Homeಮುಖಪುಟಛತ್ತೀಸ್‌ಗಢ | ಎನ್‌ಕೌಂಟರ್‌ನಲ್ಲಿ 31 ನಕ್ಸಲ್‌, ಇಬ್ಬರು ಪೊಲೀಸರ ಸಾವು

ಛತ್ತೀಸ್‌ಗಢ | ಎನ್‌ಕೌಂಟರ್‌ನಲ್ಲಿ 31 ನಕ್ಸಲ್‌, ಇಬ್ಬರು ಪೊಲೀಸರ ಸಾವು

- Advertisement -
- Advertisement -

ಛತ್ತೀಸ್‌ಗಢದ ಗಲಭೆಪೀಡಿತ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ನಡೆದ ಗುಂಡಿನ ಚಕಮಕಿಯಲ್ಲಿ ನಿಷೇಧಿತ ಸಿಪಿಐ (ಮಾವೋವಾದಿ)ನ 31 ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಘರ್ಷದಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ಛತ್ತೀಸ್‌ಗಢ

ಇಬ್ಬರು ಭದ್ರತಾ ಸಿಬ್ಬಂದಿಯನ್ನು ತಕ್ಷಣವೆ ವೈದ್ಯಕೀಯ ಚಿಕಿತ್ಸೆಗಾಗಿ ರಾಯ್‌ಪುರಕ್ಕೆ ಹೆಲಿಕಾಪ್ಟರ್ ಮೂಲಕ ಎನ್‌ಕೌಂಟರ್ ಸ್ಥಳದಿಂದ ಕರೆದೊಯ್ಯಲಾಯಿತು ಮತ್ತು ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಛತ್ತೀಸ್‌ಗಢ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಬೆಳಿಗ್ಗೆ ವಿವಿಧ ಭದ್ರತಾ ಪಡೆಗಳ ಸಿಬ್ಬಂದಿಗಳ ಜಂಟಿ ತಂಡವು ನಕ್ಸಲೈಟ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಪ್ರಾಥಮಿಕ ಮಾಹಿತಿಯ ಪ್ರಕಾರ, ಗುಂಡಿನ ಚಕಮಕಿಯಲ್ಲಿ 31 ನಕ್ಸಲರು ಸಾವನ್ನಪ್ಪಿದ್ದಾರೆ. ಅವರೆಲ್ಲರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಅವರು ಹೇಳಿದ್ದಾರೆ.

ರಾಜ್ಯ ಪೊಲೀಸರ ಜಿಲ್ಲಾ ಮೀಸಲು ಪಡೆ ಮತ್ತು ವಿಶೇಷ ಕಾರ್ಯಪಡೆಗೆ ಸೇರಿದ ಇಬ್ಬರು ಭದ್ರತಾ ಸಿಬ್ಬಂದಿ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

“ಬಿಜಾಪುರ ಜಿಲ್ಲೆಯ ರಾಷ್ಟ್ರೀಯ ಉದ್ಯಾನ ಪ್ರದೇಶದಲ್ಲಿ ಶಸ್ತ್ರಸಜ್ಜಿತ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ, ಜಿಲ್ಲಾ ಮೀಸಲು ಪಡೆ (DRG) ಮತ್ತು ವಿಶೇಷ ಕಾರ್ಯಪಡೆ (STF) ಒಳಗೊಂಡ ಭದ್ರತಾ ಪಡೆಗಳ ಜಂಟಿ ತಂಡವು ಶನಿವಾರ ಮಾವೋವಾದಿ ವಿರೋಧಿ ಕಾರ್ಯಾಚರಣೆಗೆ ಹೊರಟಿತು” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ನಕ್ಸಲ್‌ ಬಂಡುಕೋರರ ಸಾವುನೋವುಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿ ಹೇಳಿದ್ದಾರೆ. ಮೃತ ಭದ್ರತಾ ಸಿಬ್ಬಂದಿಯ ಶವಗಳನ್ನು ವಶಕ್ಕೆ ಪಡೆಯಲು ಮತ್ತು ಗಾಯಗೊಂಡ ಜವಾನರನ್ನು ಸ್ಥಳಾಂತರಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದಾರೆ.

ಸಿಪಿಐ-ಮಾವೋವಾದಿ ಪಕ್ಷದ ತೆಲಂಗಾಣ ರಾಜ್ಯ ಸಮಿತಿಯ ಸದಸ್ಯ ಮಂದಮರ್ರಿ ಪ್ರದೇಶದ ಬಂಡಿ ಪ್ರಕಾಶ್ (65) ಅಲಿಯಾಸ್ ಬಂಡಿ ದಾದಾ ಅಲಿಯಾಸ್ ಪ್ರಭಾತ್ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮೃತರಲ್ಲಿ ಆದಿಲಾಬಾದ್ ಪ್ರದೇಶ ಕಾರ್ಯದರ್ಶಿ ಅಡೇಲು ಭಾಸ್ಕರ್ ಕೂಡ ಸೇರಿದ್ದಾರೆ ಎಂದು ವರದಿಯಾಗಿದೆ.

ಕಾರ್ಯಾಚರಣೆ ನಡೆದ ಸ್ಥಳವು  ಛತ್ತೀಸಗಡ ಮತ್ತು ಮಹಾರಾಷ್ಟ್ರ-ತೆಲಂಗಾಣ ಗಡಿಗೆ ಹೊಂದಿಕೊಂಡಿದೆ. ಅಲ್ಲಿ ಎ.ಕೆ.47, ಎಸ್ ಎಲ್ ಆರ್, ಪಾಯಿಂಟ್ 303 ರೈಫಲ್, ಬ್ಯಾರಲ್ ಗ್ರೆನೇಡ್ ಲಾಂಚರ್ ಗಳು, ಸ್ಫೋಟಕಗಳು ಸೇರಿದಂತೆ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ ಪಡೆಯಲಾಗಿದೆ ಎಂದು  ಬಸ್ತರ್ ವಲಯದ ಐಜಿಪಿ ಪಿ.ಸುಂದರ ರಾಜ್ ತಿಳಿಸಿದ್ದಾರೆ.

ಜಿಲ್ಲಾ ಮೀಸಲು ಪಡೆ, ವಿಶೇಷ ಕಾರ್ಯಪಡೆ ಮತ್ತು ಬಸ್ತರ್ ಫೈಟರ್, ಕೋಬ್ರಾ ಕಮಾಂಡೊಗಳು, ಕೇಂದ್ರ ಮೀಸಲು ಪಡೆ ಪೊಲೀಸರನ್ನು ಶೋಧ ಕಾರ್ಯಾಚರಣೆಗೆ ನಿಯೋಜಿಸಲಾಗಿತ್ತು. ಸುಮಾರು 1000ಕ್ಕೂ ಹೆಚ್ಚು ಮಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಮೃತ ನಕ್ಸಲರು ಸಮವಸ್ತ್ರದಲ್ಲಿದ್ದರು ಎಂದು ಅವರು ಹೇಳಿದ್ದಾರೆ.

ಫೆಬ್ರವರಿ 1 ರಂದು, ಭದ್ರತಾ ಪಡೆಗಳು ಬಿಜಾಪುರದಲ್ಲಿ ಎಂಟು ಮಾವೋವಾದಿಗಳನ್ನು ಕೊಂದಿದ್ದರು. ಈ ವರ್ಷ, ಛತ್ತೀಸ್‌ಗಢದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 62 ಮಾವೋವಾದಿಗಳ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಸ್ಥಳದಿಂದ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳ ದೊಡ್ಡ ಸಂಗ್ರಹವನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಛತ್ತೀಸ್‌ಗಢ ರಾಜ್ಯವನ್ನು ನಿಷೇಧಿತ ಮಾವೋವಾದಿಗಳ ಪ್ರಭಾವದಿಂದ ಮುಕ್ತಗೊಳಿಸುವ ತಂತ್ರದ ಭಾಗವಾಗಿ ಎಡಪಂಥೀಯ ಕ್ರಾಂತಿಕಾರಿ ನಕ್ಸಲ್‌ ಹೋರಾಟಗಾರರ ವಿರುದ್ಧದ ಸರಣಿ ಎನ್‌ಕೌಂಟರ್‌ಗಳು ನಡೆಯುತ್ತಿದೆ. ಬಿಜಾಪುರ ಬಸ್ತಾರ್‌ನಲ್ಲಿ ಅತ್ಯಂತ ಹೆಚ್ಚು ಮಾವೋವಾದಿ ಪೀಡಿತ ಜಿಲ್ಲೆಗಳಲ್ಲಿ ಒಂದಾಗಿದ್ದು, ದಕ್ಷಿಣ ಛತ್ತೀಸ್‌ಗಢದ ಎಡಪಂಥೀಯ ಕ್ರಾಂತಿಕಾರಿಗಳ ಕೇಂದ್ರವಾಗಿದೆ.

2026ರ ವೇಳೆಗೆ ನಕ್ಸಲೀಯರ ಸಂಪೂರ್ಣ ನಿರ್ನಾಮ: ಅಮಿತ್ ಶಾ

2026ರ ವೇಳೆಗೆ ನಕ್ಸಲೀಯರ ಸಂಪೂರ್ಣ ನಿರ್ನಾಮ ಮಾಡಲಾಗುವುದೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ನಮ್ಮ ದೇಶವನ್ನು ನಕ್ಸಲೀಯರಿಂದ ಸಂಪೂರ್ಣ ಮುಕ್ತಗೊಳಿಸುವ ನಿಟ್ಟಿನಲ್ಲಿ ಭದ್ರತಾ ಪಡೆಗಳಿಂದ ನಡೆಯುತ್ತಿರುವ ಕಾರ್ಯಾಚರಣೆಯು ಛತ್ತೀಸ್ ಗಡದ ಬಿಜಾಪುರದಲ್ಲಿ ಬಹುದೊಡ್ಡ ಯಶಸ್ಸನ್ನು ಕಂಡಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ದೆಹಲಿ | ಬಿಜೆಪಿ ಗೆಲ್ಲುತ್ತಿದ್ದಂತೆ ಯಾವುದೇ ಕಡತಗಳ ಸ್ಥಳಾಂತರ ನಿಷೇಧ; ಸಚಿವಾಲಯದೊಳಗೆ ಪ್ರವೇಶ ನಿರ್ಬಂಧ!

ದೆಹಲಿ | ಬಿಜೆಪಿ ಗೆಲ್ಲುತ್ತಿದ್ದಂತೆ ಯಾವುದೇ ಕಡತಗಳ ಸ್ಥಳಾಂತರ ನಿಷೇಧ; ಸಚಿವಾಲಯದೊಳಗೆ ಪ್ರವೇಶ ನಿರ್ಬಂಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...