Homeಮುಖಪುಟಮತಾಂತರ: ಕಠಿಣ ಶಿಕ್ಷೆಗೆ ಅವಕಾಶ ಕಲ್ಪಿಸಬಲ್ಲ ಮಸೂದೆ ಮಂಡಿಸಲು ಛತ್ತೀಸ್‌ಗಢ ಸಜ್ಜು; ಪ್ರಾಸ್ತಾವಿತ ಮಸೂದೆಯಲ್ಲೇನಿದೆ?

ಮತಾಂತರ: ಕಠಿಣ ಶಿಕ್ಷೆಗೆ ಅವಕಾಶ ಕಲ್ಪಿಸಬಲ್ಲ ಮಸೂದೆ ಮಂಡಿಸಲು ಛತ್ತೀಸ್‌ಗಢ ಸಜ್ಜು; ಪ್ರಾಸ್ತಾವಿತ ಮಸೂದೆಯಲ್ಲೇನಿದೆ?

- Advertisement -
- Advertisement -

ಛತ್ತೀಸ್‌ಗಢದ ಬಿಜೆಪಿ ಸರಕಾರ ಮತಾಂತರದ ಬಗ್ಗೆ ಕಠಿಣ ಕ್ರಮಕ್ಕೆ ಮಸೂದೆಯನ್ನು ಜಾರಿಗೊಳಿಸಲು ಸಿದ್ಧತೆ ನಡೆಸುತ್ತಿದೆ. ಇನ್ನೊಂದು ಧರ್ಮಕ್ಕೆ ಮತಾಂತರಗೊಳ್ಳಲು ಇಚ್ಛಿಸುವ ವ್ಯಕ್ತಿಯು ಕನಿಷ್ಠ 60 ದಿನಗಳ ಮುಂಚಿತವಾಗಿ ವೈಯಕ್ತಿಕ ವಿವರಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಸಲ್ಲಿಸಬೇಕು, ನಂತರ ಅವರು ಮತಾಂತರದ ನೈಜ ಉದ್ದೇಶ, ಕಾರಣದ ಕುರಿತು ತನಿಖೆಗೆ ಪೊಲೀಸರಿಗೆ ಸೂಚಿಸುತ್ತಾರೆ. ಕಾನೂನು ಬಾಹಿರ ಎಂದು ಕಂಡು ಬಂದರೆ 10 ವರ್ಷಗಳವರೆಗೆ ಶಿಕ್ಷೆ ವಿಧಿಸಲು ಅವಕಾಶವನ್ನು ಮಸೂದೆಯಲ್ಲಿ ಕಲ್ಪಿಸಲಾಗಿದೆ.

ಹೊಸ ಮಸೂದೆಯ ಕರಡು ಸಿದ್ಧವಾಗಿದ್ದು, ಅಂತಿಮವಾಗಿ ವಿಧಾನಸೌಧದಲ್ಲಿ ಮಂಡಿಸುವ ಮುನ್ನ ಕೆಲವು ತಿದ್ದುಪಡಿಗಳನ್ನು ಮಾಡಬಹುದಾಗಿದೆ ಎಂದು ಮೂಲಗಳು ತಿಳಿಸಿವೆ. ಮತಾಂತರವಾಗುವ ವ್ಯಕ್ತಿಯು ಕನಿಷ್ಠ ಒಂದು ತಿಂಗಳುಗಳಿಗೆ ಮುಂಚಿತವಾಗಿ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕಾಗುತ್ತದೆ. ಅಧಿಕಾರದ ದುರುಪಯೋಗ, ಬಲವಂತ, ಅನಗತ್ಯ ಪ್ರಭಾವ, ಬಲಾತ್ಕಾರ, ಪ್ರಚೋದನೆ ಅಥವಾ ಯಾವುದೇ ಮೋಸದ ವಿಧಾನದಿಂದ ಅಥವಾ ಮದುವೆಯ ಮೂಲಕ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಮತಾಂತರಕ್ಕೆ ಮಸೂದೆಯು ಬ್ರೇಕ್‌ ಹಾಕುತ್ತದೆ ಎಂದು ಕರಡು ಹೇಳುತ್ತದೆ. ತನಿಖೆಯ ವೇಳೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ ಇದೊಂದು ಕಾನೂನು ಬಾಹಿರ ಪ್ರಕರಣವೆಂದು ಮನಗಂಡರೆ, ಮತಾಂತರವನ್ನು ಕಾನೂನುಬಾಹಿರವೆಂದು ಪರಿಗಣಿಸಲಾಗುತ್ತದೆ.

‘ಛತ್ತೀಸ್‌ಗಢದ ಕಾನೂನುಬಾಹಿರ ಧಾರ್ಮಿಕ ಮತಾಂತರ ನಿಷೇಧ ಮಸೂದೆ”ಯು ಒಬ್ಬ ವ್ಯಕ್ತಿಯು 60 ದಿನಗಳೊಳಗೆ ಪರಿಶೀಲನೆಗಾಗಿ ಮ್ಯಾಜಿಸ್ಟ್ರೇಟ್‌ ಮುಂದೆ ಹಾಜರಾಗಬೇಕು ಎಂದು ಹೇಳುತ್ತದೆ. ಇದನ್ನು ಮಾಡದಿದ್ದರೆ, ಮತಾಂತರವನ್ನು ಕಾನೂನುಬಾಹಿರವೆಂದು ಪರಿಗಣಿಸಬಹುದಾಗಿದೆ. ಇದಲ್ಲದೆ ದೃಢೀಕರಣದ ದಿನಾಂಕದವರೆಗೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ ತನ್ನ ಕಚೇರಿಯ ಸೂಚನಾ ಫಲಕದಲ್ಲಿ ಘೋಷಣೆಯ ಪ್ರತಿಯನ್ನು ಪ್ರದರ್ಶಿಸಲಿದ್ದಾರೆ. ಮತಾಂತರಗೊಳ್ಳುವ ಪ್ರತಿಯೊಬ್ಬರ ದಾಖಲೆಯನ್ನು ಜಿಲ್ಲಾ ಮ್ಯಾಜಿಸ್ಟ್ರೇಟರ್‌  ನಿರ್ವಹಿಸಲಿದ್ದಾರೆ.

ಈ ಬಗ್ಗೆ ಆಕ್ಷೇಪಣೆಯಿದ್ದಲ್ಲಿ ಮತಾಂತರಗೊಳ್ಳುವ ವ್ಯಕ್ತಿಯ ರಕ್ತ ಸಂಬಂಧಿಗಳು ಅಥವಾ ದತ್ತು ಪಡೆದ ವ್ಯಕ್ತಿ ಎಫ್‌ಐಆರ್ ದಾಖಲಿಸಬಹುದು. ಪ್ರಕರಣವು ಜಾಮೀನು ರಹಿತವಾಗಿರುತ್ತದೆ ಮತ್ತು ಸೆಷನ್ಸ್ ನ್ಯಾಯಾಲಯದಿಂದ ವಿಚಾರಣೆಗೆ ಒಳಪಡುತ್ತದೆ ಎಂದು ಮಸೂದೆಯು ಉಲ್ಲೇಖಿಸಿದೆ. ಅಪ್ರಾಪ್ತ ವಯಸ್ಕರು, ಮಹಿಳೆಯರು ಅಥವಾ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಜನರನ್ನು  ಅಕ್ರಮವಾಗಿ ಮತಾಂತರ ಮಾಡುವುದು ಕಂಡು ಬಂದರೆ ಕನಿಷ್ಠ ಎರಡು ವರ್ಷ ಮತ್ತು ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ ಮತ್ತು ಕನಿಷ್ಠ 25,000 ರೂ.ದಂಡ ವಿಧಿಸಲಾಗುತ್ತದೆ. ಸಾಮೂಹಿಕ ಮತಾಂತರಕ್ಕೆ ಕನಿಷ್ಠ ಮೂರು ವರ್ಷ ಮತ್ತು ಗರಿಷ್ಠ 10 ವರ್ಷ ಶಿಕ್ಷೆ ಹಾಗೂ 50,000ರೂ. ದಂಡ ವಿಧಿಸಲಾಗುತ್ತದೆ. ಇದಲ್ಲದೆ ಧಾರ್ಮಿಕ ಮತಾಂತರದ ಸಂತ್ರಸ್ತರಿಗೆ 5 ಲಕ್ಷ ರೂಪಾಯಿಗಳವರೆಗೆ ಪರಿಹಾರವನ್ನು ನ್ಯಾಯಾಲಯವು ಅನುಮೋದಿಸಬಹುದು. ಆದರೆ ಹಿಂದಿನ ಧರ್ಮಕ್ಕೆ ಮರು ಮತಾಂತರಗೊಳ್ಳಲು ಬಯಸುವವರಿಗೆ ಕಾನೂನು ಅನ್ವಯಿಸುವುದಿಲ್ಲ.

ಕಳೆದ ಕೆಲವು ವರ್ಷಗಳಿಂದ ಛತ್ತೀಸ್‌ಗಢದ ಕೊಂಡಗಾಂವ್ ಮತ್ತು ನಾರಾಯಣಪುರದಂತಹ ಜಿಲ್ಲೆಗಳಲ್ಲಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ಬುಡಕಟ್ಟು ಜನಾಂಗದವರ ಮೇಲೆ ಹಲ್ಲೆ ನಡೆಸಿರುವ ಹಲವಾರು ನಿದರ್ಶನಗಳನ್ನು ರಾಜ್ಯ ಕಂಡಿದೆ. ಇದಲ್ಲದೆ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಬಿಜೆಪಿ ಮತಾಂತರವನ್ನು ಚುನಾವಣಾ ವಿಷಯವನ್ನಾಗಿ ಮಾಡಿಕೊಂಡಿತ್ತು. ಜಶ್ಪುರ್‌ನ ಹಿಂದಿನ ರಾಜಮನೆತನದ ದಿವಂಗತ ಕೇಂದ್ರ ಸಚಿವ ದಿಲೀಪ್ ಸಿಂಗ್ ಜೂಡಿಯೊ ಅವರು ತಮ್ಮ ಜಿಲ್ಲೆಯಲ್ಲಿ “ಘರ್ ವಾಪ್ಸಿ” ಅಭಿಯಾನಕ್ಕೆ ಮೊದಲು ಚಾಲನೆ ನೀಡಿದ್ದರು.

ಛತ್ತೀಸ್‌ಗಢದ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಈ ಕುರಿತು ಪ್ರತಿಕ್ರಿಯಿಸಿದ್ದು, ಕಳೆದ ಐದು ವರ್ಷಗಳಲ್ಲಿ ಧಾರ್ಮಿಕ ಮತಾಂತರ ಹೆಚ್ಚಾಗಿದೆ. ಕಳೆದ ತಿಂಗಳು ಜಶ್‌ಪುರದಲ್ಲಿ ಘರ್ ವಾಪ್ಸಿ ಅಭಿಯಾನವನ್ನು ಜೂಡೋ ಜಿ ಪ್ರಾರಂಭಿಸಿದರು, ಇದರಿಂದಾಗಿ ನಮ್ಮ ಜಿಲ್ಲೆಯನ್ನು ರಕ್ಷಿಸಲಾಗಿದೆ. ಇಲ್ಲವಾದರೆ ಏಷ್ಯಾದ ಎರಡನೇ ದೊಡ್ಡ ಚರ್ಚ್ ನಮ್ಮ ಜಿಲ್ಲೆಯಲ್ಲಿದೆ ಮತ್ತು ಮತಾಂತರವು ವೇಗವಾಗಿ ನಡೆಯುತ್ತಿತ್ತು. ರಾಜನಾಗಿದ್ದರೂ ಮತಾಂತರಗೊಂಡ ಜನರ ಪಾದಗಳನ್ನು ತೊಳೆದು ಮತ್ತೆ ಹಿಂದೂ ಧರ್ಮಕ್ಕೆ ಕರೆತಂದರು, ಇಂದು ಈ ಕಾರ್ಯ ಮುನ್ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರಗೈದು ಬೆಂಕಿ ಹಚ್ಚಿದ ದುಷ್ಕರ್ಮಿಗಳು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...