Homeಮುಖಪುಟಮತಾಂತರ: ಕಠಿಣ ಶಿಕ್ಷೆಗೆ ಅವಕಾಶ ಕಲ್ಪಿಸಬಲ್ಲ ಮಸೂದೆ ಮಂಡಿಸಲು ಛತ್ತೀಸ್‌ಗಢ ಸಜ್ಜು; ಪ್ರಾಸ್ತಾವಿತ ಮಸೂದೆಯಲ್ಲೇನಿದೆ?

ಮತಾಂತರ: ಕಠಿಣ ಶಿಕ್ಷೆಗೆ ಅವಕಾಶ ಕಲ್ಪಿಸಬಲ್ಲ ಮಸೂದೆ ಮಂಡಿಸಲು ಛತ್ತೀಸ್‌ಗಢ ಸಜ್ಜು; ಪ್ರಾಸ್ತಾವಿತ ಮಸೂದೆಯಲ್ಲೇನಿದೆ?

- Advertisement -
- Advertisement -

ಛತ್ತೀಸ್‌ಗಢದ ಬಿಜೆಪಿ ಸರಕಾರ ಮತಾಂತರದ ಬಗ್ಗೆ ಕಠಿಣ ಕ್ರಮಕ್ಕೆ ಮಸೂದೆಯನ್ನು ಜಾರಿಗೊಳಿಸಲು ಸಿದ್ಧತೆ ನಡೆಸುತ್ತಿದೆ. ಇನ್ನೊಂದು ಧರ್ಮಕ್ಕೆ ಮತಾಂತರಗೊಳ್ಳಲು ಇಚ್ಛಿಸುವ ವ್ಯಕ್ತಿಯು ಕನಿಷ್ಠ 60 ದಿನಗಳ ಮುಂಚಿತವಾಗಿ ವೈಯಕ್ತಿಕ ವಿವರಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಸಲ್ಲಿಸಬೇಕು, ನಂತರ ಅವರು ಮತಾಂತರದ ನೈಜ ಉದ್ದೇಶ, ಕಾರಣದ ಕುರಿತು ತನಿಖೆಗೆ ಪೊಲೀಸರಿಗೆ ಸೂಚಿಸುತ್ತಾರೆ. ಕಾನೂನು ಬಾಹಿರ ಎಂದು ಕಂಡು ಬಂದರೆ 10 ವರ್ಷಗಳವರೆಗೆ ಶಿಕ್ಷೆ ವಿಧಿಸಲು ಅವಕಾಶವನ್ನು ಮಸೂದೆಯಲ್ಲಿ ಕಲ್ಪಿಸಲಾಗಿದೆ.

ಹೊಸ ಮಸೂದೆಯ ಕರಡು ಸಿದ್ಧವಾಗಿದ್ದು, ಅಂತಿಮವಾಗಿ ವಿಧಾನಸೌಧದಲ್ಲಿ ಮಂಡಿಸುವ ಮುನ್ನ ಕೆಲವು ತಿದ್ದುಪಡಿಗಳನ್ನು ಮಾಡಬಹುದಾಗಿದೆ ಎಂದು ಮೂಲಗಳು ತಿಳಿಸಿವೆ. ಮತಾಂತರವಾಗುವ ವ್ಯಕ್ತಿಯು ಕನಿಷ್ಠ ಒಂದು ತಿಂಗಳುಗಳಿಗೆ ಮುಂಚಿತವಾಗಿ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕಾಗುತ್ತದೆ. ಅಧಿಕಾರದ ದುರುಪಯೋಗ, ಬಲವಂತ, ಅನಗತ್ಯ ಪ್ರಭಾವ, ಬಲಾತ್ಕಾರ, ಪ್ರಚೋದನೆ ಅಥವಾ ಯಾವುದೇ ಮೋಸದ ವಿಧಾನದಿಂದ ಅಥವಾ ಮದುವೆಯ ಮೂಲಕ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಮತಾಂತರಕ್ಕೆ ಮಸೂದೆಯು ಬ್ರೇಕ್‌ ಹಾಕುತ್ತದೆ ಎಂದು ಕರಡು ಹೇಳುತ್ತದೆ. ತನಿಖೆಯ ವೇಳೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ ಇದೊಂದು ಕಾನೂನು ಬಾಹಿರ ಪ್ರಕರಣವೆಂದು ಮನಗಂಡರೆ, ಮತಾಂತರವನ್ನು ಕಾನೂನುಬಾಹಿರವೆಂದು ಪರಿಗಣಿಸಲಾಗುತ್ತದೆ.

‘ಛತ್ತೀಸ್‌ಗಢದ ಕಾನೂನುಬಾಹಿರ ಧಾರ್ಮಿಕ ಮತಾಂತರ ನಿಷೇಧ ಮಸೂದೆ”ಯು ಒಬ್ಬ ವ್ಯಕ್ತಿಯು 60 ದಿನಗಳೊಳಗೆ ಪರಿಶೀಲನೆಗಾಗಿ ಮ್ಯಾಜಿಸ್ಟ್ರೇಟ್‌ ಮುಂದೆ ಹಾಜರಾಗಬೇಕು ಎಂದು ಹೇಳುತ್ತದೆ. ಇದನ್ನು ಮಾಡದಿದ್ದರೆ, ಮತಾಂತರವನ್ನು ಕಾನೂನುಬಾಹಿರವೆಂದು ಪರಿಗಣಿಸಬಹುದಾಗಿದೆ. ಇದಲ್ಲದೆ ದೃಢೀಕರಣದ ದಿನಾಂಕದವರೆಗೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ ತನ್ನ ಕಚೇರಿಯ ಸೂಚನಾ ಫಲಕದಲ್ಲಿ ಘೋಷಣೆಯ ಪ್ರತಿಯನ್ನು ಪ್ರದರ್ಶಿಸಲಿದ್ದಾರೆ. ಮತಾಂತರಗೊಳ್ಳುವ ಪ್ರತಿಯೊಬ್ಬರ ದಾಖಲೆಯನ್ನು ಜಿಲ್ಲಾ ಮ್ಯಾಜಿಸ್ಟ್ರೇಟರ್‌  ನಿರ್ವಹಿಸಲಿದ್ದಾರೆ.

ಈ ಬಗ್ಗೆ ಆಕ್ಷೇಪಣೆಯಿದ್ದಲ್ಲಿ ಮತಾಂತರಗೊಳ್ಳುವ ವ್ಯಕ್ತಿಯ ರಕ್ತ ಸಂಬಂಧಿಗಳು ಅಥವಾ ದತ್ತು ಪಡೆದ ವ್ಯಕ್ತಿ ಎಫ್‌ಐಆರ್ ದಾಖಲಿಸಬಹುದು. ಪ್ರಕರಣವು ಜಾಮೀನು ರಹಿತವಾಗಿರುತ್ತದೆ ಮತ್ತು ಸೆಷನ್ಸ್ ನ್ಯಾಯಾಲಯದಿಂದ ವಿಚಾರಣೆಗೆ ಒಳಪಡುತ್ತದೆ ಎಂದು ಮಸೂದೆಯು ಉಲ್ಲೇಖಿಸಿದೆ. ಅಪ್ರಾಪ್ತ ವಯಸ್ಕರು, ಮಹಿಳೆಯರು ಅಥವಾ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಜನರನ್ನು  ಅಕ್ರಮವಾಗಿ ಮತಾಂತರ ಮಾಡುವುದು ಕಂಡು ಬಂದರೆ ಕನಿಷ್ಠ ಎರಡು ವರ್ಷ ಮತ್ತು ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ ಮತ್ತು ಕನಿಷ್ಠ 25,000 ರೂ.ದಂಡ ವಿಧಿಸಲಾಗುತ್ತದೆ. ಸಾಮೂಹಿಕ ಮತಾಂತರಕ್ಕೆ ಕನಿಷ್ಠ ಮೂರು ವರ್ಷ ಮತ್ತು ಗರಿಷ್ಠ 10 ವರ್ಷ ಶಿಕ್ಷೆ ಹಾಗೂ 50,000ರೂ. ದಂಡ ವಿಧಿಸಲಾಗುತ್ತದೆ. ಇದಲ್ಲದೆ ಧಾರ್ಮಿಕ ಮತಾಂತರದ ಸಂತ್ರಸ್ತರಿಗೆ 5 ಲಕ್ಷ ರೂಪಾಯಿಗಳವರೆಗೆ ಪರಿಹಾರವನ್ನು ನ್ಯಾಯಾಲಯವು ಅನುಮೋದಿಸಬಹುದು. ಆದರೆ ಹಿಂದಿನ ಧರ್ಮಕ್ಕೆ ಮರು ಮತಾಂತರಗೊಳ್ಳಲು ಬಯಸುವವರಿಗೆ ಕಾನೂನು ಅನ್ವಯಿಸುವುದಿಲ್ಲ.

ಕಳೆದ ಕೆಲವು ವರ್ಷಗಳಿಂದ ಛತ್ತೀಸ್‌ಗಢದ ಕೊಂಡಗಾಂವ್ ಮತ್ತು ನಾರಾಯಣಪುರದಂತಹ ಜಿಲ್ಲೆಗಳಲ್ಲಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ಬುಡಕಟ್ಟು ಜನಾಂಗದವರ ಮೇಲೆ ಹಲ್ಲೆ ನಡೆಸಿರುವ ಹಲವಾರು ನಿದರ್ಶನಗಳನ್ನು ರಾಜ್ಯ ಕಂಡಿದೆ. ಇದಲ್ಲದೆ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಬಿಜೆಪಿ ಮತಾಂತರವನ್ನು ಚುನಾವಣಾ ವಿಷಯವನ್ನಾಗಿ ಮಾಡಿಕೊಂಡಿತ್ತು. ಜಶ್ಪುರ್‌ನ ಹಿಂದಿನ ರಾಜಮನೆತನದ ದಿವಂಗತ ಕೇಂದ್ರ ಸಚಿವ ದಿಲೀಪ್ ಸಿಂಗ್ ಜೂಡಿಯೊ ಅವರು ತಮ್ಮ ಜಿಲ್ಲೆಯಲ್ಲಿ “ಘರ್ ವಾಪ್ಸಿ” ಅಭಿಯಾನಕ್ಕೆ ಮೊದಲು ಚಾಲನೆ ನೀಡಿದ್ದರು.

ಛತ್ತೀಸ್‌ಗಢದ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಈ ಕುರಿತು ಪ್ರತಿಕ್ರಿಯಿಸಿದ್ದು, ಕಳೆದ ಐದು ವರ್ಷಗಳಲ್ಲಿ ಧಾರ್ಮಿಕ ಮತಾಂತರ ಹೆಚ್ಚಾಗಿದೆ. ಕಳೆದ ತಿಂಗಳು ಜಶ್‌ಪುರದಲ್ಲಿ ಘರ್ ವಾಪ್ಸಿ ಅಭಿಯಾನವನ್ನು ಜೂಡೋ ಜಿ ಪ್ರಾರಂಭಿಸಿದರು, ಇದರಿಂದಾಗಿ ನಮ್ಮ ಜಿಲ್ಲೆಯನ್ನು ರಕ್ಷಿಸಲಾಗಿದೆ. ಇಲ್ಲವಾದರೆ ಏಷ್ಯಾದ ಎರಡನೇ ದೊಡ್ಡ ಚರ್ಚ್ ನಮ್ಮ ಜಿಲ್ಲೆಯಲ್ಲಿದೆ ಮತ್ತು ಮತಾಂತರವು ವೇಗವಾಗಿ ನಡೆಯುತ್ತಿತ್ತು. ರಾಜನಾಗಿದ್ದರೂ ಮತಾಂತರಗೊಂಡ ಜನರ ಪಾದಗಳನ್ನು ತೊಳೆದು ಮತ್ತೆ ಹಿಂದೂ ಧರ್ಮಕ್ಕೆ ಕರೆತಂದರು, ಇಂದು ಈ ಕಾರ್ಯ ಮುನ್ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರಗೈದು ಬೆಂಕಿ ಹಚ್ಚಿದ ದುಷ್ಕರ್ಮಿಗಳು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...