Homeಮುಖಪುಟಛತ್ತೀಸ್‌ಗಢ | ಭ್ರಷ್ಟಾಚಾರದ ಕುರಿತು ವರದಿ ಮಾಡಿದ್ದ ಪತ್ರಕರ್ತ ಶವವಾಗಿ ಪತ್ತೆ

ಛತ್ತೀಸ್‌ಗಢ | ಭ್ರಷ್ಟಾಚಾರದ ಕುರಿತು ವರದಿ ಮಾಡಿದ್ದ ಪತ್ರಕರ್ತ ಶವವಾಗಿ ಪತ್ತೆ

- Advertisement -
- Advertisement -

ಛತ್ತೀಸ್‌ಗಢದ ಬಿಜಾಪುರದಲ್ಲಿ ರಸ್ತೆ ನಿರ್ಮಾಣ ಯೋಜನೆಯಲ್ಲಿ ನಡೆದ ಭ್ರಷ್ಟಾಚಾರದ ಕುರಿತು ವರದಿ ಮಾಡಿದ ಕೆಲವೇ ದಿನಗಳಲ್ಲಿ ಸ್ವತಂತ್ರ ಪತ್ರಕರ್ತರೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ, ಕೊಲೆ ಶಂಕೆ ವ್ಯಕ್ತವಾಗಿದೆ.

ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಹಲವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಕೆಲ ವರದಿಗಳು ಹೇಳಿವೆ. ಇನ್ನೂ ಕೆಲ ವರದಿಗಳು ಮೂವರನ್ನು ಬಂಧಿಸಲಾಗಿದೆ ಎಂದಿದೆ.

ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಮಾವೋವಾದಿಗಳು ಮತ್ತು ಭದ್ರತಾ ಪಡೆಗಳ ನಡುವಿನ ಸಂಘರ್ಷದ ಕುರಿತು ವರದಿ ಮಾಡಿ ಜನಮಣ್ಣನೆ ಗಳಿಸಿದ್ದ ಪತ್ರಕರ್ತ ಮುಕೇಶ್ ಚಂದ್ರಕರ್ ಅವರು, ರಸ್ತೆ ನಿರ್ಮಾಣ ಯೋಜನೆಯಲ್ಲಿ ನಡೆದ ಭ್ರಷ್ಟಾಚಾರದ ಕುರಿತು ಇತ್ತೀಚೆಗೆ ವರದಿ ಮಾಡಿದ್ದರು. ಈ ಬೆನ್ನಲ್ಲೇ ರಸ್ತೆ ನಿರ್ಮಾಣದ ಗುತ್ತಿಗೆದಾರನ ಜಮೀನಿನ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಮುಕೇಶ್ ಅವರ ಶವ ಪತ್ತೆಯಾಗಿದೆ.

ಹೆದ್ದಾರಿ ಯೋಜನೆಯ ಭ್ರಷ್ಟಾಚಾರದ ಕುರಿತು ವರದಿ ಮಾಡಿದ ಬಳಿಕ ಮುಕೇಶ್ ಅವರಿಗೆ ಜೀವ ಬೆದರಿಕೆ ಇತ್ತು ಎಂದು ಅವರ ಕುಟುಂಬಸ್ಥರು ಹೇಳಿಕೊಂಡಿದ್ದಾರೆ.

ಕಳೆದ ಬುಧವಾರ (ಜ.1) 36 ವರ್ಷದ ಮುಕೇಶ್ ಚಂದ್ರಕರ್ ಅವರು ನಾಪತ್ತೆಯಾಗಿದ್ದರು. ಈ ಸಂಬಂಧ ಅವರ ಸಹೋದರ ಟಿವಿ ಪತ್ರಕರ್ತ ಯುಕೇಶ್ ಚಂದ್ರಕರ್ ಅಂದೇ ಸಂಜೆ ದೂರು ದಾಖಲಿಸಿದ್ದರು. ಎರಡು ದಿನಗಳ ಬಳಿಕ ಶುಕ್ರವಾರ (ಜ.3) ಸಂಜೆ 6 ಗಂಟೆಯ ಹೊತ್ತಿಗೆ ಮುಕೇಶ್ ಅವರ ಶವ ಪತ್ತೆಯಾಗಿದೆ.

ಮುಕೇಶ್ ಅವರು ಬಿಜಾಪುರ ಜಿಲ್ಲೆಯ ಗಂಗಲೂರು-ನೆಲಸನಾರ್ ಗ್ರಾಮಗಳ ನಡುವಿನ ರಸ್ತೆ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದ ಬಗ್ಗೆ ವರದಿ ಮಾಡಿದ್ದರು. ವರದಿ ಬಳಿಕ ಭ್ರಷ್ಟಾಚಾರದ ಕುರಿತು ತನಿಖೆ ಆದೇಶಿಸಲಾಗಿತ್ತು. ಆ ಬಳಿಕ ರಸ್ತೆ ನಿರ್ಮಾಣ ಮಾಡುತ್ತಿದ್ದ ಗುತ್ತಿಗೆದಾರ ಸುರೇಶ್ ಚಂದ್ರಕರ್‌ ಮತ್ತು ಅವರ ಇಬ್ಬರು ಸಹೋದರರಿಂದ ಮುಕೇಶ್ ಅವರಿಗೆ ಬೆದರಿಕೆ ಇತ್ತು ಎಂದು ಸಹೋದರ ಯುಕೇಶ್ ನೀಡಿದ ದೂರಿನಲ್ಲಿ ಆರೋಪಿಸಿದ್ದರು.

ಶುಕ್ರವಾರ ಸಂಜೆ ಬಿಜಾಪುರ ಜಿಲ್ಲೆಯ ಚಟ್ಟನಪಾರ ಬಸ್ತಿಯ ಗುತ್ತಿಗೆದಾರ ಸುರೇಶ್ ಚಂದ್ರಕರ್ ಅವರ ಜಮೀನಿನ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ರಕರ್ತ ಮುಕೇಶ್ ಅವರ ಶವ ಪತ್ತೆಯಾಗಿದೆ. ಮುಕೇಶ್ ಶವ ಪತ್ತೆಯಾದ ಜಾಗದಲ್ಲಿ ಕಾರ್ಮಿಕರ ವಸತಿಗೃಹಗಳಿವೆ ಮತ್ತು ಬ್ಯಾಡ್ಮಿಂಟನ್ ಆಡಲು ಬಳಸಲಾಗುತ್ತಿತ್ತು ಎಂದು ಬಿಜಾಪುರ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಯಾದವ್ ತಿಳಿಸಿದ್ದಾರೆ.

ಕೊಲೆ ಆರೋಪದ ಕುರಿತು ಪೊಲೀಸ್ ವರಿಷ್ಠಾಧಿಕಾರಿ ಯಾವುದೇ ಮಾಹಿತಿ ನೀಡಿಲ್ಲ ತನಿಖೆ ಪ್ರಾಥಮಿಕ ಹಂತದಲ್ಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಡಿಜಿಟಲ್ ದತ್ತಾಂಶ ರಕ್ಷಣೆ : ಕರಡು ನಿಯಮಾವಳಿ ಪ್ರಕಟಿಸಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...