ಲಿ ಮುಂದುವರಿಯುವ ಅಥವಾ ಹಳೆಯ ಪಿಂಚಣಿ ಯೋಜನೆಯ ಪ್ರಯೋಜನವನ್ನು ನೋಟರೈಸ್ ಮಾಡಿದ ಅಫಿಡವಿಟ್‌ನಲ್ಲಿ ಪಡೆಯುವ ಆಯ್ಕೆಯನ್ನು ಆರಿಸಬೇಕಾಗುತ್ತದೆ. ಈ ಆಯ್ಕೆಯು ಅಂತಿಮವಾಗಿದ್ದು ಬದಲಾಯಿಸಲು ಸಾಧ್ಯವಿಲ್ಲ.

ಈ ವರ್ಷದ ಆರಂಭದಲ್ಲಿ ನಡೆದ ಅಸೆಂಬ್ಲಿಯ ಬಜೆಟ್ ಅಧಿವೇಶನದಲ್ಲಿ ಬಘೆಲ್ ಅವರು, “ತಮ್ಮ ಸರ್ಕಾರವು ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಲಿದೆ” ಎಂದು ಘೋಷಿಸಿದ್ದರು.

ರಾಜ್ಯದಲ್ಲಿ ಹೋರಾಟಕ್ಕೆ ಗೆಲುವು ದೊರಕುವುದೇ?

ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಒಪಿಎಸ್ ಜಾರಿಗೆ ಕ್ರಮ ಜರುಗಿಸಲಾಗುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಚುನಾವಣೆಗೂ ಮುನ್ನ ‘ವೋಟ್ ಫಾರ್‌ ಒಪಿಎಸ್’ ಅಭಿಯಾನವನ್ನು ಸರ್ಕಾರಿ ನೌಕರರು ನಡೆಸಿದ್ದರು. ಅಲ್ಲಿ ಕಾಂಗ್ರೆಸ್ ಗೆದ್ದಿದೆ. ಮುಂದಿನ ದಿನಗಳಲ್ಲಿ ಛತ್ತೀಸ್‌ಗಡದಂತೆಯೇ ಹಿಮಾಚಲ ಪ್ರದೇಶದಲ್ಲೂ ಒಪಿಎಸ್ ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ಸರ್ಕಾರಿ ನೌಕರರು ಭಾವಿಸಿದ್ದಾರೆ.

“ವೋಟ್ ಫಾರ್‌ ಒಪಿಎಸ್ ಮೂಲಕ ಜಾಗೃತಿ ಮೂಡಿಸುತ್ತಿದ್ದೇವೆ. ಒಪಿಎಸ್ ಜಾರಿಗೊಳಿಸಿದವರಿಗೆ ನೌಕರರು ಮತ ನೀಡಲಿದ್ದಾರೆ. ಹೀಗಾಗಿ ಕರ್ನಾಟಕದಲ್ಲೂ ಒಪಿಎಸ್ ಜಾರಿಗೆ ತರಲು ಸರ್ಕಾರ ಮುಂದಾಗಬೇಕು” ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ ಒತ್ತಾಯಿಸುತ್ತಿದೆ.

ಎನ್‌ಪಿಎಸ್ ಆತಂಕಕಾರಿ ಏಕೆ?

’ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ’ದ ವತಿಯಿಂದ 2016ರಲ್ಲಿ ಬಿಡುಗಡೆ ಮಾಡಲಾಗಿರುವ ’ನಿಶ್ಚಿತ ಪಿಂಚಣಿ ನಮ್ಮ ಹಕ್ಕು’ ಕೈಪಿಡಿಯಲ್ಲಿ ದಿವಂಗತ ಎಸ್.ಪ್ರಸನ್ನಕುಮಾರ್ ಅವರು ಎನ್‌ಪಿಎಸ್‌ನ ಅವಾಂತರಗಳ ಕುರಿತು ವಿವರಿಸಿದ್ದಾರೆ. ಎನ್‌ಪಿಎಸ್ ತಳಹದಿಯಾಗಿರುವ ಮೂರು ಅಂಶಗಳ ಕುರಿತು ಬೆಳಕು ಚೆಲ್ಲಿ ಸರ್ಕಾರಿ ನೌಕರರಲ್ಲಿ ಜಾಗೃತಿ ಮೂಡಿಸಿದ್ದಾರೆ.

ಒಂದನೇ ಅಂಶ- ಪಿಂಚಣಿ ವಿಚಾರದಲ್ಲಿ ನಿಗದಿತ ಫಲ ಅಥವಾ ಲಾಭದ ಬದಲು ’ನಿಗದಿತ ಕೊಡುಗೆ’ ವ್ಯವಸ್ಥೆ: ನಿಗದಿತ ಫಲವೆಂದರೆ ಈಗಾಗಲೇ ಇರುವ ಪಿಂಚಣಿ ವ್ಯವಸ್ಥೆಯಾಗಿದೆ. ಒಂದು ನಿರ್ದಿಷ್ಟ ಕಾಲದವರೆಗೆ ಸೇವೆ ಸಲ್ಲಿಸಿ ನಿವೃತ್ತಿಯಾದಾಗ, ಸಲ್ಲಿಸಿದ ಸೇವೆಯ ವರ್ಷಗಳ ಆಧಾರದಲ್ಲಿ ಪಿಂಚಣಿ ನಿಗದಿಪಡಿಸಲಾಗುತ್ತಿತ್ತು. ಯಾವುದೇ ನೌಕರರಿಗೆ ನಿವೃತ್ತಿ ವೇತನ ಎಷ್ಟು ಸಿಗಬೇಕೆಂಬುದು ಸೇವೆಗೆ ಸೇರಿದ್ದಾಗಲೇ ಸೇವಾ ನಿಯಮಗಳ ಪ್ರಕಾರ ನಿಗದಿಯಾಗುತ್ತದೆ. ಆದರೆ ಎನ್‌ಪಿಎಸ್ ಮೂಲಕ ಅದನ್ನೀಗ ’ನಿಗದಿತ ಕೊಡುಗೆ’ ಪಿಂಚಣಿ ವಿಧಾನವನ್ನಾಗಿ ಬದಲಿಸಲಾಗಿದೆ. ಪ್ರತಿ ನೌಕರನ ಸಂಬಳದ ನಿಗದಿತ ಮೊತ್ತದಲ್ಲಿ ಪ್ರತಿ ತಿಂಗಳು ಶೇ. 10ರಷ್ಟು ಕಡಿತ ಮಾಡಿ ’ಪಿಂಚಣಿ ನಿಧಿ’ಗೆ ಜಮಾ ಮಾಡಲಾಗುತ್ತದೆ. ಪಿಂಚಣಿ ನಿಧಿಗೆ ನೌಕರನು ನಿರ್ದಿಷ್ಟ ಕೊಡುಗೆ ನೀಡಬೇಕಾಗುತ್ತದೆ. ಆದರೆ ಪಿಂಚಣಿ ಎಷ್ಟು ದೊರೆಯುತ್ತದೆ, ಎಷ್ಟು ವರ್ಷದ ಸೇವೆಗೆ ಎಷ್ಟು ನೀಡಲಾಗುತ್ತದೆ? ಎಂಬಿತ್ಯಾದಿ ಪ್ರಶ್ನೆಗಳಿಗೆ ನಿಖರ ಉತ್ತರವಿಲ್ಲ. ಅಂದರೆ ನೌಕರರ ಪಿಂಚಣಿ ಕಡಿತ ಮಾಡುವ ಜವಾಬ್ದಾರಿ ಹೊತ್ತ ಸಂಸ್ಥೆಗಳು ತಮ್ಮ ಲಾಭ ನಷ್ಟಕ್ಕೆ ಅನುಗುಣವಾಗಿ ಪಿಂಚಣಿ ಮೊತ್ತವನ್ನು ನಿಗದಿಪಡಿಸುತ್ತವೆ.

ಎರಡನೇ ಅಂಶ- ಸಾಮಾಜಿಕ ಸಹಾಯದ ಬದಲಾಗಿ ವಿಮಾ ಪದ್ಧತಿ: ಸಾಮಾಜಿಕ ಸಹಾಯವೆಂಬುದು ಸರ್ಕಾರ ಜವಾಬ್ದಾರಿಯಾಗಿತ್ತು. ಆದರೆ ಈಗ ನೌಕರರೇ ತಮ್ಮ ಉಳಿತಾಯದ ಮೂಲಕ ಭವಿಷ್ಯವನ್ನು ಭದ್ರತೆ ಮಾಡಿಕೊಳ್ಳಬೇಕು ಎಂಬುದನ್ನು ’ವಿಮೆ’ಯ ಪ್ರಸ್ತಾಪ ಹೇಳುತ್ತದೆ. ಸಮಾಜದ ಎಲ್ಲ ಜನರ ಕೊಡುಗೆಯಿಂದಿರುವ ಸರ್ಕಾರದ ಖಜಾನೆಯಿಂದ ಶ್ರೀಮಂತ ಬಂಡವಾಳಗಾರರಿಗೆ ರಿಯಾಯಿತಿಗಳನ್ನು ನೀಡಲು ಖರ್ಚು ಮಾಡಬಹುದೇ ಹೊರತು ಜನಸಾಮಾನ್ಯರಿಗೆ, ನೌಕರರಿಗೆ ಸರ್ಕಾರದ ಖಜಾನೆಯಿಂದ ಏನು ಸಹಾಯ ಮಾಡಬಾರದು ಎಂಬುದು ಈ ಅಂಶದ ತಿರುಳಾಗಿದೆ.

ಮೂರನೇ ಅಂಶ- ’ಹೂಡಿಕೆ’ಗಳನ್ನು ಸಂಸ್ಥೆಗಳಿಗೆ ’ಸಾಲ’ದ ಸ್ವರೂಪದ ಬದಲಾಗಿ ಷೇರು ಬಂಡವಾಳ ಪದ್ಧತಿಯಲ್ಲಿ ನೀಡುವುದು: ಇಲ್ಲಿ ನೌಕರರ ಉಳಿತಾಯದ ಹಣವನ್ನೇ ಪೂರ್ಣ ವಂಚಿಸುವ ಹುನ್ನಾರವಿದೆ. ನೌಕರರ ಉಳಿತಾಯವನ್ನು ಸಾಲದ ರೂಪದಲ್ಲಿ ಹೂಡಿಕೆ ಮಾಡುವುದಕ್ಕೂ ಷೇರುಗಳಾಗಿ ಬಳಸುವುದಕ್ಕೂ ವ್ಯತ್ಯಾಸವಿದೆ. ಸಾಲವೆಂದು ಪರಿಗಣಿಸಿದಾಗ ಬಡ್ಡಿಯನ್ನು ನೀಡಲಾಗುತ್ತದೆ. ಅದಕ್ಕೆ ಬದಲಾಗಿ ಕಂಪನಿಯ ಷೇರು ಬಂಡವಾಳವಾಗಿ ಪರಿಗಣಿಸಿದರೆ ಕಂಪನಿಗೆ ಲಾಭ ಬಂದರೆ ಡಿವಿಡೆಂಡ್ ನೀಡಲಾಗುತ್ತದೆ. ನಷ್ಟವಾದರೆ ಇಡೀ ಉಳಿತಾಯವೇ ಇಲ್ಲವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...