Homeಮುಖಪುಟಛತ್ತೀಸ್‌ಗಢ | ಎನ್‌ಕೌಂಟರ್‌ನಲ್ಲಿ 30 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢ | ಎನ್‌ಕೌಂಟರ್‌ನಲ್ಲಿ 30 ಮಾವೋವಾದಿಗಳ ಹತ್ಯೆ

- Advertisement -
- Advertisement -

ಛತ್ತೀಸ್‌ಗಢದ ನಾರಾಯಣಪುರ-ದಂತೇವಾಡ ಗಡಿಯಲ್ಲಿರುವ ಅರಣ್ಯದಲ್ಲಿ ಶುಕ್ರವಾರ ಭದ್ರತಾ ಪಡೆಗಳು ಮೂವತ್ತು ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಭದ್ರತಾ ಪಡೆಗಳು ಇತ್ತೀಚಿನ ದಿನಗಳಲ್ಲಿ ನಡೆಸಿದ ಅತೀ ದೊಡ್ಡ ಕಾರ್ಯಾಚರಣೆ ಇದಾಗಿದೆ ಎಂದು ಎಂದು ಮೂಲಗಳು ತಿಳಿಸಿವೆ.ಛತ್ತೀಸ್‌ಗಢ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್‌ಜಿ) ಮತ್ತು ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಗುರುವಾರ ಮಾವೋವಾದಿ ವಿರೋಧಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ಶುಕ್ರವಾರ ಮಧ್ಯಾಹ್ನ 12.30 ಕ್ಕೆ ಅವರ ಸಂಪರ್ಕ ಸಿಕ್ಕಿದೆ ಎಂದು ಮೂಲಗಳು ತಿಳಿಸಿವೆ. ಎನ್‌ಕೌಂಟರ್ ಇನ್ನೂ ಮುಂದುವರೆದಿದೆ ಎಂದು ಎನ್‌ಡಿಟಿವಿ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

ಇದನ್ನೂಓದಿ: ಓಲಾ ಕ್ಯಾಬ್‌ನಲ್ಲಿ ಲೈಂಗಿಕ ಕಿರುಕುಳ ಪ್ರಕರಣ : ಸಂತ್ರಸ್ತೆಗೆ ಪರಿಹಾರ ಪಾವತಿಸುವ ಆದೇಶಕ್ಕೆ ಹೈಕೋರ್ಟ್ ತಡೆ

ಎಕೆ ಸರಣಿ ಮತ್ತು ಇತರ ಶಸ್ತ್ರಾಸ್ತ್ರಗಳು ಸೇರಿದಂತೆ ಹಲವಾರು ಆಕ್ರಮಣಕಾರಿ ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಮಾವೋವಾದಿಗಳ ಗುಂಪು ಇರುವ ಬಗ್ಗೆ ಗುಪ್ತಚರ ವರದಿಗಳ ಆಧಾರದಲ್ಲಿ ಜಂಟಿ ಕಾರ್ಯಾಚರಣೆ ನಡೆಸಲಾಗಿದ್ದು, ಪ್ರತ್ಯೇಕ ತಂಡಗಳನ್ನು ಗುರುವಾರ ಓರ್ಚಾ ಮತ್ತು ಬಾರ್ಸೂರು ಪೊಲೀಸ್ ಠಾಣೆ ವ್ಯಾಪ್ತಿಯ ಗೋವೆಲ್, ನೆಂದೂರು ಮತ್ತು ತುಳುತುಳಿ ಗ್ರಾಮಗಳಿಗೆ ಕಳುಹಿಸಲಾಗಿದೆ. ಅವರು ಈ ಗ್ರಾಮಗಳಲ್ಲಿ ಕೂಂಬಿಂಗ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು.

ನೆಂದೂರು-ತುಳತುಳಿ ಸಮೀಪದ ಅರಣ್ಯದಲ್ಲಿ ಇಂದು ಮಧ್ಯಾಹ್ನ ಎನ್‌ಕೌಂಟರ್‌ ನಡೆದಿದೆ. ತೀವ್ರ ಎಚ್ಚರಿಕೆಯ ಮೂಲಕ ಭದ್ರತಾ ಪಡೆಗಳು ಕಾಡಿನೊಳಗೆ ನುಸುಳಿರುವ ಕೆಲವು ಉಳಿದ ಮಾವೋವಾದಿಗಳನ್ನು ಹಿಂಬಾಲಿಸುತ್ತಿವೆ ಎಂದು ಮೂಲಗಳು ತಿಳಿಸಿವೆ.ಛತ್ತೀಸ್‌ಗಢ

ಪ್ರಸ್ತುತ ಎನ್‌ಕೌಂಟರ್ ಛತ್ತೀಸ್‌ಗಢದಲ್ಲಿ ಮಾವೋವಾದಿ ದಂಗೆಯ ವಿರುದ್ಧದ ಹೋರಾಟದಲ್ಲಿ ಭದ್ರತಾ ಪಡೆಗಳಿಗೆ ಸಿಕ್ಕ ದೊಡ್ಡ ಯಶಸ್ಸನ್ನು ಎಂದು ಬಣ್ಣಿಸಲಾಗಿದೆ.

ವಿಡಿಯೊ ನೋಡಿ: ‘ಅಂಬೇಡ್ಕರ್ ರಚಿಸಲಿದ್ದ ಸಂವಿಧಾನವನ್ನು ಗುರಿಯಾಗಿಸಿಕೊಂಡಿದ್ದವರ ಮೊದಲ ಗುಂಡು ಬಿದ್ದಿದ್ದು ಗಾಂಧಿ ಎದೆಗೆ’: ಎ ನಾರಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಮಾರ್ಚ್ 31ರಂದು ಶೆಲ್ಲಿ...

ಅಸ್ಸಾಂನ ನಾಗಾಂವ್‌ನಲ್ಲಿ ದರೋಡೆ ಶಂಕೆಯ ಮೇಲೆ ಗುಂಪು ದಾಳಿ: ಮೂವರು ಮುಸ್ಲಿಂ ಪುರುಷರು ಸಾವು

ದರೋಡೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದ ಗುಂಪು ದಾಳಿಯಲ್ಲಿ ಮೂವರು ಮುಸ್ಲಿಂ ಪುರುಷರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸೈಫುಲ್ಲಾ, ಅಜೀಬುರ್ ಅಲಿಯಾಸ್ ಖೈರುಲ್ ಮತ್ತು ಇನಾಮುಲ್...