Homeಮುಖಪುಟಛತ್ತೀಸ್‌ಗಢ| ಪಾದ್ರಿ ಜೋಸ್ ಥಾಮಸ್ ಕುಟುಂಬದ ಮೇಲೆ ಹಿಂದುತ್ವ ಗುಂಪಿನಿಂದ ಕಿರುಕುಳ

ಛತ್ತೀಸ್‌ಗಢ| ಪಾದ್ರಿ ಜೋಸ್ ಥಾಮಸ್ ಕುಟುಂಬದ ಮೇಲೆ ಹಿಂದುತ್ವ ಗುಂಪಿನಿಂದ ಕಿರುಕುಳ

- Advertisement -
- Advertisement -

ಛತ್ತೀಸ್‌ಗಢದ ಕವರ್ಧಾ ಜಿಲ್ಲೆಯಲ್ಲಿ ವಾಸಿಸುವ ಪಾದ್ರಿ ಜೋಸ್ ಥಾಮಸ್ ಮತ್ತು ಅವರ ಕುಟುಂಬಕ್ಕೆ ಹಿಂದುತ್ವ ಸಂಘಟನೆಗಳಾದ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಸದಸ್ಯರು ನಿರಂತರವಾಗಿ ಕಿರುಕುಳ ನೀಡಿದ್ದು, ಮನೆ ತೊರೆಯುವಂತೆ ಅವರನ್ನು ಒತ್ತಾಯಿಸಲಾಗಿದೆ.

ಮೇ 18 ರಂದು, ಬಜರಂಗದಳ ಮತ್ತು ವಿಎಚ್‌ಪಿ ನಾಯಕರ ನೇತೃತ್ವದ ಗುಂಪೊಂದು ಧಾರ್ಮಿಕ ಮತಾಂತರವನ್ನು ಆರೋಪಿಸಿ ಚರ್ಚ್‌ಗೆ ನುಗ್ಗಿತು. ಅವರು ‘ಜೈ ಶ್ರೀ ರಾಮ್’ ಘೋಷಣೆಗಳನ್ನು ಕೂಗಿ, ಒಳಗೆ ಇದ್ದ ಜನರ ಮೇಲೆ ಹಲ್ಲೆ ನಡೆಸಿದರು. ಅವರಿಗೆ ಹೆದರಿ, ಕೆಲವು ಅಪ್ರಾಪ್ತ ಹುಡುಗಿಯರು ಸ್ನಾನಗೃಹಗಳಲ್ಲಿ ಅಡಗಿಕೊಳ್ಳಲು ಪ್ರಯತ್ನಿಸಿದರು. ಆದರೆ, ಅವರರಿಗೂ ಗುಂಪು ಕಿರುಕುಳ ನೀಡಿದೆ ಎಂದು ಆರೋಪಿಸಲಾಗಿದೆ. ಪಾದ್ರಿ ಥಾಮಸ್ ತಮ್ಮ ಇನ್‌ಸ್ಟಾಗ್ರಾಮ್ ಪುಟದಲ್ಲಿ ಹಲ್ಲೆಯ ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದಾರೆ.

ಧಾರ್ಮಿಕ ಮತಾಂತರದ ಆರೋಪಗಳನ್ನು ಪಾದ್ರಿ ಥಾಮಸ್ ನಿರಾಕರಿಸಿದ್ದಾರೆ. ಅವರು ಕಳೆದ ಮೂರು ದಶಕಗಳಿಂದ ಚರ್ಚ್‌ನಲ್ಲಿ ಪೂಜೆ ಸಲ್ಲಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಆದರೂ, ದಾಳಿಕೋರರನ್ನು ಬಂಧಿಸುವ ಬದಲು, ಪಾದ್ರಿ ಜೋಸ್ ಥಾಮಸ್ ಅವರನ್ನು ಬಂಧಿಸಲಾಗಿದೆ. ಇದಲ್ಲದೆ, ವೀಡಿಯೊ ಪುರಾವೆಗಳ ಹೊರತಾಗಿಯೂ ದಾಳಿಕೋರರ ವಿರುದ್ಧ ಇಲ್ಲಿಯವರೆಗೆ ಯಾವುದೇ ಎಫ್‌ಐಆರ್ ದಾಖಲಿಸಲಾಗಿಲ್ಲ.

ಪಾದ್ರಿ ಕುಟುಂಬವನ್ನು ದೀರ್ಘಕಾಲದಿಂದ ಗುರಿಯಾಗಿಸಿ ಕಿರುಕುಳ ನೀಡಲಾಗುತ್ತಿದೆ. 2010 ರಲ್ಲಿ, ಪಾದ್ರಿ ಜೋಸ್ ಥಾಮಸ್ ಅವರನ್ನು ‘ಬಲವಂತದ ಮತಾಂತರ’ದ ಆರೋಪದ ಮೇಲೆ ಬಂಧಿಸಿ 10 ದಿನಗಳ ಕಾಲ ಜೈಲಿನಲ್ಲಿರಿಸಲಾಗಿತ್ತು. ಆದರೆ, ನಂತರ ಸ್ಥಳೀಯ ನ್ಯಾಯಾಲಯವು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಅವರನ್ನು ಖುಲಾಸೆಗೊಳಿಸಿತು.

ಕೇರಳದ ಮೂಲದ ಈ ಕುಟುಂಬವು ಕಳೆದ 35 ವರ್ಷಗಳಿಂದ ಛತ್ತೀಸ್‌ಗಢದಲ್ಲಿ ವಾಸಿಸುತ್ತಿದೆ. ಅವರು ಕವರ್ಧಾದಲ್ಲಿ ಹೋಲಿ ಕಿಂಗ್‌ಡಮ್ ಇಂಗ್ಲಿಷ್ ಹೈಯರ್ ಸೆಕೆಂಡರಿ ಶಾಲೆ ಎಂಬ ಶಾಲೆಯನ್ನು ನಡೆಸುತ್ತಿದ್ದಾರೆ. ಜೋಸ್ ಥಾಮಸ್ ತಮ್ಮ ಇನ್‌ಸ್ಟಾಗ್ರಾಮ್ ಪುಟದಲ್ಲಿನ ವೀಡಿಯೊದಲ್ಲಿ, ವೈದ್ಯರು, ಎಂಜಿನಿಯರ್‌ಗಳು, ಚಾರ್ಟರ್ಡ್ ಅಕೌಂಟೆಂಟ್‌ಗಳು ಮತ್ತು ಸಿವಿಲ್ ನ್ಯಾಯಾಧೀಶರಂತಹ ಅನೇಕ ಅರ್ಹ ಜನರು ತಮ್ಮ ಶಾಲೆಯಿಂದ ಪದವಿ ಪಡೆದಿದ್ದಾರೆ ಎಂದು ಹೇಳುತ್ತಾರೆ.

ಶಾಲಾ ಶುಲ್ಕಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ರಾಜಕೀಯ ನಾಯಕರು ಅವರನ್ನು ನಿಯಮಿತವಾಗಿ ಕಿರುಕುಳ ನೀಡುತ್ತಾರೆ. ಶಾಲೆಯನ್ನು ಮುಚ್ಚುವ ಬೆದರಿಕೆಗಳನ್ನು ಎದುರಿಸುತ್ತಾರೆ. ಏಪ್ರಿಲ್ 29 ರಂದು ಜೋಸ್ ಥಾಮಸ್ ಅವರಿಗೆ ಬಿಜೆಪಿ ನಾಯಕ ರಾಜೇಂದ್ರ ಚಂದ್ರವಂಶಿ ಕರೆ ಮಾಡಿ ಸುಶೀಲ್ ಶಿಂಧೆ ಅವರ ಮಕ್ಕಳಿಗೆ ಟಿಸಿ (ವರ್ಗಾವಣೆ ಪ್ರಮಾಣಪತ್ರ) ನೀಡಬೇಕೆಂದು ಒತ್ತಾಯಿಸಿದರು.

ಟಿಸಿ ನೀಡಲು ಯಾವುದೇ ಅರ್ಜಿಯನ್ನು ನೀಡಲಾಗಿಲ್ಲ, ವಿದ್ಯಾರ್ಥಿಗಳು ಎರಡು ವರ್ಷಗಳಿಂದ ಶುಲ್ಕವನ್ನು ಬಾಕಿ ಉಳಿಸಿಕೊಂಡಿದ್ದಾರೆ ಎಂದು ಜೋಸ್ ಥಾಮಸ್ ಮಾಹಿತಿ ನೀಡಿದರು. ನಂತರ, ಪೊಲೀಸ್ ಅಧಿಕಾರಿಯೊಬ್ಬರು ಟಿಸಿ ನೀಡುವಂತೆ ಅವರನ್ನು ಕೇಳಿದರು. ಅವರು ಶುಲ್ಕದ ವಿಷಯವನ್ನು ವಿವರಿಸುವ ಪತ್ರವನ್ನು ಬರೆದು ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಸಲ್ಲಿಸಿದರು.

ನಂತರ ವಿಷಯವು ಉಲ್ಬಣಗೊಂಡಿತು, ಬಲಪಂಥೀಯ ಗುಂಪಿನ ನಾಯಕರು ಕುಟುಂಬಕ್ಕೆ ಕಿರುಕುಳ ನೀಡಲು ಪ್ರಾರಂಭಿಸಿದರು, ಸ್ಥಳೀಯ ಮಾಧ್ಯಮಗಳೊಂದಿಗೆ ಅವರ ‘ಬಲವಂತದ ಮತಾಂತರ’ದ ಕಥೆಯನ್ನು ಹರಡುವುದಾಗಿ ಹೇಳಿದರು. ಒತ್ತಡಕ್ಕೆ ಮಣಿದ ಕುಟುಂಬವು ಅಂತಿಮವಾಗಿ ಟಿಸಿಯನ್ನು ನೀಡಿತು. ಆದರೂ, ಮೇ 18 ರಂದು ಚರ್ಚ್‌ನಲ್ಲಿ ಅವರ ಮೇಲೆ ಇನ್ನೂ ಹಿಂಸಾತ್ಮಕ ದಾಳಿ ನಡೆಯಿತು.

ಜೋಸ್ ಥಾಮಸ್ ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ಕಷ್ಟವನ್ನು ವಿವರಿಸುವ ವೀಡಿಯೊಗಳನ್ನು ಅಪ್‌ಲೋಡ್ ಮಾಡಿದ್ದಾರೆ. ಅವರ ಕುಟುಂಬದ ಮೇಲಿನ ಕಿರುಕುಳವನ್ನು ನಿಲ್ಲಿಸುವಂತೆ ಮನವಿ ಮಾಡಿದ್ದಾರೆ.

ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ; ಮೂರು ದಶಕಗಳ ನಂತರ 32 ಜನರಿಗೆ ಶಿಕ್ಷೆ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...

ಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ ಕೇಂದ್ರ ಆದೇಶ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದ ಕುರಿತು ಟಿವಿ ನ್ಯೂಸ್‌ ಚಾನೆಲ್‌ಗಳು ಅನಗತ್ಯ ಯುದ್ಧೋನ್ಮಾದ ಸೃಷ್ಟಿಸುತ್ತಿರುವ ಹಾಗೂ ಸುಳ್ಳು ವರದಿಗಳನ್ನು ಪ್ರಸಾರ ಮಾಡುತ್ತಿರುವ ಹಿನ್ನೆಲೆ, ಮುಂದಿನ ನಾಲ್ಕು ವಾರಗಳ ಕಾಲ...

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...