Homeಮುಖಪುಟಛತ್ತೀಸ್‌ಗಢ: ಎನ್‌ಕೌಂಟರ್‌ನಲ್ಲಿ ವೈಫಲ್ಯವಿಲ್ಲ, 25-30 ಮಾವೋವಾದಿಗಳ ಹತ್ಯೆ- CRPF ಮುಖ್ಯಸ್ಥ

ಛತ್ತೀಸ್‌ಗಢ: ಎನ್‌ಕೌಂಟರ್‌ನಲ್ಲಿ ವೈಫಲ್ಯವಿಲ್ಲ, 25-30 ಮಾವೋವಾದಿಗಳ ಹತ್ಯೆ- CRPF ಮುಖ್ಯಸ್ಥ

ಎನ್‌ಕೌಂಟರ್‌ನಲ್ಲಿ 22 ಮಂದಿ ಯೋಧರು ಬಲಿಯಾಗಿರುವುದಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿ ಇದೊಂದು ರೂಪುರೇಷೆಯಿಲ್ಲದ ಕಾರ್ಯಾಚರಣೆ ಎಂದಿದ್ದಾರೆ.

- Advertisement -
- Advertisement -

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಮಾವೋವಾದಿಗಳ ಎನ್‌ಕೌಂಟರ್‌ ಕಾರ್ಯಾಚರಣೆಯಲ್ಲಿ 22 ಮಂದಿ ಯೋಧರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮಾತನಾಡಿರುವ ಸಿಆರ್‌ಪಿಎಫ್ ಮುಖ್ಯಸ್ಥ ಕುಲದೀಪ್ ಸಿಂಗ್ ತಮ್ಮ ಕಡೆಯಿಂದ ಭದ್ರತೆಯಲ್ಲಿ ಯಾವುದೇ ವೈಫಲ್ಯ ಕಂಡುಬಂದಿಲ್ಲ ಎಂದು ಹೇಳಿದ್ದಾರೆ. ಜೊತೆಗೆ ಕಾರ್ಯಾಚರಣೆಯಲ್ಲಿ 25-30 ಮಾವೋವಾದಿಗಳು ಹತರಾಗಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಛತ್ತಿಸ್‌ಗಢ ರಾಜಧಾನಿ ರಾಯ್‌ಪುರದಿಂದ 400 ಕಿ.ಮೀ ದೂರದಲ್ಲಿರುವ ಬಿಜಾಪುರದಲ್ಲಿ ಶನಿವಾರ ಮಾವೋವಾದಿಗಳೊಂದಿಗೆ ನಡೆದ ಸಂಘರ್ಷದಲ್ಲಿ ಕನಿಷ್ಠ 22 ಭದ್ರತಾ ಸಿಬ್ಬಂದಿಗಳು ಸಾವನ್ನಪ್ಪಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದರು.

“ಕೆಲವು ರೀತಿಯ ಗುಪ್ತಚರ ಅಥವಾ ಕಾರ್ಯಾಚರಣೆಯ ವೈಫಲ್ಯವಿದೆ ಎಂದು ಹೇಳುವುದರಲ್ಲಿ ಯಾವುದೇ ಅರ್ಥವಿಲ್ಲ. ಇದು ಕೆಲವು ಗುಪ್ತಚರ ವೈಫಲ್ಯವಾಗಿದ್ದರೆ, ಮಾವೋವಾದಿಗಳ ಎನ್‌ಕೌಂಟರ್ ಕಾರ್ಯಾಚರಣೆಗೆ ಪಡೆಗಳು ಹೋಗುತ್ತಿರಲಿಲ್ಲ. ಕಾರ್ಯಾಚರಣೆಯ ವೈಫಲ್ಯವಿದ್ದರೆ, ಅನೇಕ ಮಾವೋವಾದಿಗಳು ಹತರಾಗುತ್ತಿರಲಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಛತ್ತಿಸ್‌ಗಢ: ಮಾವೋವಾದಿಗಳೊಂದಿಗಿನ ಸಂಘರ್ಷದಲ್ಲಿ 22 ಯೋಧರ ಸಾವು

ಎನ್‌ಕೌಂಟರ್‌ನಲ್ಲಿ ಮಾವೋವಾದಿಗಳ ಸಾವು-ನೋವುಗಳ ಕುರಿತು ಮಾತನಾಡಿದ ಕುಲ್‌ದೀಪ್ ಸಿಂಗ್, “ಗಾಯಗೊಂಡವರನ್ನು ಮತ್ತು ಮೃತ ದೇಹಗಳನ್ನು ಸ್ಥಳದಿಂದ ಸಾಗಿಸಲು ಮಾವೋವಾದಿಗಳು ಮೂರು ಟ್ರಾಕ್ಟರುಗಳನ್ನು ಬಳಸಿದ್ದಾರೆ. ಕಾರ್ಯಾಚರಣೆಯಲ್ಲಿ ಹತ್ಯೆಗೊಳಗಾದ ಮಾವೋವಾದಿಗಳ ನಿಖರ ಸಂಖ್ಯೆಯನ್ನು ಇದೀಗ ಹೇಳುವುದು ಕಠಿಣ. ಆದರೆ ಅದು 25-30ಕ್ಕೆ ಕಡಿಮೆಯಾಗಿಲ್ಲ” ಎಂದಿದ್ದಾರೆ.

ಎನ್‌ಕೌಂಟರ್‌ ಕಾರ್ಯಾಚರಣೆಯಲ್ಲಿ ಹೋರಾಡಿದ ಯೋಧರನ್ನು ಭೇಟಿಯಾಗಲಿದ್ದೇನೆ ಎಂದು ಡಿಜಿ ಹೇಳಿದರು.

ಎನ್‌ಕೌಂಟರ್‌ನಲ್ಲಿ 22 ಮಂದಿ ಯೋಧರು ಬಲಿಯಾಗಿರುವುದಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿ ಇದೊಂದು ರೂಪುರೇಷೆಯಿಲ್ಲದ ಕಾರ್ಯಾಚರಣೆ ಎಂದಿದ್ದಾರೆ.

ಗುಪ್ರಚರ ವೈಫಲ್ಯವಿಲ್ಲ ಎಂಬ ಸಿಆರ್‌ಪಿಎಫ್ ಮುಖ್ಯಸ್ಥ ಕುಲದೀಪ್ ಸಿಂಗ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಗುಪ್ತಚರ ವೈಫಲ್ಯವಿಲ್ಲದಿದ್ದರೆ 1: 1 ಸಾವಿನ ಅನುಪಾತ ಇದೆ ಎಂದರೆ, ಅದು ಸರಿಯಾಗಿ ರೂಪಿಸದ ಮತ್ತು ಅಸಮರ್ಥವಾಗಿ ಕಾರ್ಯಗತಗೊಂಡ ಕಾರ್ಯಾಚರಣೆಯಾಗಿದೆ” ಎಂದಿದ್ದಾರೆ.


ಇದನ್ನೂ ಓದಿ: ಅಂಧ ಭಕ್ತರೆ, ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಯಾರು ಕಾರಣ? ಮೋದಿ ವಿರುದ್ಧ ಸಿಡಿದ ಸುಬ್ರಮಣಿಯನ್…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...