Homeಕರ್ನಾಟಕಒಪಿಎಸ್ ಜಾರಿಗೆ ಛತ್ತೀಸ್‌ಗಡ ಕಾಂಗ್ರೆಸ್‌ ಗೌರ್ಮೆಂಟ್ ನಿರ್ಧಾರ; ರಾಜ್ಯದಲ್ಲಿ ಎಚ್ಚೆತ್ತುಕೊಳ್ಳುವುದೇ ಬಿಜೆಪಿ ಸರ್ಕಾರ?

ಒಪಿಎಸ್ ಜಾರಿಗೆ ಛತ್ತೀಸ್‌ಗಡ ಕಾಂಗ್ರೆಸ್‌ ಗೌರ್ಮೆಂಟ್ ನಿರ್ಧಾರ; ರಾಜ್ಯದಲ್ಲಿ ಎಚ್ಚೆತ್ತುಕೊಳ್ಳುವುದೇ ಬಿಜೆಪಿ ಸರ್ಕಾರ?

- Advertisement -
- Advertisement -

ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ಅಥವಾ ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್‌) ಯಾವುದನ್ನಾದರೂ ಆಯ್ಕೆ ಮಾಡಿಕೊಳ್ಳುವ ಅವಕಾಶ ಛತ್ತೀಸ್‌ಗಡ ಸರ್ಕಾರಿ ನೌಕರರಿಗೆ ದೊರೆತಿದೆ.

ಏಪ್ರಿಲ್ 1, 2022ರ ನಂತರ ಸರ್ಕಾರಿ ಸೇವೆಗೆ ಸೇರಿದವರು ಹಳೆಯ ಪಿಂಚಣಿ ಯೋಜನೆಯ ಭಾಗವಾಗಿರುವುದು ಕಡ್ಡಾಯವಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

“ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ನವೆಂಬರ್ 1, 2004ರ ನಂತರ ಮತ್ತು ಏಪ್ರಿಲ್ 2022ರ ಮೊದಲು ನೇಮಕಗೊಂಡ ನೌಕರರಿಗೆ ಆಯ್ಕೆಯನ್ನು ನೀಡುವ ಮೂಲಕ ಒಪಿಎಸ್ ಅನ್ನು ಪರಿಚಯಿಸಲು ಕ್ಯಾಬಿನೇಟ್ ಸಭೆಯಲ್ಲಿ ನಿರ್ಧರಿಸಲಾಗಿದೆ” ಎಂದು ಸರ್ಕಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಸರ್ಕಾರಿ ನೌಕರರನ್ನು ಏಪ್ರಿಲ್ 1, 2022ರಿಂದ ಛತ್ತೀಸ್‌ಗಢದ ಸಾಮಾನ್ಯ ಭವಿಷ್ಯ ನಿಧಿಯ ಸದಸ್ಯರನ್ನಾಗಿ ಪರಿಗಣಿಸಲಾಗುತ್ತದೆ. ನವೆಂಬರ್ 1, 2004ರಿಂದ ಅಥವಾ ಅದರ ನಂತರ ಮಾರ್ಚ್ 31, 2022ರವರೆಗೆ ಎನ್‌ಪಿಎಸ್ ಖಾತೆಯಲ್ಲಿ ಠೇವಣಿ ಮಾಡಿದ ಉದ್ಯೋಗಿಯ ಕೊಡುಗೆಯನ್ನು ಹಾಗೂ ಅದರಿಂದ ಗಳಿಸಿದ ಲಾಭಾಂಶವನ್ನು ಪರಿಗಣಿಸಲಾಗುತ್ತದೆ. ಎನ್‌ಪಿಎಸ್‌ ನಿಯಮಗಳ ಅಡಿಯಲ್ಲಿ ಸರ್ಕಾರಿ ಉದ್ಯೋಗಿಗೆ ಪಾವತಿಸಲಾಗುವುದು.

ರಾಜ್ಯ ಸರ್ಕಾರದ ಕೊಡುಗೆ ಮತ್ತು ಅದರಿಂದ ಗಳಿಸಿದ ಲಾಭಾಂಶವನ್ನು ಠೇವಣಿ ಮಾಡಿದ ನಂತರವೇ ನೌಕರರು ಹಳೆಯ ಪಿಂಚಣಿ ಯೋಜನೆಗೆ ಅರ್ಹರಾಗುತ್ತಾರೆ.

ಸರ್ಕಾರಿ ನೌಕರರು ಎನ್‌ಪಿಎಸ್ ಅಡಿಯಲ್ಲಿ ಮುಂದುವರಿಯುವ ಅಥವಾ ಹಳೆಯ ಪಿಂಚಣಿ ಯೋಜನೆಯ ಪ್ರಯೋಜನವನ್ನು ನೋಟರೈಸ್ ಮಾಡಿದ ಅಫಿಡವಿಟ್‌ನಲ್ಲಿ ಪಡೆಯುವ ಆಯ್ಕೆಯನ್ನು ಆರಿಸಬೇಕಾಗುತ್ತದೆ. ಈ ಆಯ್ಕೆಯು ಅಂತಿಮವಾಗಿದ್ದು ಬದಲಾಯಿಸಲು ಸಾಧ್ಯವಿಲ್ಲ.

ಈ ವರ್ಷದ ಆರಂಭದಲ್ಲಿ ನಡೆದ ಅಸೆಂಬ್ಲಿಯ ಬಜೆಟ್ ಅಧಿವೇಶನದಲ್ಲಿ ಬಘೆಲ್ ಅವರು, “ತಮ್ಮ ಸರ್ಕಾರವು ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಲಿದೆ” ಎಂದು ಘೋಷಿಸಿದ್ದರು.

ರಾಜ್ಯದಲ್ಲಿ ಹೋರಾಟಕ್ಕೆ ಗೆಲುವು ದೊರಕುವುದೇ?

ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಒಪಿಎಸ್ ಜಾರಿಗೆ ಕ್ರಮ ಜರುಗಿಸಲಾಗುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಚುನಾವಣೆಗೂ ಮುನ್ನ ‘ವೋಟ್ ಫಾರ್‌ ಒಪಿಎಸ್’ ಅಭಿಯಾನವನ್ನು ಸರ್ಕಾರಿ ನೌಕರರು ನಡೆಸಿದ್ದರು. ಅಲ್ಲಿ ಕಾಂಗ್ರೆಸ್ ಗೆದ್ದಿದೆ. ಮುಂದಿನ ದಿನಗಳಲ್ಲಿ ಛತ್ತೀಸ್‌ಗಡದಂತೆಯೇ ಹಿಮಾಚಲ ಪ್ರದೇಶದಲ್ಲೂ ಒಪಿಎಸ್ ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ಸರ್ಕಾರಿ ನೌಕರರು ಭಾವಿಸಿದ್ದಾರೆ.

“ವೋಟ್ ಫಾರ್‌ ಒಪಿಎಸ್ ಮೂಲಕ ಜಾಗೃತಿ ಮೂಡಿಸುತ್ತಿದ್ದೇವೆ. ಒಪಿಎಸ್ ಜಾರಿಗೊಳಿಸಿದವರಿಗೆ ನೌಕರರು ಮತ ನೀಡಲಿದ್ದಾರೆ. ಹೀಗಾಗಿ ಕರ್ನಾಟಕದಲ್ಲೂ ಒಪಿಎಸ್ ಜಾರಿಗೆ ತರಲು ಸರ್ಕಾರ ಮುಂದಾಗಬೇಕು” ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ ಒತ್ತಾಯಿಸುತ್ತಿದೆ.

ಎನ್‌ಪಿಎಸ್ ಆತಂಕಕಾರಿ ಏಕೆ?

’ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ’ದ ವತಿಯಿಂದ 2016ರಲ್ಲಿ ಬಿಡುಗಡೆ ಮಾಡಲಾಗಿರುವ ’ನಿಶ್ಚಿತ ಪಿಂಚಣಿ ನಮ್ಮ ಹಕ್ಕು’ ಕೈಪಿಡಿಯಲ್ಲಿ ದಿವಂಗತ ಎಸ್.ಪ್ರಸನ್ನಕುಮಾರ್ ಅವರು ಎನ್‌ಪಿಎಸ್‌ನ ಅವಾಂತರಗಳ ಕುರಿತು ವಿವರಿಸಿದ್ದಾರೆ. ಎನ್‌ಪಿಎಸ್ ತಳಹದಿಯಾಗಿರುವ ಮೂರು ಅಂಶಗಳ ಕುರಿತು ಬೆಳಕು ಚೆಲ್ಲಿ ಸರ್ಕಾರಿ ನೌಕರರಲ್ಲಿ ಜಾಗೃತಿ ಮೂಡಿಸಿದ್ದಾರೆ.

ಒಂದನೇ ಅಂಶ- ಪಿಂಚಣಿ ವಿಚಾರದಲ್ಲಿ ನಿಗದಿತ ಫಲ ಅಥವಾ ಲಾಭದ ಬದಲು ’ನಿಗದಿತ ಕೊಡುಗೆ’ ವ್ಯವಸ್ಥೆ: ನಿಗದಿತ ಫಲವೆಂದರೆ ಈಗಾಗಲೇ ಇರುವ ಪಿಂಚಣಿ ವ್ಯವಸ್ಥೆಯಾಗಿದೆ. ಒಂದು ನಿರ್ದಿಷ್ಟ ಕಾಲದವರೆಗೆ ಸೇವೆ ಸಲ್ಲಿಸಿ ನಿವೃತ್ತಿಯಾದಾಗ, ಸಲ್ಲಿಸಿದ ಸೇವೆಯ ವರ್ಷಗಳ ಆಧಾರದಲ್ಲಿ ಪಿಂಚಣಿ ನಿಗದಿಪಡಿಸಲಾಗುತ್ತಿತ್ತು. ಯಾವುದೇ ನೌಕರರಿಗೆ ನಿವೃತ್ತಿ ವೇತನ ಎಷ್ಟು ಸಿಗಬೇಕೆಂಬುದು ಸೇವೆಗೆ ಸೇರಿದ್ದಾಗಲೇ ಸೇವಾ ನಿಯಮಗಳ ಪ್ರಕಾರ ನಿಗದಿಯಾಗುತ್ತದೆ. ಆದರೆ ಎನ್‌ಪಿಎಸ್ ಮೂಲಕ ಅದನ್ನೀಗ ’ನಿಗದಿತ ಕೊಡುಗೆ’ ಪಿಂಚಣಿ ವಿಧಾನವನ್ನಾಗಿ ಬದಲಿಸಲಾಗಿದೆ. ಪ್ರತಿ ನೌಕರನ ಸಂಬಳದ ನಿಗದಿತ ಮೊತ್ತದಲ್ಲಿ ಪ್ರತಿ ತಿಂಗಳು ಶೇ. 10ರಷ್ಟು ಕಡಿತ ಮಾಡಿ ’ಪಿಂಚಣಿ ನಿಧಿ’ಗೆ ಜಮಾ ಮಾಡಲಾಗುತ್ತದೆ. ಪಿಂಚಣಿ ನಿಧಿಗೆ ನೌಕರನು ನಿರ್ದಿಷ್ಟ ಕೊಡುಗೆ ನೀಡಬೇಕಾಗುತ್ತದೆ. ಆದರೆ ಪಿಂಚಣಿ ಎಷ್ಟು ದೊರೆಯುತ್ತದೆ, ಎಷ್ಟು ವರ್ಷದ ಸೇವೆಗೆ ಎಷ್ಟು ನೀಡಲಾಗುತ್ತದೆ? ಎಂಬಿತ್ಯಾದಿ ಪ್ರಶ್ನೆಗಳಿಗೆ ನಿಖರ ಉತ್ತರವಿಲ್ಲ. ಅಂದರೆ ನೌಕರರ ಪಿಂಚಣಿ ಕಡಿತ ಮಾಡುವ ಜವಾಬ್ದಾರಿ ಹೊತ್ತ ಸಂಸ್ಥೆಗಳು ತಮ್ಮ ಲಾಭ ನಷ್ಟಕ್ಕೆ ಅನುಗುಣವಾಗಿ ಪಿಂಚಣಿ ಮೊತ್ತವನ್ನು ನಿಗದಿಪಡಿಸುತ್ತವೆ.

ಎರಡನೇ ಅಂಶ- ಸಾಮಾಜಿಕ ಸಹಾಯದ ಬದಲಾಗಿ ವಿಮಾ ಪದ್ಧತಿ: ಸಾಮಾಜಿಕ ಸಹಾಯವೆಂಬುದು ಸರ್ಕಾರ ಜವಾಬ್ದಾರಿಯಾಗಿತ್ತು. ಆದರೆ ಈಗ ನೌಕರರೇ ತಮ್ಮ ಉಳಿತಾಯದ ಮೂಲಕ ಭವಿಷ್ಯವನ್ನು ಭದ್ರತೆ ಮಾಡಿಕೊಳ್ಳಬೇಕು ಎಂಬುದನ್ನು ’ವಿಮೆ’ಯ ಪ್ರಸ್ತಾಪ ಹೇಳುತ್ತದೆ. ಸಮಾಜದ ಎಲ್ಲ ಜನರ ಕೊಡುಗೆಯಿಂದಿರುವ ಸರ್ಕಾರದ ಖಜಾನೆಯಿಂದ ಶ್ರೀಮಂತ ಬಂಡವಾಳಗಾರರಿಗೆ ರಿಯಾಯಿತಿಗಳನ್ನು ನೀಡಲು ಖರ್ಚು ಮಾಡಬಹುದೇ ಹೊರತು ಜನಸಾಮಾನ್ಯರಿಗೆ, ನೌಕರರಿಗೆ ಸರ್ಕಾರದ ಖಜಾನೆಯಿಂದ ಏನು ಸಹಾಯ ಮಾಡಬಾರದು ಎಂಬುದು ಈ ಅಂಶದ ತಿರುಳಾಗಿದೆ.

ಮೂರನೇ ಅಂಶ- ’ಹೂಡಿಕೆ’ಗಳನ್ನು ಸಂಸ್ಥೆಗಳಿಗೆ ’ಸಾಲ’ದ ಸ್ವರೂಪದ ಬದಲಾಗಿ ಷೇರು ಬಂಡವಾಳ ಪದ್ಧತಿಯಲ್ಲಿ ನೀಡುವುದು: ಇಲ್ಲಿ ನೌಕರರ ಉಳಿತಾಯದ ಹಣವನ್ನೇ ಪೂರ್ಣ ವಂಚಿಸುವ ಹುನ್ನಾರವಿದೆ. ನೌಕರರ ಉಳಿತಾಯವನ್ನು ಸಾಲದ ರೂಪದಲ್ಲಿ ಹೂಡಿಕೆ ಮಾಡುವುದಕ್ಕೂ ಷೇರುಗಳಾಗಿ ಬಳಸುವುದಕ್ಕೂ ವ್ಯತ್ಯಾಸವಿದೆ. ಸಾಲವೆಂದು ಪರಿಗಣಿಸಿದಾಗ ಬಡ್ಡಿಯನ್ನು ನೀಡಲಾಗುತ್ತದೆ. ಅದಕ್ಕೆ ಬದಲಾಗಿ ಕಂಪನಿಯ ಷೇರು ಬಂಡವಾಳವಾಗಿ ಪರಿಗಣಿಸಿದರೆ ಕಂಪನಿಗೆ ಲಾಭ ಬಂದರೆ ಡಿವಿಡೆಂಡ್ ನೀಡಲಾಗುತ್ತದೆ. ನಷ್ಟವಾದರೆ ಇಡೀ ಉಳಿತಾಯವೇ ಇಲ್ಲವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...