Homeಮುಖಪುಟಛತ್ತೀಸ್‌ಗಢ| ಇಬ್ಬರು ಉನ್ನತ ಕಮಾಂಡರ್‌ಗಳು ಸೇರಿದಂತೆ ಆರು ಜನ ಮಾವೋವಾದಿಗಳ ಎನ್‌ಕೌಂಟರ್‌

ಛತ್ತೀಸ್‌ಗಢ| ಇಬ್ಬರು ಉನ್ನತ ಕಮಾಂಡರ್‌ಗಳು ಸೇರಿದಂತೆ ಆರು ಜನ ಮಾವೋವಾದಿಗಳ ಎನ್‌ಕೌಂಟರ್‌

- Advertisement -
- Advertisement -

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನವೆಂಬರ್ 11 ರಂದು ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಆರು ಮಾವೋವಾದಿಗಳಲ್ಲಿ ಮಾವೋವಾದಿ ನಾಯಕಿ, ಹಿರಿಯ ಕಾರ್ಯಕರ್ತ ಪಾಪಾ ರಾವ್ ಅವರ ಪತ್ನಿ ಊರ್ಮಿಳಾ ಮತ್ತು ಬುಚಣ್ಣ ಕುಡಿಯಮ್ ಸೇರಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ದೂರದ ಪ್ರದೇಶಗಳಲ್ಲಿರುವ ಕಂದುಲ್ನಾರ್ ಮತ್ತು ಕಚ್ಲಾರಾಮ್ ಗ್ರಾಮಗಳ ಕಾಡುಗಳಲ್ಲಿ ಗುಂಡು ಹಾರಿಸಲ್ಪಟ್ಟ ಆರು ಮಂದಿಯ ತಲೆಗೆ ಒಟ್ಟು 27 ಲಕ್ಷ ರೂ. ಬಹುಮಾನವಿತ್ತು ಎಂದು ಬಿಜಾಪುರ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಯಾದವ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕಳೆದ ದಶಕದಲ್ಲಿ ಭದ್ರತಾ ಪಡೆಗಳು, ನಾಗರಿಕರು ಮತ್ತು ಅಭಿವೃದ್ಧಿ ಯೋಜನೆಗಳನ್ನು ಗುರಿಯಾಗಿಸಿಕೊಂಡು ನಡೆದ ಹಲವಾರು ಪ್ರಮುಖ ಮಾವೋವಾದಿ ದಾಳಿಗಳ ಹಿಂದೆ ಬುಚಣ್ಣ ಅಲಿಯಾಸ್ ಕಣ್ಣ (35) ಮಾಸ್ಟರ್ ಮೈಂಡ್ ಆಗಿದ್ದರೆ, ಉರ್ಮಿಳಾ ಪಿಎಲ್‌ಜಿಎ (ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ) ಮಾವೋವಾದಿಗಳ ಬೆಟಾಲಿಯನ್‌ಗೆ ಲಾಜಿಸ್ಟಿಕಲ್ ಸರಬರಾಜುಗಳ ಮುಖ್ಯ ನಿರ್ವಾಹಕಿಯಾಗಿದ್ದರು.

ವಿಶೇಷ ವಲಯ ಸಮಿತಿ ಸದಸ್ಯ (ಎಸ್‌ಝಡ್‌ಸಿಎಂ) ಪಾಪ ರಾವ್, ಅವರ ಪತ್ನಿ ಮತ್ತು ವಿಭಾಗೀಯ ಸಮಿತಿ ಸದಸ್ಯ (ಡಿವಿಸಿಎಂ) ಊರ್ಮಿಳಾ, ಡಿವಿಸಿಎಂ ಮತ್ತು ಮಾಡೇಡ್ ಪ್ರದೇಶ ಸಮಿತಿಯ ಉಸ್ತುವಾರಿ ಕಣ್ಣಾ ಅಲಿಯಾಸ್ ಬುಚಣ್ಣ, ಡಿವಿಸಿಎಂ ಮೋಹನ್ ಕಡ್ತಿ ಸೇರಿದಂತೆ 50-60 ಕಾರ್ಯಕರ್ತರೊಂದಿಗೆ ಮಾವೋವಾದಿ ನಾಯಕರ ಉಪಸ್ಥಿತಿಯ ಬಗ್ಗೆ ಮಾಹಿತಿಯ ಆಧಾರದ ಮೇಲೆ ಬಿಜಾಪುರ ಮತ್ತು ದಂತೇವಾಡದ ಜಿಲ್ಲಾ ಮೀಸಲು ಪಡೆ (ಡಿಜಿಆರ್‌) ಮತ್ತು ವಿಶೇಷ ಕಾರ್ಯಪಡೆ (ಎಸ್‌ಟಿಎಫ್‌) ಸಿಬ್ಬಂದಿಯನ್ನು ಒಳಗೊಂಡ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಯಾದವ್ ಹೇಳಿದರು.

“ಉರ್ಮಿಳಾ, ಬುಚಣ್ಣ ಮತ್ತು ಇತರ ನಾಲ್ವರು ಕಾರ್ಯಕರ್ತರನ್ನು ಗುಂಡಿನ ಚಕಮಕಿಯಲ್ಲಿ ಹೊಡೆಯಲಾಯಿತು, ಇತರ ಹಿರಿಯ ನಾಯಕರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮೃತ ನಾಲ್ವರನ್ನು ಏರಿಯಾ ಸಮಿತಿ ಸದಸ್ಯ ಜಗತ್ ತಮೋ ಅಲಿಯಾಸ್ ತಮೋ ಎಂದು ಗುರುತಿಸಲಾಗಿದೆ, ಅವರಿಗೆ 5 ಲಕ್ಷ ರೂಪಾಯಿ ಬಹುಮಾನವಿತ್ತು, ಪ್ಲಟೂನ್ ಸದಸ್ಯರಾದ ದೇವೆ, ಭಗತ್ ಮತ್ತು ಮಂಗ್ಲಿ ಓಯಾಮ್ ತಲಾ 2 ಲಕ್ಷ ರೂಪಾಯಿ ಬಹುಮಾನವಿತ್ತು” ಎಂದು ಎಸ್‌ಪಿ ಮಾಹಿತಿ ನೀಡಿದರು.

“8 ಲಕ್ಷ ರೂಪಾಯಿ ಬಹುಮಾನ ಹೊಂದಿದ್ದ ಬುಚಣ್ಣನನ್ನು ದಕ್ಷಿಣ ಬಸ್ತಾರ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಉನ್ನತ ಮಟ್ಟದ ಮಾವೋವಾದಿ ನಾಯಕರಲ್ಲಿ ಒಬ್ಬನೆಂದು ಪರಿಗಣಿಸಲಾಗಿದೆ. ಕಳೆದ ದಶಕದಲ್ಲಿ ಭದ್ರತಾ ಪಡೆಗಳು, ನಾಗರಿಕರು ಮತ್ತು ಅಭಿವೃದ್ಧಿ ಯೋಜನೆಗಳನ್ನು ಗುರಿಯಾಗಿಸಿಕೊಂಡು ನಡೆದ ಪ್ರಮುಖ ಮಾವೋವಾದಿ ದಾಳಿಗಳ ಪ್ರಮುಖ ಕಾರ್ಯನಿರ್ವಾಹಕರಾಗಿದ್ದರು. ಬಿಜಾಪುರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಅವರ ವಿರುದ್ಧ 42 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. 18 ಬಂಧನ ವಾರಂಟ್‌ಗಳು ಬಾಕಿ ಉಳಿದಿವೆ” ಎಂದು ಯಾದವ್ ಹೇಳಿದರು.

ಜುಲೈ 2008 ರ ಕೊಂಗುಪಲ್ಲಿ ಪೊಲೀಸ್ ಪೋಸ್ಟ್ ದಾಳಿ ಮತ್ತು ಜನವರಿ 2016 ರ ನುಕ್ನರ್‌ಪಾಲ್‌ ಶಿಬಿರದ ದಾಳಿಯಲ್ಲಿ ಬುಚಣ್ಣ ಪ್ರಮುಖ ಪಾತ್ರ ವಹಿಸಿದ್ದು, ಐಇಡಿ ಸ್ಫೋಟಗಳಿಗೆ ಕಾರಣವಾಯಿತು. ಆದರೆ ಪೊಲೀಸರ ಸಕಾಲಿಕ ಪ್ರತಿಕ್ರಿಯೆಯಿಂದಾಗಿ ದಾಳಿಯನ್ನು ವಿಫಲಗೊಳಿಸಲಾಯಿತು ಎಂದು ಅವರು ಹೇಳಿದರು.

“ಪೊಲೀಸ್ ಮಾಹಿತಿದಾರರಾಗಿ ವರ್ತಿಸಿದ ಆರೋಪ, ಆರು ಐಇಡಿ ಸ್ಫೋಟಗಳು, ವಾಹನಗಳು ಮತ್ತು ಮೊಬೈಲ್ ಟವರ್‌ಗಳಿಗೆ ಬೆಂಕಿ ಹಚ್ಚಿದ ಆರೋಪದ ಮೇಲೆ 20 ಕ್ಕೂ ಹೆಚ್ಚು ಗ್ರಾಮಸ್ಥರನ್ನು ಕೊಲೆ ಮಾಡುವಲ್ಲಿ ಅವರು ಭಾಗಿಯಾಗಿದ್ದರು. ಆತನ ಸಾವು ಈ ಪ್ರದೇಶದಲ್ಲಿ ಮಾವೋವಾದಿ ಭಯೋತ್ಪಾದನೆಯ ದೀರ್ಘ ಮತ್ತು ಹಿಂಸಾತ್ಮಕ ಅಧ್ಯಾಯದ ಅಂತ್ಯವನ್ನು ಸೂಚಿಸುತ್ತದೆ” ಎಂದು ಯಾದವ್ ಪ್ರತಿಪಾದಿಸಿದರು.

ಎನ್‌ಕೌಂಟರ್‌ ಸ್ಥಳದಿಂದ ದಾಖಲೆಗಳು ಮತ್ತು ಡಿಜಿಟಲ್ ಸಾಧನಗಳು ಸೇರಿದಂತೆ ದೊರೆತ ಪುರಾವೆಗಳು, ಬುಚನ್ನಾ ಮಾವೋವಾದಿಗಳ ನಗರ ಬೆಂಬಲ ಜಾಲದೊಂದಿಗೆ ಸಂಪರ್ಕವನ್ನು ಹೊಂದಿದ್ದರು ಎಂದು ಸೂಚಿಸುತ್ತದೆ. ಈ ಸಂಪರ್ಕಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಎಸ್‌ಪಿ ಹೇಳಿದರು.

“8 ಲಕ್ಷ ರೂ. ಬಹುಮಾನವನ್ನು ಹೊಂದಿದ್ದ ಉರ್ಮಿಳಾ, ಈ ಪ್ರದೇಶದ ಅತ್ಯಂತ ಹಿಂಸಾತ್ಮಕ ಮಾವೋವಾದಿ ಘಟಕಗಳಲ್ಲಿ ಒಂದೆಂದು ಪರಿಗಣಿಸಲಾದ ಪಮೇದ್ ಏರಿಯಾ ಸಮಿತಿಯ ಕಾರ್ಯದರ್ಶಿಯಾಗಿದ್ದರು. ಅವರು ನೇಮಕಾತಿ, ಸೈದ್ಧಾಂತಿಕ ಪ್ರಚಾರ ಮತ್ತು ನಿಷೇಧಿತ ಸಂಘಟನೆಗೆ ಸ್ಥಳೀಯ ಬೆಂಬಲವನ್ನು ಸಜ್ಜುಗೊಳಿಸುವ ಜವಾಬ್ದಾರಿಯುತ ಪ್ರಮುಖ ಕಾರ್ಯಕರ್ತೆಯಾಗಿದ್ದರು” ಎಂದು ಅವರು ಹೇಳಿದರು.

ಪಿಎಲ್‌ಜಿಎ (ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ) ಬೆಟಾಲಿಯನ್‌ಗೆ ಲಾಜಿಸ್ಟಿಕಲ್ ಸರಬರಾಜುಗಳ ಉಸ್ತುವಾರಿ ವಹಿಸಿದ್ದರು, ಪಡಿತರ, ಸಮವಸ್ತ್ರ, ಔಷಧಿಗಳು ಮತ್ತು ಇತರ ಅಗತ್ಯ ಸಾಮಗ್ರಿಗಳ ವಿತರಣೆಯನ್ನು ನಿರ್ವಹಿಸುತ್ತಿದ್ದರು ಎಂದು ಅವರು ಹೇಳಿದರು.

ಅವರ ಹತ್ಯೆಯು ಮಾವೋವಾದಿ ಸಂಘಟನೆಗೆ ದೊಡ್ಡ ಹೊಡೆತವನ್ನು ನೀಡಿದೆ. ಏಕೆಂದರೆ, ಪಮೇದ್ ಏರಿಯಾ ಸಮಿತಿಯ ಕಾರ್ಯಾಚರಣೆಯ ಬಲ ಮತ್ತು ಪಿಎಲ್‌ಜಿಎಯ ಪೂರೈಕೆ ಸರಪಳಿ ಜಾಲವನ್ನು ದುರ್ಬಲಗೊಳಿಸಿದೆ ಎಂದು ಯಾದವ್ ಹೇಳಿದರು.

ಎನ್‌ಕೌಂಟರ್‌ ನಡೆದ ಸ್ಥಳದಿಂದ ಎರಡು ಐಎನ್‌ಎಸ್‌ಎಎಸ್ ರೈಫಲ್‌ಗಳು, ಐದು ಮ್ಯಾಗಜೀನ್‌ಗಳು (68 ಸುತ್ತುಗಳು), ಒಂದು 9ಎಂಎಂ ಕಾರ್ಬೈನ್, ಮೂರು ಮ್ಯಾಗಜೀನ್‌ಗಳು (22 ಸುತ್ತುಗಳು), ಒಂದು .303 ರೈಫಲ್, ಒಂದು ಮ್ಯಾಗಜೀನ್ (13 ಸುತ್ತುಗಳು), ಒಂದು ಸಿಂಗಲ್-ಶಾಟ್ ರೈಫಲ್, ಒಂದು 12-ಬೋರ್ ಗನ್ (8 ಸುತ್ತುಗಳು), ರೇಡಿಯೋ ಸೆಟ್‌ಗಳು, ಸ್ಕ್ಯಾನರ್‌ಗಳು, ಮಲ್ಟಿಮೀಟರ್‌ಗಳು, ಹ್ಯಾಂಡ್ ಗ್ರೆನೇಡ್‌ಗಳು, ಸುರಕ್ಷತಾ ಫ್ಯೂಸ್‌ಗಳು, ಸ್ಫೋಟಕ ವಸ್ತುಗಳು, ಮಾವೋವಾದಿ ಸಾಹಿತ್ಯ, ಸಮವಸ್ತ್ರಗಳು, ವೈದ್ಯಕೀಯ ಸರಬರಾಜುಗಳು ಮತ್ತು ಇತರ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್‌ಪಿ ಮಾಹಿತಿ ನೀಡಿದರು.

ಈ ವರ್ಷ ಇಲ್ಲಿಯವರೆಗೆ, ಬಿಜಾಪುರ ಜಿಲ್ಲೆಯಲ್ಲಿ 144 ಮಾವೋವಾದಿಗಳು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಕೊಲ್ಲಲ್ಪಟ್ಟಿದ್ದಾರೆ. 499 ಕಾರ್ಯಕರ್ತರನ್ನು ಬಂಧಿಸಲಾಗಿದ್ದು, 560 ಮಂದಿ ಶರಣಾಗಿದ್ದಾರೆ ಎಂದು ಅವರು ಹೇಳಿದರು.

ಬಸ್ತಾರ್ ರೇಂಜ್ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್, ಬಸ್ತಾರ್ ಸುಂದರರಾಜ್ ಪಿ ಮಾತನಾಡಿ, ಕಳೆದ 20 ತಿಂಗಳುಗಳಲ್ಲಿ, ಏಳು ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತಾರ್ ವಿಭಾಗದಲ್ಲಿ 447 ಮಾವೋವಾದಿ ಕಾರ್ಯಕರ್ತರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ಗ್ರೆನೇಡ್ ದಾಳಿಗೆ ಸಂಚು ರೂಪಿಸಿದ್ದ, ಪಾಕ್ ಐಎಸ್ಐ ಬೆಂಬಲಿತ ಗುಂಪು: ವಿದೇಶಿ ಮೂಲದ 10 ಹ್ಯಾಂಡ್ಲರ್‌ಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...