Homeಮುಖಪುಟಛತ್ತೀಸ್‌ಗಢ | ಎನ್‌ಕೌಂಟರ್‌ನಲ್ಲಿ 30 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢ | ಎನ್‌ಕೌಂಟರ್‌ನಲ್ಲಿ 30 ಮಾವೋವಾದಿಗಳ ಹತ್ಯೆ

- Advertisement -
- Advertisement -

ಛತ್ತೀಸ್‌ಗಢದ ನಾರಾಯಣಪುರ-ದಂತೇವಾಡ ಗಡಿಯಲ್ಲಿರುವ ಅರಣ್ಯದಲ್ಲಿ ಶುಕ್ರವಾರ ಭದ್ರತಾ ಪಡೆಗಳು ಮೂವತ್ತು ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಭದ್ರತಾ ಪಡೆಗಳು ಇತ್ತೀಚಿನ ದಿನಗಳಲ್ಲಿ ನಡೆಸಿದ ಅತೀ ದೊಡ್ಡ ಕಾರ್ಯಾಚರಣೆ ಇದಾಗಿದೆ ಎಂದು ಎಂದು ಮೂಲಗಳು ತಿಳಿಸಿವೆ.ಛತ್ತೀಸ್‌ಗಢ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್‌ಜಿ) ಮತ್ತು ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಗುರುವಾರ ಮಾವೋವಾದಿ ವಿರೋಧಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ಶುಕ್ರವಾರ ಮಧ್ಯಾಹ್ನ 12.30 ಕ್ಕೆ ಅವರ ಸಂಪರ್ಕ ಸಿಕ್ಕಿದೆ ಎಂದು ಮೂಲಗಳು ತಿಳಿಸಿವೆ. ಎನ್‌ಕೌಂಟರ್ ಇನ್ನೂ ಮುಂದುವರೆದಿದೆ ಎಂದು ಎನ್‌ಡಿಟಿವಿ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

ಇದನ್ನೂಓದಿ: ಓಲಾ ಕ್ಯಾಬ್‌ನಲ್ಲಿ ಲೈಂಗಿಕ ಕಿರುಕುಳ ಪ್ರಕರಣ : ಸಂತ್ರಸ್ತೆಗೆ ಪರಿಹಾರ ಪಾವತಿಸುವ ಆದೇಶಕ್ಕೆ ಹೈಕೋರ್ಟ್ ತಡೆ

ಎಕೆ ಸರಣಿ ಮತ್ತು ಇತರ ಶಸ್ತ್ರಾಸ್ತ್ರಗಳು ಸೇರಿದಂತೆ ಹಲವಾರು ಆಕ್ರಮಣಕಾರಿ ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಮಾವೋವಾದಿಗಳ ಗುಂಪು ಇರುವ ಬಗ್ಗೆ ಗುಪ್ತಚರ ವರದಿಗಳ ಆಧಾರದಲ್ಲಿ ಜಂಟಿ ಕಾರ್ಯಾಚರಣೆ ನಡೆಸಲಾಗಿದ್ದು, ಪ್ರತ್ಯೇಕ ತಂಡಗಳನ್ನು ಗುರುವಾರ ಓರ್ಚಾ ಮತ್ತು ಬಾರ್ಸೂರು ಪೊಲೀಸ್ ಠಾಣೆ ವ್ಯಾಪ್ತಿಯ ಗೋವೆಲ್, ನೆಂದೂರು ಮತ್ತು ತುಳುತುಳಿ ಗ್ರಾಮಗಳಿಗೆ ಕಳುಹಿಸಲಾಗಿದೆ. ಅವರು ಈ ಗ್ರಾಮಗಳಲ್ಲಿ ಕೂಂಬಿಂಗ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು.

ನೆಂದೂರು-ತುಳತುಳಿ ಸಮೀಪದ ಅರಣ್ಯದಲ್ಲಿ ಇಂದು ಮಧ್ಯಾಹ್ನ ಎನ್‌ಕೌಂಟರ್‌ ನಡೆದಿದೆ. ತೀವ್ರ ಎಚ್ಚರಿಕೆಯ ಮೂಲಕ ಭದ್ರತಾ ಪಡೆಗಳು ಕಾಡಿನೊಳಗೆ ನುಸುಳಿರುವ ಕೆಲವು ಉಳಿದ ಮಾವೋವಾದಿಗಳನ್ನು ಹಿಂಬಾಲಿಸುತ್ತಿವೆ ಎಂದು ಮೂಲಗಳು ತಿಳಿಸಿವೆ.ಛತ್ತೀಸ್‌ಗಢ

ಪ್ರಸ್ತುತ ಎನ್‌ಕೌಂಟರ್ ಛತ್ತೀಸ್‌ಗಢದಲ್ಲಿ ಮಾವೋವಾದಿ ದಂಗೆಯ ವಿರುದ್ಧದ ಹೋರಾಟದಲ್ಲಿ ಭದ್ರತಾ ಪಡೆಗಳಿಗೆ ಸಿಕ್ಕ ದೊಡ್ಡ ಯಶಸ್ಸನ್ನು ಎಂದು ಬಣ್ಣಿಸಲಾಗಿದೆ.

ವಿಡಿಯೊ ನೋಡಿ: ‘ಅಂಬೇಡ್ಕರ್ ರಚಿಸಲಿದ್ದ ಸಂವಿಧಾನವನ್ನು ಗುರಿಯಾಗಿಸಿಕೊಂಡಿದ್ದವರ ಮೊದಲ ಗುಂಡು ಬಿದ್ದಿದ್ದು ಗಾಂಧಿ ಎದೆಗೆ’: ಎ ನಾರಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...