Homeಮುಖಪುಟಛತ್ತೀಸ್‌ಗಢ| ಪಾದ್ರಿ ಜೋಸ್ ಥಾಮಸ್ ಕುಟುಂಬದ ಮೇಲೆ ಹಿಂದುತ್ವ ಗುಂಪಿನಿಂದ ಕಿರುಕುಳ

ಛತ್ತೀಸ್‌ಗಢ| ಪಾದ್ರಿ ಜೋಸ್ ಥಾಮಸ್ ಕುಟುಂಬದ ಮೇಲೆ ಹಿಂದುತ್ವ ಗುಂಪಿನಿಂದ ಕಿರುಕುಳ

- Advertisement -
- Advertisement -

ಛತ್ತೀಸ್‌ಗಢದ ಕವರ್ಧಾ ಜಿಲ್ಲೆಯಲ್ಲಿ ವಾಸಿಸುವ ಪಾದ್ರಿ ಜೋಸ್ ಥಾಮಸ್ ಮತ್ತು ಅವರ ಕುಟುಂಬಕ್ಕೆ ಹಿಂದುತ್ವ ಸಂಘಟನೆಗಳಾದ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಸದಸ್ಯರು ನಿರಂತರವಾಗಿ ಕಿರುಕುಳ ನೀಡಿದ್ದು, ಮನೆ ತೊರೆಯುವಂತೆ ಅವರನ್ನು ಒತ್ತಾಯಿಸಲಾಗಿದೆ.

ಮೇ 18 ರಂದು, ಬಜರಂಗದಳ ಮತ್ತು ವಿಎಚ್‌ಪಿ ನಾಯಕರ ನೇತೃತ್ವದ ಗುಂಪೊಂದು ಧಾರ್ಮಿಕ ಮತಾಂತರವನ್ನು ಆರೋಪಿಸಿ ಚರ್ಚ್‌ಗೆ ನುಗ್ಗಿತು. ಅವರು ‘ಜೈ ಶ್ರೀ ರಾಮ್’ ಘೋಷಣೆಗಳನ್ನು ಕೂಗಿ, ಒಳಗೆ ಇದ್ದ ಜನರ ಮೇಲೆ ಹಲ್ಲೆ ನಡೆಸಿದರು. ಅವರಿಗೆ ಹೆದರಿ, ಕೆಲವು ಅಪ್ರಾಪ್ತ ಹುಡುಗಿಯರು ಸ್ನಾನಗೃಹಗಳಲ್ಲಿ ಅಡಗಿಕೊಳ್ಳಲು ಪ್ರಯತ್ನಿಸಿದರು. ಆದರೆ, ಅವರರಿಗೂ ಗುಂಪು ಕಿರುಕುಳ ನೀಡಿದೆ ಎಂದು ಆರೋಪಿಸಲಾಗಿದೆ. ಪಾದ್ರಿ ಥಾಮಸ್ ತಮ್ಮ ಇನ್‌ಸ್ಟಾಗ್ರಾಮ್ ಪುಟದಲ್ಲಿ ಹಲ್ಲೆಯ ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದಾರೆ.

ಧಾರ್ಮಿಕ ಮತಾಂತರದ ಆರೋಪಗಳನ್ನು ಪಾದ್ರಿ ಥಾಮಸ್ ನಿರಾಕರಿಸಿದ್ದಾರೆ. ಅವರು ಕಳೆದ ಮೂರು ದಶಕಗಳಿಂದ ಚರ್ಚ್‌ನಲ್ಲಿ ಪೂಜೆ ಸಲ್ಲಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಆದರೂ, ದಾಳಿಕೋರರನ್ನು ಬಂಧಿಸುವ ಬದಲು, ಪಾದ್ರಿ ಜೋಸ್ ಥಾಮಸ್ ಅವರನ್ನು ಬಂಧಿಸಲಾಗಿದೆ. ಇದಲ್ಲದೆ, ವೀಡಿಯೊ ಪುರಾವೆಗಳ ಹೊರತಾಗಿಯೂ ದಾಳಿಕೋರರ ವಿರುದ್ಧ ಇಲ್ಲಿಯವರೆಗೆ ಯಾವುದೇ ಎಫ್‌ಐಆರ್ ದಾಖಲಿಸಲಾಗಿಲ್ಲ.

ಪಾದ್ರಿ ಕುಟುಂಬವನ್ನು ದೀರ್ಘಕಾಲದಿಂದ ಗುರಿಯಾಗಿಸಿ ಕಿರುಕುಳ ನೀಡಲಾಗುತ್ತಿದೆ. 2010 ರಲ್ಲಿ, ಪಾದ್ರಿ ಜೋಸ್ ಥಾಮಸ್ ಅವರನ್ನು ‘ಬಲವಂತದ ಮತಾಂತರ’ದ ಆರೋಪದ ಮೇಲೆ ಬಂಧಿಸಿ 10 ದಿನಗಳ ಕಾಲ ಜೈಲಿನಲ್ಲಿರಿಸಲಾಗಿತ್ತು. ಆದರೆ, ನಂತರ ಸ್ಥಳೀಯ ನ್ಯಾಯಾಲಯವು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಅವರನ್ನು ಖುಲಾಸೆಗೊಳಿಸಿತು.

ಕೇರಳದ ಮೂಲದ ಈ ಕುಟುಂಬವು ಕಳೆದ 35 ವರ್ಷಗಳಿಂದ ಛತ್ತೀಸ್‌ಗಢದಲ್ಲಿ ವಾಸಿಸುತ್ತಿದೆ. ಅವರು ಕವರ್ಧಾದಲ್ಲಿ ಹೋಲಿ ಕಿಂಗ್‌ಡಮ್ ಇಂಗ್ಲಿಷ್ ಹೈಯರ್ ಸೆಕೆಂಡರಿ ಶಾಲೆ ಎಂಬ ಶಾಲೆಯನ್ನು ನಡೆಸುತ್ತಿದ್ದಾರೆ. ಜೋಸ್ ಥಾಮಸ್ ತಮ್ಮ ಇನ್‌ಸ್ಟಾಗ್ರಾಮ್ ಪುಟದಲ್ಲಿನ ವೀಡಿಯೊದಲ್ಲಿ, ವೈದ್ಯರು, ಎಂಜಿನಿಯರ್‌ಗಳು, ಚಾರ್ಟರ್ಡ್ ಅಕೌಂಟೆಂಟ್‌ಗಳು ಮತ್ತು ಸಿವಿಲ್ ನ್ಯಾಯಾಧೀಶರಂತಹ ಅನೇಕ ಅರ್ಹ ಜನರು ತಮ್ಮ ಶಾಲೆಯಿಂದ ಪದವಿ ಪಡೆದಿದ್ದಾರೆ ಎಂದು ಹೇಳುತ್ತಾರೆ.

ಶಾಲಾ ಶುಲ್ಕಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ರಾಜಕೀಯ ನಾಯಕರು ಅವರನ್ನು ನಿಯಮಿತವಾಗಿ ಕಿರುಕುಳ ನೀಡುತ್ತಾರೆ. ಶಾಲೆಯನ್ನು ಮುಚ್ಚುವ ಬೆದರಿಕೆಗಳನ್ನು ಎದುರಿಸುತ್ತಾರೆ. ಏಪ್ರಿಲ್ 29 ರಂದು ಜೋಸ್ ಥಾಮಸ್ ಅವರಿಗೆ ಬಿಜೆಪಿ ನಾಯಕ ರಾಜೇಂದ್ರ ಚಂದ್ರವಂಶಿ ಕರೆ ಮಾಡಿ ಸುಶೀಲ್ ಶಿಂಧೆ ಅವರ ಮಕ್ಕಳಿಗೆ ಟಿಸಿ (ವರ್ಗಾವಣೆ ಪ್ರಮಾಣಪತ್ರ) ನೀಡಬೇಕೆಂದು ಒತ್ತಾಯಿಸಿದರು.

ಟಿಸಿ ನೀಡಲು ಯಾವುದೇ ಅರ್ಜಿಯನ್ನು ನೀಡಲಾಗಿಲ್ಲ, ವಿದ್ಯಾರ್ಥಿಗಳು ಎರಡು ವರ್ಷಗಳಿಂದ ಶುಲ್ಕವನ್ನು ಬಾಕಿ ಉಳಿಸಿಕೊಂಡಿದ್ದಾರೆ ಎಂದು ಜೋಸ್ ಥಾಮಸ್ ಮಾಹಿತಿ ನೀಡಿದರು. ನಂತರ, ಪೊಲೀಸ್ ಅಧಿಕಾರಿಯೊಬ್ಬರು ಟಿಸಿ ನೀಡುವಂತೆ ಅವರನ್ನು ಕೇಳಿದರು. ಅವರು ಶುಲ್ಕದ ವಿಷಯವನ್ನು ವಿವರಿಸುವ ಪತ್ರವನ್ನು ಬರೆದು ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಸಲ್ಲಿಸಿದರು.

ನಂತರ ವಿಷಯವು ಉಲ್ಬಣಗೊಂಡಿತು, ಬಲಪಂಥೀಯ ಗುಂಪಿನ ನಾಯಕರು ಕುಟುಂಬಕ್ಕೆ ಕಿರುಕುಳ ನೀಡಲು ಪ್ರಾರಂಭಿಸಿದರು, ಸ್ಥಳೀಯ ಮಾಧ್ಯಮಗಳೊಂದಿಗೆ ಅವರ ‘ಬಲವಂತದ ಮತಾಂತರ’ದ ಕಥೆಯನ್ನು ಹರಡುವುದಾಗಿ ಹೇಳಿದರು. ಒತ್ತಡಕ್ಕೆ ಮಣಿದ ಕುಟುಂಬವು ಅಂತಿಮವಾಗಿ ಟಿಸಿಯನ್ನು ನೀಡಿತು. ಆದರೂ, ಮೇ 18 ರಂದು ಚರ್ಚ್‌ನಲ್ಲಿ ಅವರ ಮೇಲೆ ಇನ್ನೂ ಹಿಂಸಾತ್ಮಕ ದಾಳಿ ನಡೆಯಿತು.

ಜೋಸ್ ಥಾಮಸ್ ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ಕಷ್ಟವನ್ನು ವಿವರಿಸುವ ವೀಡಿಯೊಗಳನ್ನು ಅಪ್‌ಲೋಡ್ ಮಾಡಿದ್ದಾರೆ. ಅವರ ಕುಟುಂಬದ ಮೇಲಿನ ಕಿರುಕುಳವನ್ನು ನಿಲ್ಲಿಸುವಂತೆ ಮನವಿ ಮಾಡಿದ್ದಾರೆ.

ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ; ಮೂರು ದಶಕಗಳ ನಂತರ 32 ಜನರಿಗೆ ಶಿಕ್ಷೆ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...