Homeಚಳವಳಿಛತ್ತೀಸ್‌ಗಢ: ಜೀವವೈವಿಧ್ಯದಿಂದ ಸಮೃದ್ಧವಾಗಿರುವ ಪ್ರಾಚೀನ ಕಾಡಿನಲ್ಲಿ ಗಣಿಗಾರಿಕೆಗೆ ಚಾಲನೆ; ಪ್ರತಿಭಟನಾಕಾರರ ಬಂಧನ

ಛತ್ತೀಸ್‌ಗಢ: ಜೀವವೈವಿಧ್ಯದಿಂದ ಸಮೃದ್ಧವಾಗಿರುವ ಪ್ರಾಚೀನ ಕಾಡಿನಲ್ಲಿ ಗಣಿಗಾರಿಕೆಗೆ ಚಾಲನೆ; ಪ್ರತಿಭಟನಾಕಾರರ ಬಂಧನ

ಕಲ್ಲಿದ್ದಲು ಗಣಿಗಾಗಿ 3 ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಲಾಗುತ್ತದೆ ಎಂದು ವರದಿಯಾಗಿದೆ

- Advertisement -
- Advertisement -

ಛತ್ತೀಸ್‌ಗಢ ಅರಣ್ಯ ಇಲಾಖೆಯು ಜೀವವೈವಿಧ್ಯದಿಂದ ಸಮೃದ್ಧವಾಗಿರುವ ಪ್ರಾಚೀನ ಹಾಸ್ಡಿಯೊ ಅರಂಡ್ ಪ್ರದೇಶದಲ್ಲಿ ಮುಂಬರುವ ಕಲ್ಲಿದ್ದಲು ಗಣಿಗಾರಿಕೆ ಯೋಜನೆಗಾಗಿ ಮಂಗಳವಾರ ಮರಗಳನ್ನು ಕಡಿಯಲು ಪ್ರಾರಂಭಿಸಿದೆ. ಇದನ್ನು ವಿರೋಧಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದು, ಪ್ರದೇಶದಲ್ಲಿ ಗಣಿಗಾರಿಕೆ ನಡೆದರೆ ಅರಣ್ಯ ನಾಶವಾಗಿ, ಮಾನವ-ಪ್ರಾಣಿಗಳ ಸಂಘರ್ಷಕ್ಕೆ ಕಾರಣವಾಗಬಹುದು ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.

ಸುರ್ಗುಜಾ ಜಿಲ್ಲೆಯ ಉದಯಪುರ ಡೆವಲಪ್‌ಮೆಂಟ್ ಬ್ಲಾಕ್‌ನಲ್ಲಿರುವ ಪೆಂದ್ರಮಾರ್-ಘಾಟ್ಬರ್ರಾ ಗ್ರಾಮಗಳ ಬಳಿ ಮರ ಕಡಿಯುವ ಪ್ರಕ್ರಿಯೆಗೆ ಅನುಕೂಲವಾಗುವಂತೆ ಭಾರೀ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದ್ದು, ಇದನ್ನು ವಿರೋಧಿಸಲು ಸ್ಥಳೀಯರನ್ನು ಪ್ರಚೋದಿಸಿದ ಆರೋಪದಲ್ಲಿ ಕನಿಷ್ಠ 10 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಇಕನಾಮಿಕ್ಸ್‌ ಟೈಮ್ಸ್‌ ವರದಿ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪರ್ಸಾ ಈಸ್ಟ್ ಕೆಂಟೆ ಬಸನ್ (ಪಿಇಕೆಬಿ) ಕಲ್ಲಿದ್ದಲು ಗಣಿ ಎರಡನೇ ಹಂತದ ಕಾಮಗಾರಿಗಾಗಿ ಅರಣ್ಯ ಇಲಾಖೆಯು ಪೆಂಡ್ರಮಾರ್-ಘಾಟ್‌ಬರ್ರಾ ಅರಣ್ಯದಲ್ಲಿ ಬೆಳಿಗ್ಗೆ ಮರಗಳನ್ನು ಕಡಿಯಲು ಪ್ರಾರಂಭಿಸಿತು ಎಂದು ಸುರ್ಗುಜಾ ಜಿಲ್ಲಾಧಿಕಾರಿ ಕಲೆಕ್ಟರ್ ಕುಂದನ್ ಕುಮಾರ್ ಪಿಟಿಐಗೆ ತಿಳಿಸಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಅಲ್ಲಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅರಣ್ಯ ಕಾನೂನು ಉಲ್ಲಂಘನೆ: ಜಗ್ಗಿ ವಾಸುದೇವ್, ಅಸ್ಸಾಂ ಸಿಎಂ ವಿರುದ್ಧ ದೂರು, ಬಂಧನಕ್ಕೆ ಆಗ್ರಹ

“ಛತ್ತೀಸ್‌ಗಢದ ಹಾಸ್ಡಿಯೋ ಅರಣ್ಯದಲ್ಲಿ ಬೃಹತ್ ಮರವನ್ನು ಕಡಿಯಲಾಗುತ್ತಿದೆ. ಕಲ್ಲಿದ್ದಲು ಗಣಿಗಾಗಿ 3 ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಲಾಗುತ್ತದೆ” ಎಂದು ಆದಿವಾಸಿಗಳ ಪರ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲಸ ಮಾಡುವ ಟ್ರೈಬಲ್ ಆರ್ಮಿ ಟ್ವಿಟರ್‌ ಹ್ಯಾಂಡಲ್ ಆತಂಕ ವ್ಯಕ್ತಪಡಿಸಿದೆ.

“ಈ ಗಣಿಗಾಗಿ 100 ರಷ್ಟು ಆದಿವಾಸಿಗಳನ್ನು ಸ್ಥಳಾಂತರಿಸಲಾಗುತ್ತದೆ. ಅಪಾಯದಲ್ಲಿರುವ ಅನೇಕ ವನ್ಯಜೀವಿ ಪ್ರಭೇದಗಳಿಗೆ ಈ ಪ್ರಾಚೀನ ಅರಣ್ಯ ನೆಲೆಯಾಗಿದೆ. ದಯವಿಟ್ಟು ನಮ್ಮ ಹಾಸ್ಡಿಯೊ ಅರಣ್ಯವನ್ನು ಉಳಿಸಿ” ಎಂದು ಟ್ರೈಬಲ್ ಆರ್ಮಿ ವಿನಂತಿಸಿದೆ.

ಇದನ್ನೂ ಓದಿ: ಗುಬ್ಬಿ: ಫಲ ನೀಡುತ್ತಿದ್ದ ಅಡಕೆ, ತೆಂಗು ಧ್ವಂಸ ಮಾಡಿದ ಅರಣ್ಯ ಇಲಾಖೆ; ಭುಗಿಲೆದ್ದ ಆಕ್ರೋಶ

ಹಾಸ್ಡಿಯೊ ಪ್ರದೇಶದಲ್ಲಿ ಯಾವುದೇ ಹೊಸ ಗಣಿಗಳನ್ನು ತೆರೆಯುವುದಿಲ್ಲ ಎಂಬ ರಾಜ್ಯ ಸರ್ಕಾರ ನೀಡಿದ್ದ ಭರವಸೆಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಪಿಇಕೆಬಿ ಹಳೆಯ ಗಣಿಯಾಗಿದ್ದು, ಅದಕ್ಕೆ ಈಗಾಗಲೇ ಅಗತ್ಯ ಅನುಮತಿಗಳನ್ನು ನೀಡಲಾಗಿದೆ” ಎಂದು ಹೇಳಿದ್ದಾರೆ.

ಅಧೀಕೃತ ಕೆಲಸಕ್ಕೆ ಅಡ್ಡಿಪಡಿಸಿದ ಮತ್ತು ಮರ ಕಡಿಯುವ ಪ್ರಕ್ರಿಯೆಯ ವಿರುದ್ಧ ಸ್ಥಳೀಯರನ್ನು ಪ್ರಚೋದಿಸಿದ ಆರೋಪದ ಮೇಲೆ ಕನಿಷ್ಠ 10 ಗ್ರಾಮಸ್ಥರನ್ನು ಬಂಧಿಸಲಾಗಿದೆ ಎಂದು ಜಿಲ್ಲಾಡಳಿತದ ಇನ್ನೊಬ್ಬ ಅಧಿಕಾರಿ ತಿಳಿಸಿದ್ದಾರೆ.

ಪರಿಸರದ ವಿಚಾರಗಳು ಮತ್ತು ಬುಡಕಟ್ಟು ಜನಾಂಗದವರ ಹಕ್ಕುಗಳಿಗಾಗಿ ಕೆಲಸ ಮಾಡುವ ಛತ್ತೀಸ್‌ಗಢ ಬಚಾವೋ ಆಂದೋಲನದ ಸಂಚಾಲಕ, ಹೋರಾಟಗಾರ ಅಲೋಕ್ ಶುಕ್ಲಾ ಅವರು,“ಪರಿಸರ ಸೂಕ್ಷ್ಮ ಹಸ್ದಿಯೋ ಅರಂದ್ ಪ್ರದೇಶದಲ್ಲಿ ಗಣಿಗಾರಿಕೆ ನಡೆಸುವುದರಿಂದ 1,70,000 ಹೆಕ್ಟೇರ್ ಅರಣ್ಯ ನಾಶವಾಗುತ್ತದೆ. ಅಲ್ಲದೆ ಮಾನವ-ಆನೆ ಸಂಘರ್ಷಕ್ಕೆ ಕಾರಣವಾಗುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಮುಖಭಂಗ: ಮಹಿಳಾ ಅರಣ್ಯಾಧಿಕಾರಿ ಸಂಧ್ಯಾ ವರ್ಗಾವಣೆ ಆದೇಶಕ್ಕೆ ತಡೆ

ರಾಜ್ಯ ಸರ್ಕಾರವು 841.538 ಹೆಕ್ಟೇರ್ ಅರಣ್ಯ ಭೂಮಿಯನ್ನು ಪಾರ್ಸಾ ಗಣಿಗಾಗಿ ಸುರ್ಗುಜಾ ಮತ್ತು ಸೂರಜ್‌ಪುರ ಜಿಲ್ಲೆಗಳ 1,136.328 ಹೆಕ್ಟೇರ್‌ಗಳನ್ನು, PEKB ಹಂತ-II ಗಣಿ (ಸುರ್ಗುಜಾ) ಗಾಗಿ ರಾಜಸ್ಥಾನ ರಾಜ್ಯ ವಿದ್ಯುತ್ ಉತ್ಪಾದನಾ ನಿಗಮಕ್ಕೆ (RVUNLMITED) ಮಂಜೂರು ಮಾಡಲು ಅರಣ್ಯೇತರ ಬಳಕೆಗೆ ಅನುಮತಿ ನೀಡಿದೆ.

ಈ ವರ್ಷದ ಮಾರ್ಚ್‌ನಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರನ್ನು ಭೇಟಿಯಾದ ನಂತರ ಈ ಹಿಂದೆ ರಾಜ್ಯಕ್ಕೆ ಮಂಜೂರು ಮಾಡಲಾದ ಕಲ್ಲಿದ್ದಲು ಬ್ಲಾಕ್‌ಗಳ ಅಭಿವೃದ್ಧಿಯಲ್ಲಿನ ಅಡೆತಡೆಗಳನ್ನು ತೆರವುಗೊಳಿಸಲು ಅನುಮತಿ ನೀಡಲಾಯಿತು.

ಗಣಿಗಳ ಹಂಚಿಕೆಯನ್ನು ವಿರೋಧಿಸಿ ಕಳೆದ ಹಲವು ತಿಂಗಳುಗಳಿಂದ ಸ್ಥಳೀಯರು ಹಸ್ದಿಯೋ ಅರಂದ್ ಬಚಾವೋ ಸಂಘರ್ಷ ಸಮಿತಿಯ ಬ್ಯಾನರ್ ಅಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ವರ್ಷದ ಮೇ ತಿಂಗಳಲ್ಲಿ ಅರಣ್ಯ ಇಲಾಖೆಯು ಪಿಇಕೆಬಿ ಹಂತ II ಕಲ್ಲಿದ್ದಲು ಗಣಿ ಪ್ರಾರಂಭಕ್ಕೆ ದಾರಿ ಮಾಡಿಕೊಡಲು ಮರ ಕಡಿಯುವ ಪ್ರಕ್ರಿಯೆಯನ್ನು ಪ್ರಾರಂಭಿಸಿತು. ಸ್ಥಳೀಯ ಗ್ರಾಮಸ್ಥರಿಂದ ತೀವ್ರ ವಿರೋಧವನ್ನು ಉಂಟಾಗಿದ್ದು, ಅಧಿಕಾರಿಗಳು ತಮ್ಮ ಕ್ರಮವನ್ನು ನಿಲ್ಲಿಸುವಂತೆ ಒತ್ತಾಯಿಸಿದ್ದರು.

ಇದನ್ನೂ ಓದಿ: ಜಾರ್ಖಂಡ್‌: ಅರಣ್ಯ ಉಳಿಸಲು ’ಜಂಗಲ್ ಬಚಾವೋ’ ತಂಡ ರಚಿಸಿ ಬಿದಿರು ಕೋಲು ಹಿಡಿದ ದಿಟ್ಟ ಮಹಿಳೆಯರು

ಇದರ ನಂತರ, ರಾಜ್ಯ ಸರ್ಕಾರವು ಜೂನ್‌ನಲ್ಲಿ ಈ ಮೂರು ಪ್ರಸ್ತಾವಿತ ಕಲ್ಲಿದ್ದಲು ಗಣಿ ಯೋಜನೆಗಳ ವಿಚಾರಣೆಯನ್ನು ಸ್ಥಗಿತಗೊಳಿಸಿತು.

ಈ ಕಲ್ಲಿದ್ದಲು ಗಣಿಗಳ ಹಂಚಿಕೆಯ ವಿರುದ್ಧ ಪ್ರತಿಭಟನೆಯ ಮುಂಚೂಣಿಯಲ್ಲಿರುವ ಹೋರಾಟಗಾರ ಅಲೋಕ್ ಶುಕ್ಲಾ, “ಹಸ್ಡೆಯೋ ಅರಂದ್ ಪ್ರದೇಶದಲ್ಲಿ ಯಾವುದೇ ಹೊಸ ಗಣಿಗಳನ್ನು ತೆರೆಯುವುದಿಲ್ಲ ಎಂದು ಭರವಸೆ ನೀಡಿದೆ. ಆದರೂ ಕಾಂಗ್ರೆಸ್ ಸರ್ಕಾರವು ಮರಗಳನ್ನು ಕಡಿಯಲು ಪ್ರಾರಂಭಿಸಿ ಪ್ರತಿಭಟನಾಕಾರರನ್ನು ಬಂಧಿಸಿರುವುದು ಅತ್ಯಂತ ದುರದೃಷ್ಟಕರ” ಎಂದು ಹೇಳಿದ್ದಾರೆ. ಛತ್ತೀಸ್‌ಗಢದ ಕಾಂಗ್ರೆಸ್ ಸರ್ಕಾರ ಕಾರ್ಪೊರೇಟ್‌ಗಳ ಪರವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...