Homeಮುಖಪುಟಮತಾಂತರ: ಕಠಿಣ ಶಿಕ್ಷೆಗೆ ಅವಕಾಶ ಕಲ್ಪಿಸಬಲ್ಲ ಮಸೂದೆ ಮಂಡಿಸಲು ಛತ್ತೀಸ್‌ಗಢ ಸಜ್ಜು; ಪ್ರಾಸ್ತಾವಿತ ಮಸೂದೆಯಲ್ಲೇನಿದೆ?

ಮತಾಂತರ: ಕಠಿಣ ಶಿಕ್ಷೆಗೆ ಅವಕಾಶ ಕಲ್ಪಿಸಬಲ್ಲ ಮಸೂದೆ ಮಂಡಿಸಲು ಛತ್ತೀಸ್‌ಗಢ ಸಜ್ಜು; ಪ್ರಾಸ್ತಾವಿತ ಮಸೂದೆಯಲ್ಲೇನಿದೆ?

- Advertisement -
- Advertisement -

ಛತ್ತೀಸ್‌ಗಢದ ಬಿಜೆಪಿ ಸರಕಾರ ಮತಾಂತರದ ಬಗ್ಗೆ ಕಠಿಣ ಕ್ರಮಕ್ಕೆ ಮಸೂದೆಯನ್ನು ಜಾರಿಗೊಳಿಸಲು ಸಿದ್ಧತೆ ನಡೆಸುತ್ತಿದೆ. ಇನ್ನೊಂದು ಧರ್ಮಕ್ಕೆ ಮತಾಂತರಗೊಳ್ಳಲು ಇಚ್ಛಿಸುವ ವ್ಯಕ್ತಿಯು ಕನಿಷ್ಠ 60 ದಿನಗಳ ಮುಂಚಿತವಾಗಿ ವೈಯಕ್ತಿಕ ವಿವರಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಸಲ್ಲಿಸಬೇಕು, ನಂತರ ಅವರು ಮತಾಂತರದ ನೈಜ ಉದ್ದೇಶ, ಕಾರಣದ ಕುರಿತು ತನಿಖೆಗೆ ಪೊಲೀಸರಿಗೆ ಸೂಚಿಸುತ್ತಾರೆ. ಕಾನೂನು ಬಾಹಿರ ಎಂದು ಕಂಡು ಬಂದರೆ 10 ವರ್ಷಗಳವರೆಗೆ ಶಿಕ್ಷೆ ವಿಧಿಸಲು ಅವಕಾಶವನ್ನು ಮಸೂದೆಯಲ್ಲಿ ಕಲ್ಪಿಸಲಾಗಿದೆ.

ಹೊಸ ಮಸೂದೆಯ ಕರಡು ಸಿದ್ಧವಾಗಿದ್ದು, ಅಂತಿಮವಾಗಿ ವಿಧಾನಸೌಧದಲ್ಲಿ ಮಂಡಿಸುವ ಮುನ್ನ ಕೆಲವು ತಿದ್ದುಪಡಿಗಳನ್ನು ಮಾಡಬಹುದಾಗಿದೆ ಎಂದು ಮೂಲಗಳು ತಿಳಿಸಿವೆ. ಮತಾಂತರವಾಗುವ ವ್ಯಕ್ತಿಯು ಕನಿಷ್ಠ ಒಂದು ತಿಂಗಳುಗಳಿಗೆ ಮುಂಚಿತವಾಗಿ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕಾಗುತ್ತದೆ. ಅಧಿಕಾರದ ದುರುಪಯೋಗ, ಬಲವಂತ, ಅನಗತ್ಯ ಪ್ರಭಾವ, ಬಲಾತ್ಕಾರ, ಪ್ರಚೋದನೆ ಅಥವಾ ಯಾವುದೇ ಮೋಸದ ವಿಧಾನದಿಂದ ಅಥವಾ ಮದುವೆಯ ಮೂಲಕ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಮತಾಂತರಕ್ಕೆ ಮಸೂದೆಯು ಬ್ರೇಕ್‌ ಹಾಕುತ್ತದೆ ಎಂದು ಕರಡು ಹೇಳುತ್ತದೆ. ತನಿಖೆಯ ವೇಳೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ ಇದೊಂದು ಕಾನೂನು ಬಾಹಿರ ಪ್ರಕರಣವೆಂದು ಮನಗಂಡರೆ, ಮತಾಂತರವನ್ನು ಕಾನೂನುಬಾಹಿರವೆಂದು ಪರಿಗಣಿಸಲಾಗುತ್ತದೆ.

‘ಛತ್ತೀಸ್‌ಗಢದ ಕಾನೂನುಬಾಹಿರ ಧಾರ್ಮಿಕ ಮತಾಂತರ ನಿಷೇಧ ಮಸೂದೆ”ಯು ಒಬ್ಬ ವ್ಯಕ್ತಿಯು 60 ದಿನಗಳೊಳಗೆ ಪರಿಶೀಲನೆಗಾಗಿ ಮ್ಯಾಜಿಸ್ಟ್ರೇಟ್‌ ಮುಂದೆ ಹಾಜರಾಗಬೇಕು ಎಂದು ಹೇಳುತ್ತದೆ. ಇದನ್ನು ಮಾಡದಿದ್ದರೆ, ಮತಾಂತರವನ್ನು ಕಾನೂನುಬಾಹಿರವೆಂದು ಪರಿಗಣಿಸಬಹುದಾಗಿದೆ. ಇದಲ್ಲದೆ ದೃಢೀಕರಣದ ದಿನಾಂಕದವರೆಗೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ ತನ್ನ ಕಚೇರಿಯ ಸೂಚನಾ ಫಲಕದಲ್ಲಿ ಘೋಷಣೆಯ ಪ್ರತಿಯನ್ನು ಪ್ರದರ್ಶಿಸಲಿದ್ದಾರೆ. ಮತಾಂತರಗೊಳ್ಳುವ ಪ್ರತಿಯೊಬ್ಬರ ದಾಖಲೆಯನ್ನು ಜಿಲ್ಲಾ ಮ್ಯಾಜಿಸ್ಟ್ರೇಟರ್‌  ನಿರ್ವಹಿಸಲಿದ್ದಾರೆ.

ಈ ಬಗ್ಗೆ ಆಕ್ಷೇಪಣೆಯಿದ್ದಲ್ಲಿ ಮತಾಂತರಗೊಳ್ಳುವ ವ್ಯಕ್ತಿಯ ರಕ್ತ ಸಂಬಂಧಿಗಳು ಅಥವಾ ದತ್ತು ಪಡೆದ ವ್ಯಕ್ತಿ ಎಫ್‌ಐಆರ್ ದಾಖಲಿಸಬಹುದು. ಪ್ರಕರಣವು ಜಾಮೀನು ರಹಿತವಾಗಿರುತ್ತದೆ ಮತ್ತು ಸೆಷನ್ಸ್ ನ್ಯಾಯಾಲಯದಿಂದ ವಿಚಾರಣೆಗೆ ಒಳಪಡುತ್ತದೆ ಎಂದು ಮಸೂದೆಯು ಉಲ್ಲೇಖಿಸಿದೆ. ಅಪ್ರಾಪ್ತ ವಯಸ್ಕರು, ಮಹಿಳೆಯರು ಅಥವಾ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಜನರನ್ನು  ಅಕ್ರಮವಾಗಿ ಮತಾಂತರ ಮಾಡುವುದು ಕಂಡು ಬಂದರೆ ಕನಿಷ್ಠ ಎರಡು ವರ್ಷ ಮತ್ತು ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ ಮತ್ತು ಕನಿಷ್ಠ 25,000 ರೂ.ದಂಡ ವಿಧಿಸಲಾಗುತ್ತದೆ. ಸಾಮೂಹಿಕ ಮತಾಂತರಕ್ಕೆ ಕನಿಷ್ಠ ಮೂರು ವರ್ಷ ಮತ್ತು ಗರಿಷ್ಠ 10 ವರ್ಷ ಶಿಕ್ಷೆ ಹಾಗೂ 50,000ರೂ. ದಂಡ ವಿಧಿಸಲಾಗುತ್ತದೆ. ಇದಲ್ಲದೆ ಧಾರ್ಮಿಕ ಮತಾಂತರದ ಸಂತ್ರಸ್ತರಿಗೆ 5 ಲಕ್ಷ ರೂಪಾಯಿಗಳವರೆಗೆ ಪರಿಹಾರವನ್ನು ನ್ಯಾಯಾಲಯವು ಅನುಮೋದಿಸಬಹುದು. ಆದರೆ ಹಿಂದಿನ ಧರ್ಮಕ್ಕೆ ಮರು ಮತಾಂತರಗೊಳ್ಳಲು ಬಯಸುವವರಿಗೆ ಕಾನೂನು ಅನ್ವಯಿಸುವುದಿಲ್ಲ.

ಕಳೆದ ಕೆಲವು ವರ್ಷಗಳಿಂದ ಛತ್ತೀಸ್‌ಗಢದ ಕೊಂಡಗಾಂವ್ ಮತ್ತು ನಾರಾಯಣಪುರದಂತಹ ಜಿಲ್ಲೆಗಳಲ್ಲಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ಬುಡಕಟ್ಟು ಜನಾಂಗದವರ ಮೇಲೆ ಹಲ್ಲೆ ನಡೆಸಿರುವ ಹಲವಾರು ನಿದರ್ಶನಗಳನ್ನು ರಾಜ್ಯ ಕಂಡಿದೆ. ಇದಲ್ಲದೆ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಬಿಜೆಪಿ ಮತಾಂತರವನ್ನು ಚುನಾವಣಾ ವಿಷಯವನ್ನಾಗಿ ಮಾಡಿಕೊಂಡಿತ್ತು. ಜಶ್ಪುರ್‌ನ ಹಿಂದಿನ ರಾಜಮನೆತನದ ದಿವಂಗತ ಕೇಂದ್ರ ಸಚಿವ ದಿಲೀಪ್ ಸಿಂಗ್ ಜೂಡಿಯೊ ಅವರು ತಮ್ಮ ಜಿಲ್ಲೆಯಲ್ಲಿ “ಘರ್ ವಾಪ್ಸಿ” ಅಭಿಯಾನಕ್ಕೆ ಮೊದಲು ಚಾಲನೆ ನೀಡಿದ್ದರು.

ಛತ್ತೀಸ್‌ಗಢದ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಈ ಕುರಿತು ಪ್ರತಿಕ್ರಿಯಿಸಿದ್ದು, ಕಳೆದ ಐದು ವರ್ಷಗಳಲ್ಲಿ ಧಾರ್ಮಿಕ ಮತಾಂತರ ಹೆಚ್ಚಾಗಿದೆ. ಕಳೆದ ತಿಂಗಳು ಜಶ್‌ಪುರದಲ್ಲಿ ಘರ್ ವಾಪ್ಸಿ ಅಭಿಯಾನವನ್ನು ಜೂಡೋ ಜಿ ಪ್ರಾರಂಭಿಸಿದರು, ಇದರಿಂದಾಗಿ ನಮ್ಮ ಜಿಲ್ಲೆಯನ್ನು ರಕ್ಷಿಸಲಾಗಿದೆ. ಇಲ್ಲವಾದರೆ ಏಷ್ಯಾದ ಎರಡನೇ ದೊಡ್ಡ ಚರ್ಚ್ ನಮ್ಮ ಜಿಲ್ಲೆಯಲ್ಲಿದೆ ಮತ್ತು ಮತಾಂತರವು ವೇಗವಾಗಿ ನಡೆಯುತ್ತಿತ್ತು. ರಾಜನಾಗಿದ್ದರೂ ಮತಾಂತರಗೊಂಡ ಜನರ ಪಾದಗಳನ್ನು ತೊಳೆದು ಮತ್ತೆ ಹಿಂದೂ ಧರ್ಮಕ್ಕೆ ಕರೆತಂದರು, ಇಂದು ಈ ಕಾರ್ಯ ಮುನ್ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರಗೈದು ಬೆಂಕಿ ಹಚ್ಚಿದ ದುಷ್ಕರ್ಮಿಗಳು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...