Homeಕರ್ನಾಟಕಒಪಿಎಸ್ ಜಾರಿಗೆ ಛತ್ತೀಸ್‌ಗಡ ಕಾಂಗ್ರೆಸ್‌ ಗೌರ್ಮೆಂಟ್ ನಿರ್ಧಾರ; ರಾಜ್ಯದಲ್ಲಿ ಎಚ್ಚೆತ್ತುಕೊಳ್ಳುವುದೇ ಬಿಜೆಪಿ ಸರ್ಕಾರ?

ಒಪಿಎಸ್ ಜಾರಿಗೆ ಛತ್ತೀಸ್‌ಗಡ ಕಾಂಗ್ರೆಸ್‌ ಗೌರ್ಮೆಂಟ್ ನಿರ್ಧಾರ; ರಾಜ್ಯದಲ್ಲಿ ಎಚ್ಚೆತ್ತುಕೊಳ್ಳುವುದೇ ಬಿಜೆಪಿ ಸರ್ಕಾರ?

- Advertisement -
- Advertisement -

ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ಅಥವಾ ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್‌) ಯಾವುದನ್ನಾದರೂ ಆಯ್ಕೆ ಮಾಡಿಕೊಳ್ಳುವ ಅವಕಾಶ ಛತ್ತೀಸ್‌ಗಡ ಸರ್ಕಾರಿ ನೌಕರರಿಗೆ ದೊರೆತಿದೆ.

ಏಪ್ರಿಲ್ 1, 2022ರ ನಂತರ ಸರ್ಕಾರಿ ಸೇವೆಗೆ ಸೇರಿದವರು ಹಳೆಯ ಪಿಂಚಣಿ ಯೋಜನೆಯ ಭಾಗವಾಗಿರುವುದು ಕಡ್ಡಾಯವಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

“ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ನವೆಂಬರ್ 1, 2004ರ ನಂತರ ಮತ್ತು ಏಪ್ರಿಲ್ 2022ರ ಮೊದಲು ನೇಮಕಗೊಂಡ ನೌಕರರಿಗೆ ಆಯ್ಕೆಯನ್ನು ನೀಡುವ ಮೂಲಕ ಒಪಿಎಸ್ ಅನ್ನು ಪರಿಚಯಿಸಲು ಕ್ಯಾಬಿನೇಟ್ ಸಭೆಯಲ್ಲಿ ನಿರ್ಧರಿಸಲಾಗಿದೆ” ಎಂದು ಸರ್ಕಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಸರ್ಕಾರಿ ನೌಕರರನ್ನು ಏಪ್ರಿಲ್ 1, 2022ರಿಂದ ಛತ್ತೀಸ್‌ಗಢದ ಸಾಮಾನ್ಯ ಭವಿಷ್ಯ ನಿಧಿಯ ಸದಸ್ಯರನ್ನಾಗಿ ಪರಿಗಣಿಸಲಾಗುತ್ತದೆ. ನವೆಂಬರ್ 1, 2004ರಿಂದ ಅಥವಾ ಅದರ ನಂತರ ಮಾರ್ಚ್ 31, 2022ರವರೆಗೆ ಎನ್‌ಪಿಎಸ್ ಖಾತೆಯಲ್ಲಿ ಠೇವಣಿ ಮಾಡಿದ ಉದ್ಯೋಗಿಯ ಕೊಡುಗೆಯನ್ನು ಹಾಗೂ ಅದರಿಂದ ಗಳಿಸಿದ ಲಾಭಾಂಶವನ್ನು ಪರಿಗಣಿಸಲಾಗುತ್ತದೆ. ಎನ್‌ಪಿಎಸ್‌ ನಿಯಮಗಳ ಅಡಿಯಲ್ಲಿ ಸರ್ಕಾರಿ ಉದ್ಯೋಗಿಗೆ ಪಾವತಿಸಲಾಗುವುದು.

ರಾಜ್ಯ ಸರ್ಕಾರದ ಕೊಡುಗೆ ಮತ್ತು ಅದರಿಂದ ಗಳಿಸಿದ ಲಾಭಾಂಶವನ್ನು ಠೇವಣಿ ಮಾಡಿದ ನಂತರವೇ ನೌಕರರು ಹಳೆಯ ಪಿಂಚಣಿ ಯೋಜನೆಗೆ ಅರ್ಹರಾಗುತ್ತಾರೆ.

ಸರ್ಕಾರಿ ನೌಕರರು ಎನ್‌ಪಿಎಸ್ ಅಡಿಯಲ್ಲಿ ಮುಂದುವರಿಯುವ ಅಥವಾ ಹಳೆಯ ಪಿಂಚಣಿ ಯೋಜನೆಯ ಪ್ರಯೋಜನವನ್ನು ನೋಟರೈಸ್ ಮಾಡಿದ ಅಫಿಡವಿಟ್‌ನಲ್ಲಿ ಪಡೆಯುವ ಆಯ್ಕೆಯನ್ನು ಆರಿಸಬೇಕಾಗುತ್ತದೆ. ಈ ಆಯ್ಕೆಯು ಅಂತಿಮವಾಗಿದ್ದು ಬದಲಾಯಿಸಲು ಸಾಧ್ಯವಿಲ್ಲ.

ಈ ವರ್ಷದ ಆರಂಭದಲ್ಲಿ ನಡೆದ ಅಸೆಂಬ್ಲಿಯ ಬಜೆಟ್ ಅಧಿವೇಶನದಲ್ಲಿ ಬಘೆಲ್ ಅವರು, “ತಮ್ಮ ಸರ್ಕಾರವು ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಲಿದೆ” ಎಂದು ಘೋಷಿಸಿದ್ದರು.

ರಾಜ್ಯದಲ್ಲಿ ಹೋರಾಟಕ್ಕೆ ಗೆಲುವು ದೊರಕುವುದೇ?

ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಒಪಿಎಸ್ ಜಾರಿಗೆ ಕ್ರಮ ಜರುಗಿಸಲಾಗುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಚುನಾವಣೆಗೂ ಮುನ್ನ ‘ವೋಟ್ ಫಾರ್‌ ಒಪಿಎಸ್’ ಅಭಿಯಾನವನ್ನು ಸರ್ಕಾರಿ ನೌಕರರು ನಡೆಸಿದ್ದರು. ಅಲ್ಲಿ ಕಾಂಗ್ರೆಸ್ ಗೆದ್ದಿದೆ. ಮುಂದಿನ ದಿನಗಳಲ್ಲಿ ಛತ್ತೀಸ್‌ಗಡದಂತೆಯೇ ಹಿಮಾಚಲ ಪ್ರದೇಶದಲ್ಲೂ ಒಪಿಎಸ್ ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ಸರ್ಕಾರಿ ನೌಕರರು ಭಾವಿಸಿದ್ದಾರೆ.

“ವೋಟ್ ಫಾರ್‌ ಒಪಿಎಸ್ ಮೂಲಕ ಜಾಗೃತಿ ಮೂಡಿಸುತ್ತಿದ್ದೇವೆ. ಒಪಿಎಸ್ ಜಾರಿಗೊಳಿಸಿದವರಿಗೆ ನೌಕರರು ಮತ ನೀಡಲಿದ್ದಾರೆ. ಹೀಗಾಗಿ ಕರ್ನಾಟಕದಲ್ಲೂ ಒಪಿಎಸ್ ಜಾರಿಗೆ ತರಲು ಸರ್ಕಾರ ಮುಂದಾಗಬೇಕು” ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ ಒತ್ತಾಯಿಸುತ್ತಿದೆ.

ಎನ್‌ಪಿಎಸ್ ಆತಂಕಕಾರಿ ಏಕೆ?

’ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ’ದ ವತಿಯಿಂದ 2016ರಲ್ಲಿ ಬಿಡುಗಡೆ ಮಾಡಲಾಗಿರುವ ’ನಿಶ್ಚಿತ ಪಿಂಚಣಿ ನಮ್ಮ ಹಕ್ಕು’ ಕೈಪಿಡಿಯಲ್ಲಿ ದಿವಂಗತ ಎಸ್.ಪ್ರಸನ್ನಕುಮಾರ್ ಅವರು ಎನ್‌ಪಿಎಸ್‌ನ ಅವಾಂತರಗಳ ಕುರಿತು ವಿವರಿಸಿದ್ದಾರೆ. ಎನ್‌ಪಿಎಸ್ ತಳಹದಿಯಾಗಿರುವ ಮೂರು ಅಂಶಗಳ ಕುರಿತು ಬೆಳಕು ಚೆಲ್ಲಿ ಸರ್ಕಾರಿ ನೌಕರರಲ್ಲಿ ಜಾಗೃತಿ ಮೂಡಿಸಿದ್ದಾರೆ.

ಒಂದನೇ ಅಂಶ- ಪಿಂಚಣಿ ವಿಚಾರದಲ್ಲಿ ನಿಗದಿತ ಫಲ ಅಥವಾ ಲಾಭದ ಬದಲು ’ನಿಗದಿತ ಕೊಡುಗೆ’ ವ್ಯವಸ್ಥೆ: ನಿಗದಿತ ಫಲವೆಂದರೆ ಈಗಾಗಲೇ ಇರುವ ಪಿಂಚಣಿ ವ್ಯವಸ್ಥೆಯಾಗಿದೆ. ಒಂದು ನಿರ್ದಿಷ್ಟ ಕಾಲದವರೆಗೆ ಸೇವೆ ಸಲ್ಲಿಸಿ ನಿವೃತ್ತಿಯಾದಾಗ, ಸಲ್ಲಿಸಿದ ಸೇವೆಯ ವರ್ಷಗಳ ಆಧಾರದಲ್ಲಿ ಪಿಂಚಣಿ ನಿಗದಿಪಡಿಸಲಾಗುತ್ತಿತ್ತು. ಯಾವುದೇ ನೌಕರರಿಗೆ ನಿವೃತ್ತಿ ವೇತನ ಎಷ್ಟು ಸಿಗಬೇಕೆಂಬುದು ಸೇವೆಗೆ ಸೇರಿದ್ದಾಗಲೇ ಸೇವಾ ನಿಯಮಗಳ ಪ್ರಕಾರ ನಿಗದಿಯಾಗುತ್ತದೆ. ಆದರೆ ಎನ್‌ಪಿಎಸ್ ಮೂಲಕ ಅದನ್ನೀಗ ’ನಿಗದಿತ ಕೊಡುಗೆ’ ಪಿಂಚಣಿ ವಿಧಾನವನ್ನಾಗಿ ಬದಲಿಸಲಾಗಿದೆ. ಪ್ರತಿ ನೌಕರನ ಸಂಬಳದ ನಿಗದಿತ ಮೊತ್ತದಲ್ಲಿ ಪ್ರತಿ ತಿಂಗಳು ಶೇ. 10ರಷ್ಟು ಕಡಿತ ಮಾಡಿ ’ಪಿಂಚಣಿ ನಿಧಿ’ಗೆ ಜಮಾ ಮಾಡಲಾಗುತ್ತದೆ. ಪಿಂಚಣಿ ನಿಧಿಗೆ ನೌಕರನು ನಿರ್ದಿಷ್ಟ ಕೊಡುಗೆ ನೀಡಬೇಕಾಗುತ್ತದೆ. ಆದರೆ ಪಿಂಚಣಿ ಎಷ್ಟು ದೊರೆಯುತ್ತದೆ, ಎಷ್ಟು ವರ್ಷದ ಸೇವೆಗೆ ಎಷ್ಟು ನೀಡಲಾಗುತ್ತದೆ? ಎಂಬಿತ್ಯಾದಿ ಪ್ರಶ್ನೆಗಳಿಗೆ ನಿಖರ ಉತ್ತರವಿಲ್ಲ. ಅಂದರೆ ನೌಕರರ ಪಿಂಚಣಿ ಕಡಿತ ಮಾಡುವ ಜವಾಬ್ದಾರಿ ಹೊತ್ತ ಸಂಸ್ಥೆಗಳು ತಮ್ಮ ಲಾಭ ನಷ್ಟಕ್ಕೆ ಅನುಗುಣವಾಗಿ ಪಿಂಚಣಿ ಮೊತ್ತವನ್ನು ನಿಗದಿಪಡಿಸುತ್ತವೆ.

ಎರಡನೇ ಅಂಶ- ಸಾಮಾಜಿಕ ಸಹಾಯದ ಬದಲಾಗಿ ವಿಮಾ ಪದ್ಧತಿ: ಸಾಮಾಜಿಕ ಸಹಾಯವೆಂಬುದು ಸರ್ಕಾರ ಜವಾಬ್ದಾರಿಯಾಗಿತ್ತು. ಆದರೆ ಈಗ ನೌಕರರೇ ತಮ್ಮ ಉಳಿತಾಯದ ಮೂಲಕ ಭವಿಷ್ಯವನ್ನು ಭದ್ರತೆ ಮಾಡಿಕೊಳ್ಳಬೇಕು ಎಂಬುದನ್ನು ’ವಿಮೆ’ಯ ಪ್ರಸ್ತಾಪ ಹೇಳುತ್ತದೆ. ಸಮಾಜದ ಎಲ್ಲ ಜನರ ಕೊಡುಗೆಯಿಂದಿರುವ ಸರ್ಕಾರದ ಖಜಾನೆಯಿಂದ ಶ್ರೀಮಂತ ಬಂಡವಾಳಗಾರರಿಗೆ ರಿಯಾಯಿತಿಗಳನ್ನು ನೀಡಲು ಖರ್ಚು ಮಾಡಬಹುದೇ ಹೊರತು ಜನಸಾಮಾನ್ಯರಿಗೆ, ನೌಕರರಿಗೆ ಸರ್ಕಾರದ ಖಜಾನೆಯಿಂದ ಏನು ಸಹಾಯ ಮಾಡಬಾರದು ಎಂಬುದು ಈ ಅಂಶದ ತಿರುಳಾಗಿದೆ.

ಮೂರನೇ ಅಂಶ- ’ಹೂಡಿಕೆ’ಗಳನ್ನು ಸಂಸ್ಥೆಗಳಿಗೆ ’ಸಾಲ’ದ ಸ್ವರೂಪದ ಬದಲಾಗಿ ಷೇರು ಬಂಡವಾಳ ಪದ್ಧತಿಯಲ್ಲಿ ನೀಡುವುದು: ಇಲ್ಲಿ ನೌಕರರ ಉಳಿತಾಯದ ಹಣವನ್ನೇ ಪೂರ್ಣ ವಂಚಿಸುವ ಹುನ್ನಾರವಿದೆ. ನೌಕರರ ಉಳಿತಾಯವನ್ನು ಸಾಲದ ರೂಪದಲ್ಲಿ ಹೂಡಿಕೆ ಮಾಡುವುದಕ್ಕೂ ಷೇರುಗಳಾಗಿ ಬಳಸುವುದಕ್ಕೂ ವ್ಯತ್ಯಾಸವಿದೆ. ಸಾಲವೆಂದು ಪರಿಗಣಿಸಿದಾಗ ಬಡ್ಡಿಯನ್ನು ನೀಡಲಾಗುತ್ತದೆ. ಅದಕ್ಕೆ ಬದಲಾಗಿ ಕಂಪನಿಯ ಷೇರು ಬಂಡವಾಳವಾಗಿ ಪರಿಗಣಿಸಿದರೆ ಕಂಪನಿಗೆ ಲಾಭ ಬಂದರೆ ಡಿವಿಡೆಂಡ್ ನೀಡಲಾಗುತ್ತದೆ. ನಷ್ಟವಾದರೆ ಇಡೀ ಉಳಿತಾಯವೇ ಇಲ್ಲವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...