Homeಮುಖಪುಟಛತ್ತೀಸ್‌ಗಢ | ಎನ್‌ಕೌಂಟರ್‌ನಲ್ಲಿ 31 ನಕ್ಸಲ್‌, ಇಬ್ಬರು ಪೊಲೀಸರ ಸಾವು

ಛತ್ತೀಸ್‌ಗಢ | ಎನ್‌ಕೌಂಟರ್‌ನಲ್ಲಿ 31 ನಕ್ಸಲ್‌, ಇಬ್ಬರು ಪೊಲೀಸರ ಸಾವು

- Advertisement -
- Advertisement -

ಛತ್ತೀಸ್‌ಗಢದ ಗಲಭೆಪೀಡಿತ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ನಡೆದ ಗುಂಡಿನ ಚಕಮಕಿಯಲ್ಲಿ ನಿಷೇಧಿತ ಸಿಪಿಐ (ಮಾವೋವಾದಿ)ನ 31 ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಘರ್ಷದಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ಛತ್ತೀಸ್‌ಗಢ

ಇಬ್ಬರು ಭದ್ರತಾ ಸಿಬ್ಬಂದಿಯನ್ನು ತಕ್ಷಣವೆ ವೈದ್ಯಕೀಯ ಚಿಕಿತ್ಸೆಗಾಗಿ ರಾಯ್‌ಪುರಕ್ಕೆ ಹೆಲಿಕಾಪ್ಟರ್ ಮೂಲಕ ಎನ್‌ಕೌಂಟರ್ ಸ್ಥಳದಿಂದ ಕರೆದೊಯ್ಯಲಾಯಿತು ಮತ್ತು ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಛತ್ತೀಸ್‌ಗಢ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಬೆಳಿಗ್ಗೆ ವಿವಿಧ ಭದ್ರತಾ ಪಡೆಗಳ ಸಿಬ್ಬಂದಿಗಳ ಜಂಟಿ ತಂಡವು ನಕ್ಸಲೈಟ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಪ್ರಾಥಮಿಕ ಮಾಹಿತಿಯ ಪ್ರಕಾರ, ಗುಂಡಿನ ಚಕಮಕಿಯಲ್ಲಿ 31 ನಕ್ಸಲರು ಸಾವನ್ನಪ್ಪಿದ್ದಾರೆ. ಅವರೆಲ್ಲರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಅವರು ಹೇಳಿದ್ದಾರೆ.

ರಾಜ್ಯ ಪೊಲೀಸರ ಜಿಲ್ಲಾ ಮೀಸಲು ಪಡೆ ಮತ್ತು ವಿಶೇಷ ಕಾರ್ಯಪಡೆಗೆ ಸೇರಿದ ಇಬ್ಬರು ಭದ್ರತಾ ಸಿಬ್ಬಂದಿ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

“ಬಿಜಾಪುರ ಜಿಲ್ಲೆಯ ರಾಷ್ಟ್ರೀಯ ಉದ್ಯಾನ ಪ್ರದೇಶದಲ್ಲಿ ಶಸ್ತ್ರಸಜ್ಜಿತ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ, ಜಿಲ್ಲಾ ಮೀಸಲು ಪಡೆ (DRG) ಮತ್ತು ವಿಶೇಷ ಕಾರ್ಯಪಡೆ (STF) ಒಳಗೊಂಡ ಭದ್ರತಾ ಪಡೆಗಳ ಜಂಟಿ ತಂಡವು ಶನಿವಾರ ಮಾವೋವಾದಿ ವಿರೋಧಿ ಕಾರ್ಯಾಚರಣೆಗೆ ಹೊರಟಿತು” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ನಕ್ಸಲ್‌ ಬಂಡುಕೋರರ ಸಾವುನೋವುಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿ ಹೇಳಿದ್ದಾರೆ. ಮೃತ ಭದ್ರತಾ ಸಿಬ್ಬಂದಿಯ ಶವಗಳನ್ನು ವಶಕ್ಕೆ ಪಡೆಯಲು ಮತ್ತು ಗಾಯಗೊಂಡ ಜವಾನರನ್ನು ಸ್ಥಳಾಂತರಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದಾರೆ.

ಸಿಪಿಐ-ಮಾವೋವಾದಿ ಪಕ್ಷದ ತೆಲಂಗಾಣ ರಾಜ್ಯ ಸಮಿತಿಯ ಸದಸ್ಯ ಮಂದಮರ್ರಿ ಪ್ರದೇಶದ ಬಂಡಿ ಪ್ರಕಾಶ್ (65) ಅಲಿಯಾಸ್ ಬಂಡಿ ದಾದಾ ಅಲಿಯಾಸ್ ಪ್ರಭಾತ್ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮೃತರಲ್ಲಿ ಆದಿಲಾಬಾದ್ ಪ್ರದೇಶ ಕಾರ್ಯದರ್ಶಿ ಅಡೇಲು ಭಾಸ್ಕರ್ ಕೂಡ ಸೇರಿದ್ದಾರೆ ಎಂದು ವರದಿಯಾಗಿದೆ.

ಕಾರ್ಯಾಚರಣೆ ನಡೆದ ಸ್ಥಳವು  ಛತ್ತೀಸಗಡ ಮತ್ತು ಮಹಾರಾಷ್ಟ್ರ-ತೆಲಂಗಾಣ ಗಡಿಗೆ ಹೊಂದಿಕೊಂಡಿದೆ. ಅಲ್ಲಿ ಎ.ಕೆ.47, ಎಸ್ ಎಲ್ ಆರ್, ಪಾಯಿಂಟ್ 303 ರೈಫಲ್, ಬ್ಯಾರಲ್ ಗ್ರೆನೇಡ್ ಲಾಂಚರ್ ಗಳು, ಸ್ಫೋಟಕಗಳು ಸೇರಿದಂತೆ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ ಪಡೆಯಲಾಗಿದೆ ಎಂದು  ಬಸ್ತರ್ ವಲಯದ ಐಜಿಪಿ ಪಿ.ಸುಂದರ ರಾಜ್ ತಿಳಿಸಿದ್ದಾರೆ.

ಜಿಲ್ಲಾ ಮೀಸಲು ಪಡೆ, ವಿಶೇಷ ಕಾರ್ಯಪಡೆ ಮತ್ತು ಬಸ್ತರ್ ಫೈಟರ್, ಕೋಬ್ರಾ ಕಮಾಂಡೊಗಳು, ಕೇಂದ್ರ ಮೀಸಲು ಪಡೆ ಪೊಲೀಸರನ್ನು ಶೋಧ ಕಾರ್ಯಾಚರಣೆಗೆ ನಿಯೋಜಿಸಲಾಗಿತ್ತು. ಸುಮಾರು 1000ಕ್ಕೂ ಹೆಚ್ಚು ಮಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಮೃತ ನಕ್ಸಲರು ಸಮವಸ್ತ್ರದಲ್ಲಿದ್ದರು ಎಂದು ಅವರು ಹೇಳಿದ್ದಾರೆ.

ಫೆಬ್ರವರಿ 1 ರಂದು, ಭದ್ರತಾ ಪಡೆಗಳು ಬಿಜಾಪುರದಲ್ಲಿ ಎಂಟು ಮಾವೋವಾದಿಗಳನ್ನು ಕೊಂದಿದ್ದರು. ಈ ವರ್ಷ, ಛತ್ತೀಸ್‌ಗಢದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 62 ಮಾವೋವಾದಿಗಳ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಸ್ಥಳದಿಂದ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳ ದೊಡ್ಡ ಸಂಗ್ರಹವನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಛತ್ತೀಸ್‌ಗಢ ರಾಜ್ಯವನ್ನು ನಿಷೇಧಿತ ಮಾವೋವಾದಿಗಳ ಪ್ರಭಾವದಿಂದ ಮುಕ್ತಗೊಳಿಸುವ ತಂತ್ರದ ಭಾಗವಾಗಿ ಎಡಪಂಥೀಯ ಕ್ರಾಂತಿಕಾರಿ ನಕ್ಸಲ್‌ ಹೋರಾಟಗಾರರ ವಿರುದ್ಧದ ಸರಣಿ ಎನ್‌ಕೌಂಟರ್‌ಗಳು ನಡೆಯುತ್ತಿದೆ. ಬಿಜಾಪುರ ಬಸ್ತಾರ್‌ನಲ್ಲಿ ಅತ್ಯಂತ ಹೆಚ್ಚು ಮಾವೋವಾದಿ ಪೀಡಿತ ಜಿಲ್ಲೆಗಳಲ್ಲಿ ಒಂದಾಗಿದ್ದು, ದಕ್ಷಿಣ ಛತ್ತೀಸ್‌ಗಢದ ಎಡಪಂಥೀಯ ಕ್ರಾಂತಿಕಾರಿಗಳ ಕೇಂದ್ರವಾಗಿದೆ.

2026ರ ವೇಳೆಗೆ ನಕ್ಸಲೀಯರ ಸಂಪೂರ್ಣ ನಿರ್ನಾಮ: ಅಮಿತ್ ಶಾ

2026ರ ವೇಳೆಗೆ ನಕ್ಸಲೀಯರ ಸಂಪೂರ್ಣ ನಿರ್ನಾಮ ಮಾಡಲಾಗುವುದೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ನಮ್ಮ ದೇಶವನ್ನು ನಕ್ಸಲೀಯರಿಂದ ಸಂಪೂರ್ಣ ಮುಕ್ತಗೊಳಿಸುವ ನಿಟ್ಟಿನಲ್ಲಿ ಭದ್ರತಾ ಪಡೆಗಳಿಂದ ನಡೆಯುತ್ತಿರುವ ಕಾರ್ಯಾಚರಣೆಯು ಛತ್ತೀಸ್ ಗಡದ ಬಿಜಾಪುರದಲ್ಲಿ ಬಹುದೊಡ್ಡ ಯಶಸ್ಸನ್ನು ಕಂಡಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ದೆಹಲಿ | ಬಿಜೆಪಿ ಗೆಲ್ಲುತ್ತಿದ್ದಂತೆ ಯಾವುದೇ ಕಡತಗಳ ಸ್ಥಳಾಂತರ ನಿಷೇಧ; ಸಚಿವಾಲಯದೊಳಗೆ ಪ್ರವೇಶ ನಿರ್ಬಂಧ!

ದೆಹಲಿ | ಬಿಜೆಪಿ ಗೆಲ್ಲುತ್ತಿದ್ದಂತೆ ಯಾವುದೇ ಕಡತಗಳ ಸ್ಥಳಾಂತರ ನಿಷೇಧ; ಸಚಿವಾಲಯದೊಳಗೆ ಪ್ರವೇಶ ನಿರ್ಬಂಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...