Homeಮುಖಪುಟಛತ್ತೀಸ್‌ಗಡ: ಭಾರತವನ್ನು ತೀವ್ರವಾದಿ ಹಿಂದೂ ರಾಷ್ಟ್ರ ಮಾಡುವ ಪ್ರತಿಜ್ಞೆ ವಿಡಿಯೋ ವೈರಲ್: ಪ್ರಕರಣ ದಾಖಲು

ಛತ್ತೀಸ್‌ಗಡ: ಭಾರತವನ್ನು ತೀವ್ರವಾದಿ ಹಿಂದೂ ರಾಷ್ಟ್ರ ಮಾಡುವ ಪ್ರತಿಜ್ಞೆ ವಿಡಿಯೋ ವೈರಲ್: ಪ್ರಕರಣ ದಾಖಲು

- Advertisement -
- Advertisement -

ಭಾರತವನ್ನು ತೀವ್ರವಾದಿ ಹಿಂದೂ ರಾಷ್ಟ್ರವಾಗಿ ಪರಿವರ್ತಿಸುವುದಾಗಿ ಪ್ರತಿಜ್ಞೆ ಮಾಡಿ, ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸಿದ ವಿಡಿಯೋ ವೈರಲ್ ಆದ ನಂತರ ಪ್ರಮೋದ್ ಅಗರ್ವಾಲ್ ಎಂಬಾತನ ವಿರುದ್ಧ ಛತ್ತೀಸ್‌ಗಡ ಪೋಲಿಸರು ಜನವರಿ 22 ರಂದು ಪ್ರಕರಣ ದಾಖಲಿಸಿದ್ದಾರೆ.

ಛತ್ತೀಸ್‌ಗಡದ ಕೊರ್ಬಾದಲ್ಲಿ ಬೆಂಕಿಯ ಸುತ್ತ ಸೇರಿದ ಗುಂಪೊಂದು ಧರ್ಮದ ಆಧಾರದ ಮೇಲೆ ತಾರತಮ್ಯ ಆಚರಿಸುವುದಾಗಿ ಪ್ರತಿಜ್ಞೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ “ಇಂದು, ನಾವೆಲ್ಲಾ ಬಾಕಿನೋಂಗ್ರ ನಗರದ ಕೊಬ್ರ ಜಿಲ್ಲೆ ಛತ್ತಿಸ್‌ಗಡ ರಾಜ್ಯದ ನಿವಾಸಿಗಳು ಹಿಂದೂಗಳಾಗಿದು, ಈ ಬೆಂಕಿಯನ್ನು ಸಾಕ್ಷಿಯಾಗಿಸಿ ಭಾರತವನ್ನು ತೀವ್ರವಾದಿ ಹಿಂದೂ ರಾಷ್ಟ್ರವನ್ನಾಗಿಸುತ್ತೆವೆ ಎಂದು ಪ್ರಮಾಣ ಮಾಡುತ್ತೇವೆ. ನಾವು ನಮ್ಮ ಸಂಸ್ಥೆಗಳಲ್ಲಿ, ಮನೆಯಲ್ಲಿ ಮತ್ತು ವ್ಯವಹಾರಗಳಲ್ಲಿ ಹಿಂದೂ ಸಹೋದರರನ್ನು ಮಾತ್ರ ಸೇರಿಸಿಕೊಳ್ಳುತ್ತೆವೆ ಮತ್ತು ಇದರಿಮದ ಹಿಂದುತ್ವವನ್ನು ಬಲಿಷ್ಠಗೊಳಿಸುತ್ತೆವೆ” ಎಂದು ಹಿಂದಿಯಲ್ಲಿ ಪ್ರತಿಜ್ಞೆ ಮಾಡುವುದನ್ನು ನೋಡಬಹುದಾಗಿದೆ.

ವಿಡಿಯೋ ವಿರುದ್ಧ ಕೊಟ್ವಾಲಿ ಪೋಲಿಸ್ ಠಾಣೆಯಲ್ಲಿ ಲಿಖಿತ ದೂರನ್ನು ದಾಖಲಿಸಲಾಗಿದ್ದು, ಆರೋಪಿಗಳು ಧಾರ್ಮಿಕ ಮತಾಂಧತೆಯನ್ನು ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

“ಪ್ರಮೋದ ಅಗರವಾಲ್ ಮತ್ತು ಇತರರ ವಿರುದ್ಧ ಐಪಿಸಿ ಸೆಕ್ಷನ್ 153(ಎ) (ಧರ್ಮ, ಜನಾಂಗ, ವಾಸಸ್ಥಳ, ಭಾಷೆ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಕೃತ್ಯಗಳನ್ನು ಮಾಡುವುದು) ಅಡಿಯಲ್ಲಿ ಎಫ್‌ಐಆರ್ ಅನ್ನು ಕೋಟ್ವಾಲಿ ಪೋಲಿಸ್ ಠಾಣೆಯಲ್ಲಿ ದಾಖಲಿಸಿದು, ತನಿಖೆ ಮುಂದುವರೆದಿದೆ.” ಎಂದು ಕೊಬ್ರಾದ ಪೋಲಿಸ್ ಸೂಪರಿಡೆಂಟ್ ಬೊಜರಾಮ್ ಪಟೇಲ್ ತಿಳಿಸಿದ್ದಾರೆ ಎಂದು ಕ್ವಿಂಟ್ ವರದಿ ಮಾಡಿದೆ.

ಈ ವರ್ಷ ಜನವರಿಯಲ್ಲಿ ಛತ್ತೀಸ್‌ಗಡ ಸುರ್ಗುಜಾ ಜಿಲ್ಲೆಯ ಹಳ್ಳಿಯೊಂದರಲ್ಲಿ ‘ಮುಸ್ಲಿಂ ವ್ಯಾಪರಿಗಳ’ ಬಹಿಷ್ಕಾರಕ್ಕೆ ಕರೆ ನೀಡಿದ್ದ ವಿಡಿಯೊವೊಂದು ವೈರಲ್ ಆಗಿತ್ತು. ವಿಡಿಯೋದಲ್ಲಿ ಮುಸ್ಲಿಮರೊಂದಿಗೆ ಯಾವುದೇ ವ್ಯವಹಾರ, ವಹಿವಾಟಿನಿಂದ ದೂರವಿರಲು ಜನರು ಪ್ರತಿಜ್ಞೆ ಮಾಡುತ್ತಿರುವುದು ಕೇಳಿಬಂದಿತ್ತು. ಈಗ ಅದೇ ರೀತಿಯ ಮತ್ತೊಂದು ವಿಡಿಯೋ ವೈರಲ್ ಆಗಿದೆ.


ಇದನ್ನೂ ಓದಿ: ನೇತಾಜಿ ಜನ್ಮದಿನ: ಹೀಗಿದ್ದರು ಸ್ವಾತಂತ್ರ್ಯ ಸೇನಾನಿ ಸುಭಾಷ್ ಚಂದ್ರ ಬೋಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...