Homeಮುಖಪುಟಛತ್ತೀಸ್‌ಗಢ ಎನ್‌ಕೌಂಟರ್‌: ಮಾವೋವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ಬಸವರಾಜು ಹತ್ಯೆ

ಛತ್ತೀಸ್‌ಗಢ ಎನ್‌ಕೌಂಟರ್‌: ಮಾವೋವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ಬಸವರಾಜು ಹತ್ಯೆ

- Advertisement -
- Advertisement -

ಛತ್ತೀಸ್‌ಗಢದ ನಾರಾಯಣಪುರ ಪ್ರದೇಶದಲ್ಲಿ ಬುಧವಾರ (ಮೇ.21) ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ನಿಷೇಧಿತ ಸಿಪಿಐ (ಮಾವೋವಾದಿ) ಪಕ್ಷದ 27 ಮಂದಿ ಸದಸ್ಯರು ಸಾವಿಗೀಡಾಗಿದ್ದಾರೆ.

ಮೃತರಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಸುಮಾರು 68 ವರ್ಷ ವಯಸ್ಸಿನ ನಂಬಾಲಾ ಕೇಶವ ರಾವ್ ಅಲಿಯಾಸ್ ಬಸವರಾಜು ಸೇರಿದ್ದಾರೆ ಎಂದು ವರದಿಯಾಗಿದೆ.

ಕಾರ್ಯಾಚರಣೆಯ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, “ನಕ್ಸಲ್‌ವಾದವನ್ನು ನಿರ್ಮೂಲನೆ ಮಾಡುವ ಹೋರಾಟದಲ್ಲಿ ಇದೊಂದು ಹೆಗ್ಗುರುತಿನ ಸಾಧನೆ. ಇಂದು, ಛತ್ತೀಸ್‌ಗಢದ ನಾರಾಯಣಪುರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ, ನಮ್ಮ ಭದ್ರತಾ ಪಡೆಗಳು 27 ಭಯಾನಕ ಮಾವೋವಾದಿಗಳನ್ನು ಹತ್ಯೆ ಮಾಡಿದ್ದಾರೆ. ಅವರಲ್ಲಿ ಸಿಪಿಐ-ಮಾವೋವಾದಿಯ ಪ್ರಧಾನ ಕಾರ್ಯದರ್ಶಿ, ಅಗ್ರ ನಾಯಕ ಮತ್ತು ನಕ್ಸಲ್ ಚಳುವಳಿಯ ಬೆನ್ನೆಲುಬು ನಂಬಾಲಾ ಕೇಶವ ರಾವ್ ಅಲಿಯಾಸ್ ಬಸವರಾಜು ಸೇರಿದ್ದಾರೆ. ನಕ್ಸಲ್‌ವಾದದ ವಿರುದ್ಧ ಭಾರತ ನಡೆಸುತ್ತಿರುವ ಮೂರು ದಶಕಗಳ ಹೋರಾಟದಲ್ಲಿ ಇದೇ ಮೊದಲ ಬಾರಿಗೆ ಪ್ರಧಾನ ಕಾರ್ಯದರ್ಶಿ ಶ್ರೇಣಿಯ ನಾಯಕನನ್ನು ನಮ್ಮ ಪಡೆಗಳು ಹತ್ಯೆಗೈದಿವೆ. ಈ ಮಹತ್ವದ ಸಾಧನೆಗಾಗಿ ನಮ್ಮ ಧೈರ್ಯಶಾಲಿ ಭದ್ರತಾ ಪಡೆಗಳು ಮತ್ತು ಸಂಸ್ಥೆಗಳನ್ನು ನಾನು ಶ್ಲಾಘಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಹತರಾದ ಬಸವರಾಜು ಅವರು, 2010ರಲ್ಲಿ ದಂತೇವಾಡದಲ್ಲಿ 76 ಸಿಆರ್‌ಪಿಎಫ್ ಸಿಬ್ಬಂದಿ ಮೃತಪಟ್ಟಿದ್ದ ದಾಳಿ ಮತ್ತು 2013ರಲ್ಲಿ ಛತ್ತೀಸ್‌ಗಢ ರಾಜ್ಯ ಕಾಂಗ್ರೆಸ್ ನಾಯಕರೂ ಸೇರಿದಂತೆ 27 ಮಂದಿ ಸಾವಿಗೀಡಾಗಿದ್ದ ಜೀರಂ ಘಾಟಿ ಹತ್ಯಾಕಾಂಡ ಸೇರಿದಂತೆ ಪ್ರಮುಖ ಮಾವೋವಾದಿ ದಾಳಿಗಳ ಹಿಂದಿನ ಮಾಸ್ಟರ್ ಮೈಂಡ್ ಎಂದು ಆರೋಪಿಸಲಾಗಿದೆ.

ಬಸವರಾಜು ಅವರ ತಲೆಗೆ ಎನ್‌ಐಎ, ಛತ್ತೀಸ್‌ಗಢ ಸೇರಿದಂತೆ ವಿವಿಧ ರಾಜ್ಯ ಸರ್ಕಾರಗಳು 1.5 ಕೋಟಿ ರೂಪಾಯಿಯಷ್ಟು ನಗದು ಬಹುಮಾನ ಘೋಷಿಸಿತ್ತು.

ಬಸವರಾಜು ಯಾರು?

ವರದಿಗಳ ಪ್ರಕಾರ, ಸುಮಾರು 68 ವರ್ಷ ವಯಸ್ಸಿನ ಬಸವರಾಜು ಅವರು ಸಿಪಿಐ (ಮಾವೋವಾದಿ) ಪಕ್ಷದ ಪ್ರಧಾನ ಕಾರ್ಯದರ್ಶಿ, ಅದರ ಪಾಲಿಟ್‌ಬ್ಯೂರೋ, ಕೇಂದ್ರ ಸಮಿತಿ ಮತ್ತು ಕೇಂದ್ರ ಸೇನಾ ಸಮಿತಿ ನಾಯಕರಾಗಿದ್ದರು.

ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಜಿಯನ್ನಪೇಟೆ ಮೂಲದ ಬಸವರಾರು ಅವರು ಈಗಿನ ತೆಲಂಗಾಣ ರಾಜ್ಯದ ವಾರಂಗಲ್‌ನ ಪ್ರಾದೇಶಿಕ ಇಂಜಿನಿಯರಿಂಗ್ ಕಾಲೇಜಿನಿಂದ ಇಂಜಿನಿಯರಿಂಗ್ ಪದವಿ ಪಡೆದವರು. ರ್‍ಯಾಡಿಕಲ್ ಸ್ಟೂಡೆಂಟ್ ಯೂನಿಯನ್ (ಆರ್‌ಎಸ್‌ಯು) ಮೂಲಕ ರಾಜಕೀಯ ಜೀವನ ಆರಂಭಿಸಿದ್ದ ಅವರು, ನಂತರ ನಕ್ಸಲ್ ಚಳವಳಿಗೆ ಸೇರಿಕೊಂಡರು.

ಕಾಲೇಜು ದಿನಗಳಲ್ಲಿಯೇ ಎಡಪಂಥೀಯ ವಿದ್ಯಾರ್ಥಿ ರಾಜಕಾರಣದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಬಸವರಾಜು ಅವರು, 1980ರಲ್ಲಿ ‘ಸಿಪಿಐ (ಮಾರ್ಕ್ಸ್‌-ಲೆನಿನ್) ಪೀಪಲ್ಸ್ ವಾರ್‌’ ಪಕ್ಷವನ್ನು ಇತರರ ಜೊತೆ ಸೇರಿಕೊಂಡು ಸ್ಥಾಪಿಸಿದ್ದರು. 1992ರಲ್ಲಿ ಆ ಪಕ್ಷದ ಕೇಂದ್ರ ಸಮಿತಿ ಸದಸ್ಯರಾಗಿದ್ದರು. 2004ರಲ್ಲಿ ಸಿಪಿಐ (ಮಾವೋವಾದಿ) ಪಕ್ಷದೊಂದಿಗೆ ‘ಸಿಪಿಐ (ಮಾರ್ಕ್ಸ್‌-ಲೆನಿನ್) ಪೀಪಲ್ಸ್ ವಾರ್’ ವಿಲೀನವಾಯಿತು.

ಆ ಬಳಿಕ ಬಸವರಾಜು ಅವರು ಸಿಪಿಐ (ಮಾವೋವಾದಿ) ಪಕ್ಷದ ಕೇಂದ್ರ ಸೇನಾ ಸಮಿತಿಯ ಮುಖ್ಯಸ್ಥರಾದರು. ನಂತರ ಪಾಲಿಟ್ ಬ್ಯೂರೋ ಸದಸ್ಯರಾದರು.

ಕಾಲೇಜು ದಿನಗಳಲ್ಲಿಯೇ ತೀವ್ರ ಎಡಪಂಥೀಯ ರಾಜಕಾರಣಕ್ಕೆ ತೆರೆದುಕೊಂಡಿದ್ದ ಬಸವರಾಜು ಅವರು, 1980ರಲ್ಲಿ ಎಬಿವಿಪಿ ಸದಸ್ಯರೊಂದಿಗೆ ಜಗಳ ಮಾಡಿಕೊಂಡ ಆರೋಪದಲ್ಲಿ ಬಂಧಿತರಾಗಿದ್ದರು. 1970ರಲ್ಲಿ ಹುಟ್ಟೂರು ತೊರೆದು ನಕ್ಸಲ್ ಚಳವಳಿ ಸೇರಿದ ಅವರು, ಛತ್ತೀಸ್‌ಗಢದ ಬಸ್ತಾರ್‌ನಲ್ಲಿ 1987ರಲ್ಲಿ ಎಲ್‌ಟಿಟಿಇ ಹೋರಾಟಗಾರರಿಂದ ಗೆರಿಲ್ಲಾ ಯುದ್ದ ತಂತ್ರ ಮತ್ತು ಸ್ಟೋಟಕಗಳ ಕುರಿತು ತರಬೇತಿ ಪಡೆದುಕೊಂಡಿದ್ದರು ಎಂದು ಗುಪ್ತಚರ ಮೂಲಗಳನ್ನು ಉಲ್ಲೇಖಿಸಿ ಪ್ರಜಾವಾಣಿ ಪತ್ರಿಕೆ ವರದಿ ಮಾಡಿದೆ.

ಗಂಗಣ್ಣ, ಗಗಣ್ಣ, ಪ್ರಕಾಶ್, ಕೃಷ್ಣ, ವಿಜಯ್, ಬಸವರಾಜು, ಬಿಆರ್, ಉಮೇಶ್, ರಾಜು, ದರಪು ಮತ್ತು ನರಸಿಂಹ ಎಂಬ ಹಲವಾರು ಅಡ್ಡ ಹೆಸರುಗಳಿಂದ ಕರೆಯಲ್ಪಡುತ್ತಿದ್ದ ಕೇಶವ ರಾವ್, 2017-18ರಲ್ಲಿ ಗಣಪತಿ ಅವರಿಂದ ಸಿಪಿಐ (ಮಾವೋವಾದಿ) ಪಕ್ಷದ ಜವಾಬ್ದಾರಿಯನ್ನು ವಹಿಸಿಕೊಂಡರು. ಗಣಪತಿ ಅವರು ವಯಸ್ಸು ಮತ್ತು ಅನಾರೋಗ್ಯದ ಕಾರಣದಿಂದ ಪಕ್ಷದ ಕಾರ್ಯಚಟುವಟಿಕೆಗಳಿಂದ ಹಿಂದೆ ಸರಿದರು ಎಂದು ವರದಿಗಳು ಹೇಳಿವೆ.

ಛತ್ತೀಸ್‌ಗಢ ಮತ್ತು ತೆಲಂಗಾಣ ರಾಜ್ಯಗಳ ಗಡಿ ಪ್ರದೇಶ ಕರ್ರೆಗುತ್ತಲು ಬೆಟ್ಟಗಳಲ್ಲಿ 21 ದಿನಗಳ ಕಾಲ ನಡೆದ ಅತಿದೊಡ್ಡ ‘ಆಪರೇಷನ್ ಬ್ಲಾಕ್ ಫಾರೆಸ್ಟ್’ ಪೂರ್ಣಗೊಂಡ ಕೆಲ ದಿನಗಳ ನಂತರ, ಅಬುಜ್‌ಮಾದ್ ಪ್ರದೇಶದಲ್ಲಿ ನಾರಾಯಣಪುರ, ದಂತೇವಾಡ, ಕೊಂಡಗಾಂವ್ ಮತ್ತು ಬಿಜಾಪುರ ಜಿಲ್ಲೆಗಳ ಡಿಆರ್‌ಜಿ ಘಟಕಗಳನ್ನು ಒಳಗೊಂಡ ಇತ್ತೀಚಿನ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆದಿದೆ.

ಸಿಆರ್‌ಪಿಎಫ್, ಛತ್ತೀಸ್‌ಗಢ ಪೊಲೀಸರು ಮತ್ತು ಇತರ ಕೇಂದ್ರ ಮತ್ತು ರಾಜ್ಯ ಪಡೆಗಳ ಆಪರೇಷನ್ ಬ್ಲಾಕ್ ಫಾರೆಸ್ಟ್‌ನಲ್ಲಿ 31 ಮಾವೋವಾದಿಗಳನ್ನು ಹತ್ಯೆಗೈಯ್ಯಲಾಗಿದೆ. ಶಸ್ತ್ರಾಸ್ತ್ರಗಳು ಮತ್ತು ಇತರ ನಕ್ಸಲ್ ಸರಬರಾಜುಗಳ ಬೃಹತ್ ಸಂಗ್ರಹವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಮೇ 11ರಂದು 21 ದಿನಗಳ ಆಪರೇಷನ್ ‘ಬ್ಲಾಕ್ ಫಾರೆಸ್ಟ್’ ಅಂತ್ಯಗೊಂಡ ನಂತರ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಹಾರಾಷ್ಟ್ರದಾದ್ಯಂತ 54 ನಕ್ಸಲರನ್ನು ಬಂಧಿಸಲಾಗಿದೆ ಮತ್ತು 84 ನಕ್ಸಲರು ಶರಣಾಗಿದ್ದಾರೆ ಎಂದು ಗೃಹ ಸಚಿವರು ಬುಧವಾರ ಮಾಹಿತಿ ನೀಡಿದ್ದಾರೆ.

“ಮಾರ್ಚ್ 31, 2026ರ ಮೊದಲು ದೇಶದಲ್ಲಿ ನಕ್ಸಲಿಸಂ ಅನ್ನು ನಿರ್ಮೂಲನೆ ಮಾಡಲು ಮೋದಿ ಸರ್ಕಾರ ದೃಢನಿಶ್ಚಯ ಮಾಡಿದೆ” ಎಂದು ಗೃಹ ಸಚಿವರು ಹೇಳಿದ್ದಾರೆ.

ಛತ್ತೀಸ್‌ಗಢ ಪೊಲೀಸರ ಪ್ರಕಾರ, ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ನಾರಾಯಣಪುರ ಕಾರ್ಯಾಚರಣೆಯಲ್ಲಿ ಹಲವು ನಕ್ಸಲರನ್ನು ಎನ್‌ಕೌಂಟರ್ ಮಾಡಲಾಗಿದೆ ಮತ್ತು ಅವರಿಗೆ ಸಂಬಂಧಿಸಿದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬುಧವಾರ ಬೆಳಿಗ್ಗೆ 7 ಗಂಟೆಯ ಸುಮಾರಿಗೆ ನಾರಾಯಣಪುರ ವ್ಯಾಪ್ತಿಯ ಬೋಟರ್ ಗ್ರಾಮ ಮತ್ತು ಲೆಕವಾಡಾ ಕಾಡಿನಲ್ಲಿ ಮಾವೋವಾದಿಗಳು ಮತ್ತು ಡಿಆರ್‌ಜಿ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದೆ. ಇದರಲ್ಲಿ ಬಸವರಾಜು ಸೇರಿದಂತೆ 27 ನಕ್ಸಲರನ್ನು ಹತ್ಯೆಗೈಯ್ಯಲಾಗಿದೆ. ಅವರಿಂದ ದೊಡ್ಡ ಮಟ್ಟದಲ್ಲಿ ಆಧುನಿಕ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ನಕ್ಸಲರನ್ನು ಎದುರಿಸುವಾಗ ಒಬ್ಬ ಡಿಆರ್‌ಜಿ ಸಿಬ್ಬಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.

ಬಸವರಾಜು ಹೊರತುಪಡಿಸಿ ಎನ್‌ಕೌಂಟರ್‌ನಲ್ಲಿ ಹತರಾದ ಇತರರಲ್ಲಿ ಹಿರಿಯ ನಕ್ಸಲ್ ನಾಯಕರು ಮತ್ತು ವಾಂಟೆಡ್ ಕಾರ್ಯಕರ್ತರು ಸೇರಿದ್ದಾರೆ. ಅವರ ಗುರುತುಗಳನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ ಟೈಮ್ಸ್ ಆಫ್ ಇಂಡಿಯಾ ವರದಿ ಹೇಳಿದೆ.

“ನಮ್ಮ ಧೈರ್ಯಶಾಲಿ ಭದ್ರತಾ ಸಿಬ್ಬಂದಿ ಮೂರು ದಿನಗಳಿಂದ ಅತ್ಯಂತ ಸವಾಲಿನ ಭೂಪ್ರದೇಶದಲ್ಲಿ ಸಾಟಿಯಿಲ್ಲದ ಸಮರ್ಪಣೆ ಮತ್ತು ಶೌರ್ಯದಿಂದ ದೃಢವಾಗಿ ನಿಂತಿದ್ದಾರೆ. ಈ ಹೋರಾಟವು ನಕ್ಸಲರ ವಿರುದ್ಧ ಮಾತ್ರವಲ್ಲ, ಶಾಂತಿ ಮತ್ತು ಅಭಿವೃದ್ಧಿಯ ಪರವಾಗಿದೆ. ಇಡೀ ರಾಜ್ಯವು ಅವರ ಮನೋಭಾವಕ್ಕೆ ವಂದಿಸುತ್ತದೆ” ಎಂದು ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಹೇಳಿದ್ದಾರೆ.

ಭದ್ರತಾ ಪಡೆಗಳ ಶೋಧ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದು ವರದಿಯಾಗಿದೆ.

ಮುರ್ಷಿದಾಬಾದ್ ಹಿಂಸಾಚಾರದ ವೇಳೆ ಪೊಲೀಸರು ನಿಷ್ಕ್ರಿಯ: ಹೈಕೋರ್ಟ್ ನೇಮಿಸಿದ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...