Homeಮುಖಪುಟಛತ್ತೀಸ್‌ಗಢ| ಪಾದ್ರಿ ಜೋಸ್ ಥಾಮಸ್ ಕುಟುಂಬದ ಮೇಲೆ ಹಿಂದುತ್ವ ಗುಂಪಿನಿಂದ ಕಿರುಕುಳ

ಛತ್ತೀಸ್‌ಗಢ| ಪಾದ್ರಿ ಜೋಸ್ ಥಾಮಸ್ ಕುಟುಂಬದ ಮೇಲೆ ಹಿಂದುತ್ವ ಗುಂಪಿನಿಂದ ಕಿರುಕುಳ

- Advertisement -
- Advertisement -

ಛತ್ತೀಸ್‌ಗಢದ ಕವರ್ಧಾ ಜಿಲ್ಲೆಯಲ್ಲಿ ವಾಸಿಸುವ ಪಾದ್ರಿ ಜೋಸ್ ಥಾಮಸ್ ಮತ್ತು ಅವರ ಕುಟುಂಬಕ್ಕೆ ಹಿಂದುತ್ವ ಸಂಘಟನೆಗಳಾದ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಸದಸ್ಯರು ನಿರಂತರವಾಗಿ ಕಿರುಕುಳ ನೀಡಿದ್ದು, ಮನೆ ತೊರೆಯುವಂತೆ ಅವರನ್ನು ಒತ್ತಾಯಿಸಲಾಗಿದೆ.

ಮೇ 18 ರಂದು, ಬಜರಂಗದಳ ಮತ್ತು ವಿಎಚ್‌ಪಿ ನಾಯಕರ ನೇತೃತ್ವದ ಗುಂಪೊಂದು ಧಾರ್ಮಿಕ ಮತಾಂತರವನ್ನು ಆರೋಪಿಸಿ ಚರ್ಚ್‌ಗೆ ನುಗ್ಗಿತು. ಅವರು ‘ಜೈ ಶ್ರೀ ರಾಮ್’ ಘೋಷಣೆಗಳನ್ನು ಕೂಗಿ, ಒಳಗೆ ಇದ್ದ ಜನರ ಮೇಲೆ ಹಲ್ಲೆ ನಡೆಸಿದರು. ಅವರಿಗೆ ಹೆದರಿ, ಕೆಲವು ಅಪ್ರಾಪ್ತ ಹುಡುಗಿಯರು ಸ್ನಾನಗೃಹಗಳಲ್ಲಿ ಅಡಗಿಕೊಳ್ಳಲು ಪ್ರಯತ್ನಿಸಿದರು. ಆದರೆ, ಅವರರಿಗೂ ಗುಂಪು ಕಿರುಕುಳ ನೀಡಿದೆ ಎಂದು ಆರೋಪಿಸಲಾಗಿದೆ. ಪಾದ್ರಿ ಥಾಮಸ್ ತಮ್ಮ ಇನ್‌ಸ್ಟಾಗ್ರಾಮ್ ಪುಟದಲ್ಲಿ ಹಲ್ಲೆಯ ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದಾರೆ.

ಧಾರ್ಮಿಕ ಮತಾಂತರದ ಆರೋಪಗಳನ್ನು ಪಾದ್ರಿ ಥಾಮಸ್ ನಿರಾಕರಿಸಿದ್ದಾರೆ. ಅವರು ಕಳೆದ ಮೂರು ದಶಕಗಳಿಂದ ಚರ್ಚ್‌ನಲ್ಲಿ ಪೂಜೆ ಸಲ್ಲಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಆದರೂ, ದಾಳಿಕೋರರನ್ನು ಬಂಧಿಸುವ ಬದಲು, ಪಾದ್ರಿ ಜೋಸ್ ಥಾಮಸ್ ಅವರನ್ನು ಬಂಧಿಸಲಾಗಿದೆ. ಇದಲ್ಲದೆ, ವೀಡಿಯೊ ಪುರಾವೆಗಳ ಹೊರತಾಗಿಯೂ ದಾಳಿಕೋರರ ವಿರುದ್ಧ ಇಲ್ಲಿಯವರೆಗೆ ಯಾವುದೇ ಎಫ್‌ಐಆರ್ ದಾಖಲಿಸಲಾಗಿಲ್ಲ.

ಪಾದ್ರಿ ಕುಟುಂಬವನ್ನು ದೀರ್ಘಕಾಲದಿಂದ ಗುರಿಯಾಗಿಸಿ ಕಿರುಕುಳ ನೀಡಲಾಗುತ್ತಿದೆ. 2010 ರಲ್ಲಿ, ಪಾದ್ರಿ ಜೋಸ್ ಥಾಮಸ್ ಅವರನ್ನು ‘ಬಲವಂತದ ಮತಾಂತರ’ದ ಆರೋಪದ ಮೇಲೆ ಬಂಧಿಸಿ 10 ದಿನಗಳ ಕಾಲ ಜೈಲಿನಲ್ಲಿರಿಸಲಾಗಿತ್ತು. ಆದರೆ, ನಂತರ ಸ್ಥಳೀಯ ನ್ಯಾಯಾಲಯವು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಅವರನ್ನು ಖುಲಾಸೆಗೊಳಿಸಿತು.

ಕೇರಳದ ಮೂಲದ ಈ ಕುಟುಂಬವು ಕಳೆದ 35 ವರ್ಷಗಳಿಂದ ಛತ್ತೀಸ್‌ಗಢದಲ್ಲಿ ವಾಸಿಸುತ್ತಿದೆ. ಅವರು ಕವರ್ಧಾದಲ್ಲಿ ಹೋಲಿ ಕಿಂಗ್‌ಡಮ್ ಇಂಗ್ಲಿಷ್ ಹೈಯರ್ ಸೆಕೆಂಡರಿ ಶಾಲೆ ಎಂಬ ಶಾಲೆಯನ್ನು ನಡೆಸುತ್ತಿದ್ದಾರೆ. ಜೋಸ್ ಥಾಮಸ್ ತಮ್ಮ ಇನ್‌ಸ್ಟಾಗ್ರಾಮ್ ಪುಟದಲ್ಲಿನ ವೀಡಿಯೊದಲ್ಲಿ, ವೈದ್ಯರು, ಎಂಜಿನಿಯರ್‌ಗಳು, ಚಾರ್ಟರ್ಡ್ ಅಕೌಂಟೆಂಟ್‌ಗಳು ಮತ್ತು ಸಿವಿಲ್ ನ್ಯಾಯಾಧೀಶರಂತಹ ಅನೇಕ ಅರ್ಹ ಜನರು ತಮ್ಮ ಶಾಲೆಯಿಂದ ಪದವಿ ಪಡೆದಿದ್ದಾರೆ ಎಂದು ಹೇಳುತ್ತಾರೆ.

ಶಾಲಾ ಶುಲ್ಕಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ರಾಜಕೀಯ ನಾಯಕರು ಅವರನ್ನು ನಿಯಮಿತವಾಗಿ ಕಿರುಕುಳ ನೀಡುತ್ತಾರೆ. ಶಾಲೆಯನ್ನು ಮುಚ್ಚುವ ಬೆದರಿಕೆಗಳನ್ನು ಎದುರಿಸುತ್ತಾರೆ. ಏಪ್ರಿಲ್ 29 ರಂದು ಜೋಸ್ ಥಾಮಸ್ ಅವರಿಗೆ ಬಿಜೆಪಿ ನಾಯಕ ರಾಜೇಂದ್ರ ಚಂದ್ರವಂಶಿ ಕರೆ ಮಾಡಿ ಸುಶೀಲ್ ಶಿಂಧೆ ಅವರ ಮಕ್ಕಳಿಗೆ ಟಿಸಿ (ವರ್ಗಾವಣೆ ಪ್ರಮಾಣಪತ್ರ) ನೀಡಬೇಕೆಂದು ಒತ್ತಾಯಿಸಿದರು.

ಟಿಸಿ ನೀಡಲು ಯಾವುದೇ ಅರ್ಜಿಯನ್ನು ನೀಡಲಾಗಿಲ್ಲ, ವಿದ್ಯಾರ್ಥಿಗಳು ಎರಡು ವರ್ಷಗಳಿಂದ ಶುಲ್ಕವನ್ನು ಬಾಕಿ ಉಳಿಸಿಕೊಂಡಿದ್ದಾರೆ ಎಂದು ಜೋಸ್ ಥಾಮಸ್ ಮಾಹಿತಿ ನೀಡಿದರು. ನಂತರ, ಪೊಲೀಸ್ ಅಧಿಕಾರಿಯೊಬ್ಬರು ಟಿಸಿ ನೀಡುವಂತೆ ಅವರನ್ನು ಕೇಳಿದರು. ಅವರು ಶುಲ್ಕದ ವಿಷಯವನ್ನು ವಿವರಿಸುವ ಪತ್ರವನ್ನು ಬರೆದು ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಸಲ್ಲಿಸಿದರು.

ನಂತರ ವಿಷಯವು ಉಲ್ಬಣಗೊಂಡಿತು, ಬಲಪಂಥೀಯ ಗುಂಪಿನ ನಾಯಕರು ಕುಟುಂಬಕ್ಕೆ ಕಿರುಕುಳ ನೀಡಲು ಪ್ರಾರಂಭಿಸಿದರು, ಸ್ಥಳೀಯ ಮಾಧ್ಯಮಗಳೊಂದಿಗೆ ಅವರ ‘ಬಲವಂತದ ಮತಾಂತರ’ದ ಕಥೆಯನ್ನು ಹರಡುವುದಾಗಿ ಹೇಳಿದರು. ಒತ್ತಡಕ್ಕೆ ಮಣಿದ ಕುಟುಂಬವು ಅಂತಿಮವಾಗಿ ಟಿಸಿಯನ್ನು ನೀಡಿತು. ಆದರೂ, ಮೇ 18 ರಂದು ಚರ್ಚ್‌ನಲ್ಲಿ ಅವರ ಮೇಲೆ ಇನ್ನೂ ಹಿಂಸಾತ್ಮಕ ದಾಳಿ ನಡೆಯಿತು.

ಜೋಸ್ ಥಾಮಸ್ ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ಕಷ್ಟವನ್ನು ವಿವರಿಸುವ ವೀಡಿಯೊಗಳನ್ನು ಅಪ್‌ಲೋಡ್ ಮಾಡಿದ್ದಾರೆ. ಅವರ ಕುಟುಂಬದ ಮೇಲಿನ ಕಿರುಕುಳವನ್ನು ನಿಲ್ಲಿಸುವಂತೆ ಮನವಿ ಮಾಡಿದ್ದಾರೆ.

ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ; ಮೂರು ದಶಕಗಳ ನಂತರ 32 ಜನರಿಗೆ ಶಿಕ್ಷೆ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...