Homeಚಳವಳಿಛತ್ತೀಸ್‌ಗಢ: ಜೀವವೈವಿಧ್ಯದಿಂದ ಸಮೃದ್ಧವಾಗಿರುವ ಪ್ರಾಚೀನ ಕಾಡಿನಲ್ಲಿ ಗಣಿಗಾರಿಕೆಗೆ ಚಾಲನೆ; ಪ್ರತಿಭಟನಾಕಾರರ ಬಂಧನ

ಛತ್ತೀಸ್‌ಗಢ: ಜೀವವೈವಿಧ್ಯದಿಂದ ಸಮೃದ್ಧವಾಗಿರುವ ಪ್ರಾಚೀನ ಕಾಡಿನಲ್ಲಿ ಗಣಿಗಾರಿಕೆಗೆ ಚಾಲನೆ; ಪ್ರತಿಭಟನಾಕಾರರ ಬಂಧನ

ಕಲ್ಲಿದ್ದಲು ಗಣಿಗಾಗಿ 3 ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಲಾಗುತ್ತದೆ ಎಂದು ವರದಿಯಾಗಿದೆ

- Advertisement -
- Advertisement -

ಛತ್ತೀಸ್‌ಗಢ ಅರಣ್ಯ ಇಲಾಖೆಯು ಜೀವವೈವಿಧ್ಯದಿಂದ ಸಮೃದ್ಧವಾಗಿರುವ ಪ್ರಾಚೀನ ಹಾಸ್ಡಿಯೊ ಅರಂಡ್ ಪ್ರದೇಶದಲ್ಲಿ ಮುಂಬರುವ ಕಲ್ಲಿದ್ದಲು ಗಣಿಗಾರಿಕೆ ಯೋಜನೆಗಾಗಿ ಮಂಗಳವಾರ ಮರಗಳನ್ನು ಕಡಿಯಲು ಪ್ರಾರಂಭಿಸಿದೆ. ಇದನ್ನು ವಿರೋಧಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದು, ಪ್ರದೇಶದಲ್ಲಿ ಗಣಿಗಾರಿಕೆ ನಡೆದರೆ ಅರಣ್ಯ ನಾಶವಾಗಿ, ಮಾನವ-ಪ್ರಾಣಿಗಳ ಸಂಘರ್ಷಕ್ಕೆ ಕಾರಣವಾಗಬಹುದು ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.

ಸುರ್ಗುಜಾ ಜಿಲ್ಲೆಯ ಉದಯಪುರ ಡೆವಲಪ್‌ಮೆಂಟ್ ಬ್ಲಾಕ್‌ನಲ್ಲಿರುವ ಪೆಂದ್ರಮಾರ್-ಘಾಟ್ಬರ್ರಾ ಗ್ರಾಮಗಳ ಬಳಿ ಮರ ಕಡಿಯುವ ಪ್ರಕ್ರಿಯೆಗೆ ಅನುಕೂಲವಾಗುವಂತೆ ಭಾರೀ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದ್ದು, ಇದನ್ನು ವಿರೋಧಿಸಲು ಸ್ಥಳೀಯರನ್ನು ಪ್ರಚೋದಿಸಿದ ಆರೋಪದಲ್ಲಿ ಕನಿಷ್ಠ 10 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಇಕನಾಮಿಕ್ಸ್‌ ಟೈಮ್ಸ್‌ ವರದಿ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪರ್ಸಾ ಈಸ್ಟ್ ಕೆಂಟೆ ಬಸನ್ (ಪಿಇಕೆಬಿ) ಕಲ್ಲಿದ್ದಲು ಗಣಿ ಎರಡನೇ ಹಂತದ ಕಾಮಗಾರಿಗಾಗಿ ಅರಣ್ಯ ಇಲಾಖೆಯು ಪೆಂಡ್ರಮಾರ್-ಘಾಟ್‌ಬರ್ರಾ ಅರಣ್ಯದಲ್ಲಿ ಬೆಳಿಗ್ಗೆ ಮರಗಳನ್ನು ಕಡಿಯಲು ಪ್ರಾರಂಭಿಸಿತು ಎಂದು ಸುರ್ಗುಜಾ ಜಿಲ್ಲಾಧಿಕಾರಿ ಕಲೆಕ್ಟರ್ ಕುಂದನ್ ಕುಮಾರ್ ಪಿಟಿಐಗೆ ತಿಳಿಸಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಅಲ್ಲಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅರಣ್ಯ ಕಾನೂನು ಉಲ್ಲಂಘನೆ: ಜಗ್ಗಿ ವಾಸುದೇವ್, ಅಸ್ಸಾಂ ಸಿಎಂ ವಿರುದ್ಧ ದೂರು, ಬಂಧನಕ್ಕೆ ಆಗ್ರಹ

“ಛತ್ತೀಸ್‌ಗಢದ ಹಾಸ್ಡಿಯೋ ಅರಣ್ಯದಲ್ಲಿ ಬೃಹತ್ ಮರವನ್ನು ಕಡಿಯಲಾಗುತ್ತಿದೆ. ಕಲ್ಲಿದ್ದಲು ಗಣಿಗಾಗಿ 3 ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಲಾಗುತ್ತದೆ” ಎಂದು ಆದಿವಾಸಿಗಳ ಪರ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲಸ ಮಾಡುವ ಟ್ರೈಬಲ್ ಆರ್ಮಿ ಟ್ವಿಟರ್‌ ಹ್ಯಾಂಡಲ್ ಆತಂಕ ವ್ಯಕ್ತಪಡಿಸಿದೆ.

“ಈ ಗಣಿಗಾಗಿ 100 ರಷ್ಟು ಆದಿವಾಸಿಗಳನ್ನು ಸ್ಥಳಾಂತರಿಸಲಾಗುತ್ತದೆ. ಅಪಾಯದಲ್ಲಿರುವ ಅನೇಕ ವನ್ಯಜೀವಿ ಪ್ರಭೇದಗಳಿಗೆ ಈ ಪ್ರಾಚೀನ ಅರಣ್ಯ ನೆಲೆಯಾಗಿದೆ. ದಯವಿಟ್ಟು ನಮ್ಮ ಹಾಸ್ಡಿಯೊ ಅರಣ್ಯವನ್ನು ಉಳಿಸಿ” ಎಂದು ಟ್ರೈಬಲ್ ಆರ್ಮಿ ವಿನಂತಿಸಿದೆ.

ಇದನ್ನೂ ಓದಿ: ಗುಬ್ಬಿ: ಫಲ ನೀಡುತ್ತಿದ್ದ ಅಡಕೆ, ತೆಂಗು ಧ್ವಂಸ ಮಾಡಿದ ಅರಣ್ಯ ಇಲಾಖೆ; ಭುಗಿಲೆದ್ದ ಆಕ್ರೋಶ

ಹಾಸ್ಡಿಯೊ ಪ್ರದೇಶದಲ್ಲಿ ಯಾವುದೇ ಹೊಸ ಗಣಿಗಳನ್ನು ತೆರೆಯುವುದಿಲ್ಲ ಎಂಬ ರಾಜ್ಯ ಸರ್ಕಾರ ನೀಡಿದ್ದ ಭರವಸೆಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಪಿಇಕೆಬಿ ಹಳೆಯ ಗಣಿಯಾಗಿದ್ದು, ಅದಕ್ಕೆ ಈಗಾಗಲೇ ಅಗತ್ಯ ಅನುಮತಿಗಳನ್ನು ನೀಡಲಾಗಿದೆ” ಎಂದು ಹೇಳಿದ್ದಾರೆ.

ಅಧೀಕೃತ ಕೆಲಸಕ್ಕೆ ಅಡ್ಡಿಪಡಿಸಿದ ಮತ್ತು ಮರ ಕಡಿಯುವ ಪ್ರಕ್ರಿಯೆಯ ವಿರುದ್ಧ ಸ್ಥಳೀಯರನ್ನು ಪ್ರಚೋದಿಸಿದ ಆರೋಪದ ಮೇಲೆ ಕನಿಷ್ಠ 10 ಗ್ರಾಮಸ್ಥರನ್ನು ಬಂಧಿಸಲಾಗಿದೆ ಎಂದು ಜಿಲ್ಲಾಡಳಿತದ ಇನ್ನೊಬ್ಬ ಅಧಿಕಾರಿ ತಿಳಿಸಿದ್ದಾರೆ.

ಪರಿಸರದ ವಿಚಾರಗಳು ಮತ್ತು ಬುಡಕಟ್ಟು ಜನಾಂಗದವರ ಹಕ್ಕುಗಳಿಗಾಗಿ ಕೆಲಸ ಮಾಡುವ ಛತ್ತೀಸ್‌ಗಢ ಬಚಾವೋ ಆಂದೋಲನದ ಸಂಚಾಲಕ, ಹೋರಾಟಗಾರ ಅಲೋಕ್ ಶುಕ್ಲಾ ಅವರು,“ಪರಿಸರ ಸೂಕ್ಷ್ಮ ಹಸ್ದಿಯೋ ಅರಂದ್ ಪ್ರದೇಶದಲ್ಲಿ ಗಣಿಗಾರಿಕೆ ನಡೆಸುವುದರಿಂದ 1,70,000 ಹೆಕ್ಟೇರ್ ಅರಣ್ಯ ನಾಶವಾಗುತ್ತದೆ. ಅಲ್ಲದೆ ಮಾನವ-ಆನೆ ಸಂಘರ್ಷಕ್ಕೆ ಕಾರಣವಾಗುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಮುಖಭಂಗ: ಮಹಿಳಾ ಅರಣ್ಯಾಧಿಕಾರಿ ಸಂಧ್ಯಾ ವರ್ಗಾವಣೆ ಆದೇಶಕ್ಕೆ ತಡೆ

ರಾಜ್ಯ ಸರ್ಕಾರವು 841.538 ಹೆಕ್ಟೇರ್ ಅರಣ್ಯ ಭೂಮಿಯನ್ನು ಪಾರ್ಸಾ ಗಣಿಗಾಗಿ ಸುರ್ಗುಜಾ ಮತ್ತು ಸೂರಜ್‌ಪುರ ಜಿಲ್ಲೆಗಳ 1,136.328 ಹೆಕ್ಟೇರ್‌ಗಳನ್ನು, PEKB ಹಂತ-II ಗಣಿ (ಸುರ್ಗುಜಾ) ಗಾಗಿ ರಾಜಸ್ಥಾನ ರಾಜ್ಯ ವಿದ್ಯುತ್ ಉತ್ಪಾದನಾ ನಿಗಮಕ್ಕೆ (RVUNLMITED) ಮಂಜೂರು ಮಾಡಲು ಅರಣ್ಯೇತರ ಬಳಕೆಗೆ ಅನುಮತಿ ನೀಡಿದೆ.

ಈ ವರ್ಷದ ಮಾರ್ಚ್‌ನಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರನ್ನು ಭೇಟಿಯಾದ ನಂತರ ಈ ಹಿಂದೆ ರಾಜ್ಯಕ್ಕೆ ಮಂಜೂರು ಮಾಡಲಾದ ಕಲ್ಲಿದ್ದಲು ಬ್ಲಾಕ್‌ಗಳ ಅಭಿವೃದ್ಧಿಯಲ್ಲಿನ ಅಡೆತಡೆಗಳನ್ನು ತೆರವುಗೊಳಿಸಲು ಅನುಮತಿ ನೀಡಲಾಯಿತು.

ಗಣಿಗಳ ಹಂಚಿಕೆಯನ್ನು ವಿರೋಧಿಸಿ ಕಳೆದ ಹಲವು ತಿಂಗಳುಗಳಿಂದ ಸ್ಥಳೀಯರು ಹಸ್ದಿಯೋ ಅರಂದ್ ಬಚಾವೋ ಸಂಘರ್ಷ ಸಮಿತಿಯ ಬ್ಯಾನರ್ ಅಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ವರ್ಷದ ಮೇ ತಿಂಗಳಲ್ಲಿ ಅರಣ್ಯ ಇಲಾಖೆಯು ಪಿಇಕೆಬಿ ಹಂತ II ಕಲ್ಲಿದ್ದಲು ಗಣಿ ಪ್ರಾರಂಭಕ್ಕೆ ದಾರಿ ಮಾಡಿಕೊಡಲು ಮರ ಕಡಿಯುವ ಪ್ರಕ್ರಿಯೆಯನ್ನು ಪ್ರಾರಂಭಿಸಿತು. ಸ್ಥಳೀಯ ಗ್ರಾಮಸ್ಥರಿಂದ ತೀವ್ರ ವಿರೋಧವನ್ನು ಉಂಟಾಗಿದ್ದು, ಅಧಿಕಾರಿಗಳು ತಮ್ಮ ಕ್ರಮವನ್ನು ನಿಲ್ಲಿಸುವಂತೆ ಒತ್ತಾಯಿಸಿದ್ದರು.

ಇದನ್ನೂ ಓದಿ: ಜಾರ್ಖಂಡ್‌: ಅರಣ್ಯ ಉಳಿಸಲು ’ಜಂಗಲ್ ಬಚಾವೋ’ ತಂಡ ರಚಿಸಿ ಬಿದಿರು ಕೋಲು ಹಿಡಿದ ದಿಟ್ಟ ಮಹಿಳೆಯರು

ಇದರ ನಂತರ, ರಾಜ್ಯ ಸರ್ಕಾರವು ಜೂನ್‌ನಲ್ಲಿ ಈ ಮೂರು ಪ್ರಸ್ತಾವಿತ ಕಲ್ಲಿದ್ದಲು ಗಣಿ ಯೋಜನೆಗಳ ವಿಚಾರಣೆಯನ್ನು ಸ್ಥಗಿತಗೊಳಿಸಿತು.

ಈ ಕಲ್ಲಿದ್ದಲು ಗಣಿಗಳ ಹಂಚಿಕೆಯ ವಿರುದ್ಧ ಪ್ರತಿಭಟನೆಯ ಮುಂಚೂಣಿಯಲ್ಲಿರುವ ಹೋರಾಟಗಾರ ಅಲೋಕ್ ಶುಕ್ಲಾ, “ಹಸ್ಡೆಯೋ ಅರಂದ್ ಪ್ರದೇಶದಲ್ಲಿ ಯಾವುದೇ ಹೊಸ ಗಣಿಗಳನ್ನು ತೆರೆಯುವುದಿಲ್ಲ ಎಂದು ಭರವಸೆ ನೀಡಿದೆ. ಆದರೂ ಕಾಂಗ್ರೆಸ್ ಸರ್ಕಾರವು ಮರಗಳನ್ನು ಕಡಿಯಲು ಪ್ರಾರಂಭಿಸಿ ಪ್ರತಿಭಟನಾಕಾರರನ್ನು ಬಂಧಿಸಿರುವುದು ಅತ್ಯಂತ ದುರದೃಷ್ಟಕರ” ಎಂದು ಹೇಳಿದ್ದಾರೆ. ಛತ್ತೀಸ್‌ಗಢದ ಕಾಂಗ್ರೆಸ್ ಸರ್ಕಾರ ಕಾರ್ಪೊರೇಟ್‌ಗಳ ಪರವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....