HomeUncategorizedಛತ್ತೀಸ್‌ಗಢ ಸರ್ಕಾರದಿಂದ ಪ್ರತಿ ತಿಂಗಳು ₹1000 ಪಡೆಯುತ್ತಿರುವ ನಟಿ ಸನ್ನಿ ಲಿಯೋನ್!

ಛತ್ತೀಸ್‌ಗಢ ಸರ್ಕಾರದಿಂದ ಪ್ರತಿ ತಿಂಗಳು ₹1000 ಪಡೆಯುತ್ತಿರುವ ನಟಿ ಸನ್ನಿ ಲಿಯೋನ್!

ಜಾನಿ ಸಿನ್ಸ್‌ ಅವರ ಪತ್ನಿ ಸನ್ನಿ ಲಿಯೋನ್ ಅವರ ಹೆಸರಿನಲ್ಲಿ ₹10 ಸಾವಿರ ಪಡೆದ ವಂಚಕ

- Advertisement -
- Advertisement -

ಮಹಿಳಾ ಸಬಲೀಕರಣದ ಉದ್ದೇಶಕ್ಕಾಗಿ ಛತ್ತೀಸ್‌ಗಡ ಸರ್ಕಾರ ‘ಮಹತಾರಿ ವಂದನ್ ಯೋಜನೆ’ಯನ್ನು ಜಾರಿ ಮಾಡಿತ್ತು. ಅರ್ಹ ವಿವಾಹಿತ ಮಹಿಳೆಯರಿಗೆ ಪ್ರತಿ ತಿಂಗಳು ₹1000 ದೊರಕುವ ಈ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದರು. ವಿಚಿತ್ರವೆಂದರೆ, ಹಾಲಿವುಡ್ ನಟಿ ಸನ್ನಿ ಲಿಯೋನ್ ಈ ಯೋಜನೆಯ ಫಲಾನುಭವಿಯಾಗಿದ್ದು, ಕಳೆದ 10 ತಿಂಗಳಿನಿಂದ ಅವರ ಖಾತೆಗೆ ಹಣ ವರ್ಗಾವಣೆಯಾಗುತ್ತಿದೆ.

ದಾಖಲೆಯಲ್ಲಿ ಜಾನಿ ಸಿನ್ಸ್‌ ಅವರ ಪತ್ನಿ ಫಲಾನುಭವಿ ಸನ್ನಿ ಲಿಯೋನ್ ಎಂದು ಹೆಸರಿಸಲಾಗಿದೆ. ವಂಚನೆ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ಪ್ರಕರಣ ದಾಖಲಿಸಿದ್ದಾರೆ. ಸನ್ನಿ ಲಿಯೋನ್ ಹೆಸರಿನಲ್ಲಿ, ವೀರೇಂದ್ರ ಕುಮಾರ್ ಜೋಶಿ ಎಂಬಾತ ಬಸ್ತಾರ್‌ನಲ್ಲಿ ಆನ್‌ಲೈನ್ ಬ್ಯಾಂಕ್ ಖಾತೆಯನ್ನು ರಚಿಸುವಲ್ಲಿ ಯಶಸ್ವಿಯಾಗಿದ್ದನು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಸ್ತಾರ್ ಜಿಲ್ಲಾಧಿಕಾರಿ ಹ್ಯಾರಿಸ್ ಎಸ್. ಅವರು, “ಇದು ನಿಜವಾಗಿಯೂ ಮುಜುಗರದ ಸಂಗತಿ. ತಾಳೂರು ಗ್ರಾಮದ ಜೋಶಿ ಎಂಬವರು ತಪ್ಪು ಹೆಸರು ನೀಡಿ ಪ್ರತಿ ತಿಂಗಳು ₹1000 ಪಡೆಯುತ್ತಿದ್ದರು. ನಾವು ಬ್ಯಾಂಕ್ ಖಾತೆಯನ್ನು ಹೋಲ್ಡ್ ಮಾಡಿದ್ದು, ಅವರು ಪಡೆದ ₹10,000 ಹಿಂಪಡೆಯಲಾಗುವುದು. ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಮುಂದಿನ ತನಿಖೆ ನಡೆಯುತ್ತಿದೆ” ಎಂದು ಹೇಳಿದ್ದಾರೆ.

ಅಂಗನವಾಡಿ ಕಾರ್ಯಕರ್ತೆ ಮತ್ತು ಮೇಲ್ವಿಚಾರಕರ ವಿರುದ್ಧ ಶಿಸ್ತು ಕ್ರಮವನ್ನು ಪ್ರಾರಂಭಿಸಲಾಗಿದೆ. ಏಕೆಂದರೆ ಫಲಾನುಭವಿಗಳ ಗುರುತು ಮತ್ತು ಸರಿಯಾದ ಫಲಾನುಭವಿಗೆ ಸಿಗುತ್ತಿದೆ ಎಂದು ಸರಿಯಾಗಿ ಪರಿಶೀಲಿಸುವುದು ಅವರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ಕಳೆದ 10 ತಿಂಗಳಿನಿಂದ ಹಣ ವರ್ಗಾವಣೆಯಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ವಂಚಕ ಜೋಶಿ ಅವರು ಫಲಾನುಭವಿ ಎಂದು ಹೆಸರು ನೋಂದಾಯಿಸಿದ ತಳೂರು ಗ್ರಾಮದ ನಿವಾಸಿಯಾಗಿದ್ದಾರೆ. ಆರೋಪಿ ಜೋಶಿ ರಾಜ್ಯದ ಜಗದಲ್‌ಪುರ ಪಟ್ಟಣದಲ್ಲಿರುವ ‘ಶ್ರೀರಾಮ್ ಫೈನಾನ್ಸ್’ ಎಂಬ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಹಾರಿಸ್ ಅವರು ಹೇಳಿದ್ದಾರೆ.

ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ನೀಡಿದ ಪ್ರಮುಖ ಭರವಸೆಗಳಲ್ಲಿ ಒಂದಾದ ಮಹತಾರಿ ವಂದನ್ ಯೋಜನೆಯಡಿ ಮೊದಲ ಕಂತಿನ ₹1000 ಗಳನ್ನು ಮಾರ್ಚ್‌ನಲ್ಲಿ ವಿತರಿಸಲಾಯಿತು. ಸರ್ಕಾರದ ಯೋಜನೆಯ ಅನ್ವಯ 146 ಡೆವಲಪ್‌ಮೆಂಟ್ ಬ್ಲಾಕ್‌ಗಳು ಮತ್ತು ಜಿಲ್ಲಾ ಕೇಂದ್ರಗಳಲ್ಲಿನ ಅರ್ಹ ವಿವಾಹಿತ ಮಹಿಳೆಯರು ನೇರ ಲಾಭ ವರ್ಗಾವಣೆ (ಡಿಬಿಟಿ) ಮೂಲಕ ತಮ್ಮ ಬ್ಯಾಂಕ್ ಖಾತೆಗಳಿಗೆ ₹1000 ಪಡೆಯುತ್ತಿದ್ದಾರೆ. ಯೋಜನೆಯು, 21 ವರ್ಷಕ್ಕಿಂತ ಮೇಲ್ಪಟ್ಟ ಸುಮಾರು 70 ಲಕ್ಷ ಅರ್ಹ ವಿವಾಹಿತ ಮಹಿಳೆಯರಿಗೆ ಪ್ರಯೋಜನ ನೀಡುತ್ತದೆ.

ಇದನ್ನೂ ಓದಿ: ‘ಆಹಾರ ಅಸಮಾನತೆ’ ತೊಡೆದು ಹಾಕಿದ ಮಂಡ್ಯದ ಸಾಹಿತ್ಯ ಸಮ್ಮೇಳನ : 100 ವರ್ಷಗಳಲ್ಲಿ ಮೊದಲ ಬಾರಿಗೆ ಮಾಂಸಾಹಾರ ವಿತರಣೆ

‘ಆಹಾರ ಅಸಮಾನತೆ’ ತೊಡೆದು ಹಾಕಿದ ಮಂಡ್ಯದ ಸಾಹಿತ್ಯ ಸಮ್ಮೇಳನ : 100 ವರ್ಷಗಳಲ್ಲಿ ಮೊದಲ ಬಾರಿಗೆ ಮಾಂಸಾಹಾರ ವಿತರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...